ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಬಳಿ ಖಾಸಗಿ ಬಸ್ ಮತ್ತು ಫಾರ್ಚ್ಯೂನರ್ ಕಾರು ನಡುವೆ ಅಪಘಾತ ಸಂಭವಿಸಿ ಆಂಧ್ರ ಪ್ರದೇಶ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹುಬ್ಬಳ್ಳಿ ಮಾರ್ಗವಾಗಿ ಕಾರವಾರ ಕಡೆಗೆ ಹೊರಟಿದ್ದ ಕಾರು ಹಾಗೂ ಮಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ನಡುವೆ ಈ ಅವಘಡ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಗಾಯಾಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ …

Read More »

ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಕೊಪ್ಪಳ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ನಾಳೆ ಸಮಯ ನಿಗದಿಯಾಗಿದ್ದು ಅವರ ಭೇಟಿ ಬಳಿಕ‌ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು‌ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಸಿಎಂ ಹಾಗೂ ಡಿಸಿಎಂ ಭೇಟಿಗೆ ನನ್ನ ಆತ್ಮೀಯ ಮಿತ್ರರೂ ಆದ ಶಾಸಕ ಲಕ್ಷ್ಮಣ ಸವದಿ ವ್ಯವಸ್ಥೆ ಮಾಡಿದ್ದಾರೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಕೂಡ …

Read More »

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಹಾವೇರಿ: ದೇವೆಗೌಡರು ಇರುವ ಮೈತ್ರಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರು ನುಗ್ಗಿರುವುದು ಅತ್ಯಂತ ಖಂಡನೀಯ ವಿಚಾರ. ಅಭಿಪ್ರಾಯ ಭಿನ್ನ ಇರಬಹುದು. ಕನ್ನಡಿಗರ ಹೆಮ್ಮೆಯ ಮಾಜಿ ಪ್ರಧಾನಿ ಅವರ ಸಭೆಯಲ್ಲಿ ಹೀಗೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ರೌಡಿಸಂನ್ನು ಜನರು ತಿರಸ್ಕಾರ ಮಾಡುತ್ತಾರೆ. ಇದು ಕಾಂಗ್ರೆಸ್ ನವರ ಹತಾಶೆ ತೋರಿಸುತ್ತದೆ. ಹಲವು ಸಂದರ್ಭದಲ್ಲಿ ಕರ್ನಾಟಕ, ಕನ್ನಡದ ಪರ ನಿಂತವರು ಎಂದರು. ಗ್ಯಾರಂಟಿ …

Read More »

ಅಪ್ಪ ಮಕ್ಕಳ ಶಿಕಾರಿ ನಾನು ಮಾಡುತ್ತೇನೆ; ಈಶ್ವರಪ್ಪ ಕಿಡಿ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ, ಇಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕಿಳಿಯುವುದಾಗಿ ಹೇಳಿಕೆ ನೀಡಿದ ಈಶ್ವರಪ್ಪ ಅವರು ಇಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಬಳಿ ಪ್ರಚಾರ ನಡೆಸಿದರು. ಈ ಕುರಿತು ಮಾಹಿತಿ ನೀಡಿದ ಅವರು ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಇವತ್ತು ಕೋರ್ಟ್ ಮುಂಭಾಗದಲ್ಲಿ ವಕೀಲರನ್ನ ಭೇಟಿ ಮಾಡಿದ್ದೇನೆ. ವಕೀಲರು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಿಮ್ಮ ನಿರ್ಧಾರ ಸರಿಯಿದೆ ಬೆಂಬಲ ಕೊಡ್ತೇವೆ ಎಂದಿದ್ದಾರೆ …

Read More »

ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ವಿಜಯಪುರ: ಯಾವುದೇ ಕಾರಣಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ ಎಂದು ಸಾರಿದ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಟ್ಟದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಂದು ಹೇಳಿದರು.   ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾರು ಏನೇ ಮಾತನಾಡಿದರೂ ಭಾರತದ ಸಂವಿಧಾನ ಬದಲಾವಣೆ ಮಾಡಲು ಸಾಧ್ಯವಿಲ್ಲ, ಈ ವಿಷಯದನ್ನು ನಾನಲ್ಲ ಸ್ವಯಂ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು. …

Read More »

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು ಎಂಬುದು ಅವರಿಗೆ ಗೊತ್ತಿದೆ. ಹತ್ತು ವರ್ಷಗಳ ಆಡಳಿತದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ನೋಡಿ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು. ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ವಿಶ್ವದ ಆರ್ಥಿಕ ಮುಂಚೂಣಿಯ …

Read More »

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ ಧಾರವಾಡ: ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಲು ಕೋಚಿಂಗ್ ಸೆಂಟರ್‌ಗಳಲ್ಲಿ ಲಕ್ಷಾಂತರ ಹಣ ಸುರಿದು ತರಬೇತಿ ಪಡೆದುಕೊಳ್ಳುವುದು ಇತ್ತಿಚೆಗೆ ಅತೀಯಾಗಿ ನಡೆಯುತ್ತಿದೆ. ಆದರೆ ಹಣ ಖರ್ಚು ಮಾಡಲು ಸಾಧ್ಯವಾಗದ, ಆದರೆ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಅವರಿಗೆ ಗುರುವಾಗಿ ಸಹಾಯ ಮಾಡಿ ಗುರಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಧಾರವಾಡದ ಕೃಷಿ ವಿವಿಯ ಪ್ರಾಧ್ಯಾಪಕಿ ಡಾ.ಅಶ್ವಿನಿ ಅವರು. …

Read More »

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಬೆಳಗಾವಿ: ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎನ್ನುತ್ತಿರುವ ಕುಮಾರಸ್ವಾಮಿ ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೆಣ್ಣು ಮಕ್ಕಳು ದಡ್ಡರಾ? ಎಲ್ಲ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ ಇದು. ನಿಮ್ಮ ಬದುಕಿನಲ್ಲಿ ನಿಮ್ಮ ಬದಲಾವಣೆಗೆ ಶಕ್ತಿ ಕೊಡಲು ಪಂಚ ಗ್ಯಾರಂಟಿ ನೀಡಿದ್ದೇವೆ. ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿ ಎಲ್ಲ ಮಹಿಳೆ ಯರು ಪಕ್ಷಭೇದ ಮರೆತು …

Read More »

ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಅಂತ್ಯಕ್ರಿಯೆ

6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್​ (Dwarakish) ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ (Heart Attack) ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ನಿಧನದಿಂದ (Dwarakish No More) ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಇಡೀ ಸ್ಯಾಂಡಲ್​ವುಡ್ (Sandalwood) ಶೋಕ ಸಾಗರದಲ್ಲಿ ಮುಳುಗಿದೆ. ಹಿರಿಯ ನಟನ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಹಾಕಿದ್ದಾರೆ. ಸ್ಟಾರ್​ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ …

Read More »

ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ‍್ಯಾಂಕ್‌

ಧಾರವಾಡ: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ (ಯುಪಿಎಸ್‌ಸಿ) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ನಗರದ ಕೃಷಿ ವಿಶ್ವವಿದ್ಯಾಲಯದ ಪದವೀಧರೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ‍್ಯಾಂಕ್‌ ಪಡೆದಿದ್ದಾರೆ. ಸೌಭಾಗ್ಯ ಅವರು ದಾವಣಗೆರೆಯವರು. ಶರಣಯ್ಯ ಸ್ವಾಮಿ ಮತ್ತು ಶರಣಮ್ಮ ದಂಪತಿಯ ಪುತ್ರಿ. ಶರಣಯ್ಯ ಅವರು ನರ್ಸರಿ ನಡೆಸುತ್ತಿದ್ದಾರೆ, ಶರಣಮ್ಮ ಅವರು ಗೃಹಿಣಿ. ಸೌಭಾಗ್ಯ ಅವರು ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ‘ಬುದಕಿನಲ್ಲಿ ದೊಡ್ಡ ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದು ನಮ್ಮ …

Read More »