ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ …
Read More »ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ : ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು : ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಕೆಲಸವಿಲ್ಲದಿದ್ದರೂ ಕೆಲಸ ಹುಡುಕಿಕೊಂಡು ಪತ್ನಿ, ಮಗುವನ್ನು ಸಾಗಬೇಕು. ದುಡಿಯಲು ಸಮರ್ಥನಾದ ಗಂಡ ಪತ್ನಿ, ಮಗುವಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ದುಡಿಯಲು ಸಮರ್ಥನಿರುವ ಪತಿ ಜೀವನಾಂಶ ನೀಡಬೇಕು. …
Read More »ಯಾವ ಪೊದೆ, ಮರ ನೋಡಿದರೂ ಜೋಡಿಗಳು.
ಪ್ರಸ್ತುತ ಸಾಮಾಜಿಕ ಜಾಲತಾಣದ ವ್ಯಾಪ್ತಿ ಹೆಚ್ಚಾಗಿದ್ದು, ವೀಡಿಯೋಗಳನ್ನು ಹಂಚಿಕೊಳ್ಳುವವರ ಸಂಖ್ಯೆಯೂ ಜಾಸ್ತಿಯಾಗಿದೆ. ಕೆಲವೊಂದು ವೀಡಿಯೋ ಧನಾತ್ಮಕವಾಗಿದ್ದರೆ, ಇನ್ನೂ ಕೆಲವೊಂದು ಋಣಾತ್ಮಕವಾಗಿರುತ್ತೆ. ಆದರೆ ಕೆಲವೊಂದು ವೀಡಿಯೋಗಳು ಯಾರೂ ಊಹಿಸದ, ನೋಡದ ರೀತಿಯಲ್ಲಿರುತ್ತದೆ. ಹಾಗೆಯೇ ಇಲ್ಲೊಂದು ವೀಡಿಯೋ ನೆಟ್ಟಿಗರನ್ನು ನಿಬ್ಬರಗಾಗಿಸುವಂತೆ ಮಾಡಿದೆ. ಹೌದು.. ಈ ವೈರಲ್ ವಿಡಿಯೋದಲ್ಲಿ, ಕೆಲವು ಜನರು ಈ ಸ್ಥಳಕ್ಕೆ ಭೇಟಿ ನೀಡಲು ಹೋಗಿದ್ದಾರೆ, ಆದರೆ ಅಲ್ಲಿಗೆ ತಲುಪಿದ ನಂತರ ಅವರಿಗೆ ಶಾಕ್ ಕಾದಿತ್ತು. ವಾಸ್ತವವಾಗಿ, ಪ್ರತಿ ಮರದ ಹಿಂದೆ …
Read More »ಮಾಜಿ ಮುಖ್ಯೋಪಾಧ್ಯಾಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾಟ ತಾಳಲಾರದೇ ಪ್ರಾಣ ಬಿಟ್ಟ ಹೆಡ್ಮಾಸ್ಟರ್.
ಸಿಂದಗಿ: ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ರವಿವಾರ ರಾತ್ರಿ ಮುಖ್ಯೋಪಾಧ್ಯಾಯರೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಸಿಂದಗಿ ತಾಲೂಕಿನ ಸಾಸಾಬಾಳ ಗ್ರಾಮದ ಸರ್ಕಾರಿ ಎಚ್ಪಿಎಸ್ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ ಮಲ್ಲಪ್ಪ ನಾಯಕಲ್(54) ನೇಣಿಗೆ ಕೊರಳೊಡ್ಡಿದ ದುರ್ದೈವಿ. ತನ್ನ ಸಾವಿನ ಬಗ್ಗೆ ಬರೆದಿರುವ ಎರಡು ಪುಟಗಳ ಡೆತ್ ನೋಟ್ನಲ್ಲಿ ಸಿಆರ್ಸಿಯಾಗಿ ಬಡ್ತಿಯಾಗಿರುವ ಶಾಲೆಯ ಹಳೆ ಮುಖ್ಯೋಪಾಧ್ಯಾಯ ಜಿ.ಎನ್.ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಹರನಾಳ, ಸಾಸಾಬಾಳ ಗ್ರಾಮದ ಸಂಗಮೇಶ ಚಿಂಚೊಳ್ಳಿ, ಎಸ್.ಎಲ್.ಬಜಂತ್ರಿ, ಬಿ.ಎಂ.ತಳವಾರ ಅವರ …
Read More »ಮಹದಾಯಿ ವಿವಾದ: ಸುಪ್ರೀಂಕೋರ್ಟ್ನಲ್ಲಿ ಗೋವಾಗೆ ಹಿನ್ನಡೆ; ಆಗಿದ್ದೇನು?
ನವದೆಹಲಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ-ಗೋವಾ ನಡುವಿನ ಸಂಘರ್ಷದಲ್ಲಿ ಸದ್ಯ ಗೋವಾ ಸರ್ಕಾರಕ್ಕೆ ಸುಪ್ರೀಂಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಅರ್ಥಾತ್ ಮಹದಾಯಿ ಸಂಬಂಧ ಗೋವಾ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಸಂಜೀವ್ ಖನ್ನ ನೇತೃತ್ವದ ದ್ವಿಸದಸ್ಯ ಪೀಠ ಗೋವಾ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಮಹದಾಯಿ ಕಾಮಗಾರಿ ಸಂಬಂಧ ಕರ್ನಾಟಕದ ವಿರುದ್ಧ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೇಂದ್ರ ಜಲ ಆಯೋಗ ಮಹದಾಯಿ …
Read More »ಆನ್ಲೈನ್ ವಂಚಕರದ್ದು ಈಗ ಬೆಸ್ಕಾಂ ಬಿಲ್ ಹೆಸರಲ್ಲೂ ಮೋಸ; ವಂಚನೆ ಹೇಗೆ?
ಬೆಂಗಳೂರು: ವಿದ್ಯುತ್ ಬಿಲ್ ವಸೂಲಿ ನೆಪದಲ್ಲಿ ಬೆಸ್ಕಾಂ ಅಧಿಕಾರಿಗಳ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ವಂಚನೆ ಮಾಡುವ ಸೈಬರ್ ಕಳ್ಳರ ಹಾವಳಿ ತಪ್ಪಿಲ್ಲ. ವೃದ್ಧರೊಬ್ಬರಿಗೆ ಕರೆ ಮಾಡಿ ಬ್ಯಾಂಕ್ ಖಾತೆಗೆ 1.98 ಲಕ್ಷ ರೂ. ಕನ್ನ ಹಾಕಿರುವ ಸಂಬಂಧ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರಸ್ವತಿನಗರ ನಿವಾಸಿ ಎ.ಆರ್.ಕೃಷ್ಣಮೂರ್ತಿ ಎಂಬುವರು ವಂಚನೆಗೆ ಒಳಗಾದವರು. ಇವರು ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಫೆ.2ರಂದು …
Read More »ರಿಷಭ್ ಶೆಟ್ಟಿ, ಭೇಟಿ ಮಾಡಿದ ಪ್ರಧಾನಿ ಮೋದಿ!
ಬೆಂಗಳೂರು: ‘ಏರೋ ಇಂಡಿಯಾ-2023’ರ ಉದ್ಘಾಟನೆ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತಲುಪಿದ ಅವರನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು. ಇದಾದ ಮೇಲೆ ನಿನ್ನೆ ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಈ ಸಂದರ್ಭ ಕನ್ನಡ ಸ್ಟಾರ್ಗಳನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದರು. ಈ ಔತಣ ಕೂಟದಲ್ಲಿ ನಟರಾದ ಯಶ್, ರಿಷಭ್ ಶೆಟ್ಟಿ, ನಿರ್ಮಾಪಕ …
Read More »‘ಏರೋ ಇಂಡಿಯಾ’ ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ
ಬೆಂಗಳೂರು: ಈ ಬಾರಿಯ ಏರೋ ಇಂಡಿಯಾ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು ಕುತೂಹಲ ಭರಿತರಾಗಿ ನೋಡುತ್ತಿದ್ದಾರೆ. ಇನ್ನೇನು ಚುನಾವಣೆಯೂ ಹತ್ತಿರದಲ್ಲಿದ್ದು ಪ್ರಧಾನಿ ಮೋದಿ ಎರಡನೇ ಬಾರಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಏರೋ ಇಂಡಿಯಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದಾರೆ. ನಿಗದಿಗಿಂತ ಮೊದಲೇ ರಾಜಭವನದಿಂದ ಹೊರಟ ಪ್ರಧಾನಿ ಮೋದಿ (ಬೆಳಗ್ಗೆ 8.35ರ ಹೊತ್ತಿಗೆ) ರಸ್ತೆ ಮಾರ್ಗವಾಗಿ ಮೇಖ್ರೀ ರಸ್ತೆಯಲ್ಲಿರುವ HQTC ಹೆಲಿಪ್ಯಾಡ್ಗೆ ಆಗಮಿಸಿದರು. ಅಲ್ಲಿಂದ ಯಲಹಂಕ ವಾಯುನೆಲೆಗೆ ವಾಯು ಮಾರ್ಗವಾಗಿ Mi17 …
Read More »ಕ್ರೂಜರ್, ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ
ರಾಮದುರ್ಗ: ತಾಲೂಕಿನ ಕಡ್ಲಿಕೊಪ್ಪ ಗ್ರಾಮದ ಬಳಿ ಕ್ರೂಜರ್ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಭಾಗ್ಯ ನಗರದ ಮಾಲಿಂಗ ನಂದಪ್ಪ ಆಚಮಟ್ಟಿ (25) ಹಾಗೂ ಬಸವನ ಬಾಗೇವಾಡಿಯ ರಫಿಕ್ ಚಲವಾದಿ (20) ಮೃತ ಪಟ್ಟವರು. ಗಂಭೀರ ಗಾಯಗೊಂಡಿರುವ ಆಶ್ರಯ ಪ್ಲಾಟ್ ನಿವಾಸಿ ಯುನೂಸ್ ಮಹ್ಮದ್ ಪಟೇಲ್ (25) ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ಸಾಗಿಸಿದ್ದು, ಭಾಗ್ಯ …
Read More »ಸುನಿಲ್ ಕುಮಾರ್ ವಿರುದ್ಧ ಸ್ಪರ್ಧೆಗೆ ಬಿಜೆಪಿ ಸಚಿವರಿಂದಲೇ ಸಹಕಾರ: ಪ್ರಮೋದ್ ಮುತಾಲಿಕ್
ಮಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ, ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ. ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು …
Read More »
Laxmi News 24×7