Breaking News

ಎನ್‌ಇಪಿಯಿಂದ ಕಲಿಕಾ ಸಾಮರ್ಥ್ಯ ಹೆಚ್ಚಳ: ಸಿಎಂ ಬೊಮ್ಮಾಯಿ

ಬೆಂಗಳೂರು: ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ “ಶಿಕ್ಷಣದಲ್ಲಿ ನಾಯಕತ್ವಕ್ಕಾಗಿ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉನ್ನತ ಶಿಕ್ಷಣದಿಂದ ನೂತನ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಈ ವರ್ಷ ಮಾಂಟೆಸರಿಯಿಂದ ಪ್ರಾರಂಭಿಸಲಾಗುತ್ತಿದೆ. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಮಕ್ಕಳು ಎಲ್ಲಾ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಂಡು ಜ್ಞಾನವಂತರಾಗಬೇಕು …

Read More »

ಅವಧಿಪೂರ್ವ ಚುನಾವಣೆ ಎದುರಿಸಲು ಸಿದ್ಧ: ಡಿ.ಕೆ.ಶಿವಕುಮಾರ್‌

ಶಿವಮೊಗ್ಗ: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಂದರೆ ಎದುರಿ ಸಲು ಕಾಂಗ್ರೆಸ್‌ ಪಕ್ಷ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅವ ಧಿಗೂ ಮುನ್ನ ಚುನಾವಣೆ ಬರುತ್ತದೆಯೇ ಎಂಬ ಬಗ್ಗೆ ಏನನ್ನೂ ಹೇಳುವುದಿಲ್ಲ. ಇದು ಸರಕಾರಕ್ಕೆ ಬಿಟ್ಟ ವಿಚಾರ. ನಾವಂತೂ ಚುನಾವಣೆಗೆ ಸನ್ನದ್ಧರಾಗಿದ್ದೇವೆ ಎಂದು ಹೇಳಿದರು. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ನಡೆದಿರುವ ಸಿದ್ಧತೆಗಳ ಬಗ್ಗೆ ಮುಂದಿನ ನಾಲ್ಕೈದು ದಿನಗಳಲ್ಲಿ …

Read More »

ಶಾಲಾ ಮಕ್ಕಳಿಗೆ ಡಿಜಿಟಲ್‌ ಆರೋಗ್ಯ ಕಾರ್ಡ್‌: ಡಾ| ದೊರೆಸ್ವಾಮಿ ಸಲಹೆ

ಬೆಂಗಳೂರು: ರಾಜ್ಯದ ಸರಕಾರಿ ಶಾಲಾ ಮಕ್ಕಳಿಗೆ ಡಿಜಿಟಲ್‌ ಆರೋಗ್ಯ ಕಾರ್ಡ್‌ ವಿತರಣೆ, ಮೌಲ್ಯಯುತ ಶಿಕ್ಷಣ, ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿರುವುದಾಗಿ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ| ಎಂ.ಆರ್‌. ದೊರೆಸ್ವಾಮಿ ತಿಳಿಸಿದರು.   ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿ ಶಿಕ್ಷಣ ಸುಧಾರಣೆಗಳ ಸಲಹೆಗಾರನಾಗಿದ್ದ ವೇಳೆ 18 ಶಿಫಾರಸುಗಳನ್ನು ನೀಡಿದ್ದೆ. ಈ ಪೈಕಿ ಕೆಲವು ಅನುಷ್ಠಾನವಾಗಿವೆ. 2ನೇ ಬಾರಿಗೆ ಸಲಹೆಗಾರನಾಗಿ ಆಯ್ಕೆಯಾದ …

Read More »

ಕನ್ನಡದ ಅಸ್ಮಿತೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾನೂನು ಜಾರಿಯಾಗಲಿ

ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ವಿಷಯದಲ್ಲಿ ಕನ್ನಡ ಭಾಷೆ ಸಮಗ್ರ ಅಭಿವೃದ್ದಿ ಮಸೂದೆ 2022 ಸಿದ್ಧ ವಾಗಿದ್ದು, ಈ ಬಗ್ಗೆ ಸಾರ್ವಜನಿಕ ಚರ್ಚೆ ಆರಂಭವಾಗಿದೆ. ಕನ್ನಡ ಅಭಿವೃದ್ದಿ ಪ್ರಾಧಿ ಕಾರ 2021ರಲ್ಲಿ ರೂಪಿಸಿದ ಮಸೂದೆಯನ್ನು ಕರ್ನಾಟಕ ಕಾನೂನು ಆಯೋಗಕ್ಕೆ ಕಳಿಸಿ ಸೂಕ್ತ ಸಲಹೆ ಪಡೆದು ಈಗ ಕರಡು ರೀತಿಯಲ್ಲಿ ಅಣಿಯಾಗಿದೆ. ಈಗಾಗಲೇ ಸದನಲ್ಲಿ ಮಂಡನೆಯಾಗಿರುವ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ-2022’ರಲ್ಲಿದ್ದ ದಂಡ ವಿಚಾರ, ಜಾರಿ ನಿರ್ದೇಶನ ವ್ಯವಸ್ಥೆ ಅಂಶಗಳಲ್ಲಿ …

Read More »

ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು

ಕರ್ನಾಟಕ ರಾಜ್ಯೋತ್ಸವಕ್ಕೆ ಕುಂದಾನಗರಿ ಬೆಳಗಾವಿಯಲ್ಲಿ ಭರದ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಜೊತೆಗೆ ನೆನಪಾಗೋದು ಹಿರೇಮಠದ ಹೋಳಿಗೆ ಊಟ. ಈ ವರ್ಷವೂ ಕನ್ನಡಮ್ಮನ ಜಾತ್ರೆಗೆ ಬರುವ ಕನ್ನಡಮ್ಮನ ಕಂದಮ್ಮಗಳಿಗೆ ಭರ್ಜರಿ ಹೋಳಿಗೆ ಊಟ ಸಿದ್ಧಗೊಳ್ಳುತ್ತಿದೆ. ಹೌದು ಹೌದು ಕರ್ನಾಟಕ ರಾಜ್ಯೋತ್ಸವದ ದಿನ ತಾಯಿ ಭುವನೇಶ್ವರಿಯ ತೇರು ಎಳೆಯಲು ಲಕ್ಷಾಂತರ ಕನ್ನಡಿಗರ ಸಮಾಗಮ ಬೆಳಗಾವಿಯಲ್ಲಿ ಆಗುತ್ತದೆ. ನಾಡಿನ ಮೂಲೆ ಮೂಲೆಯಿಂದ ಕನ್ನಡಿಗರು ಬೆಳಗಾವಿಗೆ ಬರುತ್ತಾರೆ. ಹೀಗೆ ಬರುವ ಕನ್ನಡಿಗರಿಗೆ ಹುಕ್ಕೇರಿಯ ಹಿರೇಮಠದ …

Read More »

499 ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಪಾಸಬುಕ್ ಶಾಸಕ ಶ್ರೀಮಂತ ಪಾಟೀಲರು ವಿತರಿಸಿದರು.

ಕಾಗವಾಡ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕಾಡಳಿತ ಶಿಶು ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 499 ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಪಾಸಬುಕ್ ಶಾಸಕ ಶ್ರೀಮಂತ ಪಾಟೀಲರು ವಿತರಿಸಿದರು. ಭಾನುವಾರದಂದು ಫರೀದಖಾನವಾಡಿ ಗ್ರಾಮದ ಕಟಿಗೇರಿ ಸಭಾ ಭವನದಲ್ಲಿ ಸುಕನ್ಯಾ ಸಮೃದ್ಧಿ ಪಾಸಬುಕ್ ವಿತರಣಾ ಕಾರ್ಯಕ್ರಮ ನೆರವೇರಿತು. ಕಾಗವಾಡ ತಾಲ್ಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತರು ಹಾಗೂ ಭಾಗ್ಯಲಕ್ಷ್ಮೀ ಫಲಾನುಭವಿಗಳು ಪಾಲ್ಗೊಂಡಿದ್ದರು. ಸುಕನ್ಯಾ ಯೋಜನೆಯ ಪಾಸಬುಕ್ ವಿತರಿಸಿ ಶಾಸಕ …

Read More »

ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು: ಡಿಕೆ ಶಿವಕುಮಾರ್

ಶಿವಮೊಗ್ಗ: ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಕ್ರಮ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಇದಕ್ಕೊಂದು ಕೊನೆ ಕಾಣಿಸಬೇಕು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳೇ ಸೋಮೋಟೊ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.   ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹುಟ್ಟಿರುವುದೇ ಭ್ರಷ್ಟಾಚಾರದಿಂದ, ಆಪರೇಷನ್ ಲೋಟಸ್ ನಿಂದ. ತೆಲಂಗಾಣದಲ್ಲಿ ಆಪರೇಷನ್ ಕಮಲ ನಡೆದಿದೆ, ರೆಡ್ ಹ್ಯಾಂಡ್ ಆಗಿ ಕೋಟಿ ಕೋಟಿ …

Read More »

ಅಪ್ಪು ಪ್ರೇರಣೆಯಿಂದ ಅಂಗಾಂಗ ದಾನ ಹೆಚ್ಚಳ

ಬೆಂಗಳೂರು: ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ (ಅಪ್ಪು) ಅವರು ನಮ್ಮನ್ನೆಲ್ಲ ಅಗಲಿ ಒಂದು ವರ್ಷವೇ ಕಳೆಯಿತು. ಆದರೆ, ಅವರ ನೆನಪುಗಳು ಮಾತ್ರ ಇನ್ನೂ ಸದಾ ಹಸಿಯಾಗಿವೆ. ಪುನೀತ್‌ ನಟನೆಗೆ ಮಾತ್ರ ಸೀಮಿತವಾಗದೇ, ಪರೋಕ್ಷವಾಗಿ ವಿವಿಧ ರೀತಿಯ ಸಮಾಜ ಸೇವೆಯಲ್ಲಿ ತೊಡಗಿದ್ದರು. ಸಾವಿನ ನಂತರ ಕಣ್ಣುಗಳನ್ನು ದಾನ ಮಾಡಿ, ನಾಲ್ಕು ಜನರಿಗೆ ಬೆಳಕಾಗಿರುವುದು ನಮಗೆಲ್ಲಾ ಗೊತ್ತೇ ಇದೆ. ಅವರ ಸ್ಫೂರ್ತಿ, ಪ್ರೇರಣೆಯಿಂದ ಪುನೀತ್‌ ಅವರ ಅಭಿಮಾನಿಗಳು ಸೇರಿದಂತೆ ನಾಡಿನಾದ್ಯಂತ ಸಹಸ್ರಾರು ಮಂದಿ ನೇತ್ರದಾನ …

Read More »

ಮುದ್ದೇಬಿಹಾಳ: ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಂದ ದಾಂಧಲೆ, ಕಲ್ಲೆಸೆತ

ಮುದ್ದೇಬಿಹಾಳ: ಪ್ರತಿ ಟನ್ ಕಬ್ಬಿಗೆ ಎಫ್‌ಆರ್ಪಿ ದರ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮುದ್ದೇಬಿಹಾಳ, ತಾಳಿಕೋಟೆ, ಬಸವನ ಬಾಗೇವಾಡಿ ತಾಲೂಕುಗಳ ಸಾವಿರಾರು ರೈತರು ಯರಗಲ್ಲ-ಮದರಿ ಬಳಿ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ, ಕಲ್ಲೆಸೆದು, ದಾಂಧಲೆ ನಡೆಸಿದ್ದಾರೆ.   ಅಪಾರ ಸಂಖ್ಯೆಯಲ್ಲಿದ್ದ ರೊಚ್ಚಿಗೆದ್ದಿದ್ದ ಕಬ್ಬು ಬೆಳೆಗಾರ ರೈತರನ್ನು ತಡೆಯಲು ಬೆರಳೆಣಿಕೆಯಷ್ಟು ಸಂಖ್ಯೆಯಲ್ಲಿದ್ದ ಪೊಲೀಸರು ಹರಸಾಹಸ ಪಟ್ಟರೂ ಪ್ರಯೋಜನ ಆಗಲಿಲ್ಲ. ಪೊಲೀಸರ ಕೋಟೆ ಭೇದಿಸಿ ಕಾರ್ಖಾನೆ ಒಳಗೆ ನುಗ್ಗಿದ ರೈತರು …

Read More »

ಗುಜರಾತ್; ವಲ್ಸಾಡ್ ಸಮೀಪ ಹಸುವಿಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು

ಅಹಮದಾಬಾದ್: ವೇಗದ ವಂದೇ ಭಾರತ್ ರೈಲು ಗುಜರಾತ್ ನ ವಲ್ಸಾಡ್ ನಲ್ಲಿ ಶನಿವಾರ (ಅಕ್ಟೋಬರ್ 29) ಹಸುವಿಗೆ ಡಿಕ್ಕಿ ಹೊಡೆದ ಘಟನೆ ಗುಜತಾತ್ ವಲ್ಸಾಡ್ ನ ಅತುಲ್ ಸಮೀಪ ದುರಂತ ನಡೆದಿರುವುದಾಗಿ ವರದಿ ತಿಳಿಸಿದೆ. ಮುಂಬೈ ಸೆಂಟ್ರಲ್ ಗುಜರಾತ್ ನಿಂದ ಗಾಂಧಿ ನಗರಕ್ಕೆ ವಂದೇ ಭಾರತ್ ರೈಲು ಸಂಚರಿಸುತ್ತಿದ್ದ ವೇಳೆಯಲ್ಲಿ ಈ ಅಫಘಾತ ಸಂಭವಿಸಿದೆ. ಒಂದೇ ಭಾರತ್ ರೈಲು ಹಸುವಿಗೆ ಡಿಕ್ಕಿ ಹೊಡೆದ ನಾಲ್ಕನೇ ಪ್ರಕರಣ ಇದಾಗಿದೆ. ಘಟನೆಯಿಂದಾಗಿ ವಂದೇ ಭಾರತ್ …

Read More »