Breaking News

ಜಾರಕಿಹೊಳಿ ಕುಟುಂಬದ ಮುಂದೆ ಮಂಡಿಯೂರಿದ ರಾಷ್ಟ್ರೀಯ ಪಕ್ಷಗಳು

ಬೆಳಗಾವಿ: ಅಣ್ಣ ಕಾಂಗ್ರೆಸ್‌ನಿಂದ ಸ್ಪರ್ಧೆ. ತಮ್ಮ ಬಿಜೆಪಿಯಿಂದ ಸಹೋದರನ ವಿರುದ್ಧವೇ ಸ್ಪರ್ಧೆ. ಅನಂತರ ಕಾಲ ಬದಲು. ಅಣ್ಣ ಬಿಜೆಪಿಯಿಂದ ಉಪಚುನಾವಣೆಯಲ್ಲಿ ಸ್ಪರ್ಧೆ. ಈ ಕಡೆ ಮತ್ತೊಬ್ಬ ಸಹೋದರ ಕಾಂಗ್ರೆಸ್‌ನಿಂದ ಅಣ್ಣನಿಗೆ ಪೈಪೋಟಿ… ಒಂದೇ ಕ್ಷೇತ್ರದಲ್ಲಿ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳ ಟಿಕೆಟ್‌ಗಳು ಒಂದೇ ಕುಟುಂಬದ ಇಬ್ಬರು ಸಹೋದರರ ನಡುವೆ ಹಂಚಿಕೆಯಾದ ಉದಾಹರಣೆ ಬಹುಶಃ ಬೇರೆ ಎಲ್ಲೂ ಇರಲಿಕ್ಕಿಲ್ಲ. ಆದರೆ ಅಂತಹ ಅಪರೂಪದ ಉದಾಹರಣೆ ಗಡಿ ಜಿಲ್ಲೆ ಬೆಳಗಾವಿಯಲ್ಲಿದೆ. ಗಡಿ ಜಿಲ್ಲೆ ಬೆಳಗಾವಿಯ …

Read More »

ಗೋಕಾಕ್, ಮೂಡಲಗಿ ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮನವಿ

ಇಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ( ರಿ )ಸಂಯೋಜಕ ಸಂಘಟನೆ ವತಿಯಿಂದ ಭೇಟಿಯಾಗಿ ಗೋಕಾಕ್, ಮೂಡಲಗಿ ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಲಾಯಿತು. ಹಾಗೂ ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದಲ್ಲಿ ದಲಿತ ಕುಟುಂಬ ದೌರ್ಜನ್ಯ ಕೊಳಗಾಗಿದೆ ಅವರಿಗೆ ಸರ್ಕಾರದ ಪರಿಹಾರ ಹಾಗೂ ಸೂಕ್ತ ನ್ಯಾಯ ಹಾಗೂ ಭದ್ರತೆ ಒದಗಿಸುವಂತೆ ಜಿಲ್ಲಾಧಿಕಾರಿಯವರನ್ನು ಕೋರಲಾಯಿತು. ಈ ಸಂದರ್ಭದಲ್ಲಿ ವಿಠಲ ಡಿ ಸಗರಮ್ಮನವರ ಬಾಗಲಕೋಟ್ ಜಿಲ್ಲಾ …

Read More »

ಸುದೀಪ್ ಭೇಟಿಯಾದ ಡಿ.ಕೆ. ಶಿ. ರಾಜಕೀಯ ಎಂಟ್ರಿಗೆ ವೇದಿಕೆ ಸಿದ್ದ?

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕಿಚ್ಚನ ರಾಜಕೀಯ ಎಂಟ್ರಿಗೆ ವೇದಿಕೆ ಸಿದ್ದವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.   ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಿಚ್ಚ ಸುದೀಪ್ ಅವರನ್ನು ಬೆಂಗಳೂರಿನ ಅವರ ಮನೆಯಲ್ಲಿ ಭೇಟಿ ಮಾಡಿದರು. ಈ ಭೇಟಿಯ ಫೋಟೋಗಳು ಇದೀಗ ವೈರಲ್ ಆಗುತ್ತಿದೆ. ಕಿಚ್ಚ ಸುದೀಪ್ ಅವರ ರಾಜಕೀಯ ಪದಾರ್ಪಣೆ ಕುರಿತು ಅವರು ಚರ್ಚಿಸಿದ್ದಾರೆಯೇ ಎಂಬುದನ್ನು ನಟ …

Read More »

ಕುರಿಗಳ ಮೇಲೆ ತೋಳಗಳಿಂದ ದಾಳಿ

ರಾತ್ರಿ ಹೊತ್ತಿನಲ್ಲಿ ತೋಟದಲ್ಲಿ ನಿಲ್ಲಿಸಲಾಗಿದ್ದ ಕುರಿಗಳ ಮೇಲೆ ತೋಳಗಳು ದಾಳಿ ಮಾಡಿದ್ದು ಈ ದಾಳಿಯಲ್ಲಿ ಸುಮಾರು 25 ಕುರಿಗಳು ದಾರುಣ ವಾಗಿ ಸಾವನ್ನೊಪ್ಪಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಬೊಮ್ಮನಾಳ ಗ್ರಾಮದ ರಬಕವಿ ಅವರ ತೋಟದಲ್ಲಿ ನಿಲ್ಲಿಸಲಾಗಿದ್ದ ಮಲ್ಲಪ್ಪ ಹೀರೆಕೂಡಿ ಅವರಿಗೆ ಸೇರಿದ ಕುರಿಗಳು ಇವಾಗಿವೆ. ಅಲ್ಲದೆ ಕುರಿಗಳ ಮಾಲಿಕ ಮಲ್ಲಪ್ಪ ಅವರು ಊಟಕ್ಕೆ ಹೋದ ಸಮಯದಲ್ಲಿ ಈ ಘಟನೆ ನಡೆದಿದೆ.

Read More »

ನೀರಾವರಿ ಇಲಾಖೆಗೆ 400 ಎಂಜಿನಿಯರ್‌ ನೇಮಕಕ್ಕೆ ಅನುಮತಿ: ಸಚಿವ ಕಾರಜೋಳ

ಬೆಂಗಳೂರು: ರಾಜ್ಯದ ನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ನೀರಾವರಿ ಇಲಾಖೆಯಲ್ಲಿ 400 ಎಂಜಿನಿಯರ್‌ಗಳ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಅಸಿಸ್ಟೆಂಟ್‌ ಎಂಜಿನಿಯರ್‌, ಜೂನಿಯರ್‌ ಎಂಜಿನಿಯರ್‌ ನೇಮಕ ಆಗಿಲ್ಲ.   ಸಾವಿರ ಹುದ್ದೆ ನೇಮಕವಾಗಬೇಕಾಗಿದೆ. ಈ ಹಿನ್ನೆಲೆ ಯಲ್ಲಿ ಈಗ 300 ಅಸಿಸ್ಟೆಂಟ್‌ ಎಂಜಿನಿಯರ್‌ ಹಾಗೂ 100 ಜೂನಿಯರ್‌ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

Read More »

ಹಾಲಿ ಶಾಸಕರಿಗೆ ಟಿಕೆಟ್‌ ಪಕ್ಕಾ: ಆಕಾಂಕ್ಷಿಗಳಲ್ಲಿ ತಳಮಳ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಹಾಲಿ ಶಾಸಕರಿಗೆ ಟಿಕೆಟ್‌ ಬಹುತೇಕ ಪಕ್ಕಾ ಆಗಿರುವುದರಿಂದ ಆ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದವರಲ್ಲಿ ತಳಮಳ ಶುರುವಾಗಿದೆ.   ತಮಗೇ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಿಂದ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳಿಗೆ ನಿರಾಶೆಯಾಗಿದ್ದು, ಇದರ ಪರಿಣಾಮ ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಅಥವಾ ಪಕ್ಷಾಂತರ ಕಾಣಿಸಬಹುದು. ಆದರೆ ಬಹುತೇಕ ಕ್ಷೇತ್ರಗಳಲ್ಲಿ ಪ್ರಭಾವಿ ಶಾಸಕರ ವಿರುದ್ಧ ‘ನಾಮಕಾವಸ್ಥೆ’ಗೆ ಅರ್ಜಿ ಸಲ್ಲಿಸಿರುವವರ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ. ಎಂ.ಬಿ.ಪಾಟೀಲ್‌, ಡಿ.ಕೆ.ಶಿವಕುಮಾರ್‌, …

Read More »

ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಡಿರುವ ಆರೋಪಗಳಲ್ಲಿ ಸತ್ಯವಿದೆ:ಅಶ್ವತ್ಥನಾರಾಯಣ

ರಾಮನಗರ: ಸಿ.ಡಿ. ಪ್ರಕರಣದ ಕುರಿತು ಡಿ.ಕೆ. ಶಿವಕುಮಾರ್ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಮಾಡಿರುವ ಆರೋಪಗಳಲ್ಲಿ ಸತ್ಯವಿದೆ. ಈ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಬಿಡದಿಯಲ್ಲಿ ಗುರುವಾರ ಬಿಜೆಪಿ ಪ್ರಮುಖರ ಸಭೆ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ ಕಾಂಗ್ರೆಸ್ ಅನ್ನು ಬ್ಲಾಕ್‌ಮೇಲರ್‌ಗಳ ಪಕ್ಷ, ಸಿ.ಡಿ. ‍ಪಕ್ಷ ಎನ್ನುತ್ತಾರೆ. ವಿಶೇಷವಾಗಿ ಕೆಪಿಸಿಸಿ ಅಧ್ಯಕ್ಷರು ಅದರಲ್ಲಿ ಪರಿಣತರು. ಎಲ್ಲರ ಸಿ.ಡಿ. …

Read More »

ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಬಿಟ್ಟರೆ ಏನೂ ಮಾಡಿಲ್ಲ.

ಬೀದರ್: ‘ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಬಿಟ್ಟರೆ ಏನೂ ಮಾಡಿಲ್ಲ. ಬಿಜೆಪಿಗೆ ಲೂಟಿ ಹೊಡೆಯುವುದು ಬಿಟ್ಟರೆ ಬೇರೆ ಕೆಲಸವಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ‘ಬಿಜೆಪಿ ಸರ್ಕಾರ ಜನರ ರಕ್ತ ಹೀರಲು ಶುರು ಮಾಡಿದೆ. ಕಮಿಷನ್‌ ಕೊಡಲು ಸಾಧ್ಯವಾಗದೇ ಬೆಳಗಾವಿ, ಬೆಂಗಳೂರು, ತಮಕೂರಿನ ಗುತ್ತಿಗೆದಾರರು ಮೃತಪಟ್ಟರು. ಒಬ್ಬರು ದಯಾ ಮರಣ ಕೋರಿದರು. ಗುತ್ತಿಗೆದಾರರ ಸಂಘದವರು ನೇರವಾಗಿ ಪ್ರಧಾನಮಂತ್ರಿಗೆ ಪತ್ರ ಬರೆದರು. ಲಂಚ ಕೊಡದೆ ಯಾವ ಕೆಲಸವೂ …

Read More »

ಆಪ್‌ ಕೌನ್ಸಿಲರ್‌ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ :ಕೇಜ್ರಿವಾಲ್‌

ನವದೆಹಲಿ: 2022 ರ ಡಿ.4ರಂದು ನಡೆದಿದ್ದ ದೆಹಲಿ ಪಾಲಿಕೆ ಚುನಾವಣೆಯ 250 ಸ್ಥಾನಗಳಲ್ಲಿ 134 ಸ್ಥಾನಗಳನ್ನು ಗೆಲ್ಲುವ ಮೂಲಕ ಆಮ್‌ ಆದ್ಮಿ ಪಾರ್ಟಿ ಬಿಜೆಪಿ ಪಾಳಯವನ್ನು ನಡುಗಿಸಿತ್ತು. ಆದರೆ ಇದೀಗ ಈ ಕಿಚ್ಚು ಮೇಯರ್‌ ಚುನಾವಣೆಗೂ ತಟ್ಟಿದೆ.   ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ದೆಹಲಿ ಲೆಫ್ಟಿನಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ ನಡುವಿನ ಭಾರೀ ಕೆಸರೆರಚಾಟದಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ದೆಹಲಿ ಪಾಲಿಕೆ ಮೇಯರ್‌ ಚುನಾವಣೆ ಫೆ.6 ಕ್ಕೆ ನಡೆಯಲಿದೆ. …

Read More »

ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ಸುತ್ತ ಮುತ್ತ ಸೂಕ್ತವಾದ ಪ್ರದೇಶ ನೀಡಿದರೆ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುವುದು. ಸಾಧ್ಯವಾದರೆ ಇದೇ ಬಜೆಟ್‌ನಲ್ಲಿ ಜವಳಿ ಪಾರ್ಕಗೆ ಅವಕಾಶ ನೀಡಲಾಗುವುದು ಎಂದು ರಾಜ್ಯ ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.   ಶುಕ್ರವಾರ ಬನಹಟ್ಟಿ ಎಸ್‌ಆರ್‌ಎ ಮೈದಾನದಲ್ಲಿ ದೇವರದಾಸಿಮಯ್ಯ ಹಟಗಾರ ಜಗದ್ಗುರು ಚಿಕ್ಕರೇವಣಸಿದ್ಧ ಶಿವಶರಣರ ಪೀಠಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಜವಳಿ ಪಾರ್ಕ್ ನಿರ್ಮಾಣದಿಂದ ಈ ಭಾಗದ ೨೫ ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗವಕಾಶ ಕಲ್ಪಿಸಲಾಗುವುದು. …

Read More »