ಬೈಲಹೊಂಗಲ (ಬೆಳಗಾವಿ ಜಿಲ್ಲೆ): ‘ಸಿದ್ದರಾಮಯ್ಯ ಅವರೇ ನಿಮ್ಮ ಆಟ ಕೊನೆಯಾಗಿದೆ. ರಾಜಕೀಯ ಚೆಲ್ಲಾಟ ಬಿಟ್ಟುಬಿಡಿ. ನರೇಂದ್ರ ಮೋದಿ ಅವರ ಟೀಕೆ ಮಾಡುವುದನ್ನು ಬಿಟ್ಟು ನಿಮ್ಮ ಪರಿಸ್ಥಿತಿ ಎನಾಗಿದೆ, ಕಾಂಗ್ರೆಸ್ ಸ್ಥಿತಿ ಏನಾಗಿದೆ ನೋಡಿಕೊಳ್ಳಿ’ ಎಂದು ಶಾಸಕ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದರು. ಪಟ್ಟಣದಲ್ಲಿ ಶನಿವಾರ ನಡೆಸಿದ ರೋಡ್ ಶೋನಲ್ಲಿ ಮಾತನಾಡಿದ ಅವರು, ‘ಎಲ್ಲ ಚುನಾವಣೆಗಳಲ್ಲೂ ಜನ ನಿಮ್ಮನ್ನು ಮೂಲೆಗುಂಪು ಮಾಡಿದ್ದಾರೆ. ಹಣ ಬಲ, ತೋಳ ಬಲ, ಜಾತಿಯ ವಿಷಬೀಜ ಬಿತ್ತಿ ಚುನಾವಣೆ …
Read More »ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.: ಶಾಮನೂರು ಶಿವಶಂಕರಪ್ಪ
ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೆ ದಾಳಿ ಮಾಡಿಸಿದ್ದು, ಸಂಸದ ಜಿ.ಎಂ.ಸಿದ್ದೇಶ್ವರ್ ಎಂದು ಹೇಳಿದ್ದಾರೆ. ಜಿ.ಎಂ.ಸಿದ್ದೇಶ್ವರ್ ಅವರೇ ದಾಳಿ ಮಾಡಿಸಿದ್ದು ಎಂದು ನಮ್ಮ ಪಕ್ಷದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಇಷ್ಟಕ್ಕೂ ಅವರ ಪಕ್ಷದ ವ್ಯವಹಾರ ನಮಗೆ ಯಾಕೆ ಎಂದು ಪ್ರಶ್ನಿಸಿದ್ದಾರೆ. …
Read More »ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂಪಾಯಿ ಅನುದಾನ
ಬೆಳಗಾವಿ: ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ರಾಜ್ಯೋತ್ಸವವನ್ನ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು. ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳು, ಯೋಜನೆಗಳು ಮತ್ತು ಜಿಲ್ಲೆಯ ಗಡಿ ಭಾಗಗಳಲ್ಲಿ ವಿವಿಧ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …
Read More »ಜಿಲ್ಲೆಯಾದ್ಯಂತ ಇವಿಎಂ, ಮತದಾನ ಪ್ರಕ್ರಿಯೆ ಜಾಗೃತಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ (ಮಾ.4) ಆಯೋಜಿಸಲಾಗಿದ್ದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತ ಯಂತ್ರಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ …
Read More »ವಿಧಾನಸಭಾ ಚುನಾವಣೆ; ರಾಜ್ಯ ಬಿಜೆಪಿಯ 12 ನಾಯಕರಿಗೆ ಜವಾಬ್ದಾರಿ ವಹಿಸಿದ ಹೈಕಮಾಂಡ್
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯದ 12 ನಾಯಕರಿಗೆ ಜಿಲ್ಲಾ ಮಟ್ಟದಲ್ಲಿ ಸಂಘಟನೆ ಜವಾಬ್ದಾರಿ ವಹಿಸಿದೆ. ಈ ಮೂಲಕ ರಾಜ್ಯ ನಾಯಕರಿಗೆ ಗ್ರೌಂಡ್ ಲೆವಲ್ ಜವಾಬ್ದಾರಿಯನ್ನು ಹಂಚಿಕೆ ಮಾಡಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸಹ ಉಸ್ತುವಾರಿ ಡಿ.ಕೆ.ಅರುಣಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಡಿ.ವಿ.ಸದಾನಂದಗೌಡ, …
Read More »ಕ್ಯಾಮರಾ ತಗೋಂಡು ಬೆಡ್ ರೂಮ್ ಬನ್ನಿ: ಸೈಫ್ ಅಲಿ ಖಾನ್
ಬಾಲಿವುಡ್ ತಾರೆಯರು ತಮ್ಮ ಮನೆಗಳು, ಜಿಮ್, ರೆಸ್ಟೋರೆಂಟ್ ಇಲ್ಲವೇ ಕ್ಲಬ್ಗೆ ಹೋದ್ರೂ ಅವರನ್ನು ಪಾಪರಾಜಿಗಳು ಬೆಂಬಿಡದೆ ಹಿಂಬಾಲಿಸುತ್ತಿರುತ್ತಾರೆ. ‘ಪಾಪ್ ಸಂಸ್ಕೃತಿ’ ಇತ್ತೀಚೆಗೆ ಸ್ವಲ್ಪ ಹೆಚ್ಚಾಗಿದೆ ಅಂತ ಹೇಳಬಹುದು, ಅದರಲ್ಲೂ ವಿಶೇಷವಾಗಿ ಎರಡು ವಾರಗಳ ಹಿಂದೆ ಅಲಿಯಾ ಭಟ್ ಅವರ ಪಕ್ಕದ ಕಟ್ಟಡದ ಟೆರೇಸ್ನಿಂದ ಇಬ್ಬರು ಫೋಟೋಗ್ರಾಫರ್ಗಳು ಅವರ ಫೋಟೋಗಳನ್ನು ಕ್ಲಿಕ್ ಮಾಡಿದ ಘಟನೆಯ ನಡೆದಿದ್ದು ಎಲ್ಲರಿಗೂ ಗೊತ್ತಿದೆ. ಇನ್ನು ಇದೇ ರೀತಿ ಗುರುವಾರ ರಾತ್ರಿ,ಸೈಫ್ ಅಲಿ ಖಾನ್ಕೂಡ …
Read More »ಬೆಂಗಳೂರಲ್ಲಿ ಖತರ್ನಾಕ್ ಕಳ್ಳನ ಎಂಟ್ರಿ : ʼಬೈಕ್ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಖದೀಮ ಅರೆಸ್ಟ್ʼ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಳ್ಳರಿಗೇನು ಕಮ್ಮಿಯಿಲ್ಲ, ಇದೀಗ ಬೈಕ್ಗಳನ್ನ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನುಸಿದ್ದಾಪುರ ಪೊಲೀಸರಿಂದ ಬಂಧಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿಲ್ಲಿ ಪಾರ್ಕಿಂಗ್ ಇಲ್ಲದೇ ಅದೇಷ್ಟು ಜನರು ಮನೆ ಮುಂದೆ ಬೈಕ್ಗನ್ನು ನಿಲ್ಲಿಸುತ್ತಾರೆ. ಇದನ್ನೆ ಬಂಡಾವಳವನ್ನಾಗಿ ಮಾಡಿಕೊಂಡು ರಾತ್ರೋರಾತ್ರಿ ಕಳ್ಳತನ ಮಾಡಿ ಮಾರಾಟ ಮಾಡುವ ಹೊಸ ದಂಧೆಯನ್ನ ಶುರು ಮಾಡಿದ್ದನು.ಈತ ಬೆಂಗಳೂರಿನ ಸಿದ್ದಾಪುರ, ಕಲಾಸಿಪಾಳ್ಯ, ವರ್ತೂರು, ಚಂದ್ರಾಲೇಔಟ್, ಕೆ.ಎಸ್.ಲೇಔಟ್ ಸೇರಿ ಬೈಕ್ಗಳನ್ನ ಕಳ್ಳತನ …
Read More »ಉಮೇಶ ಕತ್ತಿ ಅನಂತರ ಹುಕ್ಕೇರಿ ಕ್ಷೇತ್ರದ ಉತ್ತರಾಧಿಕಾರಿ ಯಾರು?
ಬೆಳಗಾವಿ: ಮೂವತ್ತೇಳು ಸುದೀರ್ಘ ವರ್ಷಗಳ ಕಾಲ ಹುಕ್ಕೇರಿ ಕ್ಷೇತ್ರವನ್ನು “ಆಳಿದ್ದ’ ಉಮೇಶ ಕತ್ತಿ ಅವರ ಅನುಪಸ್ಥಿತಿ ಈ ವಿಧಾನಸಭೆ ಚುನಾವಣೆಯಲ್ಲಿ ಬಹುವಾಗಿ ಕಾಡಲಿದೆ. ಹಿರಿಯ ರಾಜಕಾರಣಿ ಉಮೇಶ ಕತ್ತಿ ಅನಿರೀಕ್ಷಿತ ಅಗಲಿಕೆಯನ್ನು ಜಿಲ್ಲೆಯ, ಅದರಲ್ಲೂ ಹುಕ್ಕೇರಿ ಕ್ಷೇತ್ರದ ಜನರಿಗೆ ಈಗಲೂ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂತಹ ಅಳಿಸಲಾರದ ಛಾಪನ್ನು ಉಮೇಶ ಕತ್ತಿ ಬಿಟ್ಟು ಹೋಗಿದ್ದಾರೆ. ತಮ್ಮ ತಂದೆ ವಿಶ್ವನಾಥ ಕತ್ತಿ ಅಗಲಿಕೆಯಿಂದ ಉಪಚುನಾವಣೆ ಎದುರಿಸುವ ಮೂಲಕ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿದ ಉಮೇಶ …
Read More »ಮುಖ್ಯಮಂತ್ರಿ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಲೋಕಾಯುಕ್ತ ಪ್ರಕರಣದಲ್ಲಿ ಕೇವಲ ಪ್ರಶಾಂತ್ ಮಾಡಾಳ್ ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು. ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು …
Read More »ಹುಬ್ಬಳ್ಳಿ ಉದ್ಯಮಿಯ ಮನೆಯಲ್ಲಿ ದಾಖಲೆಯಿಲ್ಲದ ಮೂರು ಕೋಟಿ ರೂ ಪತ್ತೆ
ಹುಬ್ಬಳ್ಳಿ: ನಗರದ ಕೈಗಾರಿಕೋದ್ಯಮಿಯೊಬ್ಬರ ಮನೆಯಲ್ಲಿ ದಾಖಲಾತಿಗಳಿಲ್ಲದ ಮೂರು ಕೋಟಿ ರೂ. ಅಕ್ರಮ ಹಣ ದೊರೆತಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ಇಲ್ಲಿನ ಭವಾನಿ ನಗರದ ಕೀಟನಾಶಕಗಳ ಕೈಗಾರಿಕೋದ್ಯಮಿ ರಮೇಶ ಎಂಬುವರ ಮನೆಯಲ್ಲಿ ದಾಖಲಾತಿಗಳಿಲ್ಲದ ಹಣ ದೊರೆತಿದೆ. ಸಿಸಿಬಿ ಎಸಿಪಿ ನಾರಾಯಣ ಭರಮನಿ ಹಾಗೂ ಅಶೋಕ ನಗರ ಠಾಣೆ ಇನ್ಸಪೆಕ್ಟರ್ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಉದ್ಯಮಿ ಮನೆ ಮೇಲೆ ದಾಳಿ ಮಾಡಿ ಹಣ ಪತ್ತೆ ಮಾಡಿದ್ದಾರೆ. ಈ …
Read More »