ಮುಂಬೈ: ಮುಂಬೈ ಉಪನಗರ ಲೋಕಲ್ ರೈಲಿನ ಮೂರು ಬೋಗಿಗಳು ಮಂಗಳವಾರ ಸೆಂಟ್ರಲ್ ರೈಲ್ವೇ (ಸಿಆರ್) ಯುರಾನ್ ಲೈನ್ನಲ್ಲಿ ಹಳಿತಪ್ಪಿದ್ದು, ಕಾರಿಡಾರ್ನಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಸಿಆರ್ ಅಧಿಕಾರಿಗಳು ತಿಳಿಸಿದ್ದಾರೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಸಿಆರ್ ಮುಖ್ಯ ವಕ್ತಾರ ಶಿವಾಜಿ ಸುತಾರ್ ಪ್ರಕಾರ, ಬೇಲಾಪುರದಿಂದ ಖಾರ್ಕೋಪರ್ಗೆ ಹೋಗುತ್ತಿದ್ದ ರೈಲಿನ ಹಳಿತಪ್ಪುವಿಕೆಯು ಬೆಳಿಗ್ಗೆ 8.46 ಕ್ಕೆ ಸಂಭವಿಸಿದೆ, ಆದರೆ ಯಾವುದೇ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಬೆಲಾಪುರ್-ಖಾರ್ಕೋಪರ್-ನೆರೂಲ್ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವವರೆಗೂ ದುರಸ್ತಿ-ಮರುಸ್ಥಾಪನೆ ಕಾರ್ಯಗಳನ್ನು …
Read More »2023-24ನೇ ಸಾಲಿನಲ್ಲೇ 7ನೇ ವೇತನ ಆಯೋಗ ಜಾರಿಗೆ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ಸರಕಾರಿ ನೌಕರರಿಗೆ 7 ನೇ ವೇತನ ಆಯೋಗ ನೀಡಲು ಹಣ ತೆಗದಿರಿಸಿದ್ದೇವೆ. ಮಧ್ಯಂತರ ವರದಿ ಸಿದ್ದಪಡಿಸುತ್ತಿದ್ದೇವೆ. ವರದಿ ಬಂದ ಕೂಡಲೇ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 7 ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಹಣ ಮೀಸಲಿರಿಸಿದ್ದು, 2023-24 ನೇ ಸಾಲಿನಲ್ಲೇ ಜಾರಿಗೆ ತರಲಾಗುವುದು. ಈ ಕುರಿತು ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ನೌಕರರ ಬೇಡಿಕೆಗಳನ್ನು …
Read More »ನಾಳೆಯಿಂದಲೇ ರಾಜ್ಯಾದ್ಯಂತ ಪ್ರವಾಸ: B.S.Y.
ಶಿವಮೊಗ್ಗ: ನಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೇನೆ. ಆದರೆ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಆ ದಿಕ್ಕಿನಲ್ಲಿ ನಾಳೆಯಿಂದಲೇ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ಕೂಡ ಯಡಿಯೂರಪ್ಪ ಮನೆಯಲ್ಲಿ ಕುಳಿತಿದ್ದಾನೆಂದು ಭಾವಿಸುವುದು ಬೇಡ. ನನ್ನ ಕೈ ಕಾಲು ಗಟ್ಟಿ ಇರುವವರೆಗೂ ಪಕ್ಷ ಬಲಿಪಡಿಸಲು ನನ್ನ ಕೈಲಾದ ಕೆಲಸ ಮಾಡುತ್ತೇನೆ. …
Read More »ಹುಬ್ಬಳ್ಳಿ: ಸುಟ್ಟು ಕರಕಲಾದ ಗುಜರಿ ವಸ್ತುಗಳು
ಹುಬ್ಬಳ್ಳಿ: ನಗರದ ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ಕಾರ್ಯಾಗಾರದ ಗುಜರಿ ಉಪಕರಣಗಳಿಗೆ ಭಾನುವಾರ ಬೆಂಕಿ ತಗುಲಿದ್ದು, ಹಲವು ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋದವು. ಅಗ್ನಿ ಶಾಮಕ ದಳ ಸಿಬ್ಬಂದಿ ಮೂರ್ನಾಲ್ಕು ತಾಸು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಬಸ್ ಆಸನಕ್ಕೆ ಬಳಸಿ ಹಾಳಾದ ಸೀಟ್ ಕವರ್ಗಳು ಹಾಗೂ ರೆಗ್ಝಿನ್ ಅನ್ನು ಕಾರ್ಯಗಾರದ ಹಿಂಭಾಗದಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಸೀಟ್ ಕವರ್ಗಳು ಸೇರಿದಂತೆ ಅನುಪಯುಕ್ತ ವಸ್ತುಗಳನ್ನು …
Read More »ಕಲ್ಮೇಶ್ವರ ದೇವರ ಬೆಳ್ಳಿ ಮೂರ್ತಿ ಕಳವು
ನವಲಗುಂದ: ತಾಲ್ಲೂಕಿನ ಶಿರಕೋಳ ಗ್ರಾಮದಲ್ಲಿರುವ ಕಲ್ಮೇಶ್ವರ ದೇವರ 11 ಕೆ.ಜಿ ತೂಕದ ಬೆಳ್ಳಿಯ ಮೂರ್ತಿ ಕಳ್ಳರು ಕಳವು ಮಾಡಿದ್ದಾರೆ. ಭಾನುವಾರ ತಡರಾತ್ರಿ ಈ ಕೃತ್ಯ ನಡೆದಿದೆ. ಕಳ್ಳ ದೇವಸ್ಥಾನದಲ್ಲಿ ಅತ್ತ ಇತ್ತ ತಿರುಗಾಡಿದ್ದಾನೆ. ಅಲ್ಲಿ ಮಲಗಿದ್ದವರು ಎಚ್ಚರಗೊಳ್ಳದಂತೆ ನೋಡಿಕೊಂಡು, ಕೀಲಿ ಮುರಿದು ಗರ್ಭಗುಡಿ ಪ್ರವೇಶಿಸಿ, ಆ ಬೆಳ್ಳಿ ಮೂರ್ತಿ ತೆಗೆದುಕೊಂಡು ಪರಾರಿಯಾಗಿದ್ದಾನೆ. ಈ ಘಟನೆ ದೃಶ್ಯ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಮಾಯಿಸಿದ ಜನ: ಮೂರ್ತಿ ಕಳವು ಸುದ್ದಿ ತಿಳಿಯುತ್ತಿದ್ದಂತೆ …
Read More »ಮುಷ್ಕರ ನಡೆಯುವುದು ಶತಸಿದ್ಧ; ವದಂತಿಗಳಿಗೆ ಕಿವಿಗೊಡದಿರಿ: ಷಡಾಕ್ಷರಿ
ಬೆಂಗಳೂರು: “ಬುಧವಾರದಿಂದ ಮುಷ್ಕರ ನಡೆಯುವುದು ಶತಸಿದ್ಧ. ಯಾವ ಕಾರಣಕ್ಕೂ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ,ಈ ವಿಷಯದಲ್ಲಿ ರಾಜ್ಯ ಸರಕಾರಿ ನೌಕರರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು” ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಕರೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಹಿರಿಯ ಅಧಿಕಾರಿಗಳೂ ಸೇರಿದಂತೆ ರಾಜ್ಯ ಸರಕಾರದ ಎಲ್ಲ ನೌಕರರು ಈ ಮುಷ್ಕರದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸರಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯಕ್ಕೆ ಕೈ ಜೋಡಿಸಬೇಕು” ಎಂದು ಅವರು …
Read More »ನಾಳೆಯಿಂದ ರಾಜ್ಯಾದ್ಯಂತ ಶಾಲೆಗಳು ಬಂದ್?
ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಕರೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಬಂದ್ ಆಗುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರಿ ಶಾಲಾ ಶಿಕ್ಷಕರು ಶಾಲೆಗಳಿಗೆ ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲಿಯೇ ಇದ್ದು ಮುಷ್ಕರದಲ್ಲಿ ಭಾಗಿಯಾಗುವಂತೆ ಷಡಕ್ಷರಿ …
Read More »ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಿದ್ಧತೆ ಆರಂಭ
2023ರ ಡಿಸೆಂಬರ್ ತಿಂಗಳಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಮೈಸೂರು: 2023ರ ಡಿಸೆಂಬರ್ ತಿಂಗಳಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ …
Read More »ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು
ಕಲಬುರಗಿ: ಬಹು ದಿನಗಳ ಬೇಡಿಕೆಯಾಗಿದ್ದ ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲಿಗೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸದ ಡಾ. ಉಮೇಶ ಜಾಧವ್ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಒಂದೇ ಡೆಮು ರೈಲು ಇದ್ದು, ನಿತ್ಯ ಎರಡು ಬಾರಿ ಸಂಚರಿಸುತ್ತದೆ. ಹೊಸದಾಗಿ ಆರಂಭವಾಗುವ ಡೆಮು ರೈಲು ನಿತ್ಯ ಬೆಳಿಗ್ಗೆ 7.30ಕ್ಕೆ ಕಲಬುರಗಿಯಿಂದ ಹೊರಟು ಬೆಳಿಗ್ಗೆ 10.15ಕ್ಕೆ ಬೀದರ್ …
Read More »ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಲ್ಲಿರುವ ನೂರಾರು ಉದ್ಯಾನಗಳು ಈಗ ನಿರ್ವಹಣೆ ಇಲ್ಲದೇ ಸೊರಗಿವೆ.
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಲ್ಲಿರುವ ನೂರಾರು ಉದ್ಯಾನಗಳು ಈಗ ನಿರ್ವಹಣೆ ಇಲ್ಲದೇ ಸೊರಗಿವೆ. ಮಳೆಗಾಲದಲ್ಲಿ ನೈಸರ್ಗಿಕ ನೀರಿನ ಕಾರಣ ದಟ್ಟ ಹಸಿರು, ಬಣ್ಣಬಣ್ಣದ ಹೂವುಗಳಿಂದ ಕಂಗೊಳಿಸುತ್ತಿದ್ದ ಉದ್ಯಾನಗಳು ಈಗ ಹಾಳು ಕೊಂಪೆ ಯಾಗಿವೆ. ನೆರಳು, ನೆಮ್ಮದಿ ಹುಡುಕಿ ಬಂದವರಿಗೆ ಮುಳ್ಳು-ದಾರಿಗಳಾಗಿವೆ. ‘ಸ್ಮಾರ್ಟ್ಸಿಟಿ’ ಯೋಜನೆ ಕಾರ್ಯಗತವಾಗಿರುವ ಬೆಳಗಾವಿ ನಗರದಲ್ಲಿ 120ಕ್ಕೂ ಹೆಚ್ಚು ಉದ್ಯಾನಗಳಿವೆ. ಇವುಗಳಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 88 ಉದ್ಯಾನಗಳಿವೆ. ಅದರ ಪೈಕಿ 60 ಉದ್ಯಾನಗಳು ಸುಸ್ಥಿತಿಯಲ್ಲಿದ್ದು, ಉಳಿದವು ಮೂಲಸೌಕರ್ಯಗಳಿಂದ …
Read More »