ಸಮಾಜಸೇವೆ, ಜನಪರ ಕಾಳಜಿ ಹಾಗೂ ಯುವಕರಿಗೆ ಪ್ರೇರಣೆಯಾಗಿರುವ ಲಖನ ಜಾರಕಿಹೊಳಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ-ಸಮೃದ್ಧಿ ಹಾಗೂ ಇನ್ನಷ್ಟು ಜನಸೇವೆಯನ್ನು ಮಾಡುವ ಶಕ್ತಿ ನೀಡಲಿ ಎಂದು ಹಾರೈಸುತ್ತೇವೆ. “ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ನಿಮ್ಮ ಎಲ್ಲಾ ಕನಸುಗಳು ನನಸಾಗಲಿ, ಜನಸೇವೆಯ ಪಥದಲ್ಲಿ ಇನ್ನಷ್ಟು ಯಶಸ್ಸುಗಳು ದೊರಕಲಿ.”
Read More »ಮದುವೆಯಾಗಿ ತಿಂಗಳಷ್ಟೇ ಕಳೆದಿತ್ತು: ಬೆಳಗಾವಿಯಲ್ಲಿ ನವವಿವಾಹಿತೆ ಆತ್ಮಹತ್ಯೆ
ಬೆಳಗಾವಿ:ಮದುವೆಯಾಗಿ ಕೇವಲ ಒಂದು ತಿಂಗಳಾಗಿದ್ದ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ಮಹಾದ್ವಾರ ರಸ್ತೆಯ ಅಷ್ಟೇಕರ ಗಲ್ಲಿಯಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಕಂಪನಿಯ ಉದ್ಯೋಗಿ ರಕ್ಷಿತಾ ಪೂಜಾರಿ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಒಂದು ತಿಂಗಳ ಹಿಂದಷ್ಟೇ ಈಕೆಗೆ ಮಂಜುನಾಥ ಕೃಷ್ಣಾ ಪೂಜಾರಿ ಎಂಬುವರೊಂದಿಗೆ ವಿವಾಹವಾಗಿತ್ತು. ಮೃತ ರಕ್ಷಿತಾ ಮನೆಯಿಂದಲೇ ಖಾಸಗಿ ಕಂಪನಿಯ ಕೆಲಸವನ್ನು (ವರ್ಕ್ ಫ್ರಮ್ ಹೋಮ್) ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಜೂನ್ 9ರಂದು …
Read More »12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ
ಹನ್ನೆರಡು ವರ್ಷಗಳ ದಾಖಲೆಯ ಆಡಳಿತ ಪೂರೈಸಿ ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದರು. ನವದೆಹಲಿಯಲ್ಲಿ ಬುಧವಾರ ನಡೆದ ಎನ್.ಡಿ.ಎ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಕೇಂದ್ರ ಸಚಿವರು ಪ್ರಧಾನಿಗಳನ್ನು ಗೌರವಿಸಿದರು. ಬಳಿಕ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಚಿವರು; ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಮೂಲಸೌಕರ್ಯ, ಉತ್ಪಾದನೆ, ಡಿಜಿಟಲ್ ಸಬಲೀಕರಣ, …
Read More »ಮಾರಿಕಾಂಬಾ ಕ್ರೀಡಾಂಗಣದ ಬಳಿ ಗಾಂಜಾ ಮಾರುತ್ತಿದ್ದ ಖದೀಮ ಪೊಲೀಸ್ ಬಲೆಗೆ
ಶಿರಸಿ: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರಾಜೀವ ನಗರದ ನಿವಾಸಿ, ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಆನಂದ ಬೋವಿವಡ್ಡರ ಅಲಿಯಾಸ್ ತುರಿಮಣಿ (23) ಬಂಧಿತ ಆರೋಪಿಯಾಗಿದ್ದಾನೆ. ಮಂಗಳವಾರ ರಾತ್ರಿ 9:15ರ ಸುಮಾರಿಗೆ ಶಿರಸಿಯ ಕಾಲೇಜು ರಸ್ತೆಯ ಮಾರಿಕಾಂಬಾ ಕ್ರೀಡಾಂಗಣದ ಹತ್ತಿರ ವ್ಯಕ್ತಿಯೊಬ್ಬ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ …
Read More »ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಲು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಸಿಎಂ ಡಿಕೆಶಿ ಕರೆ
ನವದೆಹಲಿ: ನಿಮ್ಮ ಶಕ್ತಿ ಅದಮ್ಯ. ನೀವು ಮನಸ್ಸು ಮಾಡಿದರೆ ಅಭಿವೃದ್ಧಿ ರಥ ಮುನ್ನುಗ್ಗುತ್ತದೆ. ಹೀಗಾಗಿ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಕೈಜೋಡಿಸಿ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳಿಗೆ ಕರೆ ನೀಡಿದರು. ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಜತೆ ಬುಧವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟ ಸಂವಾದದಲ್ಲಿ ಅವರು ಈ ಮನವಿ ಮಾಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿದ್ದ ಅವರು ಇಷ್ಟು …
Read More »ಗೃಹಿಣಿ ಅನುಮಾನಾಸ್ಪದ ಸಾವು – ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ
ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ. ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಸುಮ ಪತಿ ರಾಜೇಶ್ ಉದ್ಯಮಿಯಾಗಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಡೆತ್ ನೋಟ್ …
Read More »ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣ – ಠಾಣೆಗೆ ಹಾಜರಾದ ಐವರು ವಶಕ್ಕೆ
ಹಾಸನ: ಕುಖ್ಯಾತ ರೌಡಿಶೀಟರ್ ಆವಲಹಳ್ಳಿ ಮಂಜೇಶ್ ಹತ್ಯೆ ಪ್ರಕರಣದಲ್ಲಿ ಐವರು ಶಂಕಿತ ಆರೋಪಿಗಳು ಹಾಸನ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಸಾಯಿನಾಥ್, ನಿಂಗರಾಜ್, ಶಶಿ, ಭರತ್ ಸೇರಿ ಐವರು ಪೊಲೀಸರ ಮುಂದೆ ಹಾಜರಾದ ಶಂಕಿತರು. ಸೋಮವಾರ ಮುಂಜಾನೆ ರೌಡಿಶೀಟರ್ ಮಂಜೇಶ್ನನ್ನು ಜಿಲ್ಲಾ ನ್ಯಾಯಾಲಯದ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ಬೆನ್ನಲ್ಲೇ ಬೆಂಗಳೂರು ಮೂಲದ ನಾಲ್ವರು ಹಾಗೂ ತುಮಕೂರು ಮೂಲದ ಓರ್ವ ಯುವಕ …
Read More »ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ
ಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿ ಸುಮಾರು 120 ಗ್ರಾಂ ಚಿನ್ನ ದೋಚಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ಪೊಲೀಸರು ಬಸವರಾಜ್ ಅಂಗಡಿ ಮತ್ತು ನವೀನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 120 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೊದಲು ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿದ್ದರು. ಬಳಿಕ ಅದನ್ನು ವಿಡಿಯೋ ಮಾಡಿ ಇಟ್ಟುಕೊಂಡು, …
Read More »ಕಸ ಸಂಸ್ಕರಣೆ ನೆಪದಲ್ಲಿ 39,000 ಕೋಟಿ ಹಗರಣ – 10,000 ಕೋಟಿ ಕಿಕ್ಬ್ಯಾಕ್: ಆರ್.ಅಶೋಕ್ ಬಾಂಬ್
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಕಸ ಸಂಸ್ಕರಣೆ ಮಾಡುವ ನೆಪದಲ್ಲಿ 39,000 ಕೋಟಿ ರೂ. ಹಗರಣ ನಡೆಸಿದೆ. 35 ವರ್ಷಗಳ ಸುದೀರ್ಘ ಅವಧಿಗೆ ಎಂಎಸ್ಡಬ್ಲ್ಯು ಸೊಲ್ಯೂಶನ್ಸ್ ಲಿಮಿಟೆಡ್ಗೆ ನೀಡುತ್ತಿರುವ ಟೆಂಡರ್ನ ಒಟ್ಟು ಮೊತ್ತದಲ್ಲಿ 10,000 ಕೋಟಿ ರೂ. ಕಿಕ್ಬ್ಯಾಕ್ ಪಡೆಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸ್ವಚ್ಛತೆಯಲ್ಲಿ ಅತ್ಯುತ್ತಮ ನಗರ ಎಂಬ ಹೆಗ್ಗಳಿಕೆ ಬೆಂಗಳೂರಿಗೆ ಸಿಕ್ಕಿತ್ತು. ಈಗ ಬೆಂಗಳೂರೇ …
Read More »ಅಪ್ರಾಪ್ತೆಗೆ ಬ್ಲ್ಯಾಕ್ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಆರೋಪ – ಐವರ ಬಂಧನ
ಚಿಕ್ಕಮಗಳೂರು: ಅಪ್ರಾಪ್ತೆಗೆ ಬ್ಲ್ಯಾಕ್ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಈತ ಈ ಹಿಂದೆಯೂ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ. ಫೋಟೋ ಒಂದನ್ನು ತೋರಿಸಿ ಅಪ್ರಾಪ್ತೆಗೆ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ 5 ಮಂದಿ ವಿರುದ್ಧ ಗೋಣಿಬೀಡು ಠಾಣೆಗೆ ಆಕೆ ದೂರು ನೀಡಿದ್ದಳು. ಇನ್ನೂ …
Read More »
Laxmi News 24×7