Breaking News

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ಪ್ರಾಚಾರ್ಯ

ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ ಆರೋಪಿ. ಈತನ ವಿರುದ್ಧ ಪೋಕ್ಸೋ, ಲೈಂಗಿಕ ಕಿರುಕುಳ, ಜಾತಿ ನಿಂದನೆ ಸೇರಿದಂತೆ ಹಲವು ಕಾಯ್ದೆ, ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮೊದಲಿಗೆ ಸಭ್ಯನಾಗೇ ಇದ್ದ ಪ್ರಾಚಾರ್ಯ ಅಂಗಡಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳ ವಿಷಯದಲ್ಲಿ ಗಡಿ ಮೀರಿದ ವರ್ತನೆ ತೋರಲು ಹೋಗಿ ಈಗ ಫಜೀತಿಗೆ ಬಿದ್ದಿದ್ದಾನೆ. ವಿದ್ಯಾರ್ಥಿನಿಯನ್ನು …

Read More »

ಸಧ್ಯದಲ್ಲಿಯೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ:B.S.Y.

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಈಗಗಲೇ ದಿನಾಂಕ ಘೋಷಣೆಯಾಗಿದೆ. ಬಿಜೆಪಿ ಚುನಾವಣೆಗೆ ಸಿದ್ಧವಾಗಿದ್ದು, ಈಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದಲ್ಲಿ 4 ತಂಡಗಳಾಗಿ ವಿಜಯಸಂಕಲ್ಪ ಯಾತ್ರೆ ಮಾಡಿದ್ದೇವೆ. ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದ್ದು, ಬಿಜೆಪಿ ಮತ್ತೆ ಅದಿಕಾರಕ್ಕೆ ಬರುವುದು ಸೂರ್ಯ, ಚಂದ್ರ ಇರುವಷ್ಟೇ ಸತ್ಯ ಎಂದು ಹೇಳಿದರು. …

Read More »

ಕರ್ನಾಟಕ ಚುನಾವಣೆ-2023: ಚುನಾವಣಾಪೂರ್ವ ಸಮೀಕ್ಷೆಗಳು ಪ್ರಕಟ; ಯಾರಿಗೆ ಎಷ್ಟು? ಇಲ್ಲಿದೆ ಪೂರ್ತಿ ವಿವರ..

ನವದೆಹಲಿ: ಕರ್ನಾಟಕದ 2023ರ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾಪೂರ್ವ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಸದ್ಯಕ್ಕೆ ಐದು ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದ್ದು, ಸರಾಸರಿಯಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಕಂಡುಬಂದಿದೆ. ಎಬಿಪಿ ಸಿವೋಟರ್, ಮ್ಯಾಟ್ರಿಸ್​, ಲೋಕ್​ಪಾಲ್, ಪಾಪ್ಯುಲರ್ ಪೋಲ್ಸ್​​ ಮತ್ತು ಝೀ ನ್ಯೂಸ್​ ತಮ್ಮ ಚುನಾವಣಾಪೂರ್ವ ಸಮೀಕ್ಷೆಯನ್ನು ಪ್ರಕಟ ಮಾಡಿವೆ. ಎಬಿಪಿ ಸಿವೋಟರ್ ಚುನಾವಣಾಪೂರ್ವ ಸಮೀಕ್ಷೆ ಪ್ರಕಾರ ಕಾಂಗ್ರೆಸ್​ಗೆ 115ರಿಂದ 127 ಸ್ಥಾನ ಬರಲಿದ್ದು, ಬಿಜೆಪಿಗೆ 68-80 ಸ್ಥಾನ ಸಿಗಲಿದೆ. …

Read More »

ವಿಧಾನಸಭೆ ಚುನಾವಣೆ: ಎಬಿಪಿ ಸಿ -ವೋಟರ್ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಬಹುಮತ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಪೂರ್ವ ಸಮೀಕ್ಷೆ ಹೊರಬಿದ್ದಿದೆ. ಎಬಿಪಿ ಸಿ-ವೋಟರ್ ಸಮೀಕ್ಷೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ ಕರ್ನಾಟಕ ವಿಧಾನಸಭೆ ಚುನಾವಣೆ (224 ಸ್ಥಾನಗಳು) ಕಾಂಗ್ರೆಸ್‌ -115 – 127 ಬಿಜೆಪಿ- 68 – 80 ಜೆಡಿಎಸ್‌ -23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ-ವೋಟರ್ ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ. ಸಿಎಂ ಅಭ್ಯರ್ಥಿಗಳ ಪರವಾಗಿ ಮತದಾರರ ಒಲವು: …

Read More »

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶ

ಬೆಳಗಾವಿ : ಚುನಾವಣಾ ಆಯೋಗವು ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶವಿದ್ದು, ಏಪ್ರಿಲ್ 10 ರವರೆಗೂ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮಾ.29) ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವ ಮತದಾರರ ಹೆಸರನ್ನು ಮತದಾರರ …

Read More »

ನೀತಿ ಸಂಹಿತೆ ಜಾರಿ: ಯಾವೆಲ್ಲ ನಿಯಮಗಳು ಇರಲಿವೆ

ಬೆಂಗಳೂರು: 16ನೇ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಅಭ್ಯರ್ಥಿಗಳಿಗೆ ಹಾಗೂ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ನೀತಿ ಸಂಹಿತೆಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ಫಲಿತಾಂಶ ಬಂದು ಹೊಸ ಸರ್ಕಾರ ರಚನೆಯಾಗುವವರೆಗೆ ಈ ಸಂಹಿತೆಗಳು ಜಾರಿಯಲ್ಲಿರಲಿವೆ.   ಸಾಮಾನ್ಯ ಸಂಹಿತೆಗಳು 1. ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು ಧರ್ಮ, ಜಾತಿ, ಭಾಷೆ ಹಾಗೂ ಸಮುಯದಾಯಗಳ ನಡುವೆ ದ್ವೇಷ ಉಂಟು ಮಾಡುವಂಥ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗುವಂತಿಲ್ಲ. 2. …

Read More »

ಕರ್ನಾಟಕ ಚುನಾವಣೆ 2023 ವಿಶೇಷಗಳೇನು?

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಗೆ ಚುನಾವಣೆಯನ್ನು ಮೇ 10ಕ್ಕೆ ನಿಗದಿ ಪಡಿಸಿದ್ದು, ಈ ಬಾರಿಯ ಚುನಾವಣೆಯ ವಿಶೇಷಗಳೇನು ಎಂಬ ಮಾಹಿತಿ ಇಲ್ಲಿದೆ. ರಾಜ್ಯದಾದ್ಯಂತ 52,283 ಮತಗಟ್ಟೆಗಳಲ್ಲಿ 24,063 ನಗರ ಪ್ರದೇಶ ಹಾಗೂ 34,219 ಗ್ರಾಮೀಣ ಮತಗಟ್ಟೆಗಳು ಇವೆ. ಸರಾಸರಿ 888 ಮತದಾರರಿಗೊಂದು ಮತಗಟ್ಟೆಯು ಬರುತ್ತದೆ. 12,000 ಸೂಕ್ಷ್ಮ ಮತದಾನ ಕೇಂದ್ರಗಳನ್ನು ಗುರುತಿಸಲಾಗಿದ್ದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಸಾಲಿನ ರಾಜ್ಯ ಚುನಾವಣೆಯ ಮುಖ್ಯ ವಿಶೇಷಗಳೆಂದರೆ: * ರಾಜ್ಯದಲ್ಲಿ …

Read More »

2013, 2018 ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಏನಿತ್ತು ಗೊತ್ತಾ?

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ವೇಳಾಪಟ್ಟಿ ಘೋಷಣೆ ಮಾಡಿದೆ. ಆ ಪ್ರಕಾರ ಇಂದಿನಿಂದಲೇ ನೀತಿ ಸಂಹಿತಿ ಜಾರಿಯಾಗಿದ್ದು ಏಪ್ರಿಲ್ 13ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕಡೆಯ ದಿನ, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯುತ್ತದೆ. ಏಪ್ರಿಲ್ 24 ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆಯಲು ಕಡೆಯ ದಿನವಾಗಿರುತ್ತದೆ. ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು …

Read More »

ಬಿಜೆಪಿ ಸರ್ಕಾರ ಕಿತ್ತೆಸೆಯಿರಿ, ಬ್ರಾಂಡ್ ಕರ್ನಾಟಕ ನಿರ್ಮಿಸೋಣ: ಸುರ್ಜೆವಾಲ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ‘ಶಾಂತಿ ಮತ್ತು ಸಮೃದ್ಧಿಯ ಹೊಸ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ’ ಎಂದು ಕರೆ ನೀಡಿದ್ದಾರೆ.   …

Read More »

ಕರ್ನಾಟಕ ವಿಧಾನಸಭಾ ಚುನಾವಣೆ-2023 -ನೀತಿ ಸಂಹಿತೆ ಜಾರಿ, ಜಿಲ್ಲೆಯ ಎಲ್ಲೆಡೆ ಕಟ್ಟೆಚ್ಚರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೆ10 ಮತದಾನ ಹಾಗೂ ಮೆ 13 ರಂದು ಮತ ಎಣಿಕೆ ನಡೆಯಲಿವೆ. ಹಾಗಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.29) ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಮತದಾನ ದಿನಾಂಕ ಘೋಷಣೆಯಾಗಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯಲ್ಲಿ …

Read More »