ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಇಂದು ಸಂಭ್ರಮದ ತೆರೆ ಬೀಳಲಿದ್ದು, ಕೊನೆಯ ದಿನದಂದು ಮಹಾ ದಾಸೋಹ ಭವನದಲ್ಲಿ ದಾಸೋಹ ಸಿದ್ದತಾ ಕಾರ್ಯ ನಡೆದಿದೆ. ಪ್ರತಿ ವರ್ಷವೂ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ 15 ದಿನಗಳ ನಡೆಯಲಿದೆ. ಜ.8 ರಂದು ಮಹಾ ರಥೋತ್ಸವ ನಡೆದಿದೆ. ಮೂರು ದಿನಗಳ ಕಾಲ ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡಿವೆ. ಇಂದು ಅಮವಾಸ್ಯೆ ನಿಮಿತ್ತ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ
*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಫೆ.10 ರಿಂದ ವಿಧಾನಮಂಡಲ ಬಜೆಟ್ ಅಧಿವೇಶನ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ
ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರು: ಮುಂದಿನ ತಿಂಗಳ 10 ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, …
Read More »ಅವರಿಗಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡೋಣ: ಬಹಿರಂಗ ಸಭೆಯಲ್ಲಿ ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಈ ಬಾರಿ ಕಾಂಗ್ರೆಸ್ ಸೋಲಿಸಲೇಬೇಕು. ಇದಕ್ಕಾಗಿ ಅವರು 3 ಸಾವಿರ ರೂ. ಗಿಫ್ಟ್ ಕೊಟ್ಟರೆ ನಾವು 6 ಸಾವಿರ ರೂ. ಗಿಫ್ಟ್ ಕೊಡುತ್ತೇವೆ. ಅವರು ಖರ್ಚು ಮಾಡಿದ್ದಕ್ಕಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡುತ್ತೇವೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುಳೇಬಾವಿಯಲ್ಲಿ ಶುಕ್ರವಾರ ಸಂಜೆ ನಡೆದ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಹಿರಂಗ ಸಭೆಯಲ್ಲಿ ಅವರು …
Read More »ಇಂದಿನಿಂದ ರಾಜ್ಯದಲ್ಲಿ 9 ದಿನ ‘ಬಿಜೆಪಿ ಸಂಕಲ್ಪ ಅಭಿಯಾನ’ : ವಿಜಯಪುರದಲ್ಲಿ ಜೆ.ಪಿ ನಡ್ಡಾ ಚಾಲನೆ
ಬೆಂಗಳೂರು: ಇಂದಿನಿಂದ (ಜ.21) ಜ. 29ರವರೆಗೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಭಿಯಾನ ನಡೆಯಲಿದ್ದು, ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಜ.21 ಇಂದು ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಜೆ.ಪಿ ನಡ್ಡಾ ಚಾಲನೆ ನೀಡಲಿದ್ದಾರೆ. ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಜೆ.ಪಿ ನಡ್ಡಾ, ಬಳಿಕ ವಿಜಯಪುರದಲ್ಲಿ …
Read More »18 ಕ್ಯಾರೆಟ್ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ
ಸೂರತ್: ಇತ್ತೀಚೆಗೆ ಜರುಗಿದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್ ಚಿನ್ನದಿಂದ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 …
Read More »ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ
ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ …
Read More »ವಿಧಾನಸಭೆ ಚುನಾವಣೆ | ಪ್ರತಿ ಜಿಲ್ಲೆಗೂ ಪ್ರತ್ಯೇಕ ಪ್ರಣಾಳಿಕೆ ಬೊಮ್ಮಾಯಿ
ಬೆಂಗಳೂರು: ಪ್ರತಿ ಜಿಲ್ಲೆಗಳಿಂದಲೂ ಮಾಹಿತಿ ತರಿಸಿಕೊಂಡು ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ‘ಪ್ರಣಾಳಿಕೆ ಸಿದ್ಧಪಡಿಸುವುದು, ಬಜೆಟ್ ಅಧಿವೇಶನ, ಪಕ್ಷದ ಸಂಘಟನೆ, ಜನ ಸಂಕಲ್ಪ ಯಾತ್ರೆಯ ಮುಂದುವರಿಕೆ, ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಲಾಗಿದೆ. ಶನಿವಾರದಿಂದ (ಜ.21) ಪ್ರಾರಂಭವಾಗುವ ಬೂತ್ಮಟ್ಟದ ವಿಜಯಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ …
Read More »ರಾಜ್ಯದಲ್ಲಿ ಕಾಂಗ್ರೆಸ್ಗೆ 108ರಿಂದ 114 ಸ್ಥಾನ?
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 108 ರಿಂದ 114 ಸ್ಥಾನ ಗೆಲ್ಲಲಿದೆ ಎಂದು ಹೈದರಾಬಾದ್ ಮೂಲದ ಖಾಸಗಿ ಸಂಸ್ಥೆ ಮಾಡಿದ ಸಮೀಕ್ಷೆ ತಿಳಿಸಿದೆ. ಹೈದರಾಬಾದ್ ಮೂಲದ ಇಂಡಿನ್ ಪೊಲಿಟಿಕಲ್ ಸರ್ವೇ ಆಯಂಡ್ ಸ್ಟಾಟರ್ಜಿ ಟೀಮ್ (ಎಸ್ಎಸ್ಎಸ್ ಗ್ರೂಪ್) ಮಾಡಿರುವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಬಗ್ಗೆ ತಿಳಿಸಿದ್ದು ಬಹಿರಂಗವಾಗಿದೆ. ವಿಧಾನ ಸಭಾ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ ಹೊಮ್ಮಲಿದ್ದು, ಕಾಂಗ್ರೆಸ್ 108-114 , ಬಿಜೆಪಿ 65-76, …
Read More »ಬಸವಣ್ಣ, ಕುವೆಂಪು, ಶರೀಫರ ಆಣೆ ಉಚಿತ ವಿದ್ಯುತ್ ಕೊಡುತ್ತೇವೆ: ಡಿಕೆ ಶಿವಕುಮಾರ್
ಹಾವೇರಿ: ಬಸವಣ್ಣನ ಆಣೆ, ಕುವೆಂಪು ಆಣೆ, ಕನಕದಾಸರ ಆಣೆ, ಶರೀಫರ ಆಣೆ 200 ಯುನಿಟ್ ಕರೆಂಟ್ ಅನ್ನು ಉಚಿತವಾಗಿ ನಿಮ್ಮ ಮನೆಗೆ ಕೊಟ್ಟೇ ಕೊಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ನಡೆದ ‘ಪ್ರಜಾಧ್ವನಿ ಯಾತ್ರೆ’ಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಈಶ್ವರಪ್ಪ ಲಂಚ ತಗೊಂಡು ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಕಾರಣವಾಗಿಲ್ಲವಾ? ನಾವು ಆಗ ವಿಧಾನಸೌಧದಲ್ಲಿ ಮಲಗಿದ್ದೆವು. ವಿಧಾನಸೌಧದ …
Read More »