Breaking News

ಇಂದಿನಿಂದ ದ್ವಿತೀಯ ಪಿಯುಸಿ `ಪೂರಕ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ಮೇ. 23 ರ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ( Karnataka 2nd PUC Supplementary Exam ) ಆರಂಭವಾಗಲಿದ್ದು, , ವಿದ್ಯಾರ್ಥಿಗಳಿಗೆ ಹಲವು ಮಹತ್ವದ ಸೂಚನೆಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ 1) ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ನಿಷೇಧವಾಗಿದೆ. 2) ವಸ್ತುಗಳನ್ನು ಹಂಚುವುದು/ ರವಾನಿಸುವುದು …

Read More »

ರಾಜ್ಯದಲ್ಲಿ ವರುಣಾರ್ಭಟಕ್ಕೆ 10 ಮಂದಿ ಬಲಿ, ಅಪಾರ ಪ್ರಮಾಣದ ಬೆಳೆ ಹಾನಿ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಬೆಳೆ ನಷ್ಟವಾಗಿದ್ದು, ವರುಣಾರ್ಭಟಕ್ಕೆ 8 ಮಂದಿ ಬಲಿಯಾಗಿದ್ದಾರೆ. ರಾಜ್ಯದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, 8 ಸಾವಿರ ಎಕರೆಗೂ ಹೆಚ್ಚಿನ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ. ಅಕಾಲಿಕ ಮಳೆಗೆ ರಾಜ್ಯದಲ್ಲೇ ಅತಿಹೆಚ್ಚು ಬೆಳೆ ನಷ್ಟ ಕೋಲಾರದಲ್ಲಿ ಆಗಿದ್ದು, 7,166 ಎಕರೆ ಬೆಳೆಹಾನಿಯಾಗಿದೆ. ಕೊಪ್ಪಳದಲ್ಲಿ 618 ಕ್ಕೂ ಹೆಚ್ಚು ಎಕರೆ, ದಾವಣಗೆರೆಯಲ್ಲಿ 153 ಎಕರೆ, ಚಿಕ್ಕಬಳ್ಳಾಪುರದಲ್ಲಿ 100 …

Read More »

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳಲ್ಲಿ 2,000 ರೂ. ನೋಟು ಬದಲಾವಣೆಗೆ ಅವಕಾಶ

ನವದೆಹಲಿ: ಮೇ. 23 ರ ಇಂದಿನಿಂದ ದೇಶಾದ್ಯಂತ ಎಲ್ಲಾ ಬ್ಯಾಂಕ್ ಗಳಲ್ಲಿ 2000 ಮುಖಬೆಲೆಯ ನೋಟುಗಳ ವಿನಿಮಯ ಆರಂಭಿಸಲಾಗುತ್ತಿದೆ. ಕೌಂಟರ್ನಲ್ಲಿ 2000 ರೂ.ಗಳ ನೋಟುಗಳನ್ನು ವಿನಿಮಯ ಮಾಡುವ ಸೌಲಭ್ಯವನ್ನು ಸಾರ್ವಜನಿಕರಿಗೆ ಸಾಮಾನ್ಯ ರೀತಿಯಲ್ಲಿ ಒದಗಿಸಲಾಗುವುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India -RBI) ಸೋಮವಾರ ಹೇಳಿದೆ.   ಮೇ.23ರ ಮಂಗಳವಾರದ ಇಂದಿನಿಂದ ಹಿಂಪಡೆಯಲಾದಂತ 2,000 ರೂಪಾಯಿ ಮುಖಬಲೆಯ ನೋಟುಗಳನ್ನು ಯಾವುದೇ ಬ್ಯಾಂಕಿನಲ್ಲಿ ನೀಡಿ, ಇತರೆ …

Read More »

ಗುಜರಾತ್​ ಗಲಭೆ ಕುರಿತ ಸಾಕ್ಷ್ಯಚಿತ್ರ: ಬಿಬಿಸಿಗೆ ದೆಹಲಿ ಹೈಕೋರ್ಟ್​ ಸಮನ್ಸ್​ ಜಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ನ್ಯಾಯಾಂಗ ಮತ್ತು ದೇಶದ ಘನತೆಗೆ ಧಕ್ಕೆ ತರುವ ಮಾದರಿಯಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್‌’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ಗೆ (ಬಿಬಿಸಿ) ದೆಹಲಿ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿಗೊಳಿಸಿದೆ. ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 15 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಬಿಬಿಸಿ ಸಾಕ್ಷ್ಯಚಿತ್ರದಿಂದಾಗಿ ದೇಶದ ಘನತೆಗೆ ಧಕ್ಕೆಯುಂಟಾಗಿದೆ. ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ನ್ಯಾಯಾಂಗದ ವಿರುದ್ಧ …

Read More »

ವಿಧಾನಸಭೆಗೆ ಸ್ಪೀಕರ್ ಯಾರು? ನಾಳೆ ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ತೀರ್ಮಾನ:ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ ಸದಸ್ಯರ ಪದಗ್ರಹಣ ಪ್ರಯುಕ್ತ ಮೂರು ದಿನಗಳ ಅಧಿವೇಶನ ಕರೆದಿರುವ ಸಿಎಂ ಕಡೆಯ ದಿನ ಬೆಳಗ್ಗೆ ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334 ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ …

Read More »

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣ ಜಪ್ತಿ

ಹುಬ್ಬಳ್ಳಿ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1.70 ಕೋಟಿ ಹಣವನ್ನು ನರಗುಂದ ಪೊಲೀಸರು ಜಪ್ತಿ ಮಾಡಿದ್ದಾರೆ. ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಈ ಹಣವನ್ನು ನರಗುಂದ ಪಟ್ಟಣ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಶಿವಬಸವಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.

Read More »

ರಾಜ್ಯ ವಿಧಾನಸಭಾ ಅಧಿವೇಶನ: ಸಿಎಂ. ಡಿಸಿಎಂ ಸೇರಿ ನೂತನ ಸಚಿವರು ಹಾಗೂ ಶಾಸಕರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮೊದಲ ದಿನದ ಕಲಾಪ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನದ ಅಧಿವೇಶನದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಸೇರಿ ನೂತನ ಸಚಿವರು ಹಾಗೂ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ.   ಸೋಮವಾರದಿಂದ ಬುಧವಾರದವರೆಗೆ (ಮೇ 22ರಿಂದ ಮೇ 24) ವಿಧಾನಸಭೆ ಅಧಿವೇಶನ ನಡೆಯಲಿದ್ದು, ಇಂದು ಬೆಳಗ್ಗೆ 11.15ರ ಹೊತ್ತಿಗೆ ಅಧಿವೇಶನ ಆರಂಭವಾಗಿದೆ.   ಮೊದಲ ಎರಡು ದಿನಗಳ ಕಾಲ ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರ …

Read More »

ಗಂಗಾವತಿಯಲ್ಲಿ ಹನಿಟ್ರ್ಯಾಪ್​ಗೆ ಒಪ್ಪದ ಮಂಗಳಮುಖಿಯರ ಮೇಲೆ ಹಲ್ಲೆ

ಗಂಗಾವತಿ (ಕೊಪ್ಪಳ): ಆರ್ಥಿಕವಾಗಿರುವ ಸ್ಥಿತಿವಂತರನ್ನು ಹನಿಟ್ರ್ಯಾಪ್​ಗೆ ಕೆಡವಲು ಸಂಚು ರೂಪಿಸಿದ ಯುವಕರ ತಂಡವೊಂದು ಇದಕ್ಕಾಗಿ ಮಂಗಳಮುಖಿಯರನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ. ಆದರೆ ಇದಕ್ಕೆ ಮಂಗಳಮುಖಿಯರು ಒಪ್ಪದ ಹಿನ್ನೆಲೆ ಅವರ ಮೇಲೆ ಯುವಕರ ತಂಡ ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ಯುವಕರ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವವರನ್ನು ಗಾಂಧಿ ವೃತ್ತದ ನಿವಾಸಿಗಳಾದ ಅನುಶ್ರೀ, ರತ್ನಾ ಅಲಿಯಾಸ್ ರತಿ ಮತ್ತು ಸುಕನ್ಯಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ …

Read More »

ಬಳ್ಳಾರಿಯಲ್ಲಿ ಸರ್ಕಾರಿ ಬಸ್-ಲಾರಿ ಅಪಘಾತ; ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಬಳ್ಳಾರಿಯಲ್ಲಿ ಲಾರಿ ಹಾಗು ಸರ್ಕಾರಿ ಬಸ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್-ಲಾರಿ ಅಪಘಾತಬಳ್ಳಾರಿ: ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ಗೆ ದಾಖಲಿಸಲಾಗಿದೆ.

Read More »

16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭ

ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ನೂತನ ಶಾಸಕರ ಪ್ರಮಾಣವಚನ, ಸ್ಪೀಕರ್ ಆಯ್ಕೆ ನಡೆಯಲಿದೆ. ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಣೆಯಲ್ಲಿ ಅಧಿವೇಶನ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವರುಣಾ ಕ್ಷೇತ್ರದ ಶಾಸಕರಾದ ಸಿಎಂ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನಕಪುರದ ಶಾಸಕರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾದರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್, ದೇವನಹಳ್ಳಿ …

Read More »