Breaking News

ಪಹಲ್ಗಾಮ್​ನಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಕ್ಕಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: “ಪಹಲ್ಗಾಮ್​ನಲ್ಲಿ ಮೃತಪಟ್ಟ 26 ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ. ಅದಕ್ಕಾಗಿ ಮತ್ತೆ ಕಾಯಬೇಕಾಗುತ್ತದೆ. ಭಾರತ-ಪಾಕ್ ನಡುವೆ ಕದನ ವಿರಾಮದಿಂದಾಗಿ ಯುದ್ಧ ಸ್ಥಗಿತಗೊಂಡಿದೆ. ಮುಂದೇನು ಮಾಡಬೇಕು ಎಂಬ ಬಗ್ಗೆ ಚಿಂತನೆ ಮಾಡಬೇಕು” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ಪೂರ್ಣ ಪ್ರಮಾಣದ ಯುದ್ಧ ಆಗುತ್ತದೆ ಎಂದು ಎಲ್ಲರೂ ನಿರೀಕ್ಷೆ ಮಾಡಿದ್ದರು. ಆದರೆ ಆಗಿಲ್ಲ. ದೇಶವನ್ನು ಯಾವ ರೀತಿ ಕಟ್ಟಬೇಕು ಎನ್ನುವುದು ಮುಂದಿರುವ ಸವಾಲು. 1971ರಲ್ಲಿ …

Read More »

ರೌಡಿಶೀಟರ್ ಕಣುಮನ ಕೊಲೆ ಪ್ರಕರಣದಲ್ಲಿ 20 ಜನರ ಬಂಧನ;S.P.

ದಾವಣಗೆರೆ: ವೈಯಕ್ತಿಕ ದ್ವೇಷ ಹಾಗೂ ಹಣಕಾಸಿನ ವ್ಯವಹಾರ ಸಂಬಂಧ ರೌಡಿಶೀಟರ್ ಸಂತೋಷ್ ಕುಮಾರ್ ಆಲಿಯಾಸ್ ಕಣುಮ ಕೊಲೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಒಟ್ಟು 20 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ ಮಾಡಿದವರು ಸೇರಿ 10 ಮಂದಿಯನ್ನು ಈಗಾಗಲೇ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಘಟನೆ ಸಂಬಂಧ ಒಟ್ಟು 20 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು …

Read More »

ಸಿಡಿಲು ಬಡಿದು ಇಬ್ಬರು ಸಾವು

ಕಾರವಾರ(ಉತ್ತರ ಕನ್ನಡ): ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಅಂಕೋಲಾ ಹಾರವಾಡದ ಗಾಬಿತವಾಡದಲ್ಲಿ ವಿಠ್ಠಲ ಸೀತಾರಾಮ ನಾಯ್ಕ ಮತ್ತು ಗೀತಾ ನಾರಾಯಣ ಖಾರ್ವಿ ಎಂಬುವರ ಮನೆಗಳಿಗೆ ಹಾನಿಯಾಗಿದೆ. ಮುಂಜಾನೆ ಮನೆಯಲ್ಲಿ ಕೆಲವರು ಎದ್ದು ಕೆಲಸದಲ್ಲಿ ತೊಡಗಿದ್ದ ವೇಳೆ ಇದ್ದಕ್ಕಿದ್ದಂತೆ ಕಣ್ಣೆದುರೇ ಮಿಂಚು ಹಾದು ಹೋಗಿದೆ. ಬಳಿಕ ಇಡೀ ಮನೆ ಹೊಗೆಯಿಂದ ತುಂಬಿಕೊಂಡಿತ್ತು. ಸಿಡಿಲು ಬಡಿತದಿಂದ ಮನೆಯ …

Read More »

ಹುಬ್ಬಳ್ಳಿ- ಹೈದರಾಬಾದ್ ನಡುವೆ “ಐರಾವತ” ವೋಲ್ವೊ

ಹುಬ್ಬಳ್ಳಿ: ಜಿಲ್ಲೆಯಿಂದ ಹೈದರಾಬಾದ್​​​ಗೆ ಹೋಗಿ ಬರುವ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತಷ್ಟು ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿ ಹಾಗೂ ಹೈದರಾಬಾದ್ ನಡುವೆ ಐರಾವತ ವೋಲ್ವೊ ಎಸಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಗೋಕುಲ ರಸ್ತೆ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು, ಸಾರ್ವಜನಿಕರ ಸಮಕ್ಷಮದಲ್ಲಿ ಬಸ್​​​ಗೆ ಪೂಜೆ ಸಲ್ಲಿಸಿ ನೂತನ ಮಾರ್ಗಕ್ಕೆ ಶುಭ ಹಾರೈಸಿ ಮಾತನಾಡಿದ ಅವರು, ವಾಣಿಜ್ಯ, …

Read More »

ಕರ್ತವ್ಯದ ತುರ್ತುಕರೆ: ಲಚ್ಯಾಣದಲ್ಲಿ ಯೋಧನಿಗೆ ಸಂಭ್ರಮದ ಬಿಳ್ಕೊಡುಗೆ

ಕರ್ತವ್ಯದ ತುರ್ತುಕರೆ: ಲಚ್ಯಾಣದಲ್ಲಿ ಯೋಧನಿಗೆ ಸಂಭ್ರಮದ ಬಿಳ್ಕೊಡುಗೆ ಪೆಹಲ್ಗಾಮ್‌ದಲ್ಲಿ ಅಮಾಯಕರ ಮೇಲೆ ಉಗ್ರರು ನಡೆಸಿದ ದಾಳಿಯ ಹಿನ್ನಲೆ ಪಾಕಿಸ್ಥಾನದಲ್ಲಿನ ಉಗ್ರರ ವಿರುದ್ಧ ಭಾರತವು “ಅಪರೇಷನ್ ಸಿಂಧೂರ” ಹೆಸರಿನಲ್ಲಿ ಯುದ್ದ ಅತ್ತ ಮುಂದುವರೆಸಿದೆ. ಇತ್ತ ಭಾರತೀಯ ಸೇನೆಯು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣದ ಸಿಆರ್‌ಪಿಎಫ್ ಯೋಧ ರಮೇಶ ಅಹಿರಸಂಗ ಅವರಿಗೆ ಕರ್ತವ್ಯದ ತುರ್ತು ಕರೆ ಮಾಡಿ ಆಹ್ವಾನಿಸಿದ ಹಿನ್ನೆಲೆ ಅವರು ತಮ್ಮ ರಜೆಯನ್ನು ಮೊಟಕುಗೊಳಿಸಿ ಶನಿವಾರ ಬೆಳಿಗ್ಗೆ ಗ್ರಾಮದ ಆರಾದ್ಯದೇವ …

Read More »

ವಿಜಯಪುರದಲ್ಲಿ ಬೃಹತ್ ಹನುಮ ಮೂರ್ತಿ ಮೆರವಣಿಗೆ: ಶಾಸಕ ಯತ್ನಾಳ ಭಾಗಿ

ವಿಜಯಪುರದಲ್ಲಿ ಬೃಹತ್ ಹನುಮ ಮೂರ್ತಿ ಮೆರವಣಿಗೆ: ಶಾಸಕ ಯತ್ನಾಳ ಭಾಗಿ ವಿಜಯಪುರ ನಗರದಲ್ಲಿ ಹನುಮ ಜಯಂತಿ ಉತ್ಸವ ಅಂಗವಾಗಿ ಬೃಹತ್ ಆಂಜನೇಯ ಮೂರ್ತಿಯ ಮೆರವಣಿಗೆ ನಡೆಯಿತು. ವಿಜಯಪುರ ನಗರದ ಬೋವಿ ಸಮಾಜದ ವತಿಯಿಂದ ಹನುಮ ಯುವಕ ಸಂಘಟನೆ ಹಮ್ಮಿಕೊಂಡ ಬೃಹತ್ ಮೆರವಣಿಗೆಯಲ್ಲಿ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಗವಹಿಸಿದ್ದರು. ಹನುಮ ಜಯಂತಿ ಉತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 15 ಅಡಿ ಎತ್ತರದ ಶ್ರೀ ಆಂಜನೇಯನ ಮೂರ್ತಿಯ ಭವ್ಯ ಶೋಭಾಯಾತ್ರೆಗೆ …

Read More »

ಮೇ 13 ರಿಂದ ಮೇ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ

ಧಾರವಾಡ – ಮಲಪ್ರಭಾ ಬಲದಂಡೆ ಕಾಲುವೆ ಅಡಿ ಬರುವ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಅಣ್ಣಿಗೇರಿ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕಿನ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಮೇ 13 ರಿಂದ ಮೇ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ ಮಾಡಲು ಆದೇಶಿಸಿದ್ದು, ನೀರು ಸದ್ಬಳಕೆ ಆಗುವಂತೆ ನಿಗಾವಹಿಸಲು ಜಿಲ್ಲಾಮಟ್ಟದ ಹಿರಿಯ …

Read More »

ಸ್ನಾನಕ್ಕೆ ಹೋದ ಯುವಕ ಸಾವು,ಅಗ್ನಿಶ್ಯಾಮಕ ದಳದ ಸಿಬ್ಬಂದಿಗಳಿಂದ ಹುಡುಕಾಟ

ಸ್ನಾನಕ್ಕೆ ಹೋದ ಯುವಕ ಸಾವು,ಅಗ್ನಿಶ್ಯಾಮಕ ದಳದ ಸಿಬ್ಬಂದಿಗಳಿಂದ ಹುಡುಕಾಟ ಗೋಕಾಕ : ಸ್ನಾನಕ್ಕೆ ಹೋದ ಯುವಕ ನದಿಯಲ್ಲಿ ಮುಳುಗಿ ಸಾವಿಗಿಡಾದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ‌ ನಡೆದಿದೆ.ಮನೋಜ ಲಕ್ಷ್ಮಣ ನಾಯಕ (15) ವರ್ಷದ ಯುವಕ ಸಾವಿಗಿಡಾದ ಯುವಕ ಎಂದು ತಿಳಿದು ಬಂದಿದೆ, ಕೊಣ್ಣೂರ ದುಪಧಾಳ ಸೇತುವೆ ಕೆಳಗಿರುವ ಘಟಪ್ರಭಾ ನದಿಯಲ್ಲಿ ಹೆಚ್ಚಾಗಿ ನೀರು ಹರಿಯುತ್ತಿದ್ದಾಗ 3 ಹುಡುಗರು ಈಜಲು ಹೊಗಿದ್ದಾಗ ಮನೋಜ ಲಕ್ಷ್ಮಣ ನಾಯಕ (15) ಇತನಿಗೆ ಅಷ್ಟೊಂದು ಈಜು …

Read More »

ಮಳೆಗಾಲ ಆರಂಭವಾಗಲೂ ಕೆಲವೇ ದಿನಗಳು ಬಾಕಿ ಆದರೂ ಬಳ್ಳಾರಿ ನಾಲೆಯಿಂದ ಹೂಳೆತ್ತದ ಸರ್ಕಾರ?

ಮಳೆಗಾಲ ಆರಂಭವಾಗಲೂ ಕೆಲವೇ ದಿನಗಳು ಬಾಕಿ… ಆದರೂ ಬಳ್ಳಾರಿ ನಾಲೆಯಿಂದ ಹೂಳೆತ್ತದ ಸರ್ಕಾರ…!!! ರೈತರಲ್ಲಿ ಮೂಡಿದ ಆತಂಕ…. ನಮ್ಮನ್ನು ಬದುಕಿಸಿ ಎಂದು ಗೊಗರೆದ ರೈತರು..!! ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಆದರೂ ಇಲ್ಲಿಯ ವರೆಗೂ ಬೆಳಗಾವಿಯ ಬಳ್ಳಾರಿ ನಾಲೆಯ ಹೂಳೆತ್ತದ ಕಾರಣ ರೈತರಿಗೆ ಆತಂಕ ಎದುರಾಗಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಸಂಭಾವ್ಯ ಸಮಸ್ಯೆಯನ್ನು ಅವಲೋಕಿಸಿ, ರೈತರನ್ನು ಬದುಕಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ಹೌದು, ಬೆಳಗಾವಿ, ಅನಗೋಳ ಮತ್ತು ಶಹಾಪೂರ, ವಡಗಾಂವ, ಹಲಗಾ …

Read More »

ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ

ಬೆಳಗಾವಿಯಲ್ಲಿ ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ ಬೆಳಗಾವಿ: ದಲಿತ ಉದ್ಯಮಿದಾರರು ಹೆಚ್ಚಾಗಬೇಕೆಂದು ಮೇ.14 ರಂದು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ನವೋದ್ಯಮ ಸಭೆ‌ ಆಯೋಜಿದಲಾಗಿದೆ ಎಂದು ಕರ್ನಾಟಕ ದಲಿತ ಉದ್ಯಮಿ ಸಂಘರ್ಷ ಸಮಿತಿಯ ಅರವಿಂದ ಗಟ್ಟಿ ಹೇಳಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನವ ಉದ್ಯಮಿಯಾಗ ಬಯಸುವವರು ತಮ್ಮ ಭಾವಚಿತ್ರದೊಂದಿಗೆ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ …

Read More »