ಬೆಂಗಳೂರು: ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ನಾಡಿನ ರೈತರು, ರೈತರ ಹಿತರಕ್ಷಣೆಗಾಗಿ ಕಟ್ಟಿರುವ ಕೆಎಂಎಫ್ ನ ಕಬಳಿಕೆಯ ವಿರುದ್ಧ ಕನ್ನಡಿಗರೆಲ್ಲರೂ ಒಮ್ಮತದಿಂದ ವಿರೋಧಿಸಬೇಕಾಗುತ್ತದೆ. …
Read More »ರೀಲ್ಸ್ ಮಾಡೋಣ ಎಂದು ಯುವಕನ ಕಣ್ಣಿಗೆ ಬಟ್ಟೆ ಸರ್ಪ್ರೈಸ್ ಎನ್ನುತ್ತಲೇ ಕತ್ತು ಕೊಯ್ದಳು!
ರಾಣೆಬೆನ್ನೂರು: ನಿನಗೊಂದು ಸರ್ಪ್ರೈಸ್ ಇದೆ. ಕೈ ಕಟ್ಟಿ ಕಣ್ಣು ಮುಚ್ಚಿಕೊ ಎಂದು ಅಪ್ರಾಪ್ತ ವಯಸ್ಸಿನ ಹುಡುಗಿ ತನ್ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನನ್ನು ಸಿನಿಮಯ ರೀತಿಯಲ್ಲಿ ಕುತ್ತಿಗೆ ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ನಗರದ ಹೊರವಲಯದ ಸ್ವರ್ಣ ಪಾರ್ಕ್ನಲ್ಲಿ ಶುಕ್ರವಾರ ನಡೆದಿದೆ. ಹರಪನಹಳ್ಳಿ ತಾಲೂಕಿನ ಮೈದೂರ ಗ್ರಾಮದ ದೇವೇಂದ್ರಗೌಡ ಕಾಡನಗೌಡ ಮಂಡಗತ್ತಿ (27) ಹಲ್ಲೆಗೊಳಗಾದ ಯುವಕ. ಈತನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತಾಲೂಕಿನ ಗುಡಿಹೊನ್ನತ್ತಿ ಗ್ರಾಮದ ಅಪ್ರಾಪ್ತ ವಯಸ್ಸಿನ ಹುಡುಗಿ ಕೊಲೆಗೆ ಯತ್ನಿಸಿದ …
Read More »ಸುದೀಪ್ ಬೆನ್ನಲ್ಲೇ ಚುನಾವಣಾ ಪ್ರಚಾರಕ್ಕೆ ನಟ ಯಶ್ ಎಂಟ್ರಿ :ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜಕೀಯ ಮುಖಂಡರು ಸಂಪರ್ಕ ಮಾಡಿದ್ದಾರೆ
ಬೆಂಗಳೂರು : ಬಿಜೆಪಿ ಪರ ಪ್ರಚಾರ ಮಾಡುವುದಾಗಿ ನಟ ಸುದೀಪ್ ಘೋಷಣೆ ಮಾಡಿದ ಬೆನ್ನಲ್ಲೇ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನು ಚುನಾವಣಾ ಪ್ರಚಾರಕ್ಕೆ ಕರೆತರಲು ರಾಜಕೀಯ ಮುಖಂಡರು ಸಂಪರ್ಕ ಮಾಡಿದ್ದಾರೆ ಎನ್ನಲಾಗಿದೆ. ಹೌದು, ಸ್ಟಾರ್ ಪ್ರಚಾರಕರನ್ನು ಕರೆತಂದು ಮತದಾರರ ಸೆಳೆಯುವ ಪ್ರಯತ್ನ ಮಾಡುತ್ತಿರುವ ರಾಜಕೀಯ ಪಕ್ಷಗಳು ನಟ ಯಶ್ ಮನೆಯ ಬಾಗಿಲು ಕೂಡ ತಟ್ಟಿದ್ದಾರೆ ಎನ್ನಲಾಗಿದೆ. ಆದರೆ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿರುವ ನಟ ಯಶ್ ಇದಕ್ಕೆ ನೋ ಎಂದಿದ್ದಾರೆ …
Read More »ಪ್ರತಿಮನೆಯ ಯಜಮಾನಿಗೆ 2000 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ : ಸಿಎಂ ಇಬ್ರಾಹಿಂ ವ್ಯಂಗ್ಯ
ಚಿಕ್ಕಮಗಳೂರು : 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಕಡೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಯ ಯಜಮಾನಿಗೆ 2000 ರೂ ಹಣ ನೀಡುತ್ತಾರೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಯ ಯಜಮಾನಿಗೆ 2000 …
Read More »ಸುದೀಪ್-ಪ್ರಕಾಶ್ ರೈ ಗೆ ನಟ ಚೇತನ್ ಟಾಂಗ್
ಬೆಂಗಳೂರು : ಬಿಜೆಪಿಗೆ ಬೆಂಬಲ ನೀಡುತ್ತಿದ್ದಂತೆ ನಟ ಪ್ರಕಾಶ್ ರೈ ಸುದೀಪ್ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಇದೀಗ ಇಬ್ಬರೂ ನಟರಿಗೆ ಚೇತನ್ ಅಹಿಂಸಾ ಪೋಸ್ಟ್ ಒಂದನ್ನು ಮಾಡುವ ಮೂಲಕ ಟಾಂಗ್ ನೀಡಿದ್ದಾರೆ. ಬಿಜೆಪಿಗೆ ಸುದೀಪ್ ರವರು ನೀಡಿದ ಬೆಂಬಲದಿಂದ ಪ್ರಕಾಶ್ ರಾಜ್ ರವರು ‘ಆಶ್ಚರ್ಯ & ಆಘಾತಕ್ಕೊಳಗಾಗಿದ್ದಾರೆ’ಇದು ಕುತೂಹಲಕಾರಿ ವಿಷಯವಾಗಿದೆ. ಇಬ್ಬರು ಪ್ರತಿಭಾವಂತ ನಟರು – ಒಬ್ಬರು ಬಿಜೆಪಿ ಪರ & ಮತ್ತೊಬ್ಬರು ಬಿಜೆಪಿ ವಿರೋಧಿ – ಜೂಜಿನ …
Read More »ಸುದೀಪ್ ನಟನೆಯ ಶೋ, ಭಾವಚಿತ್ರವಿರುವ ಜಾಹೀರಾತು ಪ್ರಸಾರಕ್ಕೆ ತಡೆ ನೀಡಿ: ಜೆಡಿಎಸ್ ನಿಂದ ಚುನಾವಣಾ ಆಯೋಗಕ್ಕೆ ದೂರು
ಬೆಂಗಳೂರು: ಈಗಾಗಲೇ ವಕೀಲರು, ಕೆ ಆರ್ ಎಸ್ ಪಕ್ಷದಿಂದ ನಟ ಸುದೀಪ್ ಚಿತ್ರ, ಶೋಗಳಿಗೆ ಚುನಾವಣಾ ನೀತಿಸಂಹಿತೆಯ ಕಾರಣ ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಜೆಡಿಎಸ್ ಪಕ್ಷವೂ ದೂರು ನೀಡಿದೆ. ಈ ಕುರಿತಂತೆ ಜನತಾದಳ ಕಾನೂನು ವಿಭಾಗದಿಂದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ದೂರಿನಲ್ಲಿ ಕನ್ನಡದ ನಟ ಕಿಚ್ಚ ಸುದೀಪ್ ಅವರು ಪ್ರಸ್ತುತ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡಿದ್ದಾರೆ. ಆದ್ದರಿಂದ ಅವರ ಸಿನೆಮಾ, …
Read More »ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ
ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ …
Read More »ಸೌಮ್ಯಾ ರೆಡ್ಡಿ ಗಿಫ್ಟ್ ಪಾಲಿಟಿಕ್ಸ್ʼ :ಗಿಫ್ಟ್ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮುಂದಿನ ವಿಧಾನಸಭೆ ಚುನಾವಣೆ ಮತದಾರರ ಸೆಳೆಯೋದಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಗಿಫ್ಟ್ಗಳ ವಸ್ತುಗಳು ಪತ್ತೆಯಾದ ಬೆನ್ನಲ್ಲೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಲಾಗಿದೆ. ಮತದಾರರಿಗೆ ಹಂಚೋದಕ್ಕೆ ವಸ್ತುಗಳ ಕೊಂಡೊಯ್ಯುವಾಗ ವಸ್ತುಗಳನ್ನು ಜಪ್ತಿಯಾಗಿದ್ದು, ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಾದ ಎನ್ಆರ್ ರಮೇಶ್, ಭಾಸ್ಕರ್ ರಾವ್ ದೂರು ನೀಡಿದೆ. ಅಷ್ಟೇ ಅಲ್ಲದೇ ಶಾಸಕಿ ಸೌಮ್ಯಾ ರೆಡ್ಡಿ ಮಾಲೀಕತ್ವದ ಕಾರನ್ನು ಚೆಕ್ಪೋಸ್ಟ್ನಲ್ಲಿ ರಾಮಚಂದ್ರ ಕಾರು ಚಾಲಕ …
Read More »ಕರ್ನಾಟಕ ಒಡೆಯುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ – ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ
ಬೆಂಗಳೂರು: ಬಿಜೆಪಿಯವರು ಹತಾಶರಾಗಿ ಈ ಹೇಳಿಕೆ ನೀಡುತ್ತಿದ್ದು, ಪ್ರಮುಖ ವಿಚಾರ ಮುಚ್ಚಿ ಹಾಕಲು ಈ ಯತ್ನ ಮಾಡುತ್ತಿದ್ದಾರೆ. ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ. ಅವರಿಗೆ ಕರ್ನಾಟಕದ ಅಸ್ಮಿತೆ ಬಗ್ಗೆ ಕಾಳಜಿ ಇಲ್ಲ. ಅವರು ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ. ಹೀಗಿರುವಾಗ ಅವರಿಗೆ ಕನ್ನಡದ ವಿಚಾರವಾಗಿ ಪ್ರೀತಿ ಹುಟ್ಟಲು ಹೇಗೆ ಸಾಧ್ಯ ಎಂಬುದಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ. ಈ ಕುರಿತಂತೆ ಇಂದು …
Read More »ಆರಂಭದಲ್ಲೇ ಕೊರೊನಾಗೆ ಕಡಿವಾಣ ಹಾಕಲು ‘ಕೇಂದ್ರ’ ಕಸರತ್ತು ; ಏ.10,11ಕ್ಕೆ ಆಸ್ಪತ್ರೆಗಳಲ್ಲಿ ‘ಮಾಕ್ ಡ್ರಿಲ್’ಗೆ ಸೂಚನೆ
ನವದೆಹಲಿ : ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ರಾಜ್ಯಗಳಿಗೆ ಜಾಗರೂಕರಾಗಿರಲು ಮತ್ತು ಕೋವಿಡ್ ನಿರ್ವಹಣೆಗೆ ಸಿದ್ಧರಾಗಿರಲು ಕೇಳಿಕೊಂಡರು. ಮಾಂಡವೀಯ ಅವರು ಕೋವಿಡ್ ಪರಿಸ್ಥಿತಿಯನ್ನ ಪರಿಶೀಲಿಸಿದರು ಮತ್ತು ತುರ್ತು ಹಾಟ್ಸ್ಪಾಟ್ಗಳನ್ನು ಗುರುತಿಸಲು, ಪರೀಕ್ಷೆಯನ್ನ ಹೆಚ್ಚಿಸಲು, ಆಸ್ಪತ್ರೆಯ ಮೂಲಸೌಕರ್ಯ ಸನ್ನದ್ಧತೆಯನ್ನ ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ಸೂಚಿಸಿದರು. ಏಪ್ರಿಲ್ 10, 11 ರಂದು ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಅಣಕು ಡ್ರಿಲ್ಗಳನ್ನ ಪರಿಶೀಲಿಸಲು ಆಸ್ಪತ್ರೆಗಳಿಗೆ ಭೇಟಿ ನೀಡುವಂತೆ …
Read More »
Laxmi News 24×7