Breaking News

ರೈಲು ಟಿಕೆಟನ್ನು ಆನ್‌ಲೈನ್‌ನಲ್ಲಿ ರದ್ದು ಮಾಡಲು ಪ್ರಯತ್ನಿಸುವಾಗ 3.5 ಲಕ್ಷ ರೂಪಾಯಿ ಕಳೆದುಕೊಂಡ

ಸೈಬರ್ ಕಳ್ಳರು ಜನರ ಖಾತೆಗಳಿಂದ ಹಣ ದೋಚುವ ಪ್ರಕರಣಗಳು ಮುಂದುವರೆದಿವೆ. ಈ ಕುರಿತು ಮತ್ತೊಂದು ಘಟನೆ ವರದಿಯಾಗಿದ್ದು, ಕೋಝಿಕ್ಕೋಡ್ ಮೂಲದ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ಕೋಝಿಕ್ಕೋಡ್‌ನ ವ್ಯಕ್ತಿ ತನ್ನ ರೈಲು ಟಿಕೆಟನ್ನು ಆನ್‌ಲೈನ್‌ನಲ್ಲಿ ರದ್ದು ಮಾಡಲು ಪ್ರಯತ್ನಿಸುವಾಗ 3.5 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಅವರ ಎಸ್​ಬಿ ಮತ್ತು ಎಫ್​ಡಿ ಖಾತೆಗಳಿಂದ ಹಣ ದೋಚಲಾಗಿದೆ. 3 ಸೀಕ್ರೆಟ್ ಕೋಡ್ ವೆರಿಫಿಕೇಶನ್ ಮತ್ತು 2 ಒಟಿಪಿ ವೆರಿಫಿಕೇಶನ್​ಗಳ ನಂತರ ಖಾತೆಯಿಂದ ಹಣ …

Read More »

ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಮುಂದೆ ಇಂದು ಮೃತರ ತಾಯಿ ಹಾಗೂ ಪತ್ನಿ ಕಣ್ಣೀರು ಹಾಕಿದರು.

ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವಂತೆ ಒತ್ತಾಯಿಸಿ ಮೃತರ ತಾಯಿ ಮತ್ತು ಪತ್ನಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರ ಮುಂದೆ ಕಣ್ಣೀರು ಹಾಕಿದ ಘಟನೆ ನಡೆಯಿತು. ಈ ಮೂಲಕ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂತೋಷ ಪಾಟೀಲ ತಾಯಿ ಪಾರ್ವತಿ ಮತ್ತು ಪತ್ನಿ ಜಯಶ್ರೀ, ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಸಿಐಡಿಗೆ ವಹಿಸುವಂತೆ ಮನವಿ …

Read More »

ಗುತ್ತಿಗೆದಾರರಿಗೆ ಬಿಲ್ ಕೊಡುವುದು ಬೇಡ ಅನ್ನೋದಿಲ್ಲ. ತನಿಖೆಯಲ್ಲಿ ತಪ್ಪು ಮಾಡಿಲ್ಲ ಅನ್ನೋದು ಸಾಬೀತಾದರೆ ಬಿಲ್​ ಖಂಡಿತ ಕೊಡುತ್ತೇವೆ ಎಂದ ಸಿಎಂ‌

ಬೆಳಗಾವಿ: ಈ ರಾಜ್ಯವನ್ನು ಬಿಜೆಪಿಗರು ಹಾಳು ಮಾಡಿದ್ದಾರೆ. ಆರ್ಥಿಕವಾಗಿ, ಭ್ರಷ್ಟಾಚಾರ, ಧರ್ಮ ರಾಜಕಾರಣ ಮಾಡಿದ್ದಾರೆ. ನಾವು 135 ಸ್ಥಾನ ಗೆದ್ದಿದ್ದರಿಂದ ಬಿಜೆಪಿಗರಿಗೆ ಭಯ ಆರಂಭವಾಗಿದೆ. ಎಷ್ಟೇ ದುಡ್ಡು ಖರ್ಚು ಮಾಡಿದರೂ, ಗೆಲ್ಲಲಿಲ್ಲ ಎಂದು ಹತಾಶರಾಗಿದ್ದಾರೆ. ಲೋಕಸಭೆಯಲ್ಲಿ ಅವರಿಗೆ ಸೋಲುವ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಿನ್ ಲಾಡನ್ ಸರ್ಕಾರ ಎಂಬ ಆರ್.ಅಶೋಕ್​ ಹೇಳಿಕೆ …

Read More »

ಮಣಿಪುರ ಹೊತ್ತಿ ಉರೀತಿದ್ರೆ, ಪ್ರಧಾನಿ ಲೋಕಸಭೆಯಲ್ಲಿ ಜೋಕ್​ ಮಾಡ್ತಿದ್ರು: ರಾಹುಲ್​ ಗಾಂಧಿ

ನವದೆಹಲಿ: ಮಣಿಪುರ ಹಿಂಸಾಚಾರ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದರು. ”ಪ್ರಧಾನಿ ಮೋದಿ ಮಣಿಪುರವನ್ನು ಬೆಂಕಿಯಲ್ಲಿ ಉರಿಯಲು ಬಯಸುತ್ತಿದ್ದಾರೆ. ಅವರು ಬೆಂಕಿ ನಂದಿಸಲು ಪ್ರಯತ್ನಿಸುತ್ತಿಲ್ಲ” ಎಂದು ಗಂಭೀರ ಆರೋಪ ಮಾಡಿದ ರಾಹುಲ್​, ”ಭಾರತೀಯ ಸೇನೆಯು ಸಹಾಯದಿಂದ ಎರಡೇ ದಿನದಲ್ಲಿ ಹಿಂಸಾಚಾರ ನಿಲ್ಲಿಸಬಹುದು” ಎಂದು ಸಲಹೆ ನೀಡಿದರು. ಕಾಂಗ್ರೆಸ್​ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ”ನಿನ್ನೆ ಸಂಸತ್ತಿನಲ್ಲಿ …

Read More »

ಬಬಲೇಶ್ವರ, ತಿಕೋಟಾದಲ್ಲಿ ಕುಡಿವ ನೀರು ಯೋಜನೆ ಪರಿಷ್ಕರಿಸಲು ತೀರ್ಮಾನ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಮೊದಲು ಗ್ರಾಮ ಪಂಚಾಯಿತಿಗಳಾಗಿದ್ದು, ಈಗ ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾಗಳಿಗೆ ಪ್ರತಿಯೊಬ್ಬರಿಗೂ ದಿನಕ್ಕೆ 135 ಲೀಟರ್ ನೀರು ಒದಗಿಸುವ ರೀತಿಯಲ್ಲಿ ನೀರು ಪೂರೈಕೆ ಯೋಜನೆಗಳನ್ನು ಪರಿಷ್ಕರಿಸಿ, ಕಾರ್ಯಗತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.   ವಿಜಯಪುರ ನಗರ ಮತ್ತು ಬಬಲೇಶ್ವರ, ತಿಕೋಟಾ ಪಟ್ಟಣಗಳ ಕುಡಿವ ನೀರು ಪೂರೈಕೆ ಯೋಜನೆಗಳಿಗೆ ಸಂಬಂಧಿಸಿದಂತೆ ಗುರುವಾರ …

Read More »

ಹಾವೇರಿ: ಡಾಂಬರ್ ಹಾಕಿ 7 ತಿಂಗಳಲ್ಲಿ ಕೆಟ್ಟು ನಿಂತ ಬೈ ಪಾಸ್ ರಸ್ತೆ.

ಹಾವೇರಿ: ಜಿಲ್ಲಾಕೇಂದ್ರ ಹಾವೇರಿ ನಗರದ ಪಕ್ಕದಲ್ಲಿಯೇ ರಾಷ್ಟ್ರೀಯ ಹೆದ್ದಾರಿ 48 ಹಾಯ್ದು ಹೋಗಿದೆ. ರಾಷ್ಟ್ರೀಯ ಹೆದ್ದಾರಿ 48 ರಿಂದ ನಗರ ಸಂಪರ್ಕಿಸಲು ನಾಲ್ಕು ಕಡೆ ಬೈ ಪಾಸ್ ರಸ್ತೆಗಳನ್ನು ಕೂಡ ನಿರ್ಮಿಸಲಾಗಿದೆ. ಅವುಗಳಲ್ಲಿ ತೋಟದಯಲ್ಲಾಪುರ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿ ರಸ್ತೆಗಳು ಪ್ರಮುಖವಾದದು. ಬೆಂಗಳೂರು ಕಡೆಯಿಂದ ಬರುವ ವಾಹನಗಳು ತೋಟದಯಲ್ಲಾಪುರ ಬೈಪಾಸ್‌ ಮೂಲಕ ಹಾವೇರಿ ಸಂಪರ್ಕಿಸುತ್ತವೆ. ಇನ್ನು ಹುಬ್ಬಳ್ಳಿ ಕಡೆಯಿಂದ ಬರುವ ವಾಹನಗಳು ಆರ್‌ಟಿಒ ಕಚೇರಿಯ ಬೈಪಾಸ್‌ ಮೂಲಕ ನಗರ ಸಂಪರ್ಕಿಸುತ್ತವೆ. …

Read More »

ಲಂಚದ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಮಾಜಿ ನ್ಯಾಯಾಧೀಶ ಸುಧೀರ್ ಪರ್ಮಾರ್ ಅವರನ್ನ ಇಡಿ ಬಂಧಿಸಿದೆ.

ನವದೆಹಲಿ: ಈ ಹಿಂದೆಪಂಚಕುಲ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಸುಧೀರ್ ಪರ್ಮಾರ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ. ನ್ಯಾಯಾಧೀಶ ಸುಧೀರ್ ಪರ್ಮಾರ್ ಲಂಚ ಆರೋಪದಡಿ ಅಮಾನತುಗೊಂಡಿದ್ದರು. ಇದೀಗ ಪರ್ಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕುರಿತಾದ ತನಿಖೆಗಾಗಿ ಜಾರಿ ನಿರ್ದೇಶನಾಲಯ ಬಂಧಿಸಿದೆ. ಪರ್ಮಾರ್ ಅವರನ್ನು ದೆಹಲಿಯ ಪಕ್ಕದ ಗುರುಗ್ರಾಮದಲ್ಲಿರುವ ಏಜೆನ್ಸಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ನಂತರ ಮಾಜಿ ನ್ಯಾಯಧೀಶರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬಂಧಿಸಲಾಗಿದೆ. ತನಿಖೆಗಾಗಿ ಕಸ್ಟಡಿಗೆ …

Read More »

ನಾನು ಕಮಿಷನ್ ಕೇಳಿದರೆ, ಇವತ್ತೇ ನಿವೃತ್ತಿಯಾಗುವೆ,

ಬೆಂಗಳೂರು: ನಾನು ಏನಾದರೂ ಕಮಿಷನ್ ಕೇಳಿದ್ರೆ, ಇವತ್ತೇ ರಾಜಕೀಯದಿಂದ ನಿವೃತ್ತಿ ಆಗುವೆ. ಬಸವರಾಜ ಬೊಮ್ಮಾಯಿ ಆಗ್ತಾರಾ? ಅಥವಾ ಆರ್​ ಅಶೋಕ್​ ಅವರು ನಿವೃತ್ತಿ ಆಗ್ತಾರಾ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ಸದಾಶಿವನಗರದಲ್ಲಿ ಮಾತನಾಡಿದ ಅವರು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸುದ್ದಿಗೋಷ್ಠಿ ವಿಚಾರವಾಗಿ ಪ್ರತಿಕ್ರಿಯಿಸಿ, ಅವರೆಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡಬೇಕು. ಅವರ ಪಕ್ಷದ ನಾಯಕರೂ ತನಿಖೆ ಮಾಡಿ ಎಂದು ನಮ್ರತೆಯಿಂದ ಮನವಿ ಮಾಡಿದ್ರು. ಕೆಲಸ ಮಾಡಿದವರ ಬಿಲ್ ಅವರು ಏಕೆ …

Read More »

5 ವರ್ಷ ಸಮಯ ಕೊಟ್ಟೆ ಆದರೂ ಪ್ರತಿಪಕ್ಷಗಳೂ ಸಿದ್ಧತೆ ನಡೆಸಿಲ್ಲ: ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಮಣಿಪುರ ಹಿಂಸಾಚಾರ ವಿಷಯವಾಗಿ ಲೋಕಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿಲುವಳಿಗೆ ಗುರುವಾರ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಂಸತ್ತಿಗೆ ಬರುವಾಗ ವಿಶೇಷವಾಗಿ ಅವಿಶ್ವಾಸ ನಿರ್ಣಯವನ್ನು ತಂದಾಗಲೂ ಪ್ರತಿಪಕ್ಷಗಳು ಪೂರ್ವತಯಾರಿ ನಡೆಸಿ ಬರುವುದಿಲ್ಲ ಎಂದು ಕುಟುಕಿದರು. ”2018ರಲ್ಲಿ ಪ್ರತಿಪಕ್ಷಗಳಿಗೆ ಸ್ವಲ್ಪ ತಯಾರಾಗಿ ಬನ್ನಿ ಎಂದು ಹೇಳಿದ್ದೆ. 2023ರಲ್ಲಿ ಬಂದರೂ ಪ್ರತಿಪಕ್ಷಗಳು ತಯಾರಿ ಮಾಡಿಕೊಂಡಿಲ್ಲ. ಕಳೆದ ಐದು ವರ್ಷಗಳ ಸಮಯ ಸಿಕ್ಕರೂ ಸಿದ್ಧತೆ ಮಾಡಿಕೊಳ್ಳುತ್ತಿಲ್ಲ. ಅವರ ನಾಯಕರಿಗೆ …

Read More »

‘ಸರ್ಕಾರವು ನೇಕಾರರ ಬದುಕು ಕಸಿದುಕೊಳ್ಳಬಾರದು” ಎಂದು ಉತ್ತರ ಕರ್ನಾಟಕ ವೃತ್ತಿಪರ ನೇಕಾರ ಹೋರಾಟ ಸಮಿತಿ ಸಂಚಾಲಕ ಗಜಾನನ ಗುಂಜೇರಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ: ”ನೇಕಾರರ ಬದುಕನ್ನು ಕಸಿದುಕೊಳ್ಳುವ ಕೆಲಸಕ್ಕೆ ಸರಕಾರ ಮುಂದಾಗಬಾರದು” ಎಂದು ಉತ್ತರ ಕರ್ನಾಟಕ ವೃತ್ತಿಪರ ನೇಕಾರ ಹೋರಾಟ ಸಮಿತಿ ಸಂಚಾಲಕ ಗಜಾನನ ಗುಂಜೇರಿ ಆಗ್ರಹಿಸಿದರು. ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ”ಜಗತ್ತಿನ ಮಾನ ಮುಚ್ಚುವ ನೇಕಾರರ ಬದುಕು ಚಿಂತಾಜನಕವಾಗಿದೆ. ಕಳೆದ ಮೂರು ವರ್ಷಗಳಿಂದ ಮಳೆಯಿಂದಾಗಿ ನೆರೆ ಹಾವಳಿ, ಕೊರೊನಾ ಪರಿಣಾಮ ಹಾಗೂ ಕಚ್ಚಾ ನೂಲಿನ ಬೆಲೆ ಏರಿಕೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದೇವೆ. ನೇಕಾರರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ …

Read More »