ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ನಡೆದಿದೆ. ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬೆಂಬಲಿಗರು ಯಡಿಯೂರಪ್ಪ ಮೋಸಗಾರ ಎಂದು ಧಿಕ್ಕಾರ ಕೂಗಿದ್ದಾರೆ. ಯಡಿಯೂರಪ್ಪನವರು ಒಂದಲ್ಲ ಇನ್ನೂ ಹತ್ತು ಬಾರಿ ಅಥಣಿಗೆ ಬಂದರೂ ಲಕ್ಷ್ಮಣ ಸವದಿ ಗೆಲ್ಲುತ್ತಾರೆ. ಯಡಿಯೂರಪ್ಪ ಮೋಸಗಾರ ಎಂದು …
Read More »28 ದಿನದ ಮಗುವಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆಗೆ ನೆರವು:ರೋಟರಿ ಕ್ಲಬ್ ಆಫ್ ಬೆಳಗಾವಿ
ಬೆಳಗಾವಿ: ರೋಟರಿ ಕ್ಲಬ್ ಆಫ್ ಬೆಳಗಾವಿ ಸೌತ್ 28 ದಿನದ ಮಗುವಿಗೆ ಉಚಿತ ಹೃದಯ ಶಸ್ತ್ರಚಿಕಿತ್ಸೆಗೆ ನೆರವು ನೀಡುವ ಮೂಲಕ ಮಾನವೀಯತೆಗೆ ಸಾಕ್ಷಿಯಾಗಿದೆ ಇಂದು ಚಂದಗಡದ ನಡವಾಡೆ ಗ್ರಾಮದ ತನುಜಾ ಕುಂಡೇಕರ್ ಅವರಿಗೆ 28 ದಿನದ ಮಗುವಿಗೆ ಜೀವದಾನದ ಜಾಗತಿಕ ಅನುದಾನ ಯೋಜನೆಯಡಿ ಉಚಿತ ಹೃದಯ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದೆ. ಹೃದಯಾಘಾತದಿಂದ ಜನಿಸಿದ ಮಗುವಿಗೆ ಬೆಳಗಾವಿಯ ಕೆಎಲ್ಇ ಡಾ. ಪ್ರಭಾಕರ ಕೋರೆ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಯಲ್ಲಿ ವೈದ್ಯಕೀಯ ತಜ್ಞರ …
Read More »ಜಗದೀಶ್ ಶೆಟ್ಟರ್ ಸೋಲಿಸೋದು ನನ್ನ ಜವಾಬ್ದಾರಿ
ಅಥಣಿ: ಬಿಜೆಪಿ ಬೆನ್ನಿಗೆ ಚೂರಿ ಹಾಕಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯನ್ನು ಸೋಲಿಸುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಥಣಿ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ. ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಪರ ಚುನಾವಣಾ ಪ್ರಚಾರ ನಡೆಸಿದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿಗೆ ದ್ರೋಹ ಮಾಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಅವರನ್ನು ಕ್ಷಮಿಸುವ ಮಾತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ …
Read More »ರೋಡ್ ಶೋ ನಡೆಸುವ ವೇಳೆಮೊಬೈಲ್ ಫೋನ್ ಒಂದು ಮೋದಿಯವರತ್ತ ತೂರಿ ಬಂದಿದೆ.
ಕೊಚ್ಚಿ: ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಕೊಚ್ಚಿಯಲ್ಲಿ ರೋಡ್ ಶೋ ನಡೆಸುವ ವೇಳೆ ಪುಷ್ಪ ವೃಷ್ಟಿಯ ನಡುವೆಯೇ ಮೊಬೈಲ್ ಫೋನ್ ಒಂದು ತೂರಿಬಂದು ಭದ್ರತಾ ವ್ಯವಸ್ಥೆಯನ್ನೇ ಪ್ರಶ್ನಾರ್ಹವಾಗಿಸಿದೆ. ರೋಡ್ ಶೋನಲ್ಲಿ ಪ್ರಧಾನಿ ಮೋದಿ ಕಾಲ್ನಡಿಗೆಯಲ್ಲೇ ಬರುತ್ತಿದ್ದ ವೇಳೆ ಜನ ರಸ್ತೆಯ ಇಕ್ಕೆಲಗಳಲ್ಲಿ ನಿಂತು ವ್ಯಾಪಕ ಪ್ರಮಾಣದಲ್ಲಿ ಪುಷ್ಪ ವೃಷ್ಟಿ ಆರಂಭಿಸಿದ್ದರು. ಈ ವೇಳೆ ಹಠಾತ್ತಾಗಿ ಹೂಮಳೆಯ ಮಧ್ಯೆ ಮೊಬೈಲ್ ಫೋನ್ ಒಂದು ಮೋದಿಯವರತ್ತ ತೂರಿ ಬಂದಿದೆ. ಅದೇನಾದರೂ ಪ್ರಧಾನಿಯವರಿಗೆ ತಗುಲಿದ್ದರೆ …
Read More »ಲಕ್ಷ್ಮಣ ಸವದಿ ಪಂಚಾಯಿತಿಗೂ ಲಾಯಕ್ಕಿಲ್ಲ: ರಮೇಶ್ ಜಾರಕಿಹೊಳಿ ವಾಗ್ದಾಳಿ
ಬೆಳಗಾವಿ: ಲಕ್ಷ್ಮಣ ಸವದಿ ಉದ್ದ ಅಂಗಿ ಹಾಕಿಕೊಂಡು ಬರುತ್ತಿದ್ದಕ್ಕೆ ದೊಡ್ಡವನು ಅಂತಾ ತಿಳಿದಿದ್ದರು. ಆದರೆ ಬಿಜೆಪಿ ನಾಯಕರಿಗೆ ಆತ ಮೋಸ ಮಾಡಿದ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಅಥಣಿಯಲ್ಲಿ ಮಾತನಾಡಿದ ರಮೇಶ್ ಜರಕಿಹೊಳಿ, ಲಕ್ಷ್ಮಣ ಸವದಿಗೆ ಬಿಜೆಪಿಯಲ್ಲಿ ಏನು ಅನ್ಯಾಯ ಆಗಿತ್ತು? ಮಹೇಶ್ ಕುಮಟಳ್ಳಿಗೆ ಅನ್ಯಾಯವಾಗಿತ್ತು. ಸವದಿ ಸೋತಿದ್ದರೂ ಆತನಿಗೆ ಎಲ್ಲಾ ಸ್ಥಾನಮಾನ ನೀಡಲಾಗಿತ್ತು. ಒಳ್ಳೆಯ ಉದ್ದೇಶಕ್ಕಾಗಿ ಡಿಸಿಎಂ ಮಾಡಿದರು. ಆದರೆ ಆತ ಪಂಚಾಯಿತಿಗೂ ಲಾಯಕ್ಕಿಲ್ಲ …
Read More »ಎಲೆ ಮರೆಯಲ್ಲಿ ಬೆತ್ತಲಾದ ನಟಿ
ಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾ ಮೂಲಕ ಕಿಯಾರಾ ಅಡ್ವಾಣಿ ಅಭಿಮಾನಿಗಳ ಮನಗೆದ್ದಿದ್ದಾರೆ. ಕಿಯಾರಾ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟಿವ್ ಆಗಿದ್ದಾರೆ. ಅನೇಕ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ತಾರೆ. ಇದೀಗ ಅವರ ನ್ಯೂಡ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.ಖ್ಯಾತ ಬಾಲಿವುಡ್ ಛಾಯಾಗ್ರಾಹಕ ದಾಬೂ ರತ್ನಾನಿ ಈ ನಗ್ನ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೂ ಮೊದಲು, ಕಿಯಾರಾ ದಬೂ ರತ್ನಾನಿಯ ಕ್ಯಾಲೆಂಡರ್ ಫೋಟೋಶೂಟ್ಗೆ ಪೋಸ್ ಕೊಟ್ಟಿದ್ದಾರೆ.ಕಿಯಾರಾ ಎಲೆಯಿಂದ ಮೈ ಮುಚ್ಚಿಕೊಂಡಿದ್ದು, …
Read More »ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಬೆನ್ನು ತಟ್ಟಿ ಕಳುಹಿಸಿದ ಸಿದ್ದರಾಮಯ್ಯ
ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಇಂದು ಅಪರೂಪದ ವಿದ್ಯಮಾನ ನಡೆದಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿಯಾದ ಸಂದರ್ಭಕ್ಕೆ ಏರ್ ಪೋರ್ಟ್ ಸಾಕ್ಷಿಯಯೈತು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದು, ಈ ವೇಳೆ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಅವರ ಬೆನ್ನು ತಟ್ಟಿದ್ದಾರೆ.ಬಳಿಕ ಇಬ್ಬರೂ ನಗು ನಗುತ್ತಲೇ ಮಾತನಾಡಿ, ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದರು. ಲಿಂಗಾಯಿತ ಸಮರದ ಬೆನ್ನಲ್ಲೇ …
Read More »ಆದಿತ್ಯನಾಥ್ ಭರ್ಜರಿ ರೋಡ್ ಶೋJDS ಭದ್ರ ಕೋಟೆಯಲ್ಲಿ
ಮಂಡ್ಯ: ವಿಧನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸಿದ್ದಾರೆ. ಜೆಡಿಎಸ್ ಭದ್ರ ಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಮಂಡ್ಯ ಬಿಜೆಪಿ ಅಭ್ಯರ್ಥಿ ಪರ ಸಿಎಂ ಯೋಗಿ ಆದಿತ್ಯನಾಥ್ ಭರ್ಜರಿ ಮತ ಬೇಟೆ ಆರಂಭಿಸಿದ್ದಾರೆ. ಸಂಜಯ ವೃತ್ತದಿಂದ ಮಹಾವೀರ ಥಿಯೆಟರ್ ವರೆಗೆ ಯೋಗಿ ಆದಿತ್ಯನಾಥ್ ರೋಡ್ ಶೋ ಸಾಗಿದ್ದು, ಮೆರವಣಿಗೆಯುದ್ದಕ್ಕೂ ಜನರು ಹೂವಿನ ಮಳೆಗರೆದು …
Read More »ಈ ಬಾರಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್
ಮಂಗಳೂರು: ಬಿಜೆಪಿಯ ಅಭಿವೃದ್ಧಿ ಓಟಕ್ಕೆ ಜನತೆ ಜತೆಗೂಡಿದ್ದು ಈ ಬಾರಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಮಂಗಳ ವಾರ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾ ಚಾರವಿಲ್ಲದೆ ಜನಪರ ಆಡಳಿತ ನೀಡಿದ ಬಿಜೆಪಿ ಸರಕಾರದ ಪರ ಮತದಾರ ಒಲವು ತೋರಿಸು ತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಜನರೇ ಮುನ್ನುಡಿ ಬರೆಯಲಿದ್ದಾರೆ …
Read More »ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ: ಭಾರತ ಮೂಲದ ತಂಗರಾಜುಗೆ ಇಂದು ಗಲ್ಲು
ಸಿಂಗಾಪುರ: ಸಿಂಗಾಪುರದಲ್ಲಿ ಮಾದಕವಸ್ತು ಕಳ್ಳಸಾಗಣೆ ಉತ್ತೇಜಿಸಿದ್ದಲ್ಲದೇ, 1 ಕೆಜಿ ಗಾಂಜಾವನ್ನು ಅಕ್ರಮವಾಗಿ ಸಾಗಿಸಿರುವ ಅಪರಾಧದ ಮೇರೆಗೆ ಭಾರತ ಮೂಲದ ವ್ಯಕ್ತಿ ತಂಗರಾಜು ಸುಪ್ಪಯ್ಯನನ್ನು ಬುಧವಾರ ಗಲ್ಲಿಗೇರಿಸಲು ಸರ್ಕಾರ ನಿರ್ಧರಿಸಿದೆ. ನಾರ್ವೆ, ಸ್ವಿಜರ್ಲೆಂಡ್ ಸೇರಿದಂತೆ ಕೆಲ ರಾಷ್ಟ್ರಗಳು ಹಾಗೂ ಸ್ಥಳೀಯ ಮರಣದಂಡನೆ ವಿರೋಧಿ ಸಂಘಟನೆಗಳು ತಂಗರಾಜು ಗಲ್ಲು ಶಿಕ್ಷೆಯನ್ನು ಆಕ್ಷೇಪಿಸಿದ ಹೊರತಾಗಿಯೂ, ಸಿಂಗಾಪುರ ಸರ್ಕಾರ ಬುಧವಾರ ಗಲ್ಲಿಗೇರಿಸಲು ನಿರ್ಧರಿಸಿದೆ. ಅಲ್ಲದೇ, ದೇಶದ ಕಾನೂನು ವ್ಯವಸ್ಥೆ ಹಾಗೂ ನ್ಯಾಯಾಧೀಶರ ತೀರ್ಮಾನ ಗೌರವಿಸುವುದು ಅಗತ್ಯವಾಗಿದೆ …
Read More »
Laxmi News 24×7