Breaking News

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಸಲ್ಲಿಸಿದ್ದು ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ. ರಾಜೀನಾಮೆ ನೀಡಿದ ಬಳಿಕ ಮಾತನಾಡಿದ …

Read More »

ಬಂಟ್ವಾಳ: ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ, ಬಜರಂಗದಳದ ಸ್ಥಳೀಯ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ …

Read More »

ಇದು ಸಮ್ಮಿಶ್ರ ಸರ್ಕಾರ, ತುಂಬಾ ದಿನ ಇರಲ್ಲ: ಆರ್. ಅಶೋಕ್ ಸ್ಫೋಟಕ ಭವಿಷ್ಯ

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಕೆ ಶಿವಕುಮಾರ್ ಗರಂ ಆಗಿದ್ದಕ್ಕೆ ಬಿಜೆಪಿ ಶಾಸಕ ಆರ್. ಅಶೋಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆ ಕರೆದು ಅಧಿಕಾರಿಗಳಿಗೆ ಆ ರೀತಿ ಮಾತನಾಡಿದ್ದು ಸರಿಯಲ್ಲ ಎಂದು ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಡಿಕೆ ಶಿವಕುಮಾರ್ ಮೊದಲ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಅಂದ್ರ ಗೂಂಡಾಗಿರಿ, ಗೂಂಡಾಗಿರಿ ಅಂದ್ರೆ ಕಾಂಗ್ರೆಸ್ ಅನ್ನುವಂತಾಗಿದೆ. ಬಿಜೆಪಿ, ಕಾಂಗ್ರೆಸ್, …

Read More »

ಟಿಕೆಟ್‌ಗೆ ದುಡ್ಡುಕೊಡಲ್ಲ: ಕಂಡಕ್ಟರ್‌ ಜೊತೆಗೆ ಅಜ್ಜಿ ಗಲಾಟೆ ವಿಡಿಯೋ ವೈರಲ್‌

ರಾಯಚೂರು: ಮಸ್ಕಿಯಿಂದ ಸಿಂಧನೂರುಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡಕ್ಟರ್‌ ಗೆ ಅಜ್ಜಿಯೊಬ್ಬರು ಪ್ರಯಾಣದ ಹಣವನ್ನು ನೀಡಲು ನಿರಾಕರಿಸಿರುವ ಘಟನೆ ನಡೆದಿದೆ. ಘಟನೆ ವಿಡಿಯೋ ವೈರಲ್‌ ಆಗಿದ್ದು, ವಿಡಿಯೋದಲ್ಲಿ ಅಜ್ಜಿ ಕಂಡಕ್ಟರ್‌ ಜೊತೆಗೆ ಕಿರಿಕ್‌ ಮಾಡಿದ್ದು, ಆದೇಶವನ್ನು ಮಾಡಿದ್ದು, ನಮ್ಮ ಶಾಸಕರು ಹೇಳಿದ್ದಾರೆ, ಹೀಗಾಗಿ ನಾನು ಯಾಕೆ ಟಿಕೆಟ್‌ ತಗೊಳ್ಳಬೇಕು ಅಂತ ವಾಗ್ದಾಳಿ ನಡೆಸಿದ್ದಾರೆ.   ಅಂದ ಹಾಗೇ ಕಾಂಗ್ರೆಸ್ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಸರ್ಕಾರಿ ಬಸ್‌ನಲ್ಲಿ ಪ್ರಯಾಣ ಮಾಡುವ ಮಹಿಳಾ ಪ್ರಯಾಣಿಕರಿಗೆ …

Read More »

ಡಿ.ಕೆ.ಶಿ. ಸಿದ್ದರಾಮಯ್ಯ ಸಂಜೆ ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದೆ. ಇಂದು ಮಧ್ಯಾಹ್ನವೇ ಡಿ.ಕೆ.ಶಿವಕುಮಾರ ದೆಹಲಿಗೆ ಹೊರಟಿದ್ದಾರೆ. ಸಿದ್ದರಾಮಯ್ಯ ಸಂಜೆ ತೆರಳಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಚಿವಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದೆಹಲಿಗೆ ಆಹ್ವಾನಿಸಿದೆ ಎಂದು ಗೊತ್ತಾಗಿದೆ. ಗುರುವಾರ ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ನಾಯಕರೊಂದಿಗೆ ಸಭೆ ನಿಗದಿಯಾಗಿದೆ.   ಡಿ.ಕೆ.ಶಿವಕುಮಾರ ಅವರು ಮಧ್ಯಾಹ್ನ 2.55ರ ವಿಮಾನವನ್ನೇರಲಿದ್ದಾರೆ. …

Read More »

ಬಾಲಕನ ಮೈಯಲ್ಲಿ ದೆವ್ವ ಇದೆ ಎಂದು ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಮಂತ್ರಿವಾದಿ

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗದ ಶಿರಗೂರಿನಲ್ಲಿ ಅಸ್ವಸ್ಥ ಬಾಲಕನ ಮೈಯಲ್ಲಿ ದೆವ್ವ ಇದೆ ಎಂದು ಕುಟುಂಬಸ್ಥರನ್ನು ನಂಬಿಸಿ ಮಂತ್ರಿವಾದಿ ಓರ್ವ ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಾಜ್​ ತಾಲ್ಲೂಕಿನ ಬಾಲಕ ಆರ್ಯನ್ ದೀಪಕ್​ ಲಂಡ್ಗೆ (14) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಅಪ್ಪಾ ಸಾಹೇಬ್​ ಕಾಂಬ್ಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿನ್ನೆಲೆ : …

Read More »

ನಿಮ್ಮ ತಕ್ಕಡಿ ಸಮವಾಗಿರಲಿ’: ನೂತನ ಸ್ಪೀಕರ್​ಗೆ ಮಾಜಿ ಸಿಎಂ ಬೊಮ್ಮಾಯಿ‌ ಸಲಹೆ

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷರಾಗಿ ಶಾಸಕ ಯು.ಟಿ. ಖಾದರ್ ಅವಿರೋಧವಾಗಿ ಆಯ್ಕೆ ಆಗಿರುವುದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿ, ‘ನಿಮ್ಮ ತಕ್ಕಡಿ ಸಮವಾಗಿ ಇರಲಿ’ ಎಂದು ಸಲಹೆ ನೀಡಿದರು. ವಿಧಾನಸಭೆಯಲ್ಲಿ ಇಂದು ನೂತನ ಸ್ಪೀಕರ್ ಆಯ್ಕೆಯ ಬಳಿಕ ಮಾತನಾಡಿದ ಅವರು, ‘ಕರ್ನಾಟಕದ ವಿಧಾನಮಂಡಲ ತನ್ನದೇ ಆದ ಘನತೆ ಹೊಂದಿದೆ. ಇಂತಹ ಮಹತ್ವದ ಸದನದ ಸಭಾಧ್ಯಕ್ಷರಾಗಿ ನೀವು ಆಯ್ಕೆಯಾಗಿರುವುದಕ್ಕೆ ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮಗೆ 20 ವರ್ಷದ ರಾಜಕೀಯ …

Read More »

ಪುಟ್ಟ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ.!

ಪತಿ ಮತ್ತು ಪತ್ನಿ ಹಾಗೂ ಐದು ವರ್ಷದ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರು ಮೋಹನ್ ಪ್ರತಾಪ್ ಸಿಂಗ್ ದಂಗರ್ (30), ಪತ್ನಿ ಪೂಜಾ ದಂಗರ್ (25) ಮತ್ತು ಇವರ ಐದು ವರ್ಷದ ಪುತ್ರಿ ಎಂದು ವರದಿಯಿಂದ ತಿಳಿದು ಬಂದಿದೆ. ಕೃಷಿ ಮಾಡುತ್ತಿದ್ದ ಮೋಹನ್ ತಮ್ಮ ಕುಟುಂಬ ಸಮೇತ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈ ದಂಪತಿ ಮೊದಲಿಗೆ ತಮ್ಮ …

Read More »

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ : ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ರೇಣುಕಾಚಾರ್ಯ, ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಬಿಜೆಪಿ ಕೇಂದ್ರ ನಾಯಕರ ತಂತ್ರಗಾರಿಕೆಯೇ ಸೋಲಿಗೆ ಕಾರಣ ಎಂದಿದ್ದಾರೆ. ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ …

Read More »

ವಿಧಾನಸಭಾ ನೂತನ ಸ್ಪೀಕರ್ ಆಗಿ U.T. ಖಾದರ್ ಆಯ್ಕೆ

ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು. 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅತ್ಯಂತ ಉತ್ಸಾಹಿ ಹಾಗೂ ಸಕ್ರಿಯ ರಾಜಕಾರಣಿ. ನನ್ನ ಸರ್ಕಾರದ ಅವಧಿಯಲ್ಲಿ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದೀರಿ. ಸದನದಲ್ಲಿ …

Read More »