Breaking News

ಪ್ರಧಾನಿ ಮೋದಿ ವಿದ್ಯಾರ್ಥಿಗಳು ಮತ್ತು ಬಡವರ ಶಾಪ ಎದುರಿಸಲಿದ್ದಾರೆ: ಅರವಿಂದ ಕೇಜ್ರಿವಾಲ್

ಹೊಸದಿಲ್ಲಿ: ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನವನ್ನು ವಿರೋಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಸೋಡಿಯಾ ಅವರನ್ನು ‘ಸಂತ ಮತ್ತು ಮಹಾನ್ ಚೇತನ’ ಎಂದು ಬಣ್ಣಿಸಿರುವ ಕೇಜ್ರಿವಾಲ್, ಜೈಲಿಗೆ ಹಾಕಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು ಮತ್ತು ಬಡವರ ಶಾಪವನ್ನು ಎದುರಿಸಲಿದ್ದಾರೆ ಎಂದು ಹೇಳಿದ್ದಾರೆ.   ಭಾನುವಾರ ಛತ್ತೀಸ್‌ ಗಢದ ರಾಜಧಾನಿ ರಾಯ್ಪುರದ ಹೊರವಲಯದಲ್ಲಿರುವ ಜೋರಾ ಮೈದಾನದಲ್ಲಿ ಆಪ್ ಕಾರ್ಯಕರ್ತರ …

Read More »

ರಾಜಕೀಯ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ನಿಂದ ಬಂದ್ ಕರೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಭ್ರಷ್ಟಾಚಾರದ ಕೂಪ ಕಾಂಗ್ರೆಸ್, ಅವರು ಮಾಡಿರುವ ಕರ್ಮಕಾಂಡ ಒಂದಾ ಎರಡೇ. ಕಾಂಗ್ರೆಸ್ ಪಕ್ಷವೇ ಬಂದಾಗುತ್ತಿದೆ. ಇಂತಹ ಪ್ರತಿಭಟನೆ ಮೂಲಕ ಮುಂದಿನ ಚುನಾವಣೆ ನಡೆಸಬೇಕು ಎಂದುಕೊಂಡಿದ್ದಾರೆ. ಜನರು ಬಹಳ ಬುದ್ಧಿವಂತರು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ವಿರುಪಾಕ್ಷಪ್ಪ ಮಾಡಾಳ ಅವರ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಅಸ್ತಿತ್ವಕ್ಕಾಗಿ ಬಂದ್ ಗೆ ಕರೆ ಕೊಟ್ಟಿದ್ದಾರೆ. ಆರೋಪ ಮಾಡುವವರು ಮೊದಲು ಶುದ್ಧ …

Read More »

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ಯಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾಡಾಳು ವಿರೂಪಾಕ್ಷಪ್ಪ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ವಕೀಲರು ಮನವಿ ಮಾಡಿದರು.     ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠವು ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ರಾಜ್ಯ ಬಂದ್‌ ಗೆ ಕಾಂಗ್ರೆಸ್‌ ಕರೆ ಇತ್ತ ವಿರೂಪಾಕ್ಷಪ್ಪ ಅವರ ಬಂಧನ ಮತ್ತು …

Read More »

ನಾನೇ ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ: ಸಿದ್ದರಾಮಯ್ಯ

ಮೈಸೂರು: ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರು ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ಎಸಿಬಿ ರದ್ದು ಮಾಡಿದ್ದು. ಬಿಜೆಪಿಯವರಿಗೆ …

Read More »

ಅಸಮರ್ಥರ ವಜಾಗೊಳಿಸಲು ಪೊಲೀಸ್ ಇಲಾಖೆ ದಿಟ್ಟ ನಿರ್ಧಾರ

ಸೇವೆಗೆ ಸೇರಿ 10, 15, 20 ವರ್ಷವಾದರೂ ಪ್ರೊಬೇಷನರಿ ಅವಧಿ ಇತ್ಯರ್ಥಪಡಿಸದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ಲಿಪಿಕ ಸಿಬ್ಬಂದಿಯನ್ನು (ಕ್ಲರಿಕಲ್ ಸ್ಟಾಫ್) ಸೇವೆಯಿಂದಲೇ ಬಿಡುಗಡೆಗೊಳಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಗರಿಷ್ಠ ಕಾಲಮಿತಿಯ ನಂತರವೂ ದೀರ್ಘ ಕಾಲದವರೆಗೆ ಇಲಾಖಾ ಪರೀಕ್ಷೆಗಳನ್ನು ಪಾಸ್ ಮಾಡದ, ತರಬೇತಿ ಪೂರೈಸಲು ಅಸಮರ್ಥ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕೆಲಸದಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಕರ್ನಾಟಕ ಸಿವಿಲ್ ಸೇವೆಗಳ (ಪ್ರೊಬೇಷನ್) ನಿಯಮಗಳು 1977ರ ಅನ್ವಯ ಪ್ರೊಬೇಷನರಿ …

Read More »

ಮೇ 28 ರಂದು ಕಾಮೆಡ್‌-ಕೆ ಪರೀಕ್ಷೆ

ಮಂಗಳೂರು: ರಾಜ್ಯದ 150 ಎಂಜಿನಿಯರಿಂಗ್‌ ಕಾಲೇಜು ಮತ್ತು 50ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶಕ್ಕಾಗಿ ಸಂಯೋಜಿತ ಪರೀಕ್ಷೆಯಾಗಿ ಮೇ 28ರಂದು ಕಾಮೆಡ್‌-ಕೆ ಯುಗೇಟ್‌ ಮತ್ತು ಯುನಿ ಗೇಜ್‌ ಪ್ರವೇಶ ಪರೀಕ್ಷೆಗಳು ನಡೆಯಲಿವೆ.   ಪ್ರವೇಶ ಪರೀಕ್ಷೆಯನ್ನು ಕರ್ನಾ ಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಸಂಘದೊಂದಿಗೆ ಸಂಯೋಜಿತವಾ ಗಿರುವ ಕಾಲೇಜುಗಳು ಮತ್ತು ಬಿಇ/ ಬಿಟೆಕ್‌ ತರಗತಿ ಒದಗಿಸುವ ಯುನಿ-ಗೇಜ್‌ ಸದಸ್ಯ ವಿ.ವಿ.ಗಳಿಗೆ ನಡೆಸಲಾಗುತ್ತದೆ. ದೇಶಾದ್ಯಂತ 150ಕ್ಕೂ ಹೆಚ್ಚು ನಗರಗಳಲ್ಲಿ 400 …

Read More »

ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ!

ರಾಣೆಬೆನ್ನೂರು: ಕಳೆದ 64 ವರ್ಷಗಳಿಂದ ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸುತ್ತಾ ಬಂದಿರುವ ಜೀವಂತ ರತಿ-ಮನ್ಮಥ ಪ್ರತಿಷ್ಠಾಪನೆ ಕಾರ್ಯಕ್ರಮ ಈ ಬಾರಿ ಮಾ.7ರಂದು ರಾತ್ರಿ 8 ಗಂಟೆಗೆ ಜರಗಲಿದೆ. ರಾಮಲಿಂಗೇಶ್ವರ ದೇವಸ್ಥಾನದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟಕರು, ರತಿ ಪಾತ್ರಧಾರಿಯಾಗಿ ಕುಮಾರ ಹಡಪದ ಹಾಗೂ ಗದಿಗೆಪ್ಪ ದೊಡ್ಡನವರ ಮನ್ಮಥನ ಪಾತ್ರ ಮಾಡುತ್ತಾ ಬಂದಿದ್ದು, ಈ ಬಾರಿಯೂ ಇವರೇ ಇರಲಿದ್ದಾರೆ.   ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ

Read More »

ಚಿನ್ನಾಭರಣಗಳ ಮೇಲೆ ಎಚ್‌ಯುಐಡಿ ಹಾಲ್‌ಮಾರ್ಕ್‌ ಕಡ್ಡಾಯ

ಏ.1ರಿಂದ ಆರು ಸಂಖ್ಯೆಯ ಹಾಲ್‌ಮಾರ್ಕ್‌ ಯೂನಿಕ್‌ ಐಡೆಂಟಿಫಿಕೇಶನ್‌ ನಂಬರ್‌ (ಎಚ್‌ಯುಐಡಿ) ಇರುವ ಚಿನ್ನಾಭರಣ ಮಾರಾಟಕ್ಕೆ ಮಾತ್ರ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಅದರ ಪ್ರಕಾರ, ಎಚ್‌ಯುಐಡಿ ನಂಬರ್‌ ಇಲ್ಲದ ಹಳೆಯ ಹಾಲ್‌ಮಾರ್ಕ್‌ ಚಿನ್ನಾಭರಣ ಮಾರಾಟಕ್ಕೆ ಮಾ.31ರ ನಂತರ ಅವಕಾಶವಿರುವುದಿಲ್ಲ.   ಏತಕ್ಕಾಗಿ ಈ ನಿರ್ಧಾರ? ಗ್ರಾಹಕರ ಹಿತರಕ್ಷಣೆಯ ದೃಷ್ಟಿಯಿಂದ ಈ ಕ್ಷೇತ್ರದ ಪಾಲುದಾರರ ಸಭೆಯ ಬಳಿಕ ಗ್ರಾಹಕರ ವ್ಯವಹಾರಗಳ ಸಚಿವಾಲಯವು ಜ.18ರಂದು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿತು. …

Read More »

ಮೂರೂ ಪಕ್ಷಗಳಲ್ಲಿ ಎಪತ್ತು ವರ್ಷ ದಾಟಿದವರಿಗೆ ಟಿಕೆಟ್‌ “ಆಪತ್ತು’ ? ಹೊಸ ಮುಖಗಳಿಗೆ ಅವಕಾಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮೂರೂ ಪಕ್ಷಗಳಲ್ಲಿ ಎಪತ್ತು ವರ್ಷ ದಾಟಿದವರಿಗೆ ಟಿಕೆಟ್‌ “ಆಪತ್ತು’ ಎದುರಾಗಿದೆ. ಹೊಸ ಮುಖಗಳಿಗೆ ಅವಕಾಶ ಕೊಡಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ 70 ವರ್ಷ ದಾಟಿದವರನ್ನು “ಮಾರ್ಗದರ್ಶಿ’ ಮಂಡಳಿಗೆ ಸೇರಿಸುವ ಆತಂಕವೂ ಕಾಡುತ್ತಿದೆ. ಟಿಕೆಟ್‌ ಕೈ ತಪ್ಪುವ ಭೀತಿಯಿಂದ ಕೆಲವರು ಮೊದಲೇ ಶಸ್ತ್ರತ್ಯಾಗ ಮಾಡಿ ಪುತ್ರರಿಗೆ ಪಟ್ಟ ಕಟ್ಟುವ ಘೋಷಣೆ ಮಾಡಿ ಬಚಾವ್‌ ಆಗಿದ್ದರೆ ಮತ್ತೆ ಕೆಲವರಿಗೆ ಟಿಕೆಟ್‌ “ಅರ್ಧಚಂದ್ರ’ ಎಂಬಂತಾಗಿದೆ. 90 ವರ್ಷದ …

Read More »

ಮೊಬೈಲ್‌ಗೆ ಬಂದ ಲಿಂಕ್‌ ಕ್ಲಿಕ್ಕಿಸಿ 1 ಲಕ್ಷ ರೂ. ಕಳೆದುಕೊಂಡರು!

ಮೊಬೈಲ್‌ಗೆ ಆಗಂತುಕನೊಬ್ಬ ಕಳುಹಿಸಿದ್ದ ಲಿಂಕ್‌ ಕ್ಲಿಕ್‌ ಮಾಡಿದ ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ 1 ಲ.ರೂ.ಕಡಿತಗೊಂಡ ಘಟನೆ ನಡೆದಿದೆ. ಎಚ್‌ಡಿಎಫ್ಸಿ ಬ್ಯಾಂಕ್‌ನ ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿರುವ ಸುಧಾಕರ ಕಾಂಚನ್‌ ಅವರಿಗೆ ಮಾ.4ರಂದು ಅಪರಿಚಿತನೊಬ್ಬ ಪಾನ್‌ಕಾರ್ಡ್‌ ಅಪ್‌ಡೇಟ್‌ ಮಾಡಲು ಲಿಂಕ್‌ ಕಳುಹಿಸಿದ್ದ. ಅದನ್ನು ಬ್ಯಾಂಕ್‌ನಿಂದ ಕಳುಹಿಸಲಾಗಿದೆ ಎಂದು ನಂಬಿಸಿದ್ದಾನೆ. ಅದನ್ನು ಕ್ಲಿಕ್‌ ಮಾಡಿದ ಪರಿಣಾಮ ಖಾತೆಯಿಂದ ಹಣ ಕಡಿತವಾಗಿದ್ದು, ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »