Breaking News

ಬೇರೆ ಜಿಲ್ಲೆ ಬಗ್ಗೆ ಅಷ್ಟೊಂದು ಕಾಳಜಿ ವಹಿಸದೇ ತವರು ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ ಬೊಮ್ಮಾಯಿ

ಹಾವೇರಿ: ಕಳೆದ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕೊಟ್ಟಂತೆಯೇ, ಈ ಬಾರಿಯ ಬಜೆಟ್‌ನಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಜಿಲ್ಲೆ ಹಾವೇರಿಗೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರ ಸ್ಥಾಪನೆ, ಸವಣೂರಿನಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ, ಹಾವೇರಿಯಲ್ಲಿ ಆಧುನಿಕ ತಂತ್ರಜ್ಞಾನ ಆಧರಿತ ಹೂವಿನ ಚಿಲ್ಲರೆ ಮಾರುಕಟ್ಟೆ ನಿರ್ಮಾಣ, ಬಂಕಾಪುರದ ನಗರೇಶ್ವರ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವುದಾಗಿ ಘೋಷಿಸಲಾಗಿದೆ.   …

Read More »

ಬೆಳಗಾವಿ: ಅತ್ಯಾಚಾರವೆಸಗಿದ ಪಿಎಸ್‌ಐ- ವಿದ್ಯಾರ್ಥಿನಿಯಿಂದ ದೂರು ದಾಖಲು

ಬೆಳಗಾವಿ: ನಗರ ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಗೆ ಬರುವ ವೈರ್‌ಲೆಸ್‌ ‍ಠಾಣೆಯ ಪಿಎಸ್‌ಐ ಲಾಲ್‌ಸಾಬ್‌ ಅಲ್ಲಿಸಾಬ್‌ ನದಾಫ (28) ಅವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ, ಕಾಲೇಜು ವಿದ್ಯಾರ್ಥಿನಿಯೊಬ್ಬರು ಗುರುವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಲಾಲ್‌ಸಾಬ್‌ ಅವರಿಗೆ ಫೆ. 10ರಂದು ಬೇರೊಬ್ಬ ಯುವತಿ ಜತೆಗೆ ಮದುವೆಯಾಗಿದೆ. ವಿಷಯ ಗೊತ್ತಾದ ಬಳಿಕ ವಿದ್ಯಾರ್ಥಿನಿ ದೂರು ದಾಖಲಿಸಿದ್ದಾರೆ. ‘2020ರ ಜೂನ್‌ 16ರಂದು ಪಿಎಸ್‌ಐ ಲಾಲ್‌ಸಾಬ್‌ ಫೇಸ್‌ಬುಕ್‌ ಮೆಸೆಂಜರ್‌ ಮೂಲಕ ಪರಿಚಯವಾಗಿದ್ದರು. …

Read More »

ಬಜೆಟ್‌ ಗದಗ ಜಿಲ್ಲೆ ‘ಶೂನ್ಯ ಸಂಪಾದನೆ’: ಜನತೆ ಆಕ್ರೋಶ

ಗದಗ: ಮು‌ಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್‌ ಜಿಲ್ಲೆಯ ಜನತೆಗೆ ನಿರಾಸೆ ಮೂಡಿಸಿದೆ. ತವರು ಜಿಲ್ಲೆ ಹಾವೇರಿಗೆ ಭರಪೂರ ಯೋಜನೆಗಳನ್ನು ಪ್ರಕಟಿಸಿರುವ ಅವರು ಪಕ್ಕದ ಗದಗ ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತೋರಿದ್ದಾರೆ. ಕೈಗಾರಿಕೆ, ಕೃಷಿ, ನೀರಾವರಿ, ಪ್ರವಾಸೋದ್ಯಮ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಸಾಕಷ್ಟು ಅನುದಾನ ಮತ್ತು ಹೊಸ ಯೋಜನೆಗಳು ಘೋಷಣೆ ಆಗಬಹುದು ಎಂಬ ಜಿಲ್ಲೆಯ ಜನರ ನಿರೀಕ್ಷೆಗಳು ಹುಸಿಯಾಗಿವೆ. ಕಳಸಾ ಮತ್ತು …

Read More »

ಭದ್ರಾವತಿ: ವಿಐಎಸ್‌ಎಲ್‌ ಕಾರ್ಖಾನೆಗೆ ಕೊನೆ ಮೊಳೆ

ಶಿವಮೊಗ್ಗ: ವಿಐಎಸ್‌ಎಲ್‌ ಮುಚ್ಚುವುದಿಲ್ಲ, ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಇತ್ತ ಭರವಸೆ ನೀಡುತ್ತಿದ್ದರೆ; ಅತ್ತ ಕೇಂದ್ರ ಸರಕಾರ ಕಾರ್ಖಾನೆ ಮುಚ್ಚುವುದು ಶತಸ್ಸಿದ್ಧ ಎಂದು ರಾಜ್ಯಸಭೆಯಲ್ಲೇ ಸ್ಪಷ್ಟ ಪಡಿಸುವ ಮೂಲಕ ಶತ ಮಾ ನಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ರಾಜ್ಯದ ಏಕೈಕ ಸಾರ್ವಜನಿಕ ಉಕ್ಕಿನ ಕಾರ್ಖಾನೆ ವಿಐಎಸ್‌ಎಲ್‌ಗೆ ಚರಮ ಗೀತೆ ಬರೆದಿದೆ. ಇಲ್ಲಿಗೆ ಕೈಗಾರಿಕಾ ನಗರದ ಇತಿಹಾಸವೂ ಕೊನೆಯಾಗಲಿದೆ. ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ಸರ್‌ ಎಂ. ವಿಶ್ವೇಶ್ವರಯ್ಯ ದೂರದೃಷ್ಟಿ ಫಲವಾಗಿ …

Read More »

ಇಂದು ವಿಠಲಾಪೂರದಲ್ಲಿ ರಸಲಿಂಗಕ್ಕೆ ವಿಶೇಷ ಪೂಜೆ

ಮುಂಡರಗಿ: ತಾಲೂಕಿನ ವಿಠಲಾಪೂರ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಪರೂಪದ ಪಂಚಲೋಹದ ರಸಲಿಂಗ(ಶಿವಲಿಂಗ)ಇದ್ದು, ಮಹಾಶಿವರಾತ್ರಿಯಂದು ವಿಶೇಷವಾಗಿ ರಸಲಿಂಗ ಪೂಜೆ ನಡೆಯುತ್ತದೆ. ಶಿವರಾತ್ರಿ ದಿನ ರಸಲಿಂಗವನ್ನು ತೊಳೆದು ಸಕಲ ಹೂಗಳು, ಬಿಲ್ವಪತ್ರಿಗಳಿಂದ ಮಹಾಪುರುಷರ ಕುಟುಂಬದವರು ಪೂಜೆ ನೆರವೇರಿಸುತ್ತಾರೆ. ದಕ್ಷಿಣ ಭಾರತದಲ್ಲಿಯೇ ವಿಶೇಷವಾಗಿರುವ ರಸಲಿಂಗ ಹಲವು ಕುತೂಹಲಕರ ಸಂಗತಿಗಳಿಂದ ಒಡಗೂಡಿದೆ. ರಸಶಾಸ್ತ್ರ ಅಧ್ಯಯನ ಮಾಡಿದ್ದ ಯೋಗಗುರುಗಳು ರಸಲಿಂಗವನ್ನು ರಚನೆ ಮಾಡಿದ್ದರು ಎನ್ನುವ ಮಾತು ಜನಜನಿತವಾಗಿದೆ. ವಿಠಲಾಪೂರದ ಮಹಾಪುರುಷರ ಕುಟುಂಬದ ಮೂಲ ಪುರುಷರಾದ ಬಿಷ್ಟಪ್ಪಯ್ಯ …

Read More »

ಮಹಾಶಿವರಾತ್ರಿಗೆ ಕೋಟಿಲಿಂಗೇಶ್ವರ ದೇಗುಲ ಸಜ್ಜು

ಕೆಜಿಎಫ್‌: ಮಹಾಶಿವರಾತ್ರಿ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಮ್ಮಸಂದ್ರದ ಕೋಟಿಲಿಂಗೇಶ್ವರ ದೇವಾಲಯ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಭಕ್ತರನ್ನು ತನ್ನತ್ತ ಕೈಬೀಸಿ ಕರೆಯುತ್ತಿದ್ದು, ಹಬ್ಬದ ದಿನ ಮತ್ತು ಮಾರನೆ ದಿನ ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಪ್ರತಿ ವರ್ಷದ ಜನವರಿ ಒಂದನೇ ತಾರೀಖೀ ನಂದು ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಮಹಾಶಿವರಾತ್ರಿ ಹಬ್ಬದಂದು ಆರು ದಿನ ಜಾತ್ರೆ ವೈಭವದಿಂದ ನಡೆಯಲಿದೆ. ಎರಡು ಮೂರು ತಿಂಗಳಿನಿಂದ ದೇವಾಲಯದ ಒಳ, ಹೊರಭಾಗದಲ್ಲಿರುವ ಶಿವಲಿಂಗಗಳಿಗೆ ಸುಣ್ಣಬಣ್ಣ ಬಳಿಯುವ ಕಾರ್ಯ …

Read More »

ಜನರ ಅನುಕೂಲತೆ ದೃಷ್ಟಿಯಿಂದ ರಾಜ್ಯದ ಅತೀದೊಡ್ಡ ಜಿಲ್ಲೆ ಬೆಳಗಾವಿಯ ವಿಭಜನೆ ಯಾವಾಗ?

ಬೆಳಗಾವಿ: ಜನರ ಅನುಕೂಲತೆ ದೃಷ್ಟಿಯಿಂದ ರಾಜ್ಯದ ಅತೀದೊಡ್ಡ ಜಿಲ್ಲೆ ಬೆಳಗಾವಿಯ ವಿಭಜನೆ ಯಾವಾಗ? ಇದು ಪ್ರತಿಯೊಬ್ಬರನ್ನು ಕಾಡುತ್ತಿರುವ ಬಹಳ ದೊಡ್ಡ ಯಕ್ಷ ಪ್ರಶ್ನೆ. ಕೃಷ್ಣಾ ನದಿ ತೀರದ ವಿಧಾನಸಭಾ ಕ್ಷೇತ್ರಗಳಲ್ಲಿ ಈಗಲಂತೂ ಇದು ಚುನಾವಣೆಯ ಬಹು ದೊಡ್ಡ ಅಸ್ತ್ರ. ಬೆಳಗಾವಿ ಜಿಲ್ಲೆಯ ವಿಭಜನೆ, ಚಿಕ್ಕೋಡಿ ನೂತನ ಜಿಲ್ಲಾ ರಚನೆ ಎಂಬ ಭರವಸೆ ಚಿಕ್ಕೋಡಿ ವಿಭಾಗದ ಅಥಣಿ, ಕಾಗವಾಡ, ರಾಯಬಾಗ, ಕುಡಚಿ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ಮತ್ತು ಯಮಕನಮರಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮಾನ್ಯದ …

Read More »

ಗೋಕಾಕ ಉದ್ಯಿಮಿ ಕೊಲೆ ಪ್ರಕರಣ ಭೇದಿಸಿದ ಎಲ್ಲ ಅಧಿಕಾರಿಗಳನ್ನು ಹೊಗಳಿದ ಎಸ್ಪಿ ಪಾಟೀಲ

ಗೋಕಾಕ: ಈಚೆಗೆ ಕೊಲೆಯಾದ ನಗರದ ಸಗಟು ವ್ಯಾಪಾರಿ ಶವ ಗುರುವಾರ ರಾತ್ರಿ ಪತ್ತೆಯಾಗಿದೆ. ತಾಲ್ಲೂಕಿನ ಪಂಚನಾಯಕನ ಹಟ್ಟಿ ಗ್ರಾಮದ ಹೊರವಲಯದಲ್ಲಿ, ಮಾರ್ಕಂಡೇಯ ನದಿ ಕಾಲುವೆಯಲ್ಲಿ ಶವ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. ನಗರದ ಹಿಲ್‌ ಗಾರ್ಡನ್‌ ರಸ್ತೆಯ ನಿವಾಸಿ ರಾಜು ಝಂವರ (53) ಅವರನ್ನು ಫೆ.10ರಂದು ಅಪಹರಿಸಿ ಕೊಲೆ ಮಾಡಲಾಗಿತ್ತು. ಶವವನ್ನು ಗೋಕಾಕ ಫಾಲ್ಸ್‌ ಕಾಲುವೆಯಲ್ಲಿ ಎಸೆದಿದ್ದಾಗಿ ಆರೋಪಿಗಳು ಹೇಳಿಕೆ ನೀಡಿದ್ದರು. ಪೊಲೀಸ್‌, ಅಗ್ನಿಶಾಮಕ ಸಿಬ್ಬಂದಿ ಸೇರಿ 350 ಮಂದಿಯ ತಂಡ ಶವಕ್ಕಾಗಿ …

Read More »

ಅಥಣಿ | ಟ್ರ್ಯಾಕ್ಟರ್‌ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

ಅಥಣಿ: ಪಟ್ಟಣದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಶುಕ್ರವಾರ ಪಲ್ಟಿಯಾಗಿದ್ದು, ವಾಹನದಡಿ ಸಿಲುಕಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅಗ್ರಾಣಿ ಇಂಗಳಗಾವಿಯ ಕಲ್ಪನಾ ಮಾದರ, ಬಣಜವಾಡದ ಶ್ರೀದೇವಿ ಮಾಂಗ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.   ಡಿವೈಎಸ್‌ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೊಡಿ, ಪಿಎಸ್‌ಐ ಶಿವಶಂಕರ ಮುಖರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಹಾಗೂ ಸ್ಥಳೀಯರು ಜೆಸಿಬಿ ಯಂತ್ರದ ನೆರವಿನಿಂದ ರಕ್ಷಣಾ …

Read More »

ಜಲ ಜೀವನ ಮಿಷನ್‌ ಕಾಮಗಾರಿಗೆ ₹88.05 ಕೋಟಿ ಬಿಡುಗಡೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ‘ಆರ್‌ಡಿಪಿಆರ್‌ ಇಲಾಖೆಯಿಂದ ಅರಭಾವಿ ಮತಕ್ಷೇತ್ರದ ಜಲ ಜೀವನ್ ಮಿಷನ್‌ (ಜೆಜೆಎಂ) ಕಾಮಗಾರಿಗೆ ₹88.05 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಶಾಸಕ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮುನ್ಯಾಳ ತೋಟದಲ್ಲಿ ಜಲ ಜೀವನ ಮಿಷನ್‌ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮದಲಮಟ್ಟಿ, ಶಿವಾಪೂರ, ರಂಗಾಪೂರ, ಖಾನಟ್ಟಿ, ಮುನ್ಯಾಳ, ಕಮಲದಿನ್ನಿ ತೋಟ, ಶಿವಾಪೂರ ತೋಟ, ಡೋಣಿ ತೋಟ, ಸ್ವಾಮಿ ತೋಟ ಮುನ್ಯಾಳ ಗ್ರಾಮದ ಸಾರ್ವಜನಿಕರಿಗೆ ಜೆಜೆಎಂ ಅಡಿಯಲ್ಲಿ …

Read More »