Breaking News

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ  ನಡೆಯಲಿಲ್ಲ. ನ್ಯಾಯಮೂರ್ತಿ ಸಂಜಯಕುಮಾರ್, ಅಲೋಕ ಆರಾಧ್ಯೆ ನೇತೃತ್ವದ ದ್ವಿಸದಸ್ಯ ಪೀಠದ ಎದುರು ಈ ಅರ್ಜಿಯ ವಿಚಾರಣೆ ನಡೆಸಲು ಕಳೆದ ವರ್ಷದ ಅಕ್ಟೊಬರ್‌ನಲ್ಲಿ ನಿಗದಿಯಾಗಿತ್ತು. ಆದರೆ ಇಬ್ಬರೂ ನ್ಯಾಯಮೂರ್ತಿಗಳು ಬೇರೆ ಬೇರೆ ಪೀಠಗಳಲ್ಲಿ ಮಹತ್ವದ ಪ್ರಕರಣಗಳ ವಿಚಾರಣೆ ನಡೆಸಲು ನಿಯುಕ್ತಿಗೊಂಡ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿಲ್ಲ ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 …

Read More »

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ? ರೈತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ‘ಅಕ್ರಮ-ಸಕ್ರಮ’ ಯೋಜನೆಯನ್ನು ಪುನರಾರಂಭಿಸಿದೆ. ಅನಧಿಕೃತ ಪಂಪ್‌ಸೆಟ್‌ಗಳಿಗೆ ಕಾನೂನುಬದ್ಧ ಸಂಪರ್ಕ ನೀಡಲಾಗುತ್ತಿದೆ. 500 ಮೀಟರ್ ಒಳಗೆ ಇರುವ ಪಂಪ್‌ಸೆಟ್‌ಗಳಿಗೆ ನಿಗದಿತ ಶುಲ್ಕದಲ್ಲಿ ಸಕ್ರಮಗೊಳಿಸಲಾಗುತ್ತದೆ. ದೂರವಿರುವ ಪಂಪ್‌ಸೆಟ್‌ಗಳಿಗೆ ಕುಸುಮ್-ಸಿ ಯೋಜನೆಯಡಿ ಸೌರಶಕ್ತಿ ಪಂಪ್‌ಸೆಟ್‌ ಅಳವಡಿಕೆಗೆ ಉತ್ತೇಜನ ನೀಡಲಾಗುತ್ತಿದೆ. ಇದರಿಂದ ರೈತರಿಗೆ ಉಚಿತ …

Read More »

ಉದ್ದವ್‌ಗೆ ಕೈಕೊಟ್ಟು ಶಿಂಧೆ ಸೇನಾಗೆ ಎಂಎನ್‌ಎಸ್‌ ಬಂಬಲ

ಮುಂಬೈ: ಮಹಾರಾಷ್ಟ್ರ ರಾಜಕೀಯ  ಹೇಗೆ ಬೇಕಾದರೂ ತಿರುವು ಪಡೆಯುತ್ತದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಹೋದರ ಉದ್ದವ್‌ ಠಾಕ್ರೆ  ಜೊತೆ ಮೈತ್ರಿ ಮಾಡಿಕೊಂಡಿದ್ದ ರಾಜ್‌ ಠಾಕ್ರೆಯ ಮಹಾರಾಷ್ಟ್ರ ನವ ನಿರ್ಮಾಣ ಸೇನೆ  ಈಗ ಶಿಂಧೆ ಬಣದ ಶಿವಸೇನೆಗೆ ಬೆಂಬಲ ಸೂಚಿಸಿದೆ. ಕಲ್ಯಾಣ್-ಡೊಂಬಿವಿಲಿ ಮುನ್ಸಿಪಲ್ ಕಾರ್ಪೊರೇಷನ್  ಮೇಯರ್‌ ಚುನಾವಣೆಗೆ ಎಂಎನ್‌ಎಸ್‌ ಏಕನಾಥ್ ಶಿಂಧೆ  ನೇತೃತ್ವದ ಶಿವಸೇನೆಗೆ ಬೆಂಬಲ ನೀಡಿದೆ. ರಾಜ್ ಠಾಕ್ರೆ  ಸ್ಥಳೀಯ ನಾಯಕರಿಗೆ ಈ ವಿಚಾರದ …

Read More »

ರೀಲ್ಸ್‌ಗೆ ವ್ಯಕ್ತಿ ಬಲಿ ಪಡೆದ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ತಿರುವನಂತಪುರಂ: ವ್ಯೂವ್ಸ್‌ಗಾಗಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಲೈಂಗಿಕ ಕಿರುಕುಳದ  ವೀಡಿಯೊವನ್ನು ಹಂಚಿಕೊಂಡಿದ್ದ ಶಿಂಜಿತಾ ಮುಸ್ತಫಾಳನ್ನು  ಕೇರಳ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೋಯಿಕ್ಕೋಡ್‌ನ ಬಡಗರದಲ್ಲಿರುವ ಸಂಬಂಧಿಕರ ಮನೆಯಲ್ಲಿದ ಆಕೆಯನ್ನು ಬಂಧಿಸಿದ್ದಾರೆ. ಖಾಸಗಿ ಬಸ್ಸಿನಲ್ಲಿ ದೀಪಕ್‌ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶಿಂಜಿತಾ ಮುಸ್ತಫಾ ಆರೋಪಿಸಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ದೀಪಕ್‌ ಮನನೊಂದು …

Read More »

ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

ಗದಗ: ಲಕ್ಕುಂಡಿಯಲ್ಲಿ (Lakkundi) ನಿಧಿ ಸಿಕ್ಕ ಗ್ರಾಮದಲ್ಲಿ ಕುಟುಂಬವೊಂದು ನಾಲ್ಕು ಶತಮಾನಗಳಷ್ಟು ಹಳೆಯದಾದ ಈಶ್ವರನ ದೇವಾಲಯದೊಳಗೆ (Temple) ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಹೌದು, ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ. ಈ ದೇವಾಲಯದೊಳಗೆ ನಾಲ್ಕನೇ …

Read More »

ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಸಿದ್ಧ – ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ವಿಶೇಷ ಅಧಿವೇಶನದಲ್ಲಿ  ಭಾಷಣ ಮಾಡಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ಬಾರದೇ ಇದ್ದರೆ ಕಾನೂನು ಹೋರಾಟ ನಡೆಸಲು ಮುಂದಾಗಿದೆ. ಜ.22ರ 11:15ರ ತನಕ ರಾಜ್ಯಪಾಲರ ಆಗಮನಕ್ಕೆ ಕಾದು, ಆ ಸಮಯದ ಒಳಗಾಗಿ ಬಾರದಿದ್ದರೆ 1 ಗಂಟೆಯೊಳಗೆ ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠ ಕದ ತಟ್ಟಲು ತೀರ್ಮಾನಿಸಿದೆ. ಇದೇ ವಿಚಾರವಾಗಿ ತುರ್ತಾಗಿ ದೆಹಲಿಗೆ ತೆರಳುವಂತೆ ಅಡ್ವೋಕೇಟ್ ಜನರಲ್ ಅವರಿಗೆ ಸಿಎಂ ಸೂಚನೆಯನ್ನೂ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜ್ಯಪಾಲರು ಹೇಳಿದಂತೆ 11 …

Read More »

ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ

ಗದಗ: ಲಕ್ಕುಂಡಿಯಲ್ಲಿ  6ನೇ ದಿನದ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಉತ್ಖನನ ವೇಳೆ ಹಸಿರು ಬಣ್ಣದ ನಾಗರಶಿಲೆ, ಸುಟ್ಟ ಮಣ್ಣಿನ ಬಿಲ್ಲೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಹಸಿರು ಬಣ್ಣದಲ್ಲಿ ನಾಗರ ಶಿಲೆ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೇ ಈ ಶಿಲೆ ಪತ್ತೆಯಾಗಿದ್ದು ನಿದಿ ಇದೆ ಎಂಬ ಸೂಚನೆ ಎನ್ನಲಾಗುತ್ತಿದೆ. ಉತ್ಖನನ ಜಾಗದ 01ನೇ ಬ್ಲಾಕ್ ನಲ್ಲಿ ಆರೇಳು ಚಿಕ್ಕ ಚಿಕ್ಕ ಮೂಳೆಯ ತುಂಡುಗಳು ಪತ್ತೆಯಾಗಿವೆ. ಸಿಕ್ಕ ಆ ಮೂಳೆಯ ತುಂಡನ್ನು …

Read More »

ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

ವಿಜಯಪುರ: ಜಿಲ್ಲೆಯಲ್ಲಿ ಚಡಚಣ (Chadachana) ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದುವೊಂದು ಪತ್ತೆಯಾಗಿದೆ. ಪತ್ತೆಯಾದ ರಣಹದ್ದಿಗೆ ಟ್ರ‍್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ವಸ್ತುವನ್ನು ಅಳವಡಿಸಲಾಗಿದೆ. ಜೊತೆಗೆ ಅದರ ಕಾಲಿನಲ್ಲಿ ಗುರುತಿನ ಸಂಖ್ಯೆಯ ಟ್ಯಾಗ್ ಇರುವುದು ಕಂಡುಬಂದಿದೆ. ರಣಹದ್ದು ಕಂಡ ಸ್ಥಳೀಯರು 112ಗೆ ಕರೆ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ. ನಂತರ ಠಾಣೆಗೆ ಅರಣ್ಯಾಧಿಕಾರಿಗಳು …

Read More »

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. Creadit kannada prabha ಬೆಂಗಳೂರು: ಧಾರಾವಾಹಿಯೊಂದರ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡು ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ …

Read More »

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಕಾಯಿ ಪೂಜೆ,ಭಂಡಾರದಲ್ಲಿ ಮಿಂದೆದ್ದ ಭಕ್ತರು

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಕಾಯಿ ಪೂಜೆ,ಭಂಡಾರದಲ್ಲಿ ಮಿಂದೆದ್ದ ಭಕ್ತರು ಗೋಕಾಕ ತಾಲೂಕಿನ ಕೊಣ್ಣೂರಲ್ಲಿರುವ ಗ್ರಾಮದೇವಿ (ದ್ಯಾಮಮ್ಮ) ಜಾತ್ರಾ ಮಹೋತ್ಸವ ಸಮಿತಿ ವತಿಯಿಂದ ಇದೆ ಪೆಬ್ರುವರಿ20 ರಿಂದ 25ರ ತನಕ ಜಾತ್ರೆಯ ಅಂಗವಾಗಿ ಇವತ್ತು ಮರಡಿಮಠದ ಶ್ರೀಗಳು ಆಶಿರ್ವಾದದೊಂದಿಗೆ ಡಿಸಿಸಿ ಬ್ಯಾಂಕ ನಿರ್ದೇಶಕ ಅಮರನಾಥ ಜಾರಾಕಿಹೋಳಿ ಮತ್ತು ಪಟ್ಣದ ಸರ್ವದರ್ಮದ ಹಿರಿಯರ ಹಾಗೂ ಯುವಕರ ಸಮ್ಮುಖದಲ್ಲಿ ಕಾಯಿ ಪೂಜೆ ನೇರವೆರಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ದೇವಿಯ ಅರ್ಚಕರಾದ ಬಡಿಗೇರ ಮನೆತನದವರು ಹೊಮದಲ್ಲಿ …

Read More »