Breaking News

Gold, Silver ಪ್ರಿಯರಿಗೆ ಶಾಕ್;‌ 10 ಗ್ರಾಂ ಚಿನ್ನಕ್ಕೆ 5,400 ರೂ, ಕೆಜಿ ಬೆಳ್ಳಿಗೆ 15,000 ರೂ. ಏರಿಕೆ

ನವದೆಹಲಿ: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ರಾಜಕೀಯ ಅನಿಶ್ಚಿತತೆ ಮತ್ತು ಡಾಲರ್ ದುರ್ಬಲಗೊಳ್ಳುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಚಿನ್ನ, ಬೆಳ್ಳಿ ದರಗಳಲ್ಲಿ ಏರಿಳಿತ ಆಗುತ್ತಿದೆ. ಎರಡೂ ಲೋಹಗಳ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡಿದ್ದು, ಹೂಡಿಕೆದಾರರು ಸುರಕ್ಷಿತ ಸ್ವರ್ಗದ ಸ್ವತ್ತುಗಳತ್ತ ಮುಖ ಮಾಡಲು ಕಾರಣವಾಗಿದೆ. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 5,400 ರೂ. ಏರಿಕೆಯಾಗಿ 1,59,710 ರೂ.ಗೆ ತಲುಪಿದೆ. …

Read More »

ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ

ಕಾರವಾರ: ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧ ವಿತರಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದ ಪಿಕ್ಳೆ ನರ್ಸಿಂಗ್ ಹೋಂನ ಔಷಧಿ ವಿತರಕ ರಾಜು ಪಿಕ್ಳೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ಇರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹದಿನೈದು ದಿನದ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಆರೋಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ರಾಜು ಅವರು ಮಾನಸಿಕ ಖಿನ್ನತೆಗೆ …

Read More »

ಬಿಜೆಪಿಗೆ ಅಧಿಕಾರ ನೀಡಿದರೆ ಶಬರಿಮಲೆ ಚಿನ್ನ ಕಳವು ತನಿಖೆ – ಇದು ಮೋದಿ ಗ್ಯಾರಂಟಿ : ಕೇರಳದಲ್ಲಿ ಪ್ರಧಾನಿ ವಚನ

ತಿರುವನಂತಪುರಂ: ಕೇರಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಲಾಗುವುದು. ಇದು ಮೋದಿಯ ಗ್ಯಾರಂಟಿ ಎಂದು ಪ್ರಧಾನಿ ಹೇಳಿದ್ದಾರೆ. ಚುನಾವಣಾ ದಿನಾಂಕ ಪ್ರಕಟವಾಗುವ ಮೊದಲೇ ಕೇರಳದಲ್ಲಿ ಮೋದಿ ಪಕ್ಷದ ಪರ ಪ್ರಚಾರಕ್ಕೆ ಇಳಿದಿದ್ದು ಇಂದು ತಿರುವನಂತಪುರದಲ್ಲಿ ಬಿಜೆಪಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಲ್‌ಡಿಎಫ್‌, ಯುಡಿಎಫ್‌ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು. ತಿರುವನಂತಪುರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಇದು ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದಕ್ಕೆ …

Read More »

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು; ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ …

Read More »

ಕೆಕೆಆರ್‌ಟಿಸಿ ಬಸ್ ಹರಿದು 4 ವರ್ಷದ ಕಂದಮ್ಮ ಸಾವು

ರಾಯಚೂರು: ಕೆಕೆಆರ್‌ಟಿಸಿ ಬಸ್  ಹರಿದು ನಾಲ್ಕು ವರ್ಷದ ಕಂದಮ್ಮ  ಸಾವನ್ನಪ್ಪಿದ ಘಟನೆ ರಾಯಚೂರು  ಜಿಲ್ಲೆಯ ದೇವದುರ್ಗ  ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ. ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಮೃತ ಕಂದಮ್ಮ. ಸಾರಿಗೆ ಬಸ್ ಗೂಗಲ್‌ನಿಂದ ದೇವದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಚಾನಕ್ಕಾಗಿ ಅಡ್ಡ ಬಂದ ಕಾರಣ ಮಗುವಿನ ಮೇಲೆ ಬಸ್ ಹರಿದು ದುರ್ಘಟನೆ ಸಂಭವಿಸಿದೆ. ಬಸ್ ಬರುವುದನ್ನು ಗಮನಿಸದೆ ಮಗು ರಸ್ತೆ ದಾಟಲು ಮುಂದಾದಾಗ ಅಪಘಾತ ನಡೆದಿದೆ. ಧಿಡೀರ್ ಆಗಿ …

Read More »

ಕಲಬುರಗಿ| ಪ್ರೀತಿಸಿ ಮದುವೆಯಾದ ಎರಡೇ ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆ

ಕಲಬುರಗಿ: ಪ್ರೀತಿಸಿ ಮದುವೆಯಾದ ನವವಿವಾಹಿತೆ ಎರಡೇ ತಿಂಗಳಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅನಸೂಯಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಕಲಬುರಗಿ ನಗರದ ಆಜಾದಪುರ್ ಬಡಾವಣೆಯ ನಿವಾಸಿಯಾಗಿದ್ದು, ಈಕೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಅತ್ತೆ ಮಗ ಅವಿನಾಶ್ ಜೊತೆ ಪ್ರೀತಿಸಿ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು. ಆದರೆ ಮದುವೆಯಾದ ಎರಡೇ ತಿಂಗಳಲ್ಲಿ ಈಕೆಗೆ ತನ್ನ ಮೂರು ಜನ ಸಹೋದರಿಯರು ಕ್ಯಾಪಿಟಲ್ ಸಿಟಿಗಳಲ್ಲಿ ವಾಸವಿದ್ರು, ತಾನು ಮಾತ್ರ ಹಳ್ಳಿಯಲ್ಲಿ …

Read More »

ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ  ಅವಕಾಶ ನೀಡಿ ಹೈಕೋರ್ಟ್  ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ನಿಷೇಧ ಆದೇಶ ರದ್ದುಗೊಳಿಸಿ ಹೈಕೋರ್ಟ್ ಮುಖ್ಯಪೀಠ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ಜಾಗರೂಕತೆಯ ಬಗ್ಗೆ ನಿಯಮಾವಳಿ ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಬ್ರೇಕ್ ಹಾಕಲಾಗಿತ್ತು. ಜೂನ್‌ನಲ್ಲಿ ಟ್ಯಾಕ್ಸಿ ಅಗ್ರಿಗೇಟರ್‌ಗಳಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು. ಇಂದು …

Read More »

ಶಬರಿಮಲೆ ಪ್ರವಾಸಕ್ಕೆ ತೆರಳಿದ್ದ ಕೋಲಾರ ಮೂಲದ ವ್ಯಕ್ತಿ ತಮಿಳುನಾಡಿನಲ್ಲಿ ನಾಪತ್ತೆ

ಕೋಲಾರ: ಕೇರಳದ  ಶಬರಿಮಲೆ  ಪ್ರವಾಸಕ್ಕೆ ತೆರಳಿದ್ದ ಕೋಲಾರ ಮೂಲದ ವ್ಯಕ್ತಿಯೊಬ್ಬರು ತಮಿಳುನಾಡಿನಲ್ಲಿ  ನಾಪತ್ತೆಯಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೇವಗಾನಹಳ್ಳಿಯ ರವಿ (40) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದು, ತಮಿಳುನಾಡಿನ ತಿರುಚಂದೂರ್‌ನಲ್ಲಿ ಮಂಗಳವಾರ ಪ್ರವಾಸಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿ ನಾಲ್ಕು ದಿನಗಳೇ ಕಳೆದರೂ ಯಾವುದೇ ಸುಳಿವು ಸಿಕಿಲ್ಲ. ಸದ್ಯ ಘಟನೆ ಸಂಬಂಧ ತಿರುಚಂದೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಹಾಗೂ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ನಾಪತ್ತೆಯಾಗಿರುವ ರವಿಗಾಗಿ ತೀವ್ರ …

Read More »

ಜನಗಣತಿಯ ಮೊದಲ ಹಂತಕ್ಕೆ ತಯಾರಿ; 33 ಪ್ರಶ್ನೆಗಳನ್ನು ಸಿದ್ಧಪಡಿಸಿದ ಕೇಂದ್ರ ಸರ್ಕಾರ

ನವದೆಹಲಿ: 2026-27 ರ ಜನಗಣತಿಯ  ಹಂತ 1 ರಲ್ಲಿ ಕೇಳಲಾಗುವ ಪ್ರಶ್ನೆಗಳನ್ನು ವಿವರಿಸುವ ಅಧಿಕೃತ ಅಧಿಸೂಚನೆಯನ್ನು ಭಾರತ ಸರ್ಕಾರ ಬಿಡುಗಡೆ ಮಾಡಿದೆ. ಇದನ್ನು ಮನೆ ಪಟ್ಟಿ ಮತ್ತು ವಸತಿ ಗಣತಿ ಎಂದೂ ಕರೆಯಲಾಗುತ್ತದೆ. ಗೃಹ ಸಚಿವಾಲಯ ಹೊರಡಿಸಿರುವ ಮತ್ತು ಗೆಜೆಟ್‌ನಲ್ಲಿ ಪ್ರಕಟವಾದ ಈ ಅಧಿಸೂಚನೆಯು, ದೇಶಾದ್ಯಂತ ಜನಗಣತಿ ಅಧಿಕಾರಿಗಳು ಮನೆಗಳಿಗೆ ಕೇಳುವ 33 ನಿರ್ದಿಷ್ಟ ಪ್ರಶ್ನೆಗಳನ್ನು ವಿವರಿಸಿದೆ. ಈ ಮೊದಲ ಹಂತವು ಮನೆಗಳ ಗುಣಮಟ್ಟ, ನೀರು, ವಿದ್ಯುತ್, ಶೌಚಾಲಯ, ಅಡುಗೆ …

Read More »

ಸತತ 3 ದಿನ ರಜೆ: ಪ್ರಯಾಣಿಕರಿಗಾಗಿ KSRTC ಜತೆ BMTC ಬಸ್ಸುಗಳ ಸಂಚಾರ

ಬೆಂಗಳೂರು: ಸಾಲು ಸಾಲು ರಜೆ  ಇದ್ರೆ ಸಾಕು ಬೆಂಗಳೂರಿನ  ಜನ ತಮ್ಮ ತಮ್ಮ ಊರುಗಳತ್ತ ಮುಖ ಮಾಡುತ್ತಾರೆ. ಇನ್ನು ಕೆಲವರು ಟ್ರಿಪ್​ಗೆ ತೆರಳುತ್ತಾರೆ. ಈಗ ಜನವರಿ ಅಂತ್ಯದಲ್ಲಿ ಸತತ ಮೂರು ದಿನ ರಜೆ ಬಂದಿರುವ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಜನ ಊರುಗಳತ್ತ ತೆರಳುವ ಸಾಧ್ಯತೆಗಳಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್​​ಆರ್​​​ಟಿಸಿ ಬಸ್ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್​​ಗಳ  ವ್ಯವಸ್ಥೆ ಮಾಡಲಾಗಿದೆ. ಸತತ ಮೂರು ದಿನ …

Read More »