ಹಾವೇರಿ: ರಾಜ್ಯದಲ್ಲಿ ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು (Mailara Karnikotsva) ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ (Farmers) ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ (Political Parties) ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ …
Read More »ಅಳಿಯನಿಗೆ ಚಾಕು ಹಾಕಿದ ಮಾವ;
ಹುಬ್ಬಳ್ಳಿ: ಸಣ್ಣ ಪುಟ್ಟ ವಿಷಯಗಳಿಗೂ ಚಾಕುವಿನಿಂದ ಇರಿಯುವ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡುವ ಕೃತ್ಯಗಳು ಹುಬ್ಬಳ್ಳಿಯಲ್ಲಿ ಹೆಚ್ಚಾಗುತ್ತಿದೆ. ಇದೀಗ ಚುರುಮುರಿ (Puffed Rice) ವಿಚಾರ ವಿಕೋಪಕ್ಕೆ ಹೋಗಿ ಚಾಕುವಿನಿಂದ ಇರಿದ ಘಟನೆಯೊಂದು ವರದಿಯಾಗಿದೆ. ತಿನ್ನಲು ಚುರುಮುರಿ ಕೇಳಿದ ಅಳಿಯನಿಗೆ (Son in law) ಬೀಗರ ಮನೆಯವರಿಂದ ಹಲ್ಲೆ ನಡೆದಿದ್ದು, ಚಾಕು ಇರಿತಕ್ಕೊಳದ ಅಳಿಯ ಆಸ್ಪತ್ರೆ ಸೇರಿದ ಘಟನೆ ಹುಬ್ಬಳ್ಳಿಯ (Hubballi) ಇಂದಿರಾ ನಗರದಲ್ಲಿ (Indira Nagara) ನಡೆದಿದೆ. ಬೆಂಗಳೂರು ಮೂಲದ ಗುರುಶಾಂತಪ್ಪ …
Read More »ಡಬ್ಬಲ್ ಎಂಜಿನ್ ಸರ್ಕಾರದಿಂದ ಮಹಾಮೋಸ:H.D.K.
ಬೆಂಗಳೂರು: ‘ತೆರಿಗೆ ಸಂಗ್ರಹದಲ್ಲಿ ಕರ್ನಾಟಕವನ್ನು ತನ್ನ ಎಟಿಎಂ ಯಂತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ಡಬ್ಬಲ್ ಎಂಜಿನ್ ಸರ್ಕಾರ, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಮಹಾಮೋಸ ಮಾಡಿರುವುದು ಬಯಲಾಗಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯ ಮುಖಪುಟದಲ್ಲಿ ‘ವಿಶೇಷ ಅನುದಾನ: ರಾಜ್ಯಕ್ಕೆ ಸೊನ್ನೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವಿಶೇಷ ವರದಿಯ ತುಣುಕಿನೊಂದಿಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಚುನಾವಣೆ ವರ್ಷದಲ್ಲಿ ತಿಂಗಳಿಗೆ ನಾಲ್ಕು ಬಾರಿ ರಾಜ್ಯಕ್ಕೆ ಬರುವ …
Read More »ನೋಂದಣಿ: ನಕಲಿ ತಡೆಗೆ ತಮಿಳುನಾಡು ಮಾದರಿ- ಮುದ್ರಾಂಕ ?
ಬೆಂಗಳೂರು: ನಕಲಿ ದಾಖಲೆಗಳನ್ನು ಬಳಸಿಕೊಂಡು ಸ್ಥಿರಾಸ್ತಿಗಳ ನೋಂದಣಿ ಮಾಡಿಸಿ ಪರರ ಆಸ್ತಿಗಳನ್ನು ಕಬಳಿಸುವವರನ್ನು ನಿಯಂತ್ರಿಸುವುದಕ್ಕಾಗಿ ತಮಿಳುನಾಡು ಮಾದರಿಯಲ್ಲಿ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವಂತೆ ನೋಂದಣಿ ಮತ್ತು ಮುದ್ರಾಂಕ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ. ಒಬ್ಬರ ಆಸ್ತಿಯನ್ನು ಬೇರೊಬ್ಬರು ನಕಲಿ ದಾಖಲೆಗಳನ್ನು ಬಳಸಿಕೊಂಡು ನೋಂದಣಿ ಮಾಡಿಸಿಕೊಂಡರೆ ಅಥವಾ ಸರ್ಕಾರಿ ಆಸ್ತಿಗಳನ್ನು ಪರಭಾರೆ ಮಾಡಿದರೆ ನೋಂದಣಿ ರದ್ದುಪಡಿಸಲು ನ್ಯಾಯಾಲಯದ ಮೊರೆಹೋಗಬೇಕಿದೆ. ತಮಿಳುನಾಡು ಸರ್ಕಾರವು ನೋಂದಣಿ ಕಾಯ್ದೆಗೆ ತಿದ್ದುಪಡಿ ತಂದು, ಅಂತಹ ನೋಂದಣಿಗಳನ್ನು …
Read More »ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ.:H.D.K.
ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ …
Read More »ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿ,ಕೈ ಅಧಿಕಾರದಲ್ಲಿದ್ದರೆ ಚೆಂದ: ಡಿಕೆಶಿ
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ. ಜನರಿಗೆ ದಾನ, ಧರ್ಮ ಮಾಡುವ ಕೈ ಅಧಿಕಾರಲ್ಲಿದ್ದರೆ ಚೆಂದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಈ ದೇಶ ಹಾಗೂ ರಾಜ್ಯದಲ್ಲಿ ವಿವಿಧ ಧರ್ಮ, ಜಾತಿ, ವರ್ಗ, ಪಂಗಡದ ಜನರು ಸಹೋದರರಂತೆ ಬದುಕುತ್ತಿದ್ದಾರೆ. ಆದರೆ ಬಿಜೆಪಿ “ಹಿಂದೂ ನಾವೆಲ್ಲ ಒಂದು’ ಎಂದು ಧರ್ಮ, ಜಾತಿ, ವರ್ಗದ ನಡುವೆ ತಾರತಮ್ಯ ನೀತಿ ಅನುಸರಿಸಿ ಅಶಾಂತಿ ಸೃಷ್ಟಿಸಿದೆ. ಕಾಂಗ್ರೆಸ್ …
Read More »ಅಕ್ರಮ ಆಸ್ತಿ ಸಂಪಾದನೆ ಡಿ.ಕೆ.ಶಿ.. ಮತ್ತು ಪುತ್ರಿ ಐಶ್ವರ್ಯಗೆ ಜಾರಿ ನಿರ್ದೇಶನಾಲಯ ನೋಟಿಸ್
ಶಿವಮೊಗ್ಗ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪುತ್ರಿ ಐಶ್ವರ್ಯ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಇದೇ 22ಕ್ಕೆ ಹಾಜರಾಗುವಂತೆ ಸೂಚಿಸಿದೆ ಎಂದಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿಕೆಶಿ ಅವರು, ತನಿಖಾ ಸಂಸ್ಥೆಗಳು ನಿತ್ಯವೂ ನೋಟಿಸ್ ನೀಡುತ್ತಿವೆ. ಮಂಗಳವಾರ ನನ್ನ ಮಗಳ ಕಾಲೇಜಿಗೆ ಹೋಗಿ ನೋಟಿಸ್ ನೀಡಿದ್ದು, ವಿದ್ಯಾರ್ಥಿಗಳು ಪಾವತಿಸಿದ ಶುಲ್ಕದ ವಿವರ ಕೇಳಿದ್ದಾರೆ. ಈ …
Read More »ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ: ನಿತೇಶ್ ಪಾಟೀಲ
ಬೆಳಗಾವಿ : ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಉಪ ಚುನಾವಣೆ -2023 ರ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ರಾಮದುರ್ಗ ತಾಲೂಕಿನ ನರಸಾಪುರ 1 ಸದಸ್ಯ ಸ್ಥಾನ, ಬೆಳಗಾವಿ ತಾಲೂಕಿನ ಬೆಳಗುಂದಿ, ಹಿರೇಬಾಗೇವಾಡಿ, ಮೋದಗಾ ತಲಾ 1, ಖಾನಾಪುರ 1, ಕಾಗವಾಡ ತಾಲೂಕಿನ ಉಗಾರ ಬದ್ರುಕ 1, ಗೋಕಾಕ್ ತಾಲೂಕಿನ ನಲ್ಲಾನಟ್ಟಿ 1 ಸದಸ್ಯ …
Read More »ವಿಐಎಸ್ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ: ಸಿಎಂ ಬೊಮ್ಮಾಯಿ
ಶಿವಮೊಗ್ಗ:ವಿಐಎಸ್ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಯಿ ಅವರು ಬುಧವಾರ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ದಲ್ಲಿ ವಿವಿಧ ಕಾರ್ಯಕ್ರಮ ಉದ್ಘಾಟನೆ ಗೆ ಬಂದಿದ್ದೇನೆ,ವಿಐಎಸ್ಎಲ್ ಅವರ ನಿಯೋಗ ನನ್ನ ಬಳಿ ಬಂದಿತ್ತು. ಕೇಂದ್ರದ ಸಚಿವರಿಗೂ ಕೂಡ ಮಾಹಿತಿ ರವಾನೆ ಮಾಡಲಾಗಿದೆ. ಇದೇ ವಾರದಲ್ಲಿ ಸಭೆ ಕರೆಯುತ್ತೇನೆ. ಖಾಸಗಿ ಯವರ ಜೊತೆ ಕೂಡ ಮಾತನಾಡುತ್ತೇನೆ. ಪರಿಹಾರ ಕೊಡುವಂತಹ ಕೆಲಸವನ್ನು ಮಾಡುತ್ತೇವೆ. …
Read More »ಗರ್ಭಿಣಿ ಎಂದು ಘೋಷಿಸಿದ್ದ ಕೇರಳದ ತೃತೀಯಲಿಂಗಿ ದಂಪತಿಗಳಿಗೆ ಮಗುವಿನ ಜನನ!
ಕೋಝಿಕ್ಕೋಡ್ : ಇತ್ತೀಚೆಗೆ ಗರ್ಭಿಣಿ ಎಂದು ಘೋಷಿಸಿದ ಕೇರಳದ ತೃತೀಯಲಿಂಗಿ ದಂಪತಿಗಳು ಬುಧವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವನ್ನು ಪಡೆದಿದ್ದಾರೆ, ಇದು ದೇಶದಲ್ಲೇ ಮೊದಲ ಪ್ರಕರಣ ಎಂದು ಪರಿಗಣಿಸಲಾಗಿದೆ. “ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಬೆಳಗ್ಗೆ 9.30 ರ ಸುಮಾರಿಗೆ ಮಗು ಜನಿಸಿತು” ಎಂದು ತೃತೀಯಲಿಂಗಿ ದಂಪತಿಗಳಲ್ಲಿ ಒಬ್ಬರಾದ ಜಿಯಾ ಪಾವಲ್ ಪಿಟಿಐಗೆ ತಿಳಿಸಿದ್ದಾರೆ. ಮಗು ಮತ್ತು ಮಗುವಿಗೆ ಜನ್ಮ ನೀಡಿದ ಆಕೆಯ ಸಂಗಾತಿ ಜಹ್ಹಾದ್ ಇಬ್ಬರೂ …
Read More »
Laxmi News 24×7