Breaking News

ಜಿಲ್ಲಾ ಉಸ್ತುವಾರಿಗೆ ಸಚಿವರ ಪೈಪೋಟಿ ಆರಂಭ: ಇಲ್ಲಿದೆ ಸಂಭಾವ್ಯ ಪಟ್ಟಿ!!

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಯಿತು. ಸಂಪುಟ ರಚನೆ, ಖಾತೆ ಹಂಚಿಕೆಯೂ ಆಯಿತು. ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಿನ್ನೆಯಷ್ಟೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದೀಗ ಜಿಲ್ಲಾ ಉಸ್ತುವಾರಿಗೆ ಪೈಪೋಟಿ ಆರಂಭವಾಗಿದೆ. ಮೈಸೂರು, ತುಮಕೂರು ಮತ್ತು ಧಾರವಾಡ ಜಿಲ್ಲೆಗಳ ಉಸ್ತುವಾರಿಗಾಗಿ ಸಚಿವರುಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಇನ್ನು ಸಚಿವರುಗಳಿಲ್ಲದ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ಹಾಸನ, ದಕ್ಷಿಣ ಕನ್ನಡಕ್ಕೆ ಯಾರು ಉಸ್ತುವಾರಿಗಳಾಗಲಿದ್ದಾರೆ ಎಂಬ ಕುತೂಹಲದ ಜೊತೆಗೆ …

Read More »

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಗೋರೆಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯರಗುಂಟಿ ಗ್ರಾಮ ಬರುತ್ತದೆ. ಇತ್ತೀಚೆಗೆ ಕಲುಷಿತ ನೀರಿನಿಂದ ಗೋರೆಬಾಳ ಗ್ರಾಮದಲ್ಲಿ ಹಲವು ಜನರು ವಾಂತಿ – ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಗ್ರಾಮದಲ್ಲಿ ಆರೋಗ್ಯ ಅಧಿಕಾರಿಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗೋರೆಬಾಳ ಗ್ರಾಮದಲ್ಲಿ ವಾಂತಿ – ಭೇದಿ ಪ್ರಕರಣ ನಿಯಂತ್ರಣಕ್ಕೆ ಬರುವ ಮುನ್ನವೇ ಪಕ್ಕದ …

Read More »

ಗ್ಯಾರಂಟಿಗಳಲ್ಲಿ ಗೊಂದಲಗಳಿವೆ, ಕಾಂಗ್ರೆಸ್​ನವರು​ ಜನರಿಗೆ ಮೋಸ ಮಾಡಿದ್ದಾರೆ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: ಒಡಿಶಾದ ರೈಲು ದುರಂತ ಎಲ್ಲರಿಗೂ ನೋವು, ದುಃಖವನ್ನು ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ರೈಲು ಅಪಘಾತ ನಡೆಯದಂತೆ ನೋಡಿಕೊಳ್ಳಲಾಗಿತ್ತು. ಆದರೆ ಈಗ ಬಹುದೊಡ್ಡ ದುರಂತ ಸಂಭವಿಸಿ, 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್​ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪರಿಹಾರ ಕಾರ್ಯಗಳು ಭರದಿಂದ ನಡೆಯುತ್ತಿವೆ ಎಂದು ತಿಳಿಸಿದರು. ಘಟನೆಯ …

Read More »

ದೇಶ ಸೇವೆಗೆ ಸನ್ನದ್ಧರಾದ ಅಗ್ನಿವೀರರು: ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ತು ಏರ್ ಮಾರ್ಷಲ್ ಕಡೆಯಿಂದ ಬಹುಮಾನ

ಬೆಳಗಾವಿ: ಬೆಳಗಾವಿ ಏರ್​ಮನ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ಅಗ್ನಿವೀರರನ್ನು ಅದ್ಧೂರಿಯಾಗಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್​ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ‌ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. ಅಗ್ನಿ …

Read More »

ಕೌಟುಂಬಿಕ ಕಲಹ: ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

ಬೆಳಗಾವಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ. ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬಸವ್ವ ಹಣಮಂತ ಹಿಡಕಲ್(30) ಕೊಲೆಯಾದ ದುರ್ದೈವಿ. ಹಣಮಂತ ಸಿದ್ದಪ್ಪ ಹಿಡಕಲ್( 35) ಕೊಲೆ ಆರೋಪಿ. ಪ್ರಕರಣದ ವಿವರ: ಪತಿ ಹಣಮಂತ ಯಾವುದೇ ಕೆಲಸ ಮಾಡದೇ ಓಡಾಡಿಕೊಂಡಿದ್ದನಂತೆ. ಪತ್ನಿ ಬಸವ್ವ ಕೂಲಿ ಕೆಲಸ ಮಾಡಿ ಸಂಸಾರದ ಬಂಡಿ ಸಾಗಿಸುತ್ತಿದ್ದರು. ಪತಿ ಹಣಮಂತನಿಗೆ ನೀನು ಕೆಲಸ ಮಾಡುತ್ತಿಲ್ಲ …

Read More »

ಬೆಳಗಾವಿಯಲ್ಲಿ ವಾರ್ಡ್ ಸಮಿತಿ ರಚನೆ ವಿಳಂಬ: ನಾಗರಿಕರ ಅಸಮಾಧಾನ

ಬೆಳಗಾವಿ: ಮಹಾನಗರ ಪಾಲಿಕೆಯ ಪ್ರತಿಯೊಂದು ವಾರ್ಡ್‌ಗಳಲ್ಲಿ ರಚನಾತ್ಮಕವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಕ್ಕಾಗಿ ‘ನಾಗರಿಕ ವಾರ್ಡ್ ಸಮಿತಿ’ ರಚಿಸಬೇಕೆಂಬ ಕಾನೂನಿದೆ. ಆದರೆ, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಾಲಿಕೆ ಸದಸ್ಯರು ಆಯ್ಕೆಯಾಗಿ 2 ವರ್ಷ ಕಳೆಯುತ್ತಾ ಬಂದರೂ ವಾರ್ಡ್ ಸಮಿತಿ ರಚನೆ ಆಗದೇ ಇರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಆಡಳಿತದಲ್ಲಿ ನಾಗರಿಕರ ಸಹಭಾಗಿತ್ವದೊಂದಿಗೆ ವಾರ್ಡ್‌ಗಳಲ್ಲಿ ಪರಿಣಾಮಕಾರಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ‘ನಾಗರಿಕ ವಾರ್ಡ್ ಸಮಿತಿ’ ರಚಿಸಬೇಕು ಎಂಬ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ಸ್ ಕಾಯ್ದೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಿಕ್ಕಬೂದನೂರ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಬದುಕು ಕೊಟ್ಟ ಕಾಲೇಜಿಗೆ ಬಂದು ಕಸ ಗುಡಿಸಿ, ಬೆಲ್​ ಬಾರಿಸಿದ ಶಾಸಕ ದೇವೇಂದ್ರಪ್ಪ- ವಿಡಿಯೋ

ದಾವಣಗೆರೆ: ಜಗಳೂರು ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಅವರು ಜವಾನ ವೃತ್ತಿಯಿಂದ ಜೀವನ ಆರಂಭಿಸಿದವರು. ಇದೀಗ ಶಾಸಕ ವೃತ್ತಿ ಅಲಂಕರಿಸದ ಬಳಿಕ ತಾವು ಕೆಲಸ ಮಾಡ್ತಿದ್ದ ಕಾಲೇಜಿಗೆ ಆಗಮಿಸಿ, ಕೆಲಕಾಲ ಜವಾನ ವೃತ್ತಿಯನ್ನೇ ನಿಭಾಯಿಸಿ ಖುಷಿ ಪಟ್ಟರು. ಇಲ್ಲಿಯ ಅಮರ ಭಾರತಿ ವಿದ್ಯಾಕೇಂದ್ರದಲ್ಲಿ ದೇವೇಂದ್ರಪ್ಪ ಬದುಕು ಕಟ್ಟಿಕೊಂಡವರು. 30 ವರ್ಷಗಳ ಕಾಲ ಸಂಸ್ಥೆಯಲ್ಲಿ ಜವಾನನಾಗಿ ಕೆಲಸ ಮಾಡಿರುವ ಇವರು ಇಡೀ ಜಗಳೂರು ತಾಲೂಕಿಗೆ ಚಿರಪರಿಚಿತರು. ಜವಾನ ಕೆಲಸದಿಂದ …

Read More »

ಪಕ್ಷದ್ರೋಹ ಮಾಡಿದವರನ್ನು ಕ್ಷಮಿಸುವುದಿಲ್ಲ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ನಲ್ಲಿದ್ದು ಪಕ್ಷದ್ರೋಹ ಮಾಡಿದವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ತಾಲೂಕು ಕಚೇರಿಯಲ್ಲಿ ನೂತನ ಶಾಸಕರ ಕಚೇರಿ ಪೂಜೆ ಹಮ್ಮಿಕೊಂಡಿದ್ದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಇದ್ದುಕೊಂಡು ಪಕ್ಷದ್ರೋಹ ಮಾಡಿದವರನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ ಎಂದರು. ಈ ಹಿಂದೆ ಇದ್ದ ಶಾಸಕರು ಯಾವುದೇ ಫೈಲ್​ ಬಂದ್ರೂ ಸಹ ಜಿಲ್ಲಾಧಿಕಾರಿಗಳ ಬಳಿ ತಡೆ ಹಿಡಿಯುತ್ತಿದ್ದರು. ಆದರೆ ನನಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟು …

Read More »

ಕಟೀಲ್​ಗೂ ಫ್ರೀ, ಬೊಮ್ಮಾಯಿಗೂ ಫ್ರೀ, ಶೋಭಾ ಕರಂದ್ಲಾಜೆಗೂ ಫ್ರೀ: ಬಿಜೆಪಿ ನಾಯಕರ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ಪಂಚ ಗ್ಯಾರಂಟಿಗಳು ಜಾರಿ ಗೊಳಿಸಿರುವ ಹಿನ್ನೆಲೆ ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿ ನಾಯಕರ ಕಾಲೆಳೆದಿದೆ. ಟ್ವೀಟ್ ಮೂಲಕ ನಳಿನ್ ಕುಮಾರ್ ಕಟೀಲ್​ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ. ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆ ಅವರೇ ನಿಮಗೂ ಪ್ರಯಾಣ ಫ್ರೀ ಎಂದು ವ್ಯಂಗ್ಯವಾಡಿದೆ. ಸಿ.ಟಿ.ರವಿ ಅವರೇ, ನಿಮ್ಮ ಮನೆಯವರಿಗೂ 2000 ಫ್ರೀ. ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ). ಇದು …

Read More »