ಉಡುಪಿ: ಶ್ರೀ ಕೃಷ್ಣ ಮಠದಲ್ಲಿಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಸಡಗರ. ಪೊಡವಿಗೊಡೆಯನ ಜನ್ಮದಿನವನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ವೈಭವದಿಂದ ನೆರವೇರಿಸಲಾಗುತ್ತಿದೆ. ಬೆಳಗ್ಗಿನಿಂದಲೇ ಭಕ್ತರು ಮಠಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶರು ವಿಶೇಷ ಪೂಜೆ ನೆರವೇರಿಸಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಉಂಡೆ ಚಕ್ಕುಲಿಗಳು ಸಿದ್ಧಗೊಂಡಿದ್ದು, ಭಕ್ತರಿಗೆ ಹಂಚಲಾಗುತ್ತದೆ. ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ನಡೆದರೆ, ಸೆ.15ರಂದು ಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ಸಂಪನ್ನಗೊಳ್ಳಲಿದೆ. ಮೊಸರು ಕುಡಿಕೆ ಉತ್ಸವಕ್ಕೆ ರಥಬೀದಿಯ ಸುತ್ತಲೂ ತ್ರಿಕೋನಾಕೃತಿಯ …
Read More »ವಿರಸ ಮರೆತ ಜೋಡಿ, ಹಾರ ಬದಲಾಯಿಸಿಕೊಂಡು ಮತ್ತೆ ಒಂದಾದ ದಂಪತಿ
ಹಾಸನ/ಗಂಗಾವತಿ: ವಿಚ್ಛೇದನಕ್ಕೆ ಮುಂದಾಗಿದ್ದ ಮೂರು ಜೋಡಿಗಳು ಶನಿವಾರ ನಡೆದ ಲೋಕ್ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿದ್ದಾರೆ. ಜಿಲ್ಲೆಯಲ್ಲಿ 5,83,545 ಇತರೆ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರು ಫಲಾನುಭವಿಗಳಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಹೇಮಾವತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಜಿಲ್ಲೆಯ ಒಟ್ಟು 42 ನ್ಯಾಯಾಲಯಗಳಲ್ಲಿ ಸಂಧಾನ ಪ್ರಕ್ರಿಯೆ ಜರುಗಿದ್ದು, ಉತ್ತಮ ಫಲಿತಾಂಶ ಹೊರಬಿದ್ದಿದೆ. ನ್ಯಾಯಾಲಯಗಳಲ್ಲಿ …
Read More »ರಾಜ್ಯದಲ್ಲಿ ಸೆ.22ರಿಂದ ಜಾತಿ ಗಣತಿ; ನಿಮ್ಮ ಸಮೀಕ್ಷೆಯ ಕಾರ್ಯವಿಧಾನ ಹೀಗಿರಲಿದೆ
ರಾಜ್ಯದಲ್ಲಿ ಸೆ.22ರಿಂದ ಜಾತಿ ಗಣತಿ; ನಿಮ್ಮ ಸಮೀಕ್ಷೆಯ ಕಾರ್ಯವಿಧಾನ ಹೀಗಿರಲಿದೆ ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಆರಂಭವಾಗಲಿದೆ. 16 ದಿನಗಳ ಕಾಲ ನಡೆಯಲಿರುವ ಈ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಲು ಎಲ್ಲಾ ಸಿದ್ಧತೆ ನಡೆದಿದೆ. ಈ ಬಾರಿ ಕ್ಷಿಪ್ರ ಸಮಯದಲ್ಲಿ ಜಾತಿ ಗಣತಿ ನಡೆಸಲು ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಸಮೀಕ್ಷೆಯ ಕಾರ್ಯವಿಧಾನ ಹೇಗಿರಲಿದೆ ಎಂಬ ಸಮಗ್ರ ವರದಿ ಇಲ್ಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಅ.7ರ …
Read More »ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ,ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ ರಾಹುಲ ಶಿಂಧೆ ಭೇಟಿ
ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ,ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ ರಾಹುಲ ಶಿಂಧೆ ಭೇಟಿ ಚಿಕ್ಕೋಡಿ:ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ ರಾಹುಲ ಶಿಂಧೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ಮುರಾರ್ಜಿ ದೇಸಾಯಿ ಹಾಸ್ಟೇಲ್ ನ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತ್ತು ಮಾಡಲಾಗಿದೆ.ರಾತ್ರಿ ಊಟ ಮಾಡಿದ ಮಕ್ಕಳಲ್ಲಿ ತೊಂದರೆ …
Read More »ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ
ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ ಚಿಕ್ಕೋಡಿ:ಲಿಂಗಾಯತ ಪಂಚಮಸಾಲಿಗಳು ಜಾತಿ ಗಣತಿಯಲ್ಲಿ ಏನನ್ನ ಬರೆಸಬೇಕು ಎನ್ನುವ ಕುರಿತು ಸೆಪ್ಟೆಂಬರ್ 14 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕೋಡಿ ಪಟ್ಟಣದ ಕೇಶವ ಕಲಾ ಭವನದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮದ ಬಸವ ಜಯಜಯಮೃತ್ಯಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯ ಸರಕಾರದಿಂದ ಜಾತಿ …
Read More »ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ
ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ ನೇಕಾರರ ಪರ ನಿಂತ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ 2025-30ರ ನೂತನ ಜವಳಿ ನೀತಿಯನ್ನು ಜಾರಿಗೆ ತರಲು ಸಿದ್ಧತೆ ಹೊಸ ಜವಳಿ ನೀತಿ: 2025-30ರ ನೀತಿ ಜಾರಿಗೆ ಸಿದ್ಧತೆ ನೇಕಾರರಿಗೆ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ರಾಜ್ಯದಲ್ಲಿ ನೇಕಾರರ ಸಮಸ್ಯೆಗಳಿಗೆ ಪರಿಹಾರ ನೀಡಲು ಮತ್ತು ಅವರನ್ನು ಆರ್ಥಿಕವಾಗಿ …
Read More »ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್..! ಹೆಚ್ಚಾಯ್ತು ಶೂಸ್ ಕಳ್ಳರು
ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್..! ಹೆಚ್ಚಾಯ್ತು ಶೂಸ್ ಕಳ್ಳರು ಹುಬ್ಬಳ್ಳಿ ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್ ಆಗಿರಿ. ಮನೆ ಹೊರಗೆ ಇಟ್ಟಿದ್ದ ಶೂಸ್ಗಳ್ಳರು ಬರುತ್ತಿದ್ದು. ಗೋಪನಕೊಪ್ಪ ರೋಟ್ಸನ್ ಪಾರ್ಕ್ ಅಪಾರ್ಟ್ಮೆಂಟ್ದಲ್ಲಿ ಹೊರಗೆ ಇಟ್ಟಿದ್ದ ಶೂಸ್ಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳರ ಗ್ಯಾಂಗ್ವೊಂದು ಅಪಾರ್ಟ್ಮೆಂಟ್ಗಳನ್ನೇ ಟಾರ್ಗೆಟ್ ಮಾಡಿ, ಹೆಚ್ಚಿನ ಬೆಲೆ ಬಾಳುವ ಶೂಸ್ಗಳನ್ನು ಕಳ್ಳತನ ಮಾಡುತ್ತಿದ್ದಾರೆ. ಆ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೇ ರೊಟ್ಸನ್ ಅಪಾರ್ಟ್ಮೆಂಟ್ದಲ್ಲಿ ಸುಮಾರು …
Read More »ಸಾನ್ನಿಹಳ್ಳಿ ಶ್ರೀಗಳು ಜನಗಣತಿ ವಿಷಯ ಆರಂಭವಾದಾಗಿನಿಂದ ವೀರಶೈವ ಲಿಂಗಾಯತರಲ್ಲಿ ಗೊಂದಲ
ಸಾನ್ನಿಹಳ್ಳಿ ಶ್ರೀಗಳು ಜನಗಣತಿ ವಿಷಯ ಆರಂಭವಾದಾಗಿನಿಂದ ವೀರಶೈವ ಲಿಂಗಾಯತರಲ್ಲಿ ಗೊಂದಲ ಉಂಟಾಗಿದ್ದು, ಎಲ್ಲ ಸ್ವಾಮೀಜಿಗಳು ಸಮೂದಾಯ ಒಂದು ಮಾಡಲು ಹೊರಾಡುತ್ತಿದ್ದಾರೆ. ಆದರೆ ಶುಕ್ರವಾರ ಧಾರವಾಡದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದಲ್ಲಿ ನಾಡಿನ ಪ್ರತಿಷ್ಠಿತ ಸಾನ್ನಿಹಳ್ಳಿಯ ಶ್ರೀಗಳು ದಿಂಗಾಲೇಶ್ವರ ಶ್ರೀಗಳು ಬಟ್ಟೆ ಬದಲಾವಣೆ ಮಾಡಿದ್ದಾರೆ. ಕಾವಿ ಬಿಟ್ಟು ಬಿಳಿ ಬಟ್ಟೆ ಧರಿಸಿ ಗೊಸೂಂಬೆ ಆಗಿದ್ದಾರೆ ಎಂದು ನಮ್ಮ ಬಗ್ಗೆ ಮಾತನಾಡಿದ್ದಾರೆ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ …
Read More »ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ
ವಿಜಯಪುರ :ದ್ರಾಕ್ಷಿ ಬೆಳೆಗಾರರಿಂದ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ* ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ದ್ರಾಕ್ಷ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ರಾಜ್ಯದಲ್ಲೇ ಅತಿ ಹೆಚ್ಚು ದ್ರಾಕ್ಷ ಬೆಳೆಯುವ ವಿಜಯಪುರ ಜಿಲ್ಲೆಯಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡಿಕೊಡಬೇಕು ಹಾಗೂ 2024-25ನೇ ಸಾಲಿನ ದ್ರಾಕ್ಷ ವಿಮೆ ಹಣವನ್ನು ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು. ಇನ್ನೂ …
Read More »ಜೈನಾಪೂರ ಗ್ರಾ.ಪಂ ನ ನೂತನ ಅಧ್ಯಕ್ಯೆಯಾಗಿ ಸುಜಾತಾ ಸೋಲಬನ್ನವರ ಅವಿರೋಧ ಆಯ್ಕೆ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆಯಾಗಿ ಸುಜಾತಾ ಷಣ್ಮುಗ ಸೋಲಬನ್ನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕಾಗಿ ಇವತ್ತು ನಡೆದ ಚುನಾವಣೆಯಲ್ಲಿ ಸುಜಾತಾ ಸೋಲಬನ್ನವರ ಒಂದೇ ಅರ್ಜಿ ಸಲ್ಲಿಕೆಯಾಗಿದ್ದರಿಂದ ಚುನಾವಣಾ ಅಧಿಕಾರಿ ಕಮಲಾಕರಯವರು ಸುಜಾತಾ ಸೋಲಬನ್ನವರ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿದರು. ನೂತನ ಅಧ್ಯಕ್ಯೆಯಾಗಿ ಆಯ್ಕೆಯಾದ ಸುಜಾತಾ ಷಣ್ಮುಖ ಸೋಲಬನ್ನವರ ಅವರನ್ನು ಸತ್ಕರಿಸಿ ಗೌರವಿಸಲಾಯಿತು.ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ನನ್ನನೂ ಅವಿರೋಧವಾಗಿ ಆಯ್ಕೆಗೆ ಶ್ರಮಿಸಿದ ಸದಸ್ಯರಿಗೆ …
Read More »
Laxmi News 24×7