ಬೆಂಗಳೂರು: ಕವಲುದಾರಿ ಖ್ಯಾತಿಯ ರಿಷಿ ರಾಮನ ಅವತಾರ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ರಾಮನವಮಿಯ ಸಂದರ್ಭದಲ್ಲಿ ತಯಾರಕರು ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಸುನಿ ನಿರ್ದೇಶನದ ‘ಚಮಕ್’ ಚಿತ್ರದಲ್ಲಿ ಸಹಾಯಕ ನಿರ್ದೇಶಕ ಮತ್ತು ಬರಹಗಾರನಾಗಿದ್ದ ವಿಕಾಸ್ ಪಂಪಾಪತಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಡ್ರಾಮಾ ಆಗಿರುವ ಈ ಚಿತ್ರದಲ್ಲಿ ಶುಭ್ರ ಅಯ್ಯಪ್ಪ, ಪ್ರಣೀತಾ ಸುಭಾಷ್ ಮತ್ತು ಅರುಣ್ ಸಾಗರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ಬ್ಯಾನರ್ …
Read More »ಉಡುಪಿ: ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯಕ್ಕೆ ಸ್ವಯಂ ನಿವೃತ್ತಿ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕುಂದಾಪುರ ವಾಜಪೇಯಿ ಎಂದು ಖ್ಯಾತಿ ಪಡೆದಿದ್ದ ಜನಮೆಚ್ಚುಗೆಯ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣೆ ರಂಗಕ್ಕೆ ಗುಡ್ ಬೈ ಹೇಳಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕುಂದಾಪುರ ವಿಧಾನಸಭೆ ಕ್ಷೇತ್ರವನ್ನು ಕಮಲದ ಪಾಳಾಯಕ್ಕೆ ವಶ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದ ಬಿಜೆಪಿ ಪಕ್ಷದ ಜನಪ್ರಿಯ ಶಾಸಕರಾದ ಸೋಲಿಲ್ಲದ ಸರದಾರರಾಗಿ ಮೇರೆದ ಹಾಲಾಡಿ ಶ್ರೀನಿವಾಸ ಶೆಟ್ಟಿ …
Read More »ಹಾರೂಗೇರಿ ಪಟ್ಟಣಕ್ಕೆ ಜನಾರ್ಧನ್ ರೆಡ್ಡಿ ಆಗಮಣ : ಶ್ರೀಶೈಲ್ ಭಜಂತ್ರಿ
ಏಪ್ರಿಲ್ ರಂದು ಹಾರೂಗೇರಿ ಪಟ್ಟಣಕ್ಕೆ ಜನಾರ್ಧನ್ ರೆಡ್ಡಿ ಆಗಮಣ : ಶ್ರೀಶೈಲ್ ಭಜಂತ್ರಿ ಹಾರೂಗೇರಿಯ ತಮ್ಮ ಕಾರ್ಯಾಲದಲ್ಲಿ ಮಾಜಿ ಸೈನಿಕ ಶ್ರೀಶೈಲ್ ಭಜಂತ್ರಿ ಸುದ್ದಿಗೋಷ್ಠಿ ಕುಡಚಿ ಮತಕ್ಷೇತ್ರದ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಸೈನಿಕರಾದ ಶ್ರೀಶೈಲ್ ಭಜಂತ್ರಿ ಅವರು ತಮ್ಮ ಕಾರ್ಯಾಲದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕುಡಚಿ ವಿಧಾನ ಸಭಾ ಕ್ಷೇತ್ರದ ನಾನು ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವೆ. …
Read More »SSLC ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ ಸೋರಿಕೆ?
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಸೋರಿಕೆಯಾಗಿದೆ ಎನ್ನಲಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು. ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು …
Read More »ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ’
ಬೆಳಗಾವಿ: ‘ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡುವಾಗ, ಎರಡೂ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮುದಾಯಕ್ಕೆ ಆದ್ಯತೆ ಕೊಡಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ರೊಟ್ಟಿ ಎಚ್ಚರಿಕೆ ಕೊಟ್ಟರು. ಇಲ್ಲಿನ ಶಿವಬಸವ ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಸೋಮವಾರ ನಡೆದ ಲಿಂಗಾಯತ ಸಂಘಟನೆಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. …
Read More »ಬೆಳಗಾವಿ: ಶಾಸಕರ ಪುತ್ರನ ವಾಹನ ತಪಾಸಣೆ ಮಾಡದ ಸಿಬ್ಬಂದಿ ತರಾಟೆಗೆ
ಬೆಳಗಾವಿ: ಚೆಕ್ಪೋಸ್ಟ್ನಲ್ಲಿ ಶಾಸಕ ಶ್ರೀಮಂತ ಪಾಟೀಲ ಅವರ ಪುತ್ರ ಶ್ರೀನಿವಾಸ ಸಂಚರಿಸುತ್ತಿದ್ದ ವಾಹನವನ್ನು ತಪಾಸಣೆ ಮಾಡದೆ ಬಿಟ್ಟ ಅಧಿಕಾರಿಗಳನ್ನು ತಹಶೀಲ್ದಾರ್ ಎಂ.ಎನ್.ಬಳಿಗಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಗವಾಡ-ಮೀರಜ್ ಚೆಕ್ಪೋಸ್ಟ್ನಲ್ಲಿ ಶನಿವಾರ ಪ್ರತಿ ವಾಹನ ತಪಾಸಣೆ ಮಾಡಲಾಗುತ್ತಿತ್ತು. ಆದರೆ, ಸಾಂಗ್ಲಿಯಿಂದ ಕಾಗವಾಡಕ್ಕೆ ಬರುತ್ತಿದ್ದ ಶಾಸಕರ ಪುತ್ರನ ವಾಹನವನ್ನು ತಪಾಸಣೆ ಮಾಡಿಲ್ಲ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಬಳಿಗಾರ ಸ್ಥಳಕ್ಕೆ ಧಾವಿಸಿ, ಚೆಕ್ಪೋಸ್ಟ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ವಾಹನ …
Read More »ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ರಾಜ್ಯದಲ್ಲಿ ಒಳ ಒಪ್ಪಂದ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಮೈತ್ರಿ ವಿಚಾರ ಚರ್ಚೆಗೆ ಬರುವುದು ಸಹಜ. ಆದರೆ ಬದ್ಧ ವೈರಿಗಳಾಗಿರುವ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆಯೇ ರಾಜ್ಯದಲ್ಲಿ ಒಳ ಒಪ್ಪಂದ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೊಸ ಬಾಂಬ್ ಸಿಡಿಸಿದ್ದಾರೆ. ಕೆ.ಆರ್.ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಬಹಳ ವರ್ಷಗಳಿಂದ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಇದೆ. ಆಪರೇಷನ್ ಕಮಲ ಆದಾಗಿನಿಂದಲೂ ಇದೆಲ್ಲವೂ ನಡೆಯುತ್ತಿದೆ ಎಂದು ಹೇಳಿದ್ದಾರೆ. ಕಳೆದ ಲೊಕಸಭಾ …
Read More »280 ಸೀರೆ, 09 ಗಡಿಯಾರ, 20 100 pipers 750 ml liquor. ವಶಪಡಿಸಿಕೊಂಡ ಚುನಾವಣಾಧಿಕಾರಿಗಳು
ಖಾನಾಪುರ: ಖಾನಾಪುರ ಪಟ್ಟಣದ ಮುಖ್ಯರಸ್ತೆಯ ಲೋಕಮಾನ್ಯ ಭವನದ ಮುಂದುಗಡೆ ನಿಂತಿದ್ದ ಗೂಡ್ಸ್ ವಾಹನದಲ್ಲಿ ಅಪಾರ ಪ್ರಮಾಣದ ವಸ್ತುಗಳನ್ನು ಪತ್ತೆ ಹಚ್ಚಲಾಗಿದ್ದು, ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. 280 ಸೀರೆಗಳು , 280 × 550 =1,54,000 ರೂ. 09 ಗೋಡೆ ಗಡಿಯಾರ , 9 × 150 = 1,350 ರೂ. 20 100 pipers 750 ml liquor..15 ltr . .20 × 2418 = 48,360ರೂ. ಒಟ್ಟೂ ₹ …
Read More »ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಟಿಕೆಟ್ ಕಗ್ಗಂಟು; ಇಲ್ಲಿದೆ ನೋಡಿ ಕೈ ಎರಡನೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು,ಏಪ್ರಿಲ್3: ವಿಧಾನಸಭೆ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಇನ್ನೂ ಎರಡನೇ ಪಟ್ಟಿ ತಯಾರಿಕೆಯಲ್ಲಿ 40 ಕ್ಷೇತ್ರಗಳ ಅಭ್ಯರ್ಥಿಯೇ ದೊಡ್ಡ ಸವಾಲವಾಗಿದೆ. 124 ಕ್ಷೇತ್ರದಲ್ಲಿ ಸ್ಪರ್ಧಾಳುಗಳನ್ನು ಘೋಷಿಸಿದ್ದ ಸ್ಕ್ರೀನಿಂಗ್ ಕಮಿಟಿ ಉಳಿದ ನೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದೆ. ಇದರಲ್ಲಿ 40 ಕ್ಷೇತ್ರಗಳಿಗೆ ಎರಡರಿಂದ ಮೂರು ಅಭ್ಯರ್ಥಿಗಳನ್ನ ಎಐಸಿಸಿ ಕೇಂದ್ರ ಚುನಾವಣಾ ಸಮಿತಿಗೆ …
Read More »ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ?
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಚುನಾವಣೆಯ ಚುಕ್ಕಾಣಿ ಹಿಡಿಯಲು ಬಿಗ್ ಪ್ಲಾನ್ ಮಾಡಿದೆ. ಹೌದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಸಿದ್ಧತೆ ನಡೆಸಿದೆ. ಪ್ರಮುಖವಾಗಿ ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಮಂಡ್ಯ ಜಿಲ್ಲೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಶತಾಯುಗತಾಯ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ನಟಿ …
Read More »
Laxmi News 24×7