ಬೆಳಗಾವಿ: ಜಿಲ್ಲೆಯ ಬಿಜೆಪಿ ಮುಖಂಡರು (BJP leaders)ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅವರ ವಿರುದ್ಧ ಒಂದು ವಿನೂತನ ಪ್ರತಿಭಟನೆ (protest) ನಡೆಸಿದರು. ಇದು ನಿಸ್ಸಂದೇಹವಾಗಿ ಎಲ್ಲರಿಗೂ ಮೆಚ್ಚಿಗೆಯಾಗುವ ರೀತಿಯ ಪ್ರತಿಭಟನೆ. ಗೌಜು ಗದ್ದಲ, ಧಿಕ್ಕಾರದ ಘೋಷಣೆ-ಮೊದಲಾವುಗಳಿಲ್ಲದ ಸರಳ ಮತ್ತು ಅತ್ಯಂತ ಪರಿಣಾಮಕಾರಿ ಪ್ರತಿಭಟನೆ. ತಮ್ಮ ಆಕ್ಷೇಪಣೆ, ದೂರು-ದುಮ್ಮಾನಗಳನ್ನು ಒಂದು ಮನವಿ ಪತ್ರದ ರೂಪದಲ್ಲ್ಲಿ ಅವರು ಸಲ್ಲಿಸಿದ್ದಾರೆ. ನಗರದಲ್ಲಿರುವ ಕಚೇರಿಗೆ ಬಿಜೆಪಿ ಮುಖಂಡರು ಬಂದಾಗ ಸಚಿವೆ …
Read More »ಪಟ್ಟಾ ಜಮೀನು ಪರಭಾರೆ ಅವ್ಯವಹಾರ: ತನಿಖೆಗೆ ಸೂಚನೆ
ಲಿಂಗಸುಗೂರು: ಕೃಷ್ಣಾ ನದಿಯ ನಡುಗಡ್ಡೆ ಪ್ರದೇಶದ ಐತಿಹಾಸಿಕ ಜಲದುರ್ಗ ಜಹಗೀರಿ ಪಟ್ಟಾ ಜಮೀನುಗಳಿಗೆ ನಕಲಿ ದಾಖಲೆ ಸೃಷ್ಠಿಸಿ ಪರಭಾರೆ ಮಾಡುತ್ತಿರುವ ಕುರಿತಂತೆ ಪ್ರಜಾವಾಣಿ ಸರಣಿ ವರದಿ ಆಧರಿಸಿ ಅವ್ಯವಹಾರ ತನಿಖೆ ನಡೆಯಿಸಿ ತಿಂಗಳಲ್ಲಿ ವರದಿ ಸಲ್ಲಿಸಲು ಉಪ ವಿಭಾಗಾಧಿಕಾರಿ ಶಿಂಧೆ ಅವಿನಾಶ ಸಂಜೀವನ್ ಸೂಚಿಸಿದ್ದಾರೆ. ‘ಜಹಗೀರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ’ ಹಾಗೂ ‘ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಕೆ’ ಶೀರ್ಷಿಕೆಯಡಿ ಪ್ರಜಾವಾಣಿ ವರದಿ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ …
Read More »ವಾ.ಕ.ರ.ಸಾ ಸಂಸ್ಥೆʼಯ ಧಾರವಾಡ ಘಟಕದಲ್ಲಿ ʻQRʼ ಕೋಡ್ ಬಳಸಿ ಟಿಕೆಟ್ ನೀಡುವ ವ್ಯವಸ್ಥೆ ಜಾರಿ
ಧಾರವಾಡ : , 2024 ರಿಂದ ಜಾರಿಗೆ ಬರುವಂತೆ ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಅನುಸೂಚಿಗಳ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ ಸಮಯ ಉಳಿತಾಯ ಮಾಡುವ ಉದ್ದೇಶದಿಂದ ಯು.ಪಿ.ಆಯ್ ಮುಖಾಂತರ ಕ್ಯೂ.ಆರ್ ಕೋಡ್ ಬಳಸಿ ಟಿಕೇಟ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಮುಂಬರುವ ಕೆಲವೇ ದಿನಗಳಲ್ಲಿ ವಿಭಾಗದ ವ್ಯಾಪ್ತಿಯ ಘಟಕಗಳಾದ ಸವದತ್ತಿ, ರಾಮದುರ್ಗ, ಹಳಿಯಾಳ, ದಾಂಡೇಲಿಯಲ್ಲಿಯೂ ಸಹ ಈ ವ್ಯವಸ್ಥೆ …
Read More »ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕ: ಬಿ.ವೈ.ವಿಜಯೇಂದ್ರ
ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರವನ್ನು ನಾವು ನೋಡುತ್ತಿದ್ದೇವೆ; ಇದು ನಿಜಕ್ಕೂ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಶ್ಲೇಷಿಸಿದರು. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ …
Read More »ಸಂಸತ್ನಲ್ಲಿ ನಿರ್ಮಲಾ ಸೀತಾರಾಮನ್ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ: ಪರಮೇಶ್ವರ್
ಬೆಂಗಳೂರು, ಅನುದಾನದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ವಿಚಾರವಾಗಿಬಿಜೆಪಿ-ಕಾಂಗ್ರೆಸ್ನಡುವೆ ಆರೋಪ-ಪ್ರತ್ಯಾರೋಪಗಳ ನಡುವೆ ಸಂಸತ್ ಅಧಿವೇಶನದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಅಂಕಿ-ಅಂಶಗಳ ಮೂಲಕ ಕಾಂಗ್ರೆಸ್ ಆರೋಪಿಗಳಿಗೆ ತಿರುಗೇಟು ನೀಡಿದ್ದರು. ಈ ವಿಚಾರವಾಗಿ ಮಾತನಾಡಿದ ರಾಜ್ಯ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ (Dr.G.Parameshwar), ನಿರ್ಮಲಾ ಸೀತಾರಾಮನ್ ಅವರು ಸಂಸತ್ನಲ್ಲಿ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಕೇಂದ್ರದಿಂದ ಒಂದೇ ಒಂದು ರೂಪಾಯಿ ನಮಗೆ …
Read More »ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ
ಮೈಸೂರು, : ಜಿಲ್ಲೆಗೆ ಕೇಂದ್ರ ಗೃಹ ಸಚಿವುಅಮಿತ್ ಶಾ (Amit Shah)ಆಗಮನ ಹಿನ್ನೆಲೆ ಮೈಸೂರು ಕಾಂಗ್ರೆಸ್ (Congress) ಘಟಕದಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ. ಮೈಸೂರು (Mysuru) ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ನನ್ನ ತೆರಿಗೆ ನನ್ನ ಹಕ್ಕು” ಘೋಷಣೆಯೊಂದಿಗೆ “ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?” ಎಂಬ ಪ್ರಶ್ನೆಯೊಂದಿಗೆ ಪೋಸ್ಟರ್ ಅಭಿಯಾನ ನಡೆಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲು …
Read More »ರಾಜ್ಯ ಬಿಜೆಪಿ ನಾಯಕರೊಂದಿಗೆ ನಾಳೆ ಅಮಿತ್ ಶಾ ಮಹತ್ವದ ಸಭೆ;
ಮೈಸೂರು, : ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಬಳಿಕ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸುತ್ತಿದ್ದು, ಇಂದು ರಾತ್ರಿ ಬಿಜೆಪಿ ಚಾಣಕ್ಯ ಎಂದೇ ಹೆಸರಾಗಿರುವ ಕೇಂದ್ರ ಗೃಹಸಚಿವಅಮಿತ್ ಶಾ(Amit Shah) ಅವರು ಮೈಸೂರಿಗೆ ಆಗಮಿಸಲಿದ್ದು, ನಾಳೆ ಮಹತ್ವದ ಸಭೆ ನಡೆಯಲಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ವಿಜಯೇಂದ್ರ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳಿನ ಸಭೆ ಮಹತ್ವದ್ದಾಗಿದೆ. …
Read More »ಮೋದಿ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ ನೀಡುತ್ತಿದೆ ಎಂದು ಒಪ್ಪಿಕೊಂಡ ಕಾಂಗ್ರೆಸ್ಗೆ ಬಿಜೆಪಿ ಧನ್ಯವಾದ
ಬೆಂಗಳೂರು, : ಬೆಲೆ ಏರಿಕೆ ನಡುವೆ ಕೇಂದ್ರದ ಬಿಜೆಪಿ ಸರ್ಕಾರವು ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಅತ್ಯಂತ ಕಡಿಮೆ ಬೆಲೆ 29 ರೂಪಾಯಿಗೆ ಭಾರತ್ ಅಕ್ಕಿ (Bharat Rice) ಯೋಜನೆಗೆ ಚಾಲನೆ ನೀಡಿದ್ದು, ದೇಶದದ್ಯಾಂತ ಲಭ್ಯವಿದೆ. ಕೇಂದ್ರ ಸರ್ಕಾರ ಪಡಿತರ ಹಂಚಿಕೆಗೆ ಇಟ್ಟಿದ್ದ ಅಕ್ಕಿಯನ್ನು ಕೆಜಿಗೆ 29ರೂ ನಂತೆ ಮಾರಾಟಕ್ಕಿಟ್ಟಿದೆ ಎಂದು ಕಾಂಗ್ರೆಸ್ (Congress) ಟೀಕಿಸಿತ್ತು. ಇದಕ್ಕೆ ತಿರುಗೇಟು ನೀಡಿದಬಿಜೆಪಿ (BJP),ಮೋದಿ ಸರ್ಕಾರ ಕಡಿಮೆ ಬೆಲೆಗೆ ಅಕ್ಕಿ ನೀಡುತ್ತಿದೆ ಎಂದು ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದೆ. ಈ ಬಗ್ಗೆ …
Read More »ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು, : ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ಕಿಡಿಕಾರಿದ್ದಾರೆ. ಈ ಕುರಿಯಾಗಿ ‘ಗೃಹಮಂತ್ರಿಗಳ ಉತ್ತರಕ್ಕಾಗಿ ಕಾದಿವೆ ಕನ್ನಡಿಗರ ಅಮಿತ ಪ್ರಶ್ನೆಗಳು’ …
Read More »ಮೋದಿಯವರ ನಾಯಕತ್ವದಲ್ಲಿ ಇದು ಅತ್ಯಂತ ಯಶಸ್ವಿ ಅಧಿಕಾರಾವಧಿ: ಪ್ರಲ್ಹಾದ್ ಜೋಶಿ
ದೆಹಲಿ ಫೆಬ್ರುವರಿ 10: ಸಂಸತ್ನ ಬಜೆಟ್ ಅಧಿವೇಶನ( Parliament Budget session)ಮುಕ್ತಾಯದ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವಪ್ರಲ್ಹಾದ್ ಜೋಶಿ(Pralhad Joshi) 17 ನೇ ಲೋಕಸಭೆಯ ಉತ್ಪಾದಕತೆಯನ್ನು ಶ್ಲಾಘಿಸಿದ್ದು ಇದರಲ್ಲಿ, 221 ಮಸೂದೆಗಳ ಅಂಗೀಕಾರವಾಗಿದೆ ಎಂದಿದ್ದಾರೆ. ಉಭಯ ಸದನಗಳು ಅಂಗೀಕರಿಸಿದ ಒಟ್ಟು ಮಸೂದೆಗಳ ಸಂಖ್ಯೆ 221. ಒಟ್ಟಾರೆಯಾಗಿ, ಕೆಲವು ಅಡಚಣೆಗಳು ಮತ್ತು ಇತರ ವಿಷಯಗಳಿವೆ. ಆದರೆ ಪ್ರಧಾನಿ ಮೋದಿಯವರ (PM Modi) ನಾಯಕತ್ವದಲ್ಲಿ ಇದು ಅತ್ಯಂತ ಯಶಸ್ವಿ ಅಧಿಕಾರಾವಧಿಯಾಗಿದೆ. ಐತಿಹಾಸಿಕ …
Read More »
Laxmi News 24×7