Breaking News

ವಿಧಾನಸಭೆಯಲ್ಲಿ `SC-ST’ ಮೀಸಲಾತಿ ಹೆಚ್ಚಳ ಮಸೂದೆ ಪಾಸ್

ಬೆಳಗಾವಿ : ಪರಿಶಿಷ್ಟ ಜಾತಿ (SC) ಮತ್ತು ಪಂಗಡದ (ST) ವರ್ಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಹೆಚ್ಚಿಸುವ ಮಸೂದೆಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ನೀಡಿದೆ. ಈ ಮೂಲಕ ಎಸ್ ಸಿ ಗೆ ಪ್ರಸ್ತುತ ಶೇ. 15 ರಷ್ಟು ಇದ್ದ ಮೀಸಲು 17 ಕ್ಕೆ ಹಾಗೂ ಎಸ್ ಟಿ ಗೆ ಇದ್ದ ಶೇ. 3 ರಷ್ಟು ಮೀಸಲು ಶೇ. 7 ಕ್ಕೆ ಹೆಚ್ಚಾಗಲಿದೆ.   ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ …

Read More »

ವರಿಷ್ಠರ ಸಮ್ಮತಿ ದೊರೆಯದ ಕಾರಣ ಮತ್ತೆ ಸಂಪುಟ ವಿಸ್ತರಣೆ ಠುಸ್ ಆಗಿದೆ? ಸಿ.ಎಂ ಬೊಮ್ಮಾಯಿ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ ಹೊತ್ತು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಎರಡೂವರೆ ಗಂಟೆಗಳ ಕಾಲ ಸಭೆ ನಡೆಸಿದರು. ಆದರೆ ವರಿಷ್ಠರ ಸಮ್ಮತಿ ದೊರೆಯದ ಕಾರಣ, ಸಂಪುಟ ವಿಸ್ತರಣೆ ಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.   ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್, ಕರ್ನಾಟಕ ಉಸ್ತುವಾರಿ ಅರುಣ್ …

Read More »

ಮಾಳಿ ಸಮುದಾಯದ ರಾಜ್ಯಮಟ್ಟದ ಸಮಾವೇಶಕ್ಕೆ ಚಾಲನೆ

ಮುಗಳಖೋಡ: ‘ಮಾಳಿ/ ಮಾಲಗಾರದಂತಹ ಸಣ್ಣ ವೃತ್ತಿಪರ ಸಮುದಾಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹400 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದಲ್ಲಿ ಸೋಮವಾರ ನಡೆದ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮುದಾಯದ ರಾಜ್ಯಮಟ್ಟದ ದ್ವಿತೀಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.   ‘ಕಂಬಾರ, ಕುಂಬಾರ, ಪತ್ತಾರ, ಕ್ಷೌರಿಕ, ನೇಕಾರ ಸೇರಿದಂತೆ ಹಲವು ಸಣ್ಣ ಸಮಯದಾಯಗಳು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿವೆ. ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ. ಮುಂದಿನ ದಿನಗಳಲ್ಲಿ ನಿಮ್ಮ …

Read More »

ಕೆಪಿಟಿಸಿಎಲ್‌ ಮಾದರಿ ಪಿಎಸ್‌ಐಗೆ ಏಕಿಲ್ಲ? PSI ನೇಮಕಾತಿ ‍ಪರೀಕ್ಷೆ ಪಾಸಾದವರ ಅಳಲು

ಬೆಳಗಾವಿ: ಕೆಪಿಟಿಸಿಎಲ್‌ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪಿಗಳನ್ನು ಬಿಟ್ಟು, ಉಳಿದವರಿಗೆ ನೇಮಕಾತಿ ಆದೇಶ ನೀಡಲು ರಾಜ್ಯ ಸಾರ್ಕಾರ ನಿರ್ಧರಿಸಿದೆ. ಇದೇ ರೀತಿಯ ನಿಲುವನ್ನು 545 ಪಿಎಸ್‌ಐ ನೇಮಕಾತಿ ‍ಪರೀಕ್ಷೆ ಬರೆದವರ ಬಗ್ಗೆ ಏಕೆ ತಾಳುತ್ತಿಲ್ಲ ಎಂದು ಅಭ್ಯರ್ಥಿಗಳು ಪ್ರಶ್ನೆ ಎತ್ತಿದ್ದಾರೆ.   ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ, ಒಎಂಆರ್‌ ಶೀಟ್‌ ತಿದ್ದುವ ಮೂಲಕ ಅಕ್ರಮ ಎಸಗಲಾಗಿದೆ. ಇದೇ ಮಾದರಿಯ ಅಕ್ರಮಗಳು ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿಯಲ್ಲೂ ನಡೆದಿವೆ. …

Read More »

ಮತ್ತೆ ವಿದೇಶದತ್ತ ಉಕ್ರೇನ್‌ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು

ವಿಜಯಪುರ: ಉಕ್ರೇನ್‌-ರಷ್ಯಾ ಯುದ್ಧದ ಪರಿಣಾಮ ಜೀವ ಉಳಿಸಿಕೊಂಡು ಭಾರತಕ್ಕೆ ಮರಳಿದ್ದ ನಿರಾಶ್ರಿತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸದ ಕಾರಣಕ್ಕೆ ನಿರಾಶರಾದ ವಿದ್ಯಾರ್ಥಿಗಳು ಇದೀಗ ವಿದೇಶದತ್ತ ಮುಖ ಮಾಡತೊಡಗಿದ್ದಾರೆ.   ಉಕ್ರೇನ್‌ನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮರಳಿದ್ದ ಸುಮಾರು 700 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ದೇಶದ ವಿವಿಧ ರಾಜ್ಯಗಳ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಮುಂದುವರಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ) ನಿರಾಕರಿಸಿದೆ. …

Read More »

ಪಕ್ಷ ಕಟ್ಟುವವರು ಹಾಗೂ ಸ್ಪರ್ಧಿಸುವವರು ಹುಚ್ಚರಿರಬಾರದು’ :ಪ್ರಲ್ಹಾದ ಜೋಶಿ

ಧಾರವಾಡ: ‘ಪಕ್ಷ ಕಟ್ಟುವುದಕ್ಕೆ, ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ. ಆದರೆ ಹಾಗೆ ಪಕ್ಷ ಕಟ್ಟುವವರು ಹಾಗೂ ಸ್ಪರ್ಧಿಸುವವರು ಹುಚ್ಚರಿರಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.   ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ ಹೊಸ ಪಕ್ಷ ಸ್ಥಾಪನೆಯಿಂದ ಬಿಜೆಪಿಗೇನೂ ನಷ್ಟವಿಲ್ಲ. ಬಿಜೆಪಿ ತತ್ವ ಸಿದ್ಧಾಂತಗಳ ಮೇಲೆ ಚುನಾವಣೆ ಎದುರಿಸುತ್ತದೆ’ ಎಂದರು. ನ್ಯಾಯಾಲಯದ ಆದೇಶದಂತೆ ತೆರವು ‘ಹುಬ್ಬಳ್ಳಿಯ …

Read More »

ಬೆಳಗಾವಿ, ಕಾರವಾರ, ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿ: ಠಾಕ್ರೆ

ಮುಂಬೈ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸುವಂತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಹಾರಾಷ್ಟ್ರ ವಿಧಾನಸಭೆಗೆ ತಿಳಿಸಿದ್ದಾರೆ.   ‘ಕರ್ನಾಟಕದ ಮುಖ್ಯಮಂತ್ರಿ ಆಕ್ರಮಣಕಾರಿಯಾಗಿದ್ದು, ಮಹಾರಾಷ್ಟ್ರ ಸಿಎಂ ಶಿಂದೆ ಮೌನವಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಬರುವವರೆಗೂ ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿಯನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕು. ಪ್ರಸ್ತಾವನೆಯಲ್ಲಿ ಇದನ್ನು ಸೇರಿಸಿ ಸದನ ಅಂಗೀಕರಿಸಬೇಕು’ ಎಂದು ಉದ್ಧವ್ ಹೇಳಿದ್ದಾರೆ. ಉದ್ಧವ್ …

Read More »

“ರಕ್ತ ಪರೀಕ್ಷೆ ಆಗಲಿ, ಮದ್ಯಪಾನ ಮಾಡಿರೋದು ಸಿಕ್ಕಿದ್ರೆ ರಾಜಕೀಯ ನಿವೃತ್ತಿ”

ಬೆಳಗಾವಿ : ಸಿ.ಟಿ ರವಿ ಮೂರು ಸಾವಿರ ಕೋಟಿ ಆಸ್ತಿ ಬಗ್ಗೆ ಕಾಂಗ್ರೆಸ್ ಆರೋಪದಿಂದ ತಲೆ ಕೆಟ್ಟು ಕಳ್ಳಬಟ್ಟಿ ಕುಡಿದು ಮಾತಾನ್ನಾಡುತ್ತಾರೆ ಎಂಬ ಬಿಕೆ ಹರಿಪ್ರಸಾದ್ ಆರೋಪಕ್ಕೆ ಶಾಸಕ ಸಿಟಿ ರವಿ ತಿರುಗೇಟು ನೀಡಿದ್ದಾರೆ. ನನ್ನ ಬ್ಲಡ್ ನಲ್ಲಿ ಗಾಂಜಾ, ಮದ್ಯಪಾನ ಮಾಡಿರೋದು ಏನಾದ್ರೂ ಸಿಕ್ಕಿದ್ರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಅವರ ರಕ್ತದಲ್ಲಿ ಏನಾದ್ರು ಸಿಕ್ಕರೆ ಏನು? ಎಂಬ ಪ್ರಶ್ನೆಯನ್ನು ಮುಂದಿಟ್ಟರು. ಅಧಿವೇಶನಕ್ಕೂ ಮುನ್ನ ಮಾತಾನಾಡಿದ ಶಾಸಕ ಸಿ ಟಿ ರವಿ, …

Read More »

ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ, ಹೊಸ ವರ್ಷದ ಆಚರಣೆಗೆ ಹಲವು ರೂಲ್ಸ್‌ ಜಾರಿ,

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್‌ ಲೈನ್ಸ್‌ ರಿಲೀಸ್‌ ಮಾಡಿದೆ. ಇಂದು ಕೋವಿಡ್‌ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ನಗರದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್‌ ಗಳಲ್ಲೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್‌ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್‌ ಸಭೆ ಬಳಿಕ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ …

Read More »

ಅನಾರೋಗ್ಯದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಗೆ ದಾಖಲ

ನವದೆಹಲಿ: ಅನಾರೋಗ್ಯದಿಂದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ( Union Finance Minister Nirmala Sitharaman ) ಅವರನ್ನು ಸೋಮವಾರ ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.   63 ವರ್ಷದ ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯದ ಬಗ್ಗೆ ಮತ್ತಷ್ಟು ಮಾಹಿತಿ …

Read More »