Breaking News

ಬೆಳಗಾವಿ ಅಧಿವೇಶನದ 3ನೇ ದಿನವೂ ಪ್ರತಿಭಟನೆಗಳ ಕಾವು ಜೋರು

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಮೂರನೇ ದಿನ ಬುಧವಾರವೂ ರೈತರು, ಆಶಾ ಕಾರ್ಯಕರ್ತೆಯರು, ಅತಿಥಿ ಶಿಕ್ಷಕರು ಸೇರಿ ವಿವಿಧ ಸಂಘಟನೆಗಳು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಿದವು. ತಮ್ಮ‌ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದರು.‌ ಇನ್ನು ಕೆಲ ರೈತ ಹೋರಾಟಗಾರರು ಪೊಲೀಸರ ಕಣ್ತಪ್ಪಿಸಿ ಸುವರ್ಣ ವಿಧಾನಸೌಧಕ್ಕೆ ನುಗ್ಗಲು ಯತ್ನಿಸಿದ ಘಟನೆ ನಡೆಯಿತು. ಇಲ್ಲಿನ ಸುವರ್ಣ ಗಾರ್ಡನ್ ಮತ್ತು ಹಳೆ ಪಿ.ಬಿ. ರಸ್ತೆ ಧಾರವಾಡ ನಾಕಾದಲ್ಲಿ ನಿಗದಿ ಪಡಿಸಿರುವ ಪ್ರತಿಭಟನಾ ಸ್ಥಳದಲ್ಲಿ 9 …

Read More »

ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿ

ಬೈಲಹೊಂಗಲ ಜಿಲ್ಲಾ ಹೋರಾಟ ಸಮಿತಿಯ ಸರ್ವ ಸದಸ್ಯರು ಹಾಗೂ ಪರಮ ಪೂಜ್ಯರುಗಳ ನಿಯೋಗದೊಂದಿಗೆ ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಬೆಳಗಾವಿ ಜಿಲ್ಲೆ ಅಖಂಡವಾಗಿ ಉಳಿಯಬೇಕು ಒಂದು ವೇಳೆ ವಿಭಜನೆಯಾದರೆ ಉಪ ವಿಭಾಗವಾಗಿರುವ ಬೈಲಹೊಂಗಲ ತಾಲೂಕುವನ್ನು ಜಿಲ್ಲೆಯಾಗಿ ಮಾಡಬೆಕೆಂದು ಎಲ್ಲರ ಪರವಾಗಿ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ, ಮಹಿಳಾ …

Read More »

ಶಬರಿಮಲೈ – ಪೊಂಗಲ್ ಪ್ರಯುಕ್ತ ವಿಶೇಷ ರೈಲುಗಳ ಸೇವೆ ವಿಸ್ತರಣೆ

ಶಬರಿಮಲೈ – ಪೊಂಗಲ್ ಪ್ರಯುಕ್ತ ವಿಶೇಷ ರೈಲುಗಳ ಸೇವೆ ವಿಸ್ತರಣೆ ಹುಬ್ಬಳ್ಳಿ: ಶಬರಿಮಲೆ ಋತುವಿನಲ್ಲಿ ಮತ್ತು ಮುಂಬರುವ ಪೊಂಗಲ್ ಹಬ್ಬದ ಸಮಯದಲ್ಲಿ ಭಕ್ತರಿಂದ ಹೆಚ್ಚಿನ ಪ್ರಯಾಣದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಗಳ ಅವಧಿಯನ್ನು ಮುಂದುವರಿಸಲಾಗುತ್ತಿದೆ. 1. ರೈಲು ಸಂಖ್ಯೆ 07313 ಎಸ್‌ಎಸ್‌ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ರೈಲು, ಈ ಹಿಂದೆ 28.12.2025ರವರೆಗೆ ಓಡಲಿದೆ ಎಂದು ತಿಳಿಸಲಾಗಿತ್ತು. ಆದರೆ, ಈ ಸೇವೆಯನ್ನು ಈಗ 04.01.2026 ರಿಂದ 25.01.2026 …

Read More »

ಆಚಾರ್ಯ ರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವ

ಬೆಳಗಾವಿಯ ಹಲಗಾದ ಶ್ರೀ ಬಾಲಾಚಾರ್ಯ ಸಿದ್ಧಸೇನ ಮುನಿ ಮಹಾರಾಜ ಆಧ್ಯಾತ್ಮಿಕ ಅನುಸಂಧಾನ ಫೌಂಡೇಶನ್ ವತಿಯಿಂದ ನಡೆದ ಆಚಾರ್ಯ ರತ್ನ ಶ್ರೀ 108 ಬಾಹುಬಲಿ ಮುನಿಮಹಾರಾಜರ 94ನೇ ಜನ್ಮ ಜಯಂತಿ ಮಹೋತ್ಸವ ಹಾಗೂ ಸರ್ವದೋಷ ಪ್ರಾಯಶ್ಚಿತ್ತ ವಿಧಾನ ಸಮಾರಂಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದ್ದರು. ‌ ಈ ವೇಳೆ ಪರಮಪೂಜ್ಯ ವೀರೇಂದ್ರ ಹೆಗ್ಗಡೆಯವರು, ಪರಮಪೂಜ್ಯ ಬಾಲಾಚಾರ್ಯ ಡಾ.ಶ್ರೀ 108 ಸಿದ್ದಸೇನ ಮಹಾರಾಜರು, ಮುಖ್ಯಮಂತ್ರಿ ಸಿದ್ದರಾಮಯ್ಯ, …

Read More »

ಲಿಂಗರಾಜ ಕಾಲೇಜಿಗೆ ಸಮಗ್ರ ವೀರಾಗ್ರಣಿ ಲಿಂಗರಾಜ ಕಾಲೇಜು ಸತತ 9 ನೇ ಬಾರಿ ಚಾಂಪಿಯನ್

ಬೆಳಗಾವಿ: ವಿದ್ಯಾರ್ಥಿಗಳು ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್, ಒಲಂಪಿಕ್ಸ್ ಕ್ರೀಡಾಕೂಟಗಳವರೆಗೂ ತಲುಪಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶವನ್ನು ಪ್ರತಿನಿಧಿಸಿ ಆ ಮೂಲಕ ದೇಶದ ಗೌರವವನ್ನು ಜಾಗತಿಕವಾಗಿ ರಾರಾಜಿಸುವಂತೆ ಮಾಡಬೇಕೆಂದು ಕೆ.ಎಲ್.ಇ ಸಂಸ್ಥೆಯ ಕಾರ್ಯಾದ್ಯಕ್ಷ ಡಾ.ಪಭಾಕರ ಕೊರೆಯವರು ಹೇಳಿದರು. ಸಲ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಆಯೋಜಿಸಿದ್ದ 9 ನೇ ಅಥ್ಲೆಟಿಕ್ ಕ್ರಿಡಾಕೂಟದಲ್ಲಿ 17 ದಾಖಲೆಗಳೊಂದಿಗೆ ಸತತ 9 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡ ಕೆ.ಎಲ್.ಇ ಸಂಸ್ಥೆಯ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು:

ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗಾ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು: • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ) 22ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್‌ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು. …

Read More »

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜನೆಗೆ ಸಿಎಂ, ಡಿಸಿಎಂ ಜೊತೆ ಚರ್ಚೆ: ವೆಂಕಟೇಶ ಪ್ರಸಾದ್

ಬೆಳಗಾವಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯ ನಡೆಸುವ ಸಂಬಂಧ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್​ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು. ಬೆಳಗಾವಿ ನಗರದಲ್ಲಿರುವ ಕೆಎಸ್​ಸಿಎ ಮೈದಾನಕ್ಕೆ ಬುಧವಾರ ಭೇಟಿ ನೀಡಿದ ವೇಳೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ನಡೆದ ಘಟನೆ ಬಳಿಕ ಯಾವುದೇ …

Read More »

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ.

ಬೆಳಗಾವಿ ಜಿಲ್ಲಾಧಿಕಾರಿ ಕಾರಿಗೆ (ಕಾಂಕ್ರೀಟ್ ಮಷಿನ್ ವಾಹನ)ಡಿಕ್ಕಿ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಘಟನೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಾರಿಗೆ ಡಿಕ್ಕಿ ಹೊಡೆದ ವಾಹನ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತಿದ್ದ ಡಿಸಿ ಕಾರು. ಜಿಲ್ಲಾಧಿಕಾರಿ ಬಳಿ ನಡೆದ ಕಾಮಗಾರಿಗೆ ಕಾಂಕ್ರೀಟ್ ತಂದಿದ್ದ ವಾಹನ. ರಿವರ್ಸ್ ತೆಗೆದುಕ್ಕೊಳ್ಳುವಾಗ ಡಿಸಿ ಕಾರಿಗೆ ಡಿಕ್ಕಿ ಹೊಡೆದ ವಾಹನ. ಕರಿನ ಮುಂಬಾಗ ಹಾಗೂ ವಾಹನದ ಬೋರ್ಡ್‌ ಗೆ ಡಿಕ್ಕಿ. ಡಿಕ್ಕಿ ಹೊಡೆದ ಪರಿಣಾಮ ಡಿಸಿ …

Read More »

ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ

ಬೆಳಗಾವಿ ಹತ್ತಿರದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಕಾರಾಗೃಹದಲ್ಲಿರುವ 862 ಕೈದಿಗಳ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ನೆರವಾಗುವ ನಿಟ್ಟಿನಲ್ಲಿ ನಾಳೆ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಾರಾಗೃಹದ ಅಧೀಕ್ಷಕರು ಸೇರಿ ಸಭೆ ನಡೆಸುವ ಮೂಲಕ ಪ್ರತಿಯೊಬ್ಬ ಕೈದಿಯ 18 ವರ್ಷದ ಒಳಗಿನ ಮಕ್ಕಳ ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಈ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ …

Read More »

ನಾನೇ ನಿಜವಾದ ವಿಪಕ್ಷನಾಯಕ, ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ: ಯತ್ನಾಳ್

ಬೆಳಗಾವಿ: ಈ ಸದನದಲ್ಲಿ ನಿಜವಾದ ಪ್ರತಿಪಕ್ಷದ ನಾಯಕ ಅಂದರೆ ನಾನೇ. ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಬಿಜೆಪಿ ನಾಯಕರ ಕಾಲೆಳೆದರು. ಸದನ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ಕಲಾಪಕ್ಕೆ ಸ್ಪೀಕರ್ ಯು. ಟಿ. ಖಾದರ್ ಅವಕಾಶ ಕೊಟ್ಟರು. ಇದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ಷೇಪಿಸಿ, ಎಲ್ಲವನ್ನೂ ಬದಿಗೊತ್ತಿ ಉತ್ತರ ಕರ್ನಾಟಕ ಭಾಗದ ಚರ್ಚೆ ಮಾಡುತ್ತೇವೆ ಅಂತಾ ಸಚಿವರೇ ಹೇಳಿದ್ದಾರೆ. ಹೀಗಾಗಿ, ಉತ್ತರ ಕರ್ನಾಟಕ ಭಾಗದ ಬಗ್ಗೆ …

Read More »