Breaking News

ಬರ್ಬರವಾಗಿ ಹೆಂಡತಿಯನ್ನೇ ಕೊಲೆಗೈದ ಗಂಡ

ರಾಯಚೂರು: ಪತ್ನಿಯ ಶೀಲ ಶಂಕಿಸಿ ಪತಿ ಮಹಾಶಯ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಪವಿತ್ರಾ ಅಲಿಯಾಸ್ ಮಮತಾ (22) ಮೃತ ಮಹಿಳೆ. ಆರೋಪಿ ನಾಗರಾಜ್ ಪತ್ನಿಯನ್ನೇ ಕೊಂದ ಪತಿ. ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಮಮತಾ ಹಾಗೂ ನಾಗರಾಜ್ ಮಾನ್ವಿ ಬಳಿಯ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್ ಗೆ ಪತ್ನಿ ಮಮತಾ ಮೇಲೆ ಅನುಮಾನ. ಅನುಮಾನ ವಿಪರೀತಕ್ಕೆ ಹೋಗಿ ಈಗ ಹೆಂಡತಿಯನ್ನೇ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾ ರೋಹಣ ಕಾರ್ಯಕ್ರಮ

ಹಿರೆನಂದಿ: ಸಂತೋಷ್ ಜಾರಕಿಹೊಳಿ ಅವರ ನೇತೃತ್ವದ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ, ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗಿ, ಹಾಗೂ ಜೊತೆಗೆ ಸೂರ್ಯ ಶ್ರೇಷ್ಠ ಜಾರಕಿಹೊಳಿ ಸಣ್ಣ ಸಾಹುಕಾರರು ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ, ಹಾಗೂ ಜಯಶ್ರೀ ನಾಯಿಕ ಈ ಒಂದು ಸಮಾರಂಭಕ್ಕೆ ಹಾಜರ್ ಇದ್ದರೂ ಹೌದು ತಮ್ಮ ಫ್ಯಾಕ್ಟರಿ ಆವರಣ ದಲ್ಲಿ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅಧ್ಬ್ಬೂತ …

Read More »

ಇನ್ನೊಂದು ತಿಂಗಳಲ್ಲಿ ಬಿಜೆಪಿ ಅಂಗಡಿ ಬಂದ್ ಆಗಲಿದೆ :ಎಂ. ಬಿ. ಪಾಟೀಲ

ವಿಜಯಪುರ: ಇನ್ನೊಂದು ತಿಂಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಬಿಜೆಪಿ ಅಂಗಡಿ ಬಂದ್ ಆಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಇಲ್ಲಿನ ಶಾಸಕರು ಮೊದಲು ದೇವರ ಹಿಪ್ಪರಗಿಯಲ್ಲಿ ಇದ್ದರು. ಇಲ್ಲಿಗೆ ಗುಳೆ ಬಂದಿದ್ದಾ. ಮುಂದೆ ಎಲ್ಲಿ ಹೋಗುತ್ತಾರೋ ಗೊತ್ತಿಲ್ಲ. ರಾಜಕಾರಣದಲ್ಲಿ ರಾಜಕೀಯವಾಗಿ ರಾಜಕಾರಣ ಮಾಡೋಣ. ಅವರದ್ದು ಒಂದು ಪಕ್ಷ, ನಮ್ಮದು ಒಂದು …

Read More »

ಆಪರೇಶನ್‌ ಕಮಲದ ಮೂವರು ಬಾಂಬೆ ಫ್ರೆಂಡ್ಸ್‌ ಮತ್ತೆ ಕಾಂಗ್ರೆಸ್ಸಿಗೆ?

ರಾಜಕೀಯ ನಿಂತ ನೀರಲ್ಲ, ಇಲ್ಲಿ ಯಾರೂ ಶತ್ರುಗಳಿಲ್ಲ, ಮಿತ್ರರೂ ಇಲ್ಲ ಎನ್ನುವ ಮಾತನ್ನು ನಾಡಿನ ರಾಜಕಾರಣಿಗಳು ಚುನಾವಣೆಯ ವೇಳೆ ನಿಜವೆಂದು ರುಜುವಾತು ಪಡಿಸುತ್ತಾರೆ. ಇದಕ್ಕೆ ಪೂರಕವಾದ ರಾಜಕೀಯ ವಿದ್ಯಮಾನಗಳು ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವುದು ಗೊತ್ತಿರುವ ವಿಚಾರ. ಈಗಾಗಲೇ ಹಲವರು ಪಕ್ಷ ನಿಯತ್ತನ್ನು ಬದಲಿಸಿಯಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇನ್ನೇನು ಹದಿನೈದು ದಿನಗಳಲ್ಲಿ ಚುನಾವಣಾ ಆಯೋಗ ತಾರೀಕು ನಿಗದಿ ಪಡಿಸುತ್ತದೆ …

Read More »

ಮುಂದಿನ ತಿಂಗಳಲ್ಲೇ 7ನೇ ವೇತನ ಆಯೋಗ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಗೆ ಈಡೇರಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅಸ್ತು ಎಂದಿದ್ದಾರೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸೋದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.   ಈ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆಯಲ್ಲಿ ಮಾತನಾಡಿದಂತ ಅವರು, ಈಗಾಗಲೇ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ …

Read More »

ದಿ|ಆನಂದ ಮಾಮನಿ ಅವರ ಸ್ಥಾನ ತುಂಬುವವರು ಬಿಜೆಪಿಯವರೇ ಅಥವಾ ಕಾಂಗ್ರೆಸ್‌ನವರೇ

ಬೆಳಗಾವಿ: ಸತತ ಮೂರು ಬಾರಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸವದತ್ತಿ ಯಲ್ಲಮ್ಮ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಶಾಸಕ ದಿ|ಆನಂದ ಮಾಮನಿ ಅವರ ಸ್ಥಾನವನ್ನು ತುಂಬುವ ವರು ಯಾರು? -ಇದು ಸವದತ್ತಿ ಕ್ಷೇತ್ರದಾದ್ಯಂತ ಈಗ ಎಲ್ಲರ ಬಾಯಲ್ಲಿ ಕೇಳಿಬರುತ್ತಿರುವ ಕುತೂಹಲದ ಪ್ರಶ್ನೆ. ಮಾಮನಿ ಅವರ ಸ್ಥಾನ ತುಂಬುವವರು ಬಿಜೆಪಿಯವರೇ ಅಥವಾ ಕಾಂಗ್ರೆಸ್‌ನವರೇ ಎಂಬ ಚರ್ಚೆ ನಿರಂತರವಾಗಿ ನಡೆದಿದೆ. ಕ್ಷೇತ್ರದಲ್ಲಿ ಇದುವರೆಗೆ ಬಿಜೆಪಿ ಹಾಗೂ ಕಾಂಗ್ರೆಸ್‌ದಿಂದ ಟಿಕೆಟ್‌ ಯಾರಿಗೆ ಎಂಬುದು ಅಂತಿಮವಾಗಿಲ್ಲ. ಎರಡೂ …

Read More »

ವಿದ್ಯಾರ್ಥಿಗಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಿದ ಡಾ| ಹಿಮ್ಮಡಿ; ದಳವಾಯಿ

ರಾಯಬಾಗ: ಒಬ್ಬ ಅಧ್ಯಾಪಕನನ್ನು ಆತನ ವಿದ್ಯಾರ್ಥಿಗಳು ಮಾತ್ರ ಸರಿಯಾಗಿ ಬಲ್ಲವರಾಗಿರುತ್ತಾರೆ. ಹಿಮ್ಮಡಿಯವರ ವಿದ್ಯಾರ್ಥಿ ಬಳಗ ನೋಡಿದರೆ, ಅವರ ಬೋಧನೆ ಎಂತಹದ್ದು ಎನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಹೇಳಿದರು.   ಪಟ್ಟಣದ ಮಹಾವೀರ ಭವನದಲ್ಲಿ ಡಾ| ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ವಿದ್ಯಾರ್ಥಿ ಬಳಗದಿಂದ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಂದ ವಿಚಾರ ಸಮರ್ಪಣೆ, ಗುರುವಿಗೆ ವಂದನೆ, ಶಿಷ್ಯರಿಗೆ ಅಭಿನಂದನೆ ಹಾಗೂ ಡಾ|ಹಿಮ್ಮಡಿ ದಂಪತಿಗೆ ಅಭಿನಂದನೆ ಸಮರ್ಪಣೆ …

Read More »

ಮೀಸಲು ಕ್ಷೇತ್ರಗಳಲ್ಲೇ ಕೈ ಟಿಕೆಟ್‌ಗೆ ಹೆಚ್ಚು ಫೈಟ್‌: 51 ಕ್ಷೇತ್ರಗಳಿಗೆ 350 ಮಂದಿ ಅರ್ಜಿ

ಬೆಂಗಳೂರು: ರಾಜ್ಯ ವಿಧಾನಸಭೆಯ ಮೀಸಲು ಕ್ಷೇತ್ರಗಳಲ್ಲೇ ಕಾಂಗ್ರೆಸ್‌ ಟಿಕೆಟ್‌ಗೆ ಹೆಚ್ಚಿನ ಪೈಪೋಟಿ ನಡೆದಿದೆ. ಹಾಲಿ ಶಾಸಕರು, ಮಾಜಿ ಸಚಿವರು ಪ್ರತಿನಿಧಿಸುವ ಕ್ಷೇತಗಳಲ್ಲೂ ಟಿಕೆಟ್‌ ಬಯಸಿರುವವರ ಪಟ್ಟಿ ದೊಡ್ಡದಿದೆ. ಹಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಒಂದು ಡಜನ್‌ ಮೀರಿರುವುದೇ ಈಗ “ಆಯ್ಕೆ’ ಬಹುದೊಡ್ಡ ತಲೆನೋವಾಗಿದೆ.   ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 36 ಪರಿಶಿಷ್ಟ ಜಾತಿ ಹಾಗೂ 15 ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಒಟ್ಟು 51 ಕ್ಷೇತ್ರಗಳಿವೆ. ಈ ಮೀಸಲು ಕ್ಷೇತ್ರಗಳಲ್ಲಿ ಸಿಂಹಪಾಲು …

Read More »

ಮನೆಮನೆಗೂ ತೆರಳಿ ಕಮಲ ಮತ್ತು ಮೋದಿ ಹೆಸರಲ್ಲಿ ಪ್ರಚಾರ ಮಾಡಬೇಕು’ ಎಂದು ಗೃಹ ಸಚಿವ ಅಮಿತ್‌ ಶಾ

ಬಳ್ಳಾರಿ): ‘ಮನೆಮನೆಗೂ ತೆರಳಿ ಕಮಲ ಮತ್ತು ಮೋದಿ ಹೆಸರಲ್ಲಿ ಪ್ರಚಾರ ಮಾಡಬೇಕು’ ಎಂದು ಗೃಹ ಸಚಿವ ಅಮಿತ್‌ ಶಾ ಸಂಡೂರಿನಲ್ಲಿ ಗುರುವಾರ ಬಳ್ಳಾರಿ ವಿಭಾಗದ ನಾಲ್ಕು ಜಿಲ್ಲೆಗಳ ಪ್ರಮುಖರಿಗೆ ತಾಕೀತು ಮಾಡಿದ್ದಾರೆ. ಸಂಡೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕ‌ಲ್ಪ ಯಾತ್ರೆಯಲ್ಲಿ ಭಾಗವಹಿಸಿದ ಬಳಿಕ ನಡೆದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಬಿಜೆಪಿ ಪ್ರಮುಖರ ಸಭೆಯಲ್ಲಿ ಬಿಡುವಿಲ್ಲದ ಪ್ರಚಾರದಲ್ಲಿ ತೊಡಗುವಂತೆ ಪಕ್ಷದ ಟಿಕೆಟ್‌ ಆಕಾಂಕ್ಷಿಗಳಿಗೂ ಸೂಚಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು …

Read More »

ಕಮಿಷನ್ ಕಿರುಕುಳ: ಗ್ರಾ.ಪಂ ಸದಸ್ಯೆ ರಾಜೀನಾಮೆ

ರಾಯಬಾಗ : ತಾಲ್ಲೂಕಿನ ಮೇಖಳಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ, ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬರು ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಬಿಜಿಪಿ ಶಾಸಕ ಡಿ.ಎಂ. ಐಹೊಳೆ ಅವರ ಕ್ಷೇತ್ರವ್ಯಾಪ್ತಿ ಇದಾಗಿದ್ದು, ಕಮಿಷನ್ ಆರೋಪ ಕೇಳಿ ಬಂದಿದೆ.   ‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ’14 …

Read More »