Breaking News

ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ ಘೋಷಣೆ

ಧಾರವಾಡ: ಬೆಂಗಳೂರಿನಲ್ಲಿ ಮೆಟ್ರೊ ಮೇಲ್ಸೆತುವೆ ಪಿಲ್ಲರ್ ಕುಸಿತದಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೃತಪಟ್ಟವರು ಧಾರವಾಡ ಮತ್ತು ಗದಗ ಮೂಲದವರೆಂದು ತಿಳಿದಿದೆ. ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಈ ದುರ್ಘಟನೆ ನಡೆದಿದೆ ಎಂದು ಬೇಸರ ವ್ಯಕ್ತ ಪಡಿಸಿದರು. ಮೃತರ ಕುಟುಂಬಕ್ಕೆ ಮೆಟ್ರೋ ಸಂಸ್ಥೆಯೂ ಸಹ ಪರಿಹಾರ ನೀಡಲಿದೆ. ಜೊತೆಗೆ …

Read More »

ರಾಜ್ಯದಲ್ಲಿ ದಿಢೀರ್ ತಾಪಮಾನ ಕುಸಿತ: ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ

ಬೆಂಗಳೂರು: ರಾಜ್ಯದಲ್ಲಿ ದಿಢೀರ್ ಆಗಿ ತಾಪಮಾನ ಕುಸಿದಿದ್ದು, ಕೆಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಅನುಭವ ಉಂಟಾಗುತ್ತಿದೆ. ‘ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ ಕಡಿಮೆ ಆಗಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ರಾಜಧಾನಿ ಬೆಂಗ ಳೂರಿನಲ್ಲೂ ತಾಪಮಾನ ಕುಸಿದಿತ್ತು. ಹೊರವಲಯದ ಜನರಿಗೆ ಚಳಿಯ ತೀವ್ರತೆ ಹೆಚ್ಚೇ …

Read More »

ವಿಷನ್ 2047: ಅಯೋಧ್ಯೆಗೆ ಹೊಸ ಸ್ಪರ್ಶ; ಇಲ್ಲಿದೆ ಮಾಹಿತಿ.

ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷ ಜ. 1ರಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ. ನಂತರದಲ್ಲಿ ದಿನಕ್ಕೆ ಕನಿಷ್ಠ 1 ಲಕ್ಷ ಮಂದಿಯಾ ದರೂ ಶ್ರೀರಾಮನ ದರ್ಶನ ಪಡೆಯಲಿದ್ದಾರೆ. ಇದನ್ನು ಗಮನದಲ್ಲಿಟ್ಟು ಕೊಂಡು, ಅಯೋಧ್ಯೆಯನ್ನು ಜಾಗತಿಕ ಪ್ರವಾಸೋದ್ಯಮ ಮತ್ತು ಆಧ್ಯಾತ್ಮಿಕ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಉದ್ದೇಶದಿಂದ ಉತ್ತರಪ್ರದೇಶ ಸರಕಾರವು ಬರೊಬ್ಬರಿ 32 ಸಾವಿರ ಕೋಟಿ ರೂ.ಗಳ ಮೆಗಾ ಯೋಜನೆಯನ್ನು ರೂಪಿಸಿದೆ. ಆ ಯೋಜನೆ ಕುರಿತು ಒಂದಿಷ್ಟು ಮಾಹಿತಿ …

Read More »

ಸ್ಯಾಂಟ್ರೋ ರವಿ ಹಣ ಲೆಕ್ಕ ಮಾಡಿದ್ದು ಆರಗ ಮನೆಯಲ್ಲೇ: H.D.K.

ಆಳಂದ: ಸ್ಯಾಂಟ್ರೋ ರವಿ ಜತೆಗೆ ಸಚಿವರು, ಬಿಜೆಪಿ ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆಕಂತೆ ನೋಟುಗಳ ಜತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣ ಲೆಕ್ಕ ಮಾಡುತ್ತಿರುವ ಫೋಟೋ ವೈರಲ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಹೇಳಿದರು. ಖಜೂರಿಯಲ್ಲಿ ಸೋಮವಾರ ಜರಗಿದ ಜೆಡಿಎಸ್‌ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ …

Read More »

ಬಿಜೆಪಿಯವರದ್ದು ಬೆನ್ನು ಮೂಳೆ ಇಲ್ಲದ ರಾಜಕೀಯ: ಹಿಂದಿ ದಿವಸ್ ವಿರುದ್ಧ ಜೆಡಿಎಸ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಹಿಂದಿ ದಿವಸ ಆಚರಣೆಯ ವಿರುದ್ಧ ಜೆಡಿಎಸ್ ಕಿಡಿಕಾರಿದ್ದು, ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿದೆ. ಬಹು ಭಾಷೆಯ, ಬಹುಸಂಸ್ಕ್ರತಿಯ ದೇಶ ನಮ್ಮ ಭಾರತ. ಕೇವಲ‌ ಒಂದು ಭಾಷೆಯನ್ನು …

Read More »

ಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಕೊಟ್ಟಿದೆ. ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್‌ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್‌ ಕಿರಂದೂರು ಅವರು ಹೇಳಿದ್ದರು. ಟ್ವಟರ್‌ ನಲ್ಲಿ ಕಾಂತಾರಕ್ಕೆ ಆಸ್ಕರ್‌ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್‌ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ …

Read More »

ಡಿ.ಕೆ ಶಿವಕುಮಾರ್ ಭೇಟಿಯಾದ ಶಾಸಕ H.ನಾಗೇಶ್ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್..?

ಬೆಂಗಳೂರು : ಪಕ್ಷೇತರ ಶಾಸಕ ಹೆಚ್. ನಾಗೇಶ್ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷೇತರ ಶಾಸಕನಾಗಿದ್ದರೂ ಬಿಜೆಪಿ ಬೆಂಬಲಿಸಿರುವ ನಾಗೇಶ್ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಕುತೂಹಲ ಮೂಡಿದೆ. ಕೆಲವು ತಿಂಗಳುಗಳ ಹಿಂದೆಯೇ ನಾಗೇಶ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬಂದಿತ್ತು, ಆದರೆ ಕಾಂಗ್ರೆಸ್ ಸೇರ್ಪಡೆಯಾಗಿರಲಿಲ್ಲ. ಮಹತ್ತರದ …

Read More »

ಮತಾಂತರ ಗಂಭೀರ ಸಮಸ್ಯೆ, ರಾಜಕೀಯ ಮಾಡಬೇಡಿ: ಸುಪ್ರೀಂ

ನವದೆಹಲಿ, ಜನವರಿ 9: ಧಾರ್ಮಿಕ ಮತಾಂತರಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದಿರುದ ಸುಪ್ರೀಂ ಕೋರ್ಟ್, ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿರುವ ಮನವಿಯ ಕುರಿತು ಸೋಮವಾರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ನೆರವು ಕೋರಿದೆ.   ಬೆದರಿಕೆ, ಉಡುಗೊರೆಗಳು ಮತ್ತು ಹಣದ ಪ್ರಯೋಜನಗಳ ಮೂಲಕ ವಂಚನೆಯಿಂದ ಆಮಿಷ ಒಡ್ಡಿ ಸಹಾಯ ಮಾಡುವ ಮೂಲಕ ಧಾರ್ಮಿಕ ಮತಾಂತರವನ್ನು ಪರಿಶೀಲಿಸುವಂತೆ …

Read More »

ಮೊಟರ್ ಸೈಕಲ್ ಹಿಂದೆ ಕುಳಿತು ಕುತ್ತಿಗೆ ಕೊಯ್ದಿದ್ದ ಖತರ್ನಾಕ್ ಮಹಿಳೆಗೆ 5 ವರ್ಷ ಜೈಲು*

ಬೆಳಗಾವಿ: ತನ್ನ ಮಗನನ್ನು ಕೊಂದಿದ್ದಾರೆಂದು ತಪ್ಪು ತಿಳಿದು ವ್ಯಕ್ತಿಯೊಬ್ಬನ ಕುತ್ತಿಗೆಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದ ಮಹಿಳೆಗೆ ಬೆಳಗಾವಿಯ 9ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಮೂಲತಃ ಬೆಳಗಾವಿ ತಾಲೂಕಿನ ಸೋನಟ್ಟಿಯ ಹಾಲಿ ಕಾಕತಿ ಲಕ್ಷ್ಮೀ ನಗರ ನಿವಾಸಿ ಈರವ್ವಾ ಸಿದ್ದಪ್ಪ ಮುಚ್ಚಂಡಿ ಶಿಕ್ಷೆಗೀಡಾದ ಆರೋಪಿ ಮಹಿಳೆ. ಆರೋಪಿಯ ಪುತ್ರ 2017ರಲ್ಲಿ …

Read More »

ಮೀಸಲಾತಿಗಾಗಿ ಮತ್ತೊಂದು ಸಮುದಾಯದ ಹೋರಾಟ ತೀವ್ರ: ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸಂಘ

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಸಂಬಂಧ ವಿವಿಧ ಸಮುದಾಯಗಳ ಹೋರಾಟ ನಡೆಯುತ್ತಿದ್ದು, ಇದೀಗ ಇದೇ ವಿಚಾರವಾಗಿ ಇನ್ನೊಂದು ಸಮುದಾಯ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ. ಮಾತ್ರವಲ್ಲ, ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದೆ.   ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ ಪ್ರವರ್ಗ ‘2ಎ’ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಿಜ ಸಂಘ ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಪ್ರತಿಭಟನಾಕಾರರು ನಮ್ಮಿಂದ ಕಸಿದುಕೊಂಡಿರುವ 2ಎ ಮೀಸಲಾತಿ ವಾಪಸ್ …

Read More »