ರಾಮದುರ್ಗ: ಇಲ್ಲಿನ ಸ್ಟೀಲ್ ವ್ಯಾಪಾರಿ ಅಪಹರಣ ಮತ್ತು ಬನ್ನೂರಿನ ಮನೆಯೊಂದಕ್ಕೆ ನುಗ್ಗಿ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮದುರ್ಗ ಮತ್ತು ಕಟಕೋಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 8 ಜನರನ್ನು ಬಂಧಿಸಿದ್ದಾರೆ. ಈ ಎರಡೂ ಪ್ರಕರಣಗಳನ್ನು ಕೈಗೆತ್ತಿಕೊಂಡ ಕಟಕೋಳ ಮತ್ತು ರಾಮದುರ್ಗದ ಪೊಲೀಸರು ತಂಡಗಳನ್ನು ರಚಿಸಿ ತನಿಖೆಗೆ ಮುಂದಾಗಿದ್ದರು. ಒಟ್ಟು 8 ಜನ ಆರೋಪಿಗಳು ಬಂಧಿಸಿ ಅವರಿಂದ 188 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ನಾಲ್ಕು …
Read More »ಶ್ರೇಷ್ಠ ಫೌಂಡೇಶನ್ ಅನ್ನಸಂತರ್ಪಣೆ ಕಾರ್ಯಕ್ಕೆ ಶತಕದ ಸಂಭ್ರಮ; ಸಂತೋಷ ಜಾರಕಿಹೊಳಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ
ಗೋಕಾಕ: ಗೋಕಾಕ ನಗರ ಅಂದ್ರೆ ಮೊದಲಿಗೆ ನೆನಪಾ ಗೋದೆ ಜಾರಕಿಹೊಳಿ ಸಹೋದರರು. ಜಾರಕಿಹೊಳಿ ಸಹೋದರರು ಬೇರೆ ಬೇರೆ ಪಕ್ಷ ಗಳಲ್ಲಿ ಇದ್ರು ಅವರ್ ಅವರ್ ಕಾರ್ಯ ವೈಖರಿ ಬೇರೆ ಬೇರೆ ಇದೆ . ಹಲವಾರು ಸಾಮಾಜಿಕ ಸಾಂಸ್ಕೃತಿಕ, ಕಾರ್ಯ ಕ್ರಮ ಗಳನ್ನ ಅವರು ಆವಾಗಾವಾಗ ಹಮ್ಮಿ ಕೊಳ್ಳುತ್ತಲೆ ಇರುತ್ತಾರೆ. ಇನ್ನು ಅವರ್ ಪುತ್ರರು ಕೂಡ ವಿವಿಧ ರೀತಿಯ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಹತ್ವ ವನ್ನಾ ಕೊಡುತ್ತಾ ಬಂದಿದ್ದಾರೆ …
Read More »ಮುರುಘಾ ಮಠದಲ್ಲಿ ಸರಣಿ ಅಪರಾಧಗಳು: ಅಡ್ವೊಕೇಟ್ ಜನರಲ್
ಬೆಂಗಳೂರು: ಮಠದಲ್ಲಿ ಸರಣಿ ಅಪರಾಧಗಳು ನಡೆದ ಸರಮಾಲೆಯೇ ಇದೆ ಎಂಬುದು ತನಿಖಾಧಿಕಾರಿಗಳಿಗೆ ಮೇಲ್ನೋಟಕ್ಕೆ ಕಂಡುಬಂದ ಕಾರಣಕ್ಕಾಗಿ ದೋಷಾರೋಪ ಪಟ್ಟಿಯಲ್ಲಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆಯನ್ನೂ ಅಡಕಗೊಳಿಸಲಾಗಿದೆ. ಹೀಗಾಗಿಯೇ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿದೆ… ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿರುವ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿದ …
Read More »40 ಲಕ್ಷ ಲಂಚ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹ 40 ಲಕ್ಷ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ. ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿ. ತಂದೆಯ ಪರವಾಗಿ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಲೋಕಾಯುಕ್ತದ …
Read More »ಪಂಚಮಸಾಲಿ ಮೀಸಲಾತಿ | ನಾಳೆ ಹೆದ್ದಾರಿಗಳು, ಗ್ರಾಮ ರಸ್ತೆಗಳು ಬಂದ್
ಬೆಂಗಳೂರು: ಹಿಂದುಳಿದ ವರ್ಗಗಳ ‘2ಎ’ ಮೀಸಲಾತಿಗೆ ಪಂಚಮಸಾಲಿ ಸಮಾಜ ಸೇರ್ಪಡೆಗೊಳಿಸಲು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮಾರ್ಚ್ 4ಕ್ಕೆ 50 ದಿನಗಳನ್ನು ಪೂರೈಸುತ್ತಿದ್ದು, ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಚಮಸಾಲಿ ಸಮಾಜ ನಿರ್ಧರಿಸಿದೆ. ಮಾರ್ಚ್ 4 ರಂದು ಪಂಚಮಸಾಲಿ ಸಮಾಜದ ಜನರು ರಾಜ್ಯದ ಎಲ್ಲೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಗ್ರಾಮ ರಸ್ತೆಗಳನ್ನು ಬಂದ್ ಮಾಡಬೇಕು. ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ ಎಂದು …
Read More »ಹಾವೇರಿ | ಸಂತ ಶಿಶುನಾಳ ಶರೀಫರ ಥೀಮ್ ಪಾರ್ಕ್ ಸ್ಥಾಪನೆ: ಸಿಎಂ ಬೊಮ್ಮಾಯಿ
ಹಾವೇರಿ: ‘ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಶಿಶುವಿನಾಳ ಗ್ರಾಮದ ಸಂತ ಶರೀಫ ಶಿವಯೋಗಿ ಮತ್ತು ಗೋವಿಂದಭಟ್ಟರ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುರುವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು. ‘ಶಿಶುವಿನಾಳದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈಗ ₹ 8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ …
Read More »ಜಿ.ಪಂ, ತಾ.ಪಂ ಕ್ಷೇತ್ರ ಪುನರ್ವಿಂಗಡಣೆ: ಅಧಿಸೂಚನೆ ಹೊರಡಿಸಿದ ಸರ್ಕಾರ
ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳನ್ನುಪುನರ್ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ಮಾಡಿದ್ದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ರಾಜ್ಯದ ಹಲವು ಗ್ರಾಮಗಳು ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಸೇರಿವೆ. ಕೆಲ ಗ್ರಾಮಗಳನ್ನು ಸೇರಿಸಿ ಪಟ್ಟಣ …
Read More »10 ನಿಮಿಷದಲ್ಲೇ ಆಸ್ತಿ ನೋಂದಣಿ: ಕಾವೇರಿ-2ಗೆ ಕಂದಾಯ ಸಚಿವ ಆರ್.ಅಶೋಕ್ ಚಾಲನೆ
ಬೆಂಗಳೂರು: ಆಸ್ತಿಗಳ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ, ಕೇವಲ 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ನಾಗರಿಕ ಸ್ನೇಹಿ ಕಾವೇರಿ-2 ತಂತ್ರಾಂಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಗುರುವಾರ ಚಾಲನೆ ನೀಡಿದರು. ಕಲಬುರಗಿಯ ಚಿಂಚೋಳಿ, ಬೆಳಗಾವಿ ದಕ್ಷಿಣ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಈಗಾಗಲೇ ಆರಂಭವಾಗಿರುವ ಸೇವೆ, ದೇವನಹಳ್ಳಿ, ರಾಮನಗರ ಸೇರಿದಂತೆ ಇನ್ನೂ ಕೆಲ ಕಚೇರಿಗಳಲ್ಲಿ ಇದೇ ತಿಂಗಳು ಸೇವೆ ಲಭ್ಯವಾಗಲಿದೆ. ಮೂರು ತಿಂಗಳ ಒಳಗೆ ರಾಜ್ಯದ ಎಲ್ಲೆಡೆ ಜಾರಿಗೊಳಿಸಲಾಗುವುದು ಎಂದು ಅಶೋಕ್ ಹೇಳಿದರು. ನಾಗರಿಕರು …
Read More »ಗ್ರಾಮದೇವಿಯರ ಭವ್ಯ ಮೆರವಣಿಗೆ; ಅಸಂಖ್ಯಾತ ಭಕ್ತರು ಭಾಗಿ
ಕಲಘಟಗಿ: ಶ್ರೀ ಗ್ರಾಮದೇವಿಯರ 9 ದಿನಗಳ ಕಾಲ ಜರುಗಲಿರುವ ಜಾತ್ರಾ ಮಹೋತ್ಸವದ ದೇವಿಯರ ಮೆರವಣಿಗೆ ಬುಧವಾರ ಮಧ್ಯಾಹ್ನ ಶ್ರೀ ಗ್ರಾಮದೇವಿ ದೇವಸ್ಥಾನದಿಂದ ಆರಂಭಗೊಂಡಿತು. ಅಸಂಖ್ಯಾತ ಭಕ್ತಸಾಗರದ ಮಧ್ಯೆ ಸಾಗಿ ಬಂದ ಶ್ರೀ ದುರ್ಗವ್ವ ಮತ್ತು ಶ್ರೀ ದ್ಯಾಮವ್ವರ ಮೂರ್ತಿಗಳನ್ನು ಅಕ್ಕಿ ಓಣಿಯಲ್ಲಿರುವ ಚೌತ ಮನೆಕಟ್ಟೆಯ ಜಾತ್ರಾ ಮಂಟಪದಲ್ಲಿ ವಿರಾಜಮಾನಗೊಳಿಸಲಾಯಿತು. ಶ್ರೀ ಗ್ರಾಮದೇವಿಯರನ್ನು ಸಂಭ್ರಮ ಸಡಗರ, ಸಕಲ ಮಂಗಲ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಜೋಳದ ಓಣಿ, ಮಾರ್ಕೆಟ್ ರೋಡ ಮುಖಾಂತರ …
Read More »ಬೆಳವಡಿ ಇತಿಹಾಸದ ಸಂಶೋಧನೆ ಅಗತ್ಯ;ಡಾ| ನಿರ್ಮಲಾ ಭಟ್ಟಲ
ಬೈಲಹೊಂಗಲ: ಬೆಳವಡಿ ಸಂಸ್ಥಾನಗಳ ಇತಿಹಾಸ ಕುರಿತು ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಇತಿಹಾಸಗಾರರು ಹಾಗೂ ಸರ್ಕಾರ ಬೆಳವಡಿ ಸಂಸ್ಥಾನದ ಸಮಗ್ರ ಇತಿಹಾಸ ಅಧ್ಯಯನ ಮಾಡಿ ಬೆಳವಡಿ ಮಲ್ಲಮ್ಮಳ ಕುರಿತ ಕುರುಹುಗಳ ಸಂರಕ್ಷಣೆಗೆ ಒತ್ತು ನೀಡಬೇಕಿದೆ ಎಂದು ಬೆಳಗಾವಿ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ನಿರ್ಮಲಾ ಭಟ್ಟಲ ಹೇಳಿದರು. ಮಲ್ಲಮ್ಮನ ಬೆಳವಡಿ ಗ್ರಾಮದ ಸ್ಮಾರಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಳವಡಿ …
Read More »
Laxmi News 24×7