ಬೆಂಗಳೂರು: “ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ತಿಳಿದುಕೊಂಡು ಸಿಎಂ ಮುಂದೆ ಆ ಥರ ಹೇಳಿಕೆ ಕೊಡಲಿ” ಎಂದು ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಹಲವು ಬಾರಿ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಅವರ ಸ್ಥಾನಕ್ಕೆ ಶೋಭೆ ತರದ ಹಾಗೆ ವೈಯಕ್ತಿಕ ಟೀಕೆ ಮಾಡ್ತಾರೆ. ಹಿಂದೆ ಚುನಾವಣೆ ವೇಳೆಯೂ ಟೀಕಿಸಿದ್ರು. ಅವರು ಹಿರಿಯರು, ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ …
Read More »ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲಿಗೆ ಬೀಗಮುದ್ರೆ ಈ ವರ್ಷ 25 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ
ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಗರ್ಭಗುಡಿಯ ಬಾಗಿಲಿಗೆ ಬೀಗಮುದ್ರೆ ಹಾಕಲಾಯಿತು. ಈ ಕ್ಷಣಕ್ಕೆ ಸಾಕ್ಷಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಶಾಸಕರುಗಳಾದ ಕೆ.ಎಂ. ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸ್ವರೂಪ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಮಾಜಿ …
Read More »ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ:ಶ್ರೀರಾಮುಲು
ಹುಬ್ಬಳ್ಳಿ : ಪ್ರಿಯಾಂಕ್ ಖರ್ಗೆ ಅವರು ಇವತ್ತು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರ ವಿರುದ್ದ ಯಾರೇ ಮಾತನಾಡಿದ್ರೂ ಅವರನ್ನು ಜೈಲಿಗೆ ಹಾಕಿಸುತ್ತಾರೆ. ಅವರಿಗೆ ತೊಂದರೆ ಮಾಡುತ್ತಿದ್ದಾರೆ. ಆರ್ಎಸ್ಎಸ್ ಬೆಂಬಲಿಸುವವರ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆ. ಮುಂದಕ್ಕೆ ಈ ರಾಜ್ಯದ ಉಪಮುಖ್ಯಮಂತ್ರಿಗಳಾಗಬೇಕು ಎಂಬ ಕನಸಿಟ್ಟುಕೊಂಡು ಈ ರೀತಿಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ …
Read More »ಧಾರವಾಡದ ನವಲಗುಂದದಲ್ಲಿ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಪ್ರಕರಣ.. ಹಲ್ಲೆ ನಡೆಸಿದ ಆರೋಪಿ ಬಂಧನ.
ಧಾರವಾಡದ ನವಲಗುಂದದಲ್ಲಿ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಪ್ರಕರಣ.. ಹಲ್ಲೆ ನಡೆಸಿದ ಆರೋಪಿ ಬಂಧನ. ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಿ ಪೊಲೀಸರು ಆತನನ್ನು ಜೈಲಿಗೆ ಅಟ್ಟುವಲ್ಲಿ ನವಲಗುಂದ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಆರ್ಎಸ್ಎಸ್ ಪಥಸಂಚಲನ ನಡೆದಿದ್ದ ವೇಳೆ ಅಣ್ಣಿಗೇರಿ ಪಿಎಸ್ಐ ಉಮಾದೇವಿಯ ಜೀಪಿಗೆ ಬೈಕ್ ಮೇಲೆ ಬಂದ ದ್ಯಾಮನಗೌಡ ಎಂಬುವವನು ಡಿಕ್ಕಿ ಹೊಡೆದಿದ್ದ. ದ್ಯಾಮನಗೌಡ ಕುಲಕರ್ಣಿ ಎಂಬಾತನೇ …
Read More »ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ; ಪಕ್ಷದ ತೀರ್ಮಾನವೇ ಅಂತಿಮ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ನಾವು 2028ಕ್ಕೆ ಸಿಎಂ ಕ್ಲೈಮ್ ಮಾಡುತ್ತೇವೆ ಅಂತಾ ಈ ಮುಂಚೆಯೇ ಹೇಳಿದ್ದೇವೆ. ಅದನ್ನು ಪಕ್ಷ ತೀರ್ಮಾನ ಮಾಡಬೇಕು. ಇನ್ನು ಯತೀಂದ್ರ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ಕಾಕತಿ ಉತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅಂತಿಮವಾಗಿ …
Read More »ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ
ವೀರನಾರಿಯ ಧೈರ್ಯ, ತ್ಯಾಗ ಮತ್ತು ನಾಡಪ್ರೀತಿಯ ಸಂಕೇತವಾದ ರಾಣಿ ಕಿತ್ತೂರ ಚನ್ನಮ್ಮನ ಸ್ಮರಣಾರ್ಥವಾಗಿ, ಅವರ ಹುಟ್ಟೂರಾದ ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಕಾಕತಿಯು ರಾಣಿ ಚೆನ್ನಮ್ಮನ ಇತಿಹಾಸದ ಪಾವನ ನೆಲವಾಗಿರುವ ಹಿನ್ನಲೆಯಲ್ಲಿ, ಪ್ರತಿವರ್ಷದಂತೆ ಕಿತ್ತೂರು ಉತ್ಸವದ ಸಾಂಕೇತಿಕ ಆರಂಭ ಇಲ್ಲಿ ನಡೆಯುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಈ ಬಾರಿ ಉತ್ಸವವನ್ನು ರಾಣಿ ಚನ್ನಮ್ಮಳ ಶೌರ್ಯ, …
Read More »ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು
ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು — ಸ್ವಾಭಿಮಾನಿ ರೈತ ಪ್ಯಾನೆಲ್ ಮತಯಾಚನೆಗೆ ವೇಗ ಅಥಣಿ: ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯು ಅಕ್ಟೋಬರ್ 26, 2025ರಂದು ನಡೆಯಲಿದ್ದು, ಚುನಾವಣೆಯನ್ನು ಮುನ್ನೆಚ್ಚರಿಕೆಯಿಂದ ಸ್ವಾಭಿಮಾನಿ ರೈತ ಪ್ಯಾನೆಲ್ ಸಜ್ಜಾಗಿದೆ. ಪ್ಯಾನೆಲ್ನ ನಾಯಕರು ಹಾಗೂ ಬೆಂಬಲಿಗರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತಿದ್ದು, “ರೈತರ ಹಿತದೃಷ್ಟಿಯಿಂದ ನಿಷ್ಠಾವಂತ ಆಡಳಿತಕ್ಕಾಗಿ ಸ್ವಾಭಿಮಾನಿ ರೈತ ಪ್ಯಾನೆಲ್ಗೆ ಮತ ನೀಡಿ ಆಶೀರ್ವಾದ …
Read More »ಸಿದ್ದರಾಮಯ್ಯರ ಸ್ಥಾನ ತುಂಬುವ ಶಕ್ತಿ ಸತೀಶ್ ಜಾರಕಿಹೊಳಿ ಅವರಿಗಿದೆ ;ಡಾ.ಯತೀಂದ್ರ ಸಿದ್ದರಾಮಯ್ಯ
ಚಿಕ್ಕೋಡಿ(ಬೆಳಗಾವಿ): “ನಮ್ಮ ತಂದೆ ರಾಜಕೀಯದ ಕೊನೆಯ ಘಟ್ಟದಲ್ಲಿದ್ದಾರೆ” ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. “ನಮ್ಮ ತಂದೆಯವರು ರಾಜಕೀಯದ ಕೊನೆಯ ಘಟ್ಟದಲ್ಲಿದ್ದಾರೆ. ಈ ಸಮಯದಲ್ಲಿ ವೈಚಾರಿಕವಾಗಿ, ಪ್ರಗತಿಪರವಾದ ಸಿದ್ಧಾಂತ ಇಟ್ಟುಕೊಂಡಿರುವ ಅವರಿಗೆ ಮಾರ್ಗದರ್ಶನ ನೀಡಲು ನಾಯಕರು ಬೇಕು. ಆ ಜವಾಬ್ದಾರಿಯನ್ನು ಸಚಿವ ಸತೀಶ್ ಜಾರಕಿಹೊಳಿ ವಹಿಸಿಕೊಳ್ಳುತ್ತಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳ ಮೇಲೆ ನಂಬಿಕೆ …
Read More »ಕರಾವಳಿಯಲ್ಲಿ ಜನಪದ ದೀಪಾವಳಿ: ನರಕಾಸುರ ವಧೆ ನೆನಪಿಸುವ ಮುಳ್ಳಮುಟ್ಟೆ ಆಚರಣೆ
ಕಾಪು: ತುಳುನಾಡು ಹಲವಾರು ಆಚರಣೆ, ಸಂಸ್ಕೃತಿ ಮತ್ತು ಸಂಸ್ಕಾರಗಳ ತವರೂರು. ಇಲ್ಲಿ ನಡೆಯುವ ಪ್ರತಿಯೊಂದು ಹಬ್ಬ, ಆಚರಣೆಗಳಿಗೂ ಅದರದ್ದೇ ಆದ ಮಹತ್ವವಿದೆ. ತುಳುವರ ಹಲವಾರು ಜಾನಪದ ಆಚರಣೆಗಳಲ್ಲಿ ದೀಪಾವಳಿ ಪ್ರಯುಕ್ತ ನರಕ ಚತುರ್ದಶಿಯಂದು ನಡೆಸುವ ಮುಳ್ಳಮುಟ್ಟೆ ಆಚರಣೆಯೂ ಒಂದು. ಕಾಪು ತಾಲೂಕಿನ ವಿವಿಧೆಡೆ ದೀಪಾವಳಿ ಪ್ರಯುಕ್ತ ಮುಂಜಾನೆ ಮುಳ್ಳಮುಟ್ಟೆ ಸಂಭ್ರಮಾಚರಣೆ ನಡೆಯುತ್ತದೆ. ವಿಶೇಷವಾಗಿ ಕೊಪ್ಪಲಂಗಡಿ, ಮಲ್ಲಾರು, ಮಜೂರು, ಉಳಿಯಾರು, ಕರಂದಾಡಿ, ಇನ್ನಂಜೆ, ಕಲ್ಯಾಲು, ಪಾಂಗಾಳ, ಕಟಪಾಡಿ, ಮಣಿಪುರ, ಪಡುಬೆಳ್ಳೆ, ಬೆಳಪು ಪರಿಸರದಲ್ಲಿ …
Read More »ಸಂಗೊಳ್ಳಿ ರಾಯಣ್ಣನ ಗಲ್ಲಿಗೇರಿಸಿದ ಮರ ಇದೇ ನೋಡಿ
ಬೆಳಗಾವಿ: ಬ್ರಿಟಿಷರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನನ್ನು ಮೋಸದಿಂದ ಹಿಡಿದು ಗಲ್ಲಿಗೇರಿಸಲಾಗಿತ್ತು. ಅವರ ಜೊತೆಗೆ ಇನ್ನೂ ಆರು ಜನರು ಗಲ್ಲು ಶಿಕ್ಷೆಗೆ ಗುರಿಯಾಗಿದ್ದರು. ಮತ್ತೆ ಆರು ಮಂದಿ ಜೀವಾವಧಿ(ಕರಿನೀರಿನ) ಶಿಕ್ಷೆಗೆ ಒಳಗಾಗಿದ್ದರು. ಕಿತ್ತೂರು ನಾಡಿನ ಈ ಹುತಾತ್ಮ ವೀರರು ಬೆಳಕಿಗೆ ಬಾರದೇ ಇರುವುದು ಇತಿಹಾಸಪ್ರಿಯರ ನೋವಿಗೆ ಕಾರಣವಾಗಿದೆ. ಕಿತ್ತೂರು ಪುಟ್ಟ ಸಂಸ್ಥಾನ ಆದರೂ ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಸೊಕ್ಕಿನಿಂದ ಮೆರೆಯುತ್ತಿದ್ದ ಆಂಗ್ಲರಿಗೆ ಮೊಟ್ಟ ಮೊದಲ ಬಾರಿ ಸೋಲಿನ …
Read More »
Laxmi News 24×7