ಮೈಸೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ವಿಚಾರ ಬಹುತೇಕ ಕೊನೆಗೊಂಡಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುವುದು ಖಚಿತಗೊಳ್ಳುತ್ತಿದ್ದಂತೆ ಹುಟ್ಟೂರು ವರುಣ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಅಧಿಕೃತ ಘೋಷಣೆಗೂ ಮುನ್ನ ಸಿದ್ದರಾಮಯ್ಯನವರ ಫ್ಲೆಕ್ಸ್ಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಇತ್ತ ಮೈಸೂರಿನ ಟಿ ಕೆ.ಲೇಔಟ್ನಲ್ಲಿರುವ ಸಿದ್ದರಾಮಯ್ಯನವರ ಮನೆಗೆ ಅಭಿಮಾನಿಗಳ ದಂಡೇ ಆಗಮಿಸಿದ್ದು, ಮನೆಯ ಸುತ್ತ ಫ್ಲೆಕ್ಸ್ಗಳನ್ನು ಅಳವಡಿಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಜಾಥಾ ನಡೆಸಿ ಸಂಭ್ರಮಾಚರಣೆ ಮಾಡಿದರು. ಕಾಂಗ್ರೆಸ್ …
Read More »ನವಲಗುಂದ: ಗುಡಿಯೊಳಗಿನ ಕತ್ತಲ ಸಾಗರಕೆ ಬೇಕು ದೀವಿಗೆ
ನವಲಗುಂದ: ಕ್ಷೇತ್ರದಲ್ಲಿ ಚುನಾವಣೆ ಕಾವು ಮುಗಿದಿದ್ದು, ಹಸಿರಾಗುವ ಸಮಸ್ಯೆಗಳತ್ತ ಮುಖ ಮಾಡಬೇಕಿದೆ. ದಶಕಗಳಿಂದ ಜನರು ಅನುಭವಿಸುತ್ತಿರುವ ತೊಂದರೆಗಳಿಗೆ ಇತಿಶ್ರೀ ಹಾಡುವ ಜರೂರತ್ತು ಹೆಚ್ಚಿದೆ. ತಾಲೂಕಿನ ಗುಡಿಸಾಗರ ಗ್ರಾಮ ನೆರೆಹಾವಳಿಗೆ ಒಳಗಾಗಿತ್ತು. ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಲ್ಲಿನವರನ್ನೆಲ್ಲ ಬೇರೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರು. ಸ್ಥಳಾಂತರಗೊಂಡ ನಿರಾಶ್ರಿತರ ಮನೆಗಳಿಗೆ ವಿದ್ಯುತ್ ದೊರೆತರೂ, ಪಕ್ಕಕ್ಕೆ ಹೊಂದಿಕೊಂಡು ಮನೆ ನಿರ್ಮಿಸಿಕೊಂಡ 10-15 ರೈತರ ಕುಟುಂಬಗಳ ಮನೆಗಳಿಗೆ ವಿದ್ಯುತ್ ಸಂಪರ್ಕ ದೊರೆತಿಲ್ಲ. ಸರಕಾರದ ನಿಯಮಾವಳಿಗಳಂತೆ ಪರವಾನಗಿ ಪಡೆದು …
Read More »ನೂತನ ಶಾಸಕರೆದುರು ಸಾಲು ಸಾಲು ಸವಾಲು
ಅಳ್ನಾವರ: ತೀರಾ ಹಿಂದುಳಿದ ಕ್ಷೇತ್ರ ಎಂಬ ಹಣೆಪಟ್ಟಿ ಕಟ್ಟಿಕೊಂಡ ಕಲಘಟಗಿ ಮತ್ತು ಅಳ್ನಾವರ ತಾಲೂಕುಗಳನ್ನೊಳಗೊಂಡ ಮತಕ್ಷೇತ್ರದ ಸಾಲು ಸಾಲು ಸವಾಲುಗಳು ನೂತನ ಶಾಸಕ ಸಂತೋಷ್ ಲಾಡ್ ಎದುರಿದೆ. ಕೆಲಸ ಮಾಡುವ ಹುಮ್ಮಸ್ಸಿನಿಂದ ಭಾರೀ ಬಹುಮತದಿಂದ ಆರಿಸಿ ಬಂದ ಲಾಡ್ ಅವರ ಮೇಲೆ ಜನರು ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಕಾಳಿ ನದಿ ನೀರು ತರುವ ಯೋಜನೆ ಸಾಕಾರಗೊಳಿಸಿದ ಲಾಡ್ ಅವರು ಈ ಭಾಗದ ಜನರ ಬದುಕು ಹಸನಗೊಳಿಸಲು ದಿಟ್ಟ ಹೆಜ್ಜೆ ಹಾಕಬೇಕಿದೆ. ಹೊಸ …
Read More »ರಕ್ಕಸಕೊಪ್ಪ ನೀರಿನ ಮಟ್ಟ ತಗ್ಗಿದರೂ ನೋ ಟೆನ್ಶನ್
ಬೆಳಗಾವಿ: ಬೇಸಿಗೆ ಕಾಲ ಬಂತೆಂದರೆ ನೀರಿನ ಬವಣೆ ಸಹಜ. ಅದರಂತೆ ಬೆಳಗಾವಿ ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದ ನೀರಿನ ಮಟ್ಟ ತಗ್ಗಿದ್ದರಿಂದ ಸದ್ಯ ವಾರಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದೆ. ನೀರಿನ ಮಟ್ಟ ತಗ್ಗಿದರೂ ಜೂನ್ ಮಧ್ಯದವರೆಗೂ ಈ ನೀರನ್ನು ಸಮರ್ಪಕವಾಗಿ ಪೂರೈಸಬಹುದಾಗಿದೆ. ಬೆಳಗಾವಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ರಕ್ಕಸಕೊಪ್ಪ ಜಲಾಶಯದ ನೀರಿನ ಮಟ್ಟ ಕಳೆದ ವರ್ಷಕ್ಕಿಂತಲೂ ಈ ಸಲ ತುಸು ಕಡಿಮೆ ಆಗಿದೆ. ಈಗ …
Read More »3 ತಿಂಗಳೊಳಗೆ ಫಿಟ್ ಆಗಿ ಇಲ್ಲಾ ರಾಜೀನಾಮೆ ನೀಡಿ: ಪೊಲೀಸರಿಗೆ DG ಖಡಕ್ ವಾರ್ನಿಂಗ್
ಮೊದಲೆಲ್ಲಾ ಪೊಲೀಸರಿಗೂ ಡೊಳ್ಳು ಹೊಟ್ಟೆಗೂ ಅದೇನೋ ಸಂಬಂಧವಿದ್ದಂತಿತ್ತು. ಆದರೆ ಈಗ ಕಾಲ ಬದಲಾಗಿದೆ. ಈಗೀಗ ಪೊಲೀಸ್ ಅಧಿಕಾರಿಗಳೂ ಫಿಟ್ ಆಂಡ್ ಫೈನ್ ಆಗಿ ಕಾಣಿಸಿಕೊಳ್ಳುತ್ತಿದ್ದು, ತಮ್ಮ ಸಹೋದ್ಯೋಗಿಗಳಿಗೂ ಅದೇ ರೀತಿ ಇರುವಂತೆ ಪ್ರೇರಣೆಯನ್ನೂ ಮಾಡುತ್ತಿದ್ದಾರೆ. ಇದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಅಸ್ಸಾಂನ ಪೋಲಿಸ್ ಅಧಿಕಾರಿಯೊಬ್ಬರು ತಮ್ಮ ಸಹೋದ್ಯೋಗಿಗಳಿಗೆ ʻ3 ತಿಂಗಳೊಳಗೆ ಫಿಟ್ ಆಗಿ ಇಲ್ಲಾ ರಾಜೀನಾಮೆ ನೀಡಿʼ ಎಂದು ಖಡಕ್ ಸೂಚನೆ ನೀಡಿದ್ದಾರೆ. ʻನಾವು ಅಸ್ಸಾಂನ ಐಪಿಎಸ್ …
Read More »ಪಾಕ್ ಪರ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್: ತಾಳಿಕೋಟೆ ಯುವಕನ ಬಂಧನ
ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲೀಮ್ ರಾಷ್ಟ್ರ ಎಂದು ಯುಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿ ಪೊಲೀಸ್ ಅತಿಥಿಯಾಗಿರುವ ಘಟನೆ ಜಿಲ್ಲೆಯಲ್ಲಿ ಜರುಗಿದೆ. ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಿರೂರು ಗ್ರಾಮದ ಯುವಕ ಇಬ್ರಾಹಿಂ ಮುರ್ತುಜಸಾಬ ಮುಲ್ಲಾ ಎಂಬಾತ ಇನ್ಸ್ಟಾಗ್ರಾಂನಲ್ಲಿ ಪಾಕಿಸ್ತಾನ್ ಜಿಂದಾಬಾದ್, ಓನ್ಲಿ ಮುಸ್ಲೀಮ್ ರಾಷ್ಟ್ರ ಎಂದು ಸ್ಟೋರಿ ಹಾಕಿದ್ದ. ಇಬ್ರಾಹಿಂ ಮುಲ್ಲಾನ ಇನ್ಸ್ಟಾಗ್ರಾಂ ವೀಕ್ಷಿಸಿದ ಸ್ಥಳೀಯರು ತಾಳಿಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ತಾಳಿಕೋಟೆ ಪೊಲೀಸರು …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮತ್ತೆ ಜೀವ ಬೆದರಿಕೆ ಕರೆ
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಇದರೊಂದಿಗೆ ಕಳೆದ ನಾಲ್ಕು ತಿಂಗಳಲ್ಲಿ ಬಂದಿರುವ ಎರಡನೇ ಬೆದರಿಕೆ ಕರೆ ಇದಾಗಿದೆ ಎನ್ನಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಿವಾಸಕ್ಕೆ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ, ಕರೆ ಸ್ವೀಕರಿಸಿದ ಸಿಬ್ಬಂದಿ …
Read More »ಪ್ರಯಾಣಿಸುತ್ತಿದ್ದಾಕೆಗೆ ಬಸ್ನಲ್ಲೇ ಹೆರಿಗೆ ಮಾಡಿಸಿದ ಮಹಿಳಾ ಕಂಡಕ್ಟರ್
ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಗೆ ಮಹಿಳಾ ಕಂಡಕ್ಟರ್ ಬಸ್ನಲ್ಲೇ ಹೆರಿಗೆ ಮಾಡಿಸಿದ ಅಪರೂಪದ ಪ್ರಸಂಗವೊಂದು ನಡೆದಿದೆ. ಚಿಕ್ಕಮಗಳೂರು ಘಟಕದ ಕೆಎಸ್ಆರ್ಟಿಸಿ ಬಸ್ನಲ್ಲಿ ಈ ಪ್ರಕರಣ ನಡೆದಿದೆ.ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆಎ-13 ಎಫ್-0855ರಲ್ಲಿ ಬೆಂಗಳೂರು-ಚಿಕ್ಕಮಗಳೂರು ಮಾರ್ಗವಾಗಿ ನಿನ್ನೆ ತೆರಳುತ್ತಿದ್ದಾಗ ಉದಯಪುರ ಸಮೀಪದ ಕೃಷಿ ಕಾಲೇಜು ಹತ್ತಿರ ಮಧ್ಯಾಹ್ನ 1.25ರ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಬಸ್ನಲ್ಲಿ 15 ಪ್ರಯಾಣಿಕರಿದ್ದರು. ಈ ಬಸ್ನಲ್ಲಿ …
Read More »ಪಂಚಮಸಾಲಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡಿ : ಮಾಜಿ ಸಚಿವ ಶಶಿಕಾಂತ ನಾಯಿಕ ಆಗ್ರಹ
ಬೆಳಗಾವಿ : ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತ ಪಂಚಮಸಾಲಿ ಸಮಾಜ ಸಂಪೂರ್ಣ ಬೆಂಬಲ ನೀಡಿದ್ದು. ನಮ್ಮ ಸಮಾಜಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಾಜಿ ಸಚಿವ ಶಶಿಕಾಂತ ನಾಯಿಕ ಕಾಂಗ್ರೆಸ್ ನಾಯಕರಿಗೆ ಒತ್ತಾಯಿಸಿದರು. ಇಂದು ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆಯಲ್ಲಿ ಕರ್ನಾಟಕ ಜನ ಬದಲಾವಣೆ ಬಯಸಿದ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಸರ್ಕಾರ ರಚಿಸುತ್ತಿದೆ. ಇದರಿಂದ ನಮಗೂ ಬಹಳಷ್ಟು ಖುಷಿಯಾಗಿದೆ. ಬಿಜೆಪಿಯಲ್ಲಿ ಬಹಳ …
Read More »ನೂತನ ಶಾಸಕರಾಗಿರುವ ಆಸೀಫ್ (ರಾಜು) ಸೇಠ್ ಹಾಗೂ ಮಾಜಿ ಶಾಸಕ ಫೀರೋಜ್ ಸೇಠ್ ಅವರು ಸ್ಥಗಿತಗೊಂಡಿದ್ದ ರಾಷ್ಟ್ರಧ್ವಜದ ನಿರಂತರ ಹಾರಾಟಕ್ಕೆ ಚಾಲನೆ ನೀಡಿದರು.
ಬೆಳಗಾವಿಯಲ್ಲಿ ಸ್ಥಗಿತಗೊಂಡಿದ್ದ ಅತೀ ಉದ್ದದ ರಾಷ್ಟ್ರಧ್ವಜದ ನಿರಂತರ ಹಾರಾಟಕ್ಕೆ ಆಸೀಫ್ ಸೇಠ್ ಚಾಲನೆಬೆಳಗಾವಿ: ಇಲ್ಲಿನ ಕೋಟೆ ಆವರಣದಲ್ಲಿ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ದೇಶದ ಅತೀ ಉದ್ದದ ರಾಷ್ಟ್ರಧ್ವಜದ ನಿರಂತರ ಹಾರಾಟಕ್ಕೆ ಬೆಳಗಾವಿ ಉತ್ತರ ಕ್ಷೇತ್ರದ ನೂತನ ಶಾಸಕ ಆಸೀಫ್ (ರಾಜು) ಸೇಠ್ ಇಂದು ಚಾಲನೆ ನೀಡಿದರು. ಫಿರೋಜ್ ಸೇಠ್ ಶಾಸಕರಾಗಿದ್ದ ವೇಳೆ ಕಿಲ್ಲಾ ಕೆರೆ ಆವರಣದಲ್ಲಿ ಅತೀ ಎತ್ತರದ 110 ಮೀಟರ್ ಧ್ವಜಸ್ತಂಭ ನಿರ್ಮಿಸಿ ರಾಷ್ಟ್ರಧ್ವಜ ಹಾರಾಟಕ್ಕೆ ಚಾಲನೆ …
Read More »
Laxmi News 24×7