Breaking News

ನಾವು ಜನರ ಧ್ವನಿ ಎತ್ತಿದಾಗ ಹೆದರಿ ಮಹಾದಾಯಿ ಡಿಪಿಆರ್ ಗೆ ಅನುಮತಿ: ಡಿ.ಕೆ.ಶಿವಕುಮಾರ್

ಹುಬ್ಬಳ್ಳಿ: ಬಿಜೆಪಿಯವರದ್ದು ಸುಳ್ಳಿನ ಯುನಿವರ್ಸಿಟಿ ಇದ್ದಹಾಗೆ. ರಾಜ್ಯ, ಗೋವಾ, ಕೇಂದ್ರದಲ್ಲಿ ತನ್ನದೆಯಾದ ಬಿಜೆಪಿ ಸರಕಾರ ಇದ್ದರೂ ಮೂರು ವರ್ಷದಿಂದ ಮಹಾದಾಯಿ ಯೋಜನೆ ಜಾರಿಗೊಳಿಸಲು ಆಗಿಲ್ಲ. ಈಗ ನಾವು ಜನರ ಧ್ವನಿ ಎತ್ತಿದಾಗ ಹೆದರಿ ಡಿಪಿಆರ್ ಗೆ ಅನುಮತಿ ಪಡೆದುಕೊಂಡು ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಸೇರಿ ಹೋರಾಟ ಮಾಡಿ ಒಂದು ಹಂತಕ್ಕೆ ತಂದಿದ್ದೇವೆ. ಈಗ ಬಿಜೆಪಿಯವರು ಸುಪ್ರೀಂ ಕೋರ್ಟ್ ತೀರ್ಪಿಗೆ …

Read More »

ಕಳಸಾ ತಿರುವು: ಅರಣ್ಯ ಇಲಾಖೆ ಒಪ್ಪಿಗೆ

ನವದೆಹಲಿ : ಮಹದಾಯಿ ಯೋಜನೆಯ ಕಳಸಾ ನಾಲಾ ತಿರುವು ಯೋಜನೆಗೆ 33.05 ಹೆಕ್ಟೇರ್‌ ಮೀಸಲು ಅರಣ್ಯವನ್ನು ಬಳಸಿಕೊಳ್ಳಲು ಕರ್ನಾಟಕ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ.   ಮಹದಾಯಿ ನದಿ ನೀರು ವಿವಾದ ನ್ಯಾಯಾಧೀಕರಣವು 2018ರ ಆಗಸ್ಟ್‌ 14ರಂದು ಕಳಸಾ- ಬಂಡೂರಿ ಯೋಜನೆಗೆ 3.90 ಟಿಎಂಸಿ ಅಡಿ ನೀರಿನ ಹಂಚಿಕೆ ಮಾಡಿದೆ. ಇದರಲ್ಲಿ ಕಳಸಾ ನಾಲಾ ತಿರುವು ಯೋಜನೆಗೆ 2.18 ಟಿಎಂಸಿ ಅಡಿ ಮೀಸಲಿಡಲಾಗಿದೆ. ಈ ಯೋಜನೆಗೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ …

Read More »

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಮರಣ ಪತ್ರ- ಲಿಂಬಾವಳಿ ಸೇರಿ 6 ಹೆಸರು

ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ (47) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರದೀಪ್ ಬರೆದಿದ್ದಾರೆ ಎನ್ನಲಾದ 8 ಪುಟಗಳ ಮರಣ ಪತ್ರ ಕಾರಿನಲ್ಲಿ ಸಿಕ್ಕಿದೆ. ಶಾಸಕ ಅರವಿಂದ ಲಿಂಬಾವಳಿ, ಉದ್ಯಮಿಗಳಾದ ಕೆ. ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಜಯ ರಾಮ್ ರೆಡ್ಡಿ ಹಾಗೂ ರಾಘವ ಭಟ್‌ ಎಂಬುವರ ಹೆಸರುಗಳನ್ನು ಮೊಬೈಲ್‌ ಸಂಖ್ಯೆ ಸಹಿತವಾಗಿ ಉಲ್ಲೇಖಿಸಲಾಗಿದೆ. ‘ಆರು ಜನರಿಂದ …

Read More »

ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಇಲ್ಲಿನ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪಾರಾಗತೊಡಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಮಾಧ್ಯಮಗಳಿಗೆ ಶ್ರೀ ಗಳ ಹೆಲ್ತ್ ಬುಲೆಟಿನ್ ನೀಡಿದ ವೈದ್ಯರಾದ ಡಾ. ಮೂಲಿಮನಿ, ಡಾ. ಎಸ್.ಬಿ.ಪಾಟೀಲ, ಡಾ.ಸೋಮಶೇಖರ್, ಶ್ರೀಗಳ ಉಸಿರಾಟ, ನಾಡಿಮಿಡಿತ ಕ್ಷಣ ಕ್ಷಣಕ್ಕೆ ಕಡಿಮೆಯಾಗತೊಡಗಿದೆ. ಆಕ್ಸಿಜನ್ ಮೇಲೆ ಇದ್ದಾರೆ ಎಂದರು. ಶ್ರೀಗಳು ಬೆಳಿಗ್ಗೆ ಗಂಜಿ ಸೇವಿಸಿದ್ದರು. ಬಳಿಕ ಇದುವರೆಗೆ ಏನನ್ನೂ ಸೇವಿಸಿಲ್ಲ ಎಂದರು.

Read More »

ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ

ಕಳೆದೊಂದು ವರ್ಷದಿಂದ ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿರ್ಮಾಣವಾಗಿರುವ ಖಾಸಗಿ ಮಾರುಕಟ್ಟೆಯ ವಿರುದ್ಧ ಅಪಸ್ವರ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ತರಕಾರಿ ತುಂಬಿಕೊಂಡು ಬಂದಿರುವ ವಾಹನಗಳ ಪಾರ್ಕಿಂಗ್ ಗೆ ಹೆಚ್ಚುವರಿ ಶುಲ್ಕ ಪಡೆಯುತ್ತಿದ್ದಾರೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ.   ಕಳೆದೊಂದು ವರ್ಷದಿಂದ ವಾಹನ ಸವಾರರಿಗೆ ಜೈ ಕಿಸಾನ್ ಬಾಜಿ ಮಾರ್ಕೇಟ್ ನವರು ಕಿರಿಕಿರಿ ಮಾಡುತ್ತಿದ್ದಾರೆ. ರೈತರಿ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುವ ಕಾಯಕದಲ್ಲಿ ತೋಡಗಿದ್ದಾರೆ ಎಂದು …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೊದಲನೆಯ ಬಾರಿ ಪೂಜೆ ಕಾರ್ಯಕ್ರಮ ನಡೆಸಿದ ಅಯ್ಯಪ್ಪನ ಭಕ್ತ ವೃಂದ ಹಾಗೂ ಕಾರ್ಖಾನೆಯ ಸಿಬ್ಬಂದಿಗಳು..

ಹಿರೆ ನಂದಿ :ಕಾರ್ತಿಕ ಮಾಸ ಆಯ್ಯಪನ ಭಕ್ತರ ಪಾಲಿಗೆ ಇದೊಂದು ಹಬ್ಬ, ನಾಡಿನಾದ್ಯಂತ ಅಯ್ಯಪ್ಪನ ಭಕ್ತರು ಈ ಒಂದು ಕಾರ್ತಿಕ ಮಾಸದಲ್ಲಿ ಮಾಲಾ ಧಾರಣೆ ಮಾಡಿ ಅಯ್ಯಪ್ಪನ ದರ್ಶನಕ್ಕೆ ಹೋಗುತ್ತಾರೆ. ತುಂಬಾ ಕಠಿಣ ವಾದ ವಿದಿ ವಿಧಾನ ಗಳೊಂದಿಗೆ ಈ ಒಂದು ವ್ರತವನ್ನು ಮಾಡಿ ಅಯ್ಯಪ್ಪನ ಭಕ್ತರು ಶಬರಿ ಗಿರಿಗೆ ತೆರಳುತ್ತಾರೆ ನಾಡಿನಾದ್ಯಂತ ಈ ಒಂದು ಪರಂಪರೆ ಪುರಾತನ ಕಾಲದಿಂದಲೂ ನಡೆದು ಕೊಂಡು ಬಂದಿದೆ. ಇಂಥ ವಿಶಿಷ್ಟ ಪೂಜೆ ಯನ್ನ …

Read More »

ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*

  *ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …

Read More »

K.M.F ಮೇಲೆ ಕೇಂದ್ರದ ಕಣ್ಣು: ಕಾಂಗ್ರೆಸ್‌ ವಾಗ್ಧಾಳಿ

ಬೆಂಗಳೂರು: ಕನ್ನಡಿಗರ ಕೆನರಾ, ಕಾರ್ಪೊರೇಷನ್‌, ವಿಜಯಾ ಬ್ಯಾಂಕುಗಳ ಅಸ್ತಿತ್ವ ಕಸಿದ ಕೇಂದ್ರ ಸರ್ಕಾರ ಈಗ ಕೆಎಂಎಫ್ ಮೇಲೆ ಕಣ್ಣು ಹಾಕಿದೆ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಎಂದರೆ ಭಸ್ಮಾಸುರ ಜನತಾ ಪಾರ್ಟಿ.ಭಸ್ಮಾಸುರ ತಲೆಯ ಮೇಲೆ ಕೈ ಇಟ್ಟರೆ ಭಸ್ಮವಾಗುತ್ತಿದ್ದರು. ಆದರೆ ಬಿಜೆಪಿಯವರು ಕಣ್ಣು ಹಾಕಿದರೆ ಸಾಕು ಭಸ್ಮವಾಗುತ್ತದೆ. ಕೆಎಂಎಫ್ ಉಳಿಸಲು ಕಾಂಗ್ರೆಸ್‌ ಬದ್ಧವಾಗಿದೆ ಎಂದು ಹೇಳಿದೆ. ರೈತರ ಮೇಲೆ ಬಿಜೆಪಿ ಸರ್ಕಾರಕ್ಕೆ …

Read More »

ಟಿಜಿಟಿ ಶಿಕ್ಷಕರ ಹೆಚ್ಚುವರಿಯಾಗಿ ಗುರುತಿಸಲು ಸಮ್ಮತಿಸಿದ ಸರಕಾರ

ಹುಬ್ಬಳ್ಳಿ: ರಾಜ್ಯ ಸರಕಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮತ್ತು ವರ್ಗಾವಣೆ ಪ್ರಕ್ರಿಯೆ ಡಿ.28ರಿಂದಲೇ ಪ್ರಾರಂಭಿಸಿದ್ದು, ಜ.2ರಿಂದ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರಲ್ಲಿ ಟಿಜಿಟಿ ಶಿಕ್ಷಕರನ್ನು ಹೆಚ್ಚುವರಿಯಾಗಿ ಗುರುತಿಸಲಾಗಿದೆ.   2021, ಡಿ.31ರಿಂದ 8ನೇ ತರಗತಿಯಲ್ಲಿ ಶೂನ್ಯ ದಾಖಲಾತಿ ಇರುವ ಹಾಗೂ ಈಗಾಗಲೇ 8ನೇ ತರಗತಿಯಲ್ಲಿ ಗಣಿತ ಪದವೀಧರ ಶಿಕ್ಷಕರಿರುವ(ಜಿಪಿಟಿ) ಶಾಲೆಯ ಪ್ರೌಢಶಾಲಾ ವೃಂದದ ಗಣಿತ(ಟಿಜಿಟಿ) ಶಿಕ್ಷಕರನ್ನು ಹೆಚ್ಚುವರಿಯಾಗಿ ಗುರುತಿಸಿ ಅವರನ್ನು ಅವಶ್ಯವಿರುವ ಪ್ರೌಢಶಾಲೆಗೆ …

Read More »