Breaking News

ವಿದ್ಯಾರ್ಥಿಗಳಿಂದ ತಾಯಂದಿರ ಪಾದಪೂಜೆ-

ಮೂಡಲಗಿ: ವಿದ್ಯಾರ್ಥಿಗಳು ಪಠ್ಯಕ್ರಮದ ಅಭ್ಯಾಸದೊಂದಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ಭವಿಷ್ಯ ಕಟ್ಟಿಕೊಳ್ಳಬೇಕು. ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕು ಎಂದು ಮುಖ್ಯಾಧ್ಯಾಪಕ ಎ.ವಿ. ಗಿರೆಣ್ಣವರ ಹೇಳಿದರು. ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಲಕರು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿಕೊಂಡು ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಮಕ್ಕಳ ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು ಎಂದು ಸಲಹೆ ನೀಡಿದರು. …

Read More »

ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.; 18 ಚಿನ್ನದ ಪಡೆದ ವಿದ್ಯಾರ್ಥಿಗೆ ಶಿಕ್ಷಕನಾಗುವ ಆಸೆ

ಬೆಳಗಾವಿ: ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿ 18 ಚಿನ್ನದ ಪದಕ ಪಡೆದಿರುವ ಮುರಳಿ ಎಸ್‌. ಮುಂದೆ ತಮ್ಮ ಜೀವನದ ಏಕೈಕ ಗುರಿ ಬೋಧಕ ವೃತ್ತಿ ಮಾಡಬೇಕು ಎಂದುಕೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವದಲ್ಲಿ ಚಿನ್ನದ ಹುಡುಗನಾಗಿ ಹೊರಹೊಮ್ಮಿದ್ದಾರೆ. ಎಂಜಿನಿಯರಿಂಗ್‌ ಮುಗಿಯುತ್ತಿದ್ದಂತೆ ಪಿಎಚ್‌. ಡಿಗಾಗಿ ಮುರಳಿ ತಯಾರಿ ನಡೆಸಿದ್ದಾರೆ. ನಂತರದಲ್ಲಿ ಬೋಧಕ ವೃತ್ತಿ ಮಾಡಬೇಕು ಎಂದುಕೊಂಡಿದ್ದಾರೆ. ಇಷ್ಟೊಂದು ಚಿನ್ನದ ಪದಕ ಪಡೆದಿದ್ದು ಖುಷಿ ಆಗಿದೆ. ಕಷ್ಟಪಟ್ಟು ಶ್ರಮವಹಿಸಿ …

Read More »

ಬಿಜೆಪಿಯನ್ನೇ ಬೆಂಬಲಿಸಿ: ವೀರಶೈವ-ಲಿಂಗಾಯತರಿಗೆ ಯಡಿಯೂರಪ್ಪ ಮನವಿ

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಮ್ಮ ಬೆಂಬಲವನ್ನು ಮುಂದುವರೆಸಿ ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಪ್ರಬಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಮನವಿ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ 79ರ ಹರೆಯದ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ನೀವು ಚುನಾವಣಾ ರಾಜಕೀಯದಿಂದ ನಿವೃತ್ತರಾದ ನಂತರವೂ ಸಮುದಾಯ ಬಿಜೆಪಿಯನ್ನು ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ …

Read More »

ಮಾರ್ಚ್ 11 ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ : ಧಾರವಾಡ `IIT’ ನೂತನ ಕಟ್ಟಡ ಉದ್ಘಾಟನೆ

ಧಾರವಾಡ : ಮಾ.11 ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಐಐಟಿ ಕಟ್ಟಡ ಹಾಗೂ ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸುವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.   ಮುಮ್ಮಿಗಟ್ಟಿಯ ಐಐಟಿಯ ನೂತನ ಕಟ್ಟಡದ ನಿರ್ಮಾಣ ಹಂತದ ಕಾಮಗಾರಿಯನ್ನು ವೀಕ್ಷಿಸಿ, ಪರಿಶೀಲಿಸಿದ ಅವರು ಮಾತನಾಡುತ್ತಾ, ಶೀಘ್ರವೇ ಉಳಿದೆಲ್ಲ ಕೆಲಸವನ್ನು ಬೇಗನೆ …

Read More »

ರಾಜ್ಯದ `SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ವರ್ಷವೂ ಸಿಗಲಿದೆ ಕೃಪಾಂಕ!

ಬೆಂಗಳೂರು : ಎಸ್ ಎಸ್‌ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಈ ವರ್ಷವೂ 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲು ನಿರ್ಧರಿಸಲಾಗಿದೆ. ಕೊರೊನಾ ಕಾರಣದಿಂದ ಕಲಿಕೆ ಮೇಲೆ ಉಂಟಾಗಿರುವ ಪರಿಣಾಮದಿಂದ ಇನ್ನೂ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಚೇತರಿಸಿಕೊಳ್ಳದ ಕಾರಣ ಈ ವರ್ಷವೂ ಒಟ್ಟಾರೆ ಕನಿಷ್ಟ ಅಂಕ ಗಳಿಸುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇ. 10, ಪಿಯುಸಿ ವಿದ್ಯಾರ್ಥಿಗಳಿಗೆ ಶೇ. 5 …

Read More »

ಗುಜರಾತ್ ನ ಗ್ರಾಮಗಳಿಗೆ ಭೇಟಿ ನೀಡಿದ್ರೆ `ಗುಜರಾತ್ ಮಾಡೆಲ್’ ಗೊತ್ತಾಗುತ್ತೆ:H.D.K.

ಎಲ್ಲರೂ ಗುಜರಾತ್ ಮಾಡೆಲ್ ಅಂತಾರೆ, ಅದರೆ ಗುಜರಾತ್ ನ ಗ್ರಾಮಗಳಿಗೆ ಭೇಟಿ ನೀಡಿದ್ರೆ ಗುಜರಾತ್ ಮಾಡೆಲ್ ಅನ್ನೋದು ಗೊತ್ತಾಗುತ್ತೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರ ಫೈಲ್ಸ್ ರೀತಿಯಲ್ಲೇ ಗುಜರಾತ್ ಫೈಲ್ಸ್ ಪುಸ್ತಕ ಇದೆ. ಗುಜರಾತ್ ಗಲಭೆ ವೇಳೆ ಏನೆಲ್ಲಾ ಆಯ್ತು ಅನ್ನೋದು ಪುಸ್ತಕದಲ್ಲಿ ಇದೆ. ಗುಜರಾತ್ ಪೈಲ್ಸ್ ಪುಸ್ತಕದಲ್ಲಿ ಗಲಭೆಯ ಸಂಪೂರ್ಣ ಮಾಹಿತಿ ಇದೆ ಎಂದರು. ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಪ್ರಧಾನಿ ಮೋದಿ ಅವರು …

Read More »

ಶಾಲಾ ದಾಖಲಾತಿಯಲ್ಲಿ ವಿದ್ಯಾರ್ಥಿ ಹೆಸರು, ಜನ್ಮದಿನಾಂಕ ಸೇರಿ ಇತರೆ ತಿದ್ದುಪಡಿ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಸುತ್ತೋಲೆ

ಬೆಂಗಳೂರು : ವಿದ್ಯಾರ್ಥಿಗಳ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜನ್ಮದಿನಾಂಕ, ಜಾತಿ ಇತ್ಯಾದಿ ತಿದ್ದುಪಡಿ ಸಂಬಂದ ರಾಜ್ಯ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜಾತಿ, ಜನ್ಮ ದಿನಾಂಕ ಇತ್ಯಾದಿ ತಿದ್ದುಪಡಿ ಮಾಡುವ ಸಂಬಂಧ, ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿ ಅಧಿಕಾರವನ್ನು ಉಲ್ಲೇಖಿತ ಸುತ್ತೋಲೆಗಳಲ್ಲಿ ಜಿಲ್ಲಾ ಉಪನಿರ್ದೇಶಕರಿಗೆ ಪ್ರತ್ಯಾಯೋಜಿಸಿ ಅದರಂತೆ ಕ್ರಮವಹಿಸಲಾಗುತ್ತಿದೆ. ಈ ಪ್ರಕ್ರಿಯೆಯು ವಿಳಂಬವಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ …

Read More »

ಶಿಕಾರಿಪುರಕ್ಕೆ ವಿಜಯೇಂದ್ರ ಅಭ್ಯರ್ಥಿ: ಯಡಿಯೂರಪ್ಪ

ಬೆಂಗಳೂರು: ಚುನಾವಣ ರಾಜಕಾರಣದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಿಸಿರುವ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ತಮ್ಮ ಕಾರ್ಯಕ್ಷೇತ್ರ ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಮತ್ತೆ ಘೋಷಣೆ ಮಾಡಿದ್ದಾರೆ. ವಿಧಾನಸಭೆ ಕಲಾಪದ ಬಳಿಕ ಅಂಬೇಡ್ಕರ್‌ ಪ್ರತಿಮೆ ಹಾಗೂ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ವಿಧಾನಸೌಧದಿಂದ ನಡೆದುಕೊಂಡೇ ಬಂದು ಗಾಂಧಿ ಪ್ರತಿಮೆಗೆ ಅವರು ನಮನ ಸಲ್ಲಿಸಿದರು. ಶಿಕಾರಿಪುರಕ್ಕೆ ಬಹುತೇಕ ವಿಜಯೇಂದ್ರ ಅವರೇ …

Read More »

ಬೊಮ್ಮಾಯಿಯವರು ಕಣ್ಣು ಬಿಡಲು ಇನ್ನೆಷ್ಟು ಶಿಕ್ಷಕರ ಹೆಣ ಬೀಳಬೇಕು?: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಶ್ರೀ ಬಸರಿಶಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   https://www.instagram.com/reel/CpEyv87Dkf5/?igshid=NDk5N2NlZjQ= ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »