ರಾಮದುರ್ಗ: ಸಮೀಪದ ಮುಳ್ಳೂರು ಬೆಟ್ಟದಲ್ಲಿ ಶಿವನ ಮೂರ್ತಿ ಸ್ಥಾಪನೆಯಾಗಿ 6 ವರ್ಷ ಕಳೆದಿದ್ದು, ಈ ಬಾರಿ ಫೆ.18ರಂದು ಅದ್ದೂರಿಯಾಗಿ ಮಹಾಶಿವರಾತ್ರಿ ಉತ್ಸವ ಆಚರಣೆಗೆ ಶಿವಪ್ರತಿಷ್ಠಾನ ಸೇವಾ ಸಮಿತಿ ಮುಂದಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕಳೆದೆರಡು ವರ್ಷ ಸರಳವಾಗಿ ಮಹಾಶಿವರಾತ್ರಿ ಆಚರಿಸಲಾಗಿತ್ತು. ಈ ಬಾರಿ ಕೊರೊನಾ ಕಾರ್ಮೋಡ ಸರಿದಿರುವುದರಿಂದ ಸಂಭ್ರಮ ಇಮ್ಮಡಿಗೊಂಡಿದೆ. 72 ಅಡಿ ಎತ್ತರದಲ್ಲಿರುವ ಶಿವನ ಮೂರ್ತಿ ಮತ್ತು ಅದರ ಮುಂಭಾಗದಲ್ಲಿರುವ ನಂದಿ ವಿಗ್ರಹ ದರ್ಶನಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ 1 …
Read More »‘ಮಠ, ಮಂದಿರ ನಿರ್ಮಾಣದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಬೆಳೆಯುತ್ತದೆ’:ಶಿಂದೊಗಿ ಮುಕ್ತಾನಂದ ಸ್ವಾಮೀಜಿ
ಯರಗಟ್ಟಿ: ‘ಮಠ, ಮಂದಿರ ನಿರ್ಮಾಣದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಪೂಜಾ ಭಾವನೆ ಬೆಳೆಯುತ್ತದೆ’ ಎಂದು ಶಿಂದೊಗಿ ಮುಕ್ತಾನಂದ ಸ್ವಾಮೀಜಿ ಹೇಳಿದರು. ಸಮೀಪದ ರೈನಾಪೂರದಲ್ಲಿ ಗುರುವಾರ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ, ಟ್ರಸ್ಟ್ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಸಾಮೂಹಿ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಿವೃತ್ತ ಬಸವೇಶ್ವರ ಪೌಢ ಶಾಲೆ ಮುಖ್ಯ ಶಿಕ್ಷಕ ರಂಗಪ್ಪ ಜೂಗನವರ …
Read More »ಗ್ರಾಮೀಣ ಶಾಸಕರನ್ನು ಸೋಲಿಸದಿದ್ದರೆ ಜನ ತಮ್ಮ ಮನೆ& ಜಮೀನು ಕಳೆದುಕೊಳ್ಳುವುದು ಗ್ಯಾರಂಟಿ: ರಮೇಶ ಜಾರಕಿಹೊಳಿ
ಹಿರೇಬಾಗೇವಾಡಿ: ಈ ಬಾರಿಯ ಚುನಾವಣೆ ಅತಿ ಮಹತ್ವದ್ದಾಗಿದ್ದು, ಯಾವ ಆಮಿಷಕ್ಕೂ ಬಲಿಯಾಗದೇ ಬೆಳಗಾವಿ ಗ್ರಾಮೀಣ ಶಾಸಕರನ್ನು ಸೋಲಿಸಲೇ ಬೇಕು. ಜತೆಗೆ ಕಾಂಗ್ರೆಸ್ ಸೋಲಿಸದಿದ್ದರೆ ಜನ ತಮ್ಮ ಮನೆ ಹಾಗೂ ಜಮೀನು ಕಳೆದುಕೊಳ್ಳುವುದು ಗ್ಯಾರಂಟಿ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ವಾಗ್ದಾಳಿ ಮಾಡಿದರು. ಗ್ರಾಮದ ಹೊರವಲಯದಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಗುರುವಾರ ಆಯೋಜಿಸಿದ್ದ ಅಭಿಮಾನದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಲ್ಲಿನ …
Read More »ಹುಬ್ಬಳ್ಳಿ: ಆನೆ ದಂತ ಕಲಾಕೃತಿ ಮಾರಾಟ ಮಾಡುತ್ತಿದ್ದ 5 ದಂತ ಚೋರರ ಬಂಧನ
ಹುಬ್ಬಳ್ಳಿ: ಆನೆ ದಂತದಿಂದ ಮಾಡಿರುವ ಕಲಾಕೃತಿಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಗಳನ್ನು ವಿಶೇಷ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಐವರು ದಂತ ಚೋರರನ್ನು ವಶಕ್ಕೆ ಪಡೆದಿದ್ದಾರೆ. ಎಡಿಜಿಪಿ ಸಿ.ಐ.ಡಿ ಬೆಂಗಳೂರು ಮತ್ತು ಪ್ರಭಾರ ಡಿ.ಐ.ಜಿ.ಪಿ ಸಿಐಡಿ ಅರಣ್ಯ ಘಟಕ ಬೆಂಗಳೂರು ಹಾಗೂ ಪೊಲೀಸ್ ಉಪಾಧೀಕ್ಷಕರು ಸಿಐಡಿ ಅರಣ್ಯ ಘಟಕ ಹುಬ್ಬಳ್ಳಿ ವಿಭಾಗರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಸಂಚಾರ ಅರಣ್ಯ ಇಲಾಖೆಯು ಐವರನ್ನು …
Read More »ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಸ್ಪರ್ಧೆಗೆ A.A.P.ಸಿದ್ಧತೆ
ನವದೆಹಲಿ: ದೆಹಲಿ, ಪಂಜಾಬ್ನಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಆಮ್ ಆದ್ಮಿ ಪಾರ್ಟಿಯು (ಎಎಪಿ), ಗುಜರಾತ್ ಹಾಗೂ ಗೋವಾದಲ್ಲಿಯೂ ಖಾತೆ ತೆರೆಯುವ ಮೂಲಕ ತನ್ನ ವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಶೇ 13ರಷ್ಟು ಮತಗಳನ್ನು ಪಡೆದ ಎಎಪಿ, 5 ಸ್ಥಾನಗಳಲ್ಲಿ ಗೆದ್ದಿದೆ. ಗೋವಾದಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ಕಳೆದ ವರ್ಷ ನಡೆದ ಚುನಾವಣೆಗಳಲ್ಲಿ ತನ್ನ ಸಾಧನೆಯನ್ನು ಹೆಚ್ಚಿಸಿಕೊಂಡಿದೆ. ಈಗ, 2023ರಲ್ಲಿ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ …
Read More »ನದಿಯಲ್ಲಿ ಶವ ಪತ್ತೆ- ಗುಂಡು ಹಾರಿಸಿ ಪರಾರಿಯಾಗಿದ್ದವ ಎಂಬ ಶಂಕೆ
ಹನೂರು: ತಾಲ್ಲೂಕಿನ ಗಡಿ ಭಾಗದ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಈತ ಕಳ್ಳ ಬೇಟೆಗಾರ ಆಗಿರಬಹುದು ಎಂದು ಶಂಕಿಸಲಾಗಿದೆ. ಕಾವೇರಿ ವನ್ಯಧಾಮದ ಗೋಪಿನಾಥಂ ವಲಯದ ಅಡಿಪಾಲರ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ತಮಿಳುನಾಡಿನ ನಾಲ್ವರು ಬೇಟೆಗಾರರು ಜಿಂಕೆ ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಒಂದು ನಾಡ ಬಂದೂಕು …
Read More »ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಹೆಚ್ಚುವರಿ 10 ಸಾವಿರ ರೂ. ಸಹಾಯಧನ!
ಬೆಂಗಳೂರು: ರಾಜ್ಯ ಬಜೆಟ್ನಲ್ಲಿ ಕೃಷಿಕರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅನೇಕ ಕೊಡುಗೆಗಳನ್ನು ನೀಡಿದ್ದು ಈ ವರ್ಷದಿಂದ ರೈತರಿಗೆ ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಹೆಚ್ಚುವರಿ 10 ಸಾವಿರ ರೂ. ಸಹಾಯಧನ ನೀಡುವ ಬಗ್ಗೆ ಘೋಷಿಸಲಾಗಿದೆ. ಇನ್ನು ಪ್ರಮುಖವಾಗಿ, ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ ಘೋಷಿಸಲಾಗಿದ್ದು ರೈತರಿಗೆ 10 ಸಾವಿರ ಸಹಾಯಧನ ನೀಡುವ ಬಗ್ಗೆ ಉಲ್ಲೇಖಿಸಲಾಗಿದೆ. ಇದರಿಂದ, ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ಖರೀದಿಗೆ ಅನುಕೂಲವಾಗಲಿದೆ. ಈ …
Read More »2 ಗಂಟೆ 35 ನಿಮಿಷ ಬಜೆಟ್ ಓದಿದ ಸಿಎಂ ಬೊಮ್ಮಾಯಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸರ್ಕಾರದ ಕೊನೆಯ ಹಾಗೂ ಸಿಎಂ ಆಗಿ ಎರಡನೇ ಬಜೆಟ್ ಮಂಡನೆ ಮಾಡಿದರು. ಕೃಷಿ, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಜೆಟ್ನಲ್ಲಿ ಭರಪೂರ ಅನುದಾನ ಮೀಸಲಿಟ್ಟಿದ್ದಾರೆ. ಬೆಳಗ್ಗೆ 10.15 ಬೆಜಟ್ ಮಂಡನೆ ಆರಂಭಿಸಿದ ಸಿಎಂ ಬೊಮ್ಮಾಯಿ ಅವರು ಸುಮಾರು 2.35 ಗಂಟೆ ಬಜೆಟ್ ಭಾಷಣವನ್ನು ಓದಿದರು. ಬಜೆಟ್ ಮಂಡನೆ ಮುಗಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು …
Read More »ಬಜೆಟ್ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸಿದ ಸಿಎಂ!
ಬೆಂಗಳೂರು: ಬಿಜೆಪಿ ಅವಧಿಯ ಕೊನೆಯ ಬಜೆಟ್ ಮಂಡನೆ ಇದಾಗಿದ್ದು ಮುಖ್ಯಮಂತ್ರಿ ಬೊಮ್ಮಾಯಿಯ ಎರಡನೇ ಆಯವ್ಯಯ ಮಂಡನೆ ಇದಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇ ಬೇಕು ಎನ್ನುವ ಗುರಿ ಹೊತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಾರಿಯ ಬಜೆಟ್ ಮೂಲಕವೂ ಎಲ್ಲಾ ವರ್ಗದ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಕೃಷಿ: ಕೃಷಿಕರಿಗೆ ಅನುಕೂಲವಾಗಲಿ ಎಂದು ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆಯ ಅಡಿಯಲ್ಲಿ ರೈತರಿಗೆ 10 ಸಾವಿರ …
Read More »ಖೈದಿಗಳ ಜೀವನ ಸುಧಾರಣೆಗೆ ಅಗತ್ಯ ಕ್ರಮ!
ಬೆಂಗಳೂರು: ಬಂದೀಖಾನೆ ಅಭಿವೃದ್ಧಿ ಮಂಡಳಿಯನ್ನು ರಚಿಸಲಾಗಿದ್ದು, ಖೈದಿಗಳ ಜೀವನ ಸುಧಾರಣೆಗೆ ಮತ್ತು ಶಿಕ್ಷೆಯ ಅವಧಿಯ ನಂತರ ಪುನರ್ವಸತಿಗೆ ಸಶಕೀರಣಗೊಳಿಸಲು ಅಗತ್ಯ ಕೌಶಲ್ಯಗಳನ್ನು ಹೆಚ್ಚಿಸುವ ಯೋಜನೆಗಳನ್ನು ರೂಪಿಸಲಾಗಿದೆ. ಖೈದಿಗಳಿಗೆ ನೀಡುವ ಕೂಲಿ ದರಗಳನ್ನು ಕನಿಷ್ಠ ವೇತನ ಕಾಯಿದೆ ಅನ್ವಯ ಹೆಚ್ಚಿಸಲು ಕ್ರಮವಹಿಸಲಾಗಿದ್ದು, ಕಾರಾಗೃಹಗಳ ಆಸ್ಪತ್ರೆಗಳ ನಿರ್ವಹಣೆಯನ್ನು ಸುಧಾರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ನಲ್ಲಿ ಘೋಷಣೆ ಮಾಡಿದರು. ವಿಜಯಪುರ, ಬೀದರ್, …
Read More »
Laxmi News 24×7