ಸಮಾಜಘಾತಕರ ಹೃದಯದಲ್ಲಿ ಭಯ ಹುಟ್ಟಿಸುವ ಧೈರ್ಯಶಾಲಿ, ನ್ಯಾಯಕ್ಕಾಗಿ ನಿಂತ ನಿರ್ಭಯ ಯೋಧ, ನಮ್ಮ ಹೆಮ್ಮೆಯ ಕನ್ನಡಿಗರಾದ ಮಾನ್ಯ V.C. Sajjanar, IPS ಸರ್ ಅವರಿಗೆ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹುದ್ದೆಗೆ ಬಡ್ತಿ ಲಭಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಕ್ಷಣ. ಅವರ ಪ್ರತಿಯೊಂದು ಹೆಜ್ಜೆಯೂ ನ್ಯಾಯದ ದಾರಿಯಲ್ಲಿ, ಪ್ರತಿಯೊಂದು ನಿರ್ಧಾರವೂ ದೇಶಭಕ್ತಿಯ ನಾದದಲ್ಲಿ ಮೂಡಿದೆ. ಕಠಿಣ ಪರಿಸ್ಥಿತಿಗಳಲ್ಲೂ ತಲೆಬಾಗದೆ ನಿಂತ ಅವರ ಆತ್ಮವಿಶ್ವಾಸ, ಶೌರ್ಯ ಮತ್ತು ತ್ಯಾಗ ಇವೆಲ್ಲವೂ ನಮ್ಮ ಯುವ …
Read More »ಬೆಳಗಾವಿಯ ಜೀವನಾಡಿ ರಾಕಸಕೊಪ್ಪ ಖಾಲಿ ಖಾಲಿ: ಕುಂದಾನಗರಿಗೆ ಜಲಕಂಟಕ, ನೀರು ಪೂರೈಕೆಯಲ್ಲಿ ಭಾರಿ ಬದಲಾವಣೆ!
ಬೆಳಗಾವಿಗೆ ಈ ಬಾರಿ ಬೇಸಿಗೆಯ ಬಿಸಿ ಜೋರಾಗಿಯೇ ತಟ್ಟಿದೆ. ನಗರದ ದಾಹ ತಣಿಸುವ ರಾಕಸಕೊಪ್ಪ ಜಲಾಶಯದ ಒಡಲು ಬರಿದಾಗುತ್ತಿದ್ದು, ಮಹಾನಗರದ 58 ವಾರ್ಡ್ಗಳ ಜನತೆಗೆ ಈಗ ನೀರಿನ ತತ್ವಾರ ಶುರುವಾಗಿದೆ. ಮುಂದಿನ ಎರಡು ತಿಂಗಳುಗಳ ಕಾಲ ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ. ಸೌಮ್ಯ ಹವಾಮಾನಕ್ಕೆ ಹೆಸರಾದ ಬೆಳಗಾವಿಯಲ್ಲಿ ಈ ಬಾರಿ ಸೂರ್ಯನ ಪ್ರತಾಪ ಹೆಚ್ಚಾಗಿದ್ದು, ಅದರ ನೇರ ಪರಿಣಾಮ ಜಲಮೂಲಗಳ ಮೇಲೆ ಬೀರಿದೆ. ಅರ್ಧ ಟಿಎಂಸಿ …
Read More »ಡಿ.ಸುಧಾಕರ್ ಸ್ಥಿತಿ ಗಂಭೀರ – ಕೆಲವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್ಪರ್ಟ್ ಎಂದ ಹೆಚ್ಡಿಕೆ
ಚಿತ್ರದುರ್ಗ: ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೆಲವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್ಪರ್ಟ್ ಇದ್ದಾರೆ ಎಂದು ಪರೋಕ್ಷವಾಗಿ ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಅವರು ಮಾತನಾಡಿದರು. ಈ ವೇಳೆ ಸಚಿವ ಸುಧಾಕರ್ ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ. ಈ ವೇಳೆ ನಾನು ಜೆಡಿಎಸ್ ಸ್ಥಾನದ ಬಗ್ಗೆ ಚರ್ಚೆ ಮಾಡಲ್ಲ. ಹಿರಿಯೂರು ಸೇರಿದಂತೆ ಬೇರೆ …
Read More »ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ತುಂಬು ಗರ್ಭಿಣಿಗೆ ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ವೈದ್ಯರಿಲ್ಲದೇ 30 ನಿಮಿಷದವರೆಗೂ ಕಾದ ಜನ ಬಳಿಕ ಹೆರಿಗೆಗಾಗಿ ಪರದೆ ಕಟ್ಟಿ ರೈಲಿನಲ್ಲಿದ್ದ ಮಹಿಳೆಯರೇ ಹೆರಿಗೆ ಮಾಡಿಸಿದ್ದಾರೆ. ವೈದ್ಯಕೀಯ ಸೌಲಭ್ಯವಿಲ್ಲದೆ ತೀವ್ರ ರಕ್ತ ಸಾವ್ರದಿಂದ ಬಳಲುತ್ತಿದ್ದ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನಲ್ಲಿ (BC …
Read More »ನಾಳೆ ಲೆಕ್ಕ ಕೊಡುತ್ತೇವೆ ಎಂದ ಟ್ರಸ್ಟ: ಲೆಕ್ಕ ಪಡೆದು ಮಠ ಖಾಲಿ ಮಾಡುವಂತೆ ಸ್ವಾಮೀಜಿಗೆ ತಾಕೀತು
ದಾವಣಗೆರೆ: ಹರಿಹರದ ಪಂಚಮಸಾಲಿ ಮಠದ ಆಡಳಿತ ಮಂಡಳಿ (ಟ್ರಸ್ಟ್) ಹಾಗೂ ವಚನಾನಂದ ಸ್ವಾಮೀಜಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಧರ್ಮದರ್ಶಿ ಸಮಿತಿಯ ಮುಖಂಡರು ಸ್ವಾಮೀಜಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಾಳೆ ಲೆಕ್ಕ ಕೊಡುತ್ತೇವೆ. ಲೆಕ್ಕ ಪಡೆದು ಮಠ ಖಾಲಿ ಮಾಡುವಂತೆ ಸ್ವಾಮೀಜಿಗೆ ಟ್ರಸ್ಟಿ ಹೆಚ್.ಎಸ್.ನಾಗರಾಜ್ ತಾಕೀತು ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿಯ ಪಂಚಮಸಾಲಿ ಮಠದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ …
Read More »ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ
ಚಿಕ್ಕಮಗಳೂರು: ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ದುರ್ದೈವಿ. ಶನಿವಾರ ಬೆಳಗ್ಗೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಯುವತಿಗೆ ಅಪ್ಪ ಹೇಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಮಗಳು ಸೌಜನ್ಯ ಸಾಂಬಾರ್ ಮಾಡಿರಲಿಲ್ಲ. ಸಾಂಬಾರ್ ಏಕೆ ಮಾಡಿಲ್ಲ ಎಂದು ಅಪ್ಪ ಬೈದಿದ್ದಾರೆ. ಮಗಳಿಗೆ ಬೈದ ಅಪ್ಪ ಸಾಂಬಾರ್ ತರಲು ಪಕ್ಕದ …
Read More »ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್ ಜಿಹಾದ್ ಆರೋಪ
ಹಾವೇರಿ: ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಯುವತಿಯು ರಾತ್ರೋರಾತ್ರಿ ಯುವಕನೋರ್ವನ ಜೊತೆ ಪರಾರಿಯಾಗಿ ಶಾಕ್ ನೀಡಿದ ಘಟನೆ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಈ ಘಟನೆಯು ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಗ್ರಾಮದ ನಿವಾಸಿ ಶಂಕ್ರಮ್ಮ ಇಂದು (ಏ.26 ರಂದು) ನಿಶ್ಚಿತಾರ್ಥ ಕಾರ್ಯಕ್ರಮ ನಿಗದಿಯಾಗಿತ್ತು. ಕುಟುಂಬಸ್ಥರು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ಮೇ 11ಕ್ಕೆ ವಿವಾಹ ಮುಹೂರ್ತ ಕೂಡ ನಿಶ್ಚಯವಾಗಿತ್ತು. ಆದರೆ ನಿಶ್ಚಿತಾರ್ಥದ …
Read More »ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ
ಮಡಿಕೇರಿ: ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಶಿಕ್ಷಕಿ. ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
Read More »ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್
ಬೆಳಗಾವಿ: ನಗರದ ಮಂಡೋಳಿ ರಸ್ತೆಯಲ್ಲಿರುವ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ. ವಕೀಲೆ ಪೂಜಾ ಕಾಕತಕರ್ ಮನೆ ಮೇಲೆ ದಾಳಿ ನಡೆದಿದೆ. ಏ.25ರ ರಾತ್ರಿ 1ರಿಂದ 2 ಗಂಟೆಯ ಸುಮಾರಿನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಮನೆಯ ಮೊದಲ ಮಹಡಿಯಲ್ಲಿ ಪುತ್ರಿ ಓದುತ್ತಿದ್ದಳು. ಈ ವೇಳೆ ದಾಳಿ ನಡೆದಿದೆ. ಮನೆಯ ಗ್ಲಾಸ್ ಮೇಲೆ ಫೈರಿಂಗ್ …
Read More »ಸಚಿವರ ತವರಲ್ಲೇ ಸರಾಯಿ ಸದ್ದು: ಬಯಲಾಯ್ತು ಮಂತ್ರಿ ಆಪ್ತರ ಅಸಲಿ ಮುಖವಾಡ!
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ 6 ಗಂಟೆಗೆ ಮದ್ಯದ ಮಳೆ! 🍻 ಸಣ್ಣದುದಾರರಿಗೆ ಹಪ್ತಾ ಕಾಟ, ಮಂತ್ರಿ ಬೆಂಬಲಿಗರಿಗೆ ರಾಜಾತಿಥ್ಯ? ಅಚ್ಚರಿಯ ವಿಷಯ ಅಂದ್ರೆ, ಈ ಅಕ್ರಮದಲ್ಲಿ ಪತ್ರಕರ್ತನೂ ಭಾಗಿ! ಮಾಧ್ಯಮ ರಂಗಕ್ಕೆ ಅಂಟಿದ ಈ ಸರಾಯಿ ಕಳಂಕದ ಕರಾಳ ಸತ್ಯವನ್ನು ‘ಅಸಲಿ ಸುದ್ದಿ’ ತಂಡ ರಿಯಾಲಿಟಿ ಚೆಕ್ ನಡೆಸಿ ಬಯಲಿಗೆಳೆದಿದೆ. ಸಚಿವರ ಕೃಪಾಕಟಾಕ್ಷ ಯಾರ ಮೇಲಿದೆ? ಹಪ್ತಾ ಹಣ ಎಲ್ಲಿಗೆ ತಲುಪುತ್ತಿದೆ? ಸಚಿವರ ಜಿಲ್ಲೆಯ ಈ …
Read More »
Laxmi News 24×7