Breaking News

ರೈತ ದಸರಾದಲ್ಲಿ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ; ಪ್ರಥಮ ಸ್ಥಾನ ಪಡೆದ ಬೆಂಗಳೂರಿನ ಗೀತಾ ಚೌಡಯ್ಯ

ಮೈಸೂರು: ನಾಡಹಬ್ಬ ದಸರಾದ ಅಂಗವಾಗಿ ರೈತ ದಸರಾ ಸಮಿತಿ ವತಿಯಿಂದ ಶನಿವಾರ ಜೆ.ಕೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಗೀತಾ ಚೌಡಯ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅವರ ಹಸು 46.690 ಕೆ.ಜಿ ಹಾಲು ನೀಡುವ ಮೂಲಕ 50 ಸಾವಿರ ರೂಪಾಯಿ ಮೊತ್ತದ ಚೆಕ್​ ಹಾಗೂ ಟ್ರೋಫಿಯನ್ನು ತನ್ನ ಮಾಲೀಕನಿಗೆ ದೊರಕಿಸಿಕೊಟ್ಟಿದೆ. ಮಂಡ್ಯ ಜಿಲ್ಲೆಯ ದುದ್ದಗ್ರಾಮದ ಶೀರ ಹೆಗಡೆ ಅವರ ಹಸು 36.450 ಕೆ.ಜಿ ಹಾಲು …

Read More »

ಕಲಬುರಗಿಯಲ್ಲಿ ಬ್ಯೂಟಿಷಿಯನ್ ಬರ್ಬರ ಕೊಲೆ.. 2 ನೇ ಪತಿ ಮೇಲೆ ಶಂಕೆ

ಕಲಬುರಗಿ: ಬ್ಯೂಟಿಷಿಯನ್​ ಕುತ್ತಿಗೆಗೆ ದುಪ್ಪಟ್ಟದಿಂದ ಬಿಗಿದು, ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಶಾಂತಿ ನಗರದಲ್ಲಿ ನಡೆದಿದೆ. ಶಾಹಿನಾ ಬಾನು (35) ಕೊಲೆಯಾದ ಮಹಿಳೆ. ಬ್ಯೂಟಿಷಿಯನ್ ಆಗಿದ್ದ ಶಾಹಿನಾ ಬಾನು ಮೊದಲು ಸೈಯದ್ ಜಿಲಾನಿ ಎಂಬಾತನ ಜೊತೆ ಮದುವೆಯಾಗಿದ್ದು, ಒಂದು ಗಂಡು ಮಗು ಕೂಡ ಇದೆ. ಆದರೆ ದಂಪತಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ವಿಚ್ಛೇದನ ಪಡೆದಿದ್ದಾರೆ. ಶಾಹಿನಾ ಬಾನು ಜೊತೆಗೆ ಡೈವರ್ಸ್​ ಪಡೆದ ಮೇಲೆ ಆಕೆಯ ಮಾಜಿ ಪತಿ …

Read More »

ಪೊಲೀಸ್ ಹುತಾತ್ಮರ ದಿನಾಚರಣೆ: ಗೌರವ ಸಲ್ಲಿಕೆ ವೇಳೆ ಕಣ್ಣೀರು ಹಾಕಿದ ಮೃತ ಪೊಲೀಸ್ ತಾಯಿ

ಧಾರವಾಡ: ಇಂದು ಪೊಲೀಸ್ ಹುತಾತ್ಮರ ದಿನಾಚರಣೆ ನಿಮಿತ್ತ ಧಾರವಾಡ ಜಿಲ್ಲಾ ಡಿಎಆರ್ ಮೈದಾನದಲ್ಲಿ ಪೊಲೀಸ್​ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ, ಹುತಾತ್ಮ ಪೊಲೀಸ್​ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸುವಾಗ ಮೃತ ಹುತಾತ್ಮ ಪೊಲೀಸ್​ ಕಾನ್ಸ್​ಟೇಬಲ್ ಹುಚ್ಚಪ್ಪ ಮಲ್ಲಣ್ಣನವರ್​ ಕುಟುಂಬಸ್ಥರು ಕಣ್ಣೀರು ಹಾಕಿದರು‌. ಗೌರವ ನಮನ ಸಲ್ಲಿಸುವ ವೇಳೆ ಮೃತ ಪೊಲೀಸ್ ತಾಯಿ ನೀಲವ್ವ, ತಂದೆ ಹನುಮಪ್ಪ, ತಂಗಿ, ಅಕ್ಕ, ಮಾವ ಮತ್ತು ತಮ್ಮ ಮಲ್ಲಿಕಾರ್ಜುನ ಮೃತ ಹುಚ್ಚಪ್ಪನನ್ನು ನೆನೆದು …

Read More »

ದಸರಾ ಹಬ್ಬದ ಪ್ರಯುಕ್ತ ನಡೆದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದ ಸಮಾರಂಭದಲ್ಲಿ ಶಾಸಕ ಬಿ ಎಸ್ ವಿಜಯೇಂದ್ರ ಭಾಗವಹಿಸಿದ್ದರು.

ಚಿಕ್ಕೋಡಿ: ಆದಷ್ಟು ಬೇಗನೆ ಬಿಜೆಪಿ ಪಕ್ಷಕ್ಕೆ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ನೇಮಕಾತಿ ಮಾಡಲಾಗುವುದು ಎಂದು ಶಿಕಾರಿಪುರದ ಶಾಸಕ ಬಿ ವೈ ವಿಜಯೇಂದ್ರ ಹೇಳಿದರು. ದಸರಾ ಹಬ್ಬದ ಪ್ರಯುಕ್ತ ಹುಕ್ಕೇರಿ ಹಿರೇಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಚಂದ್ರಶೇಖರ ಶಿವಾಚಾರ್ಯರ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು.ಯಡಿಯೂರಪ್ಪ ಹಿರಿಯರು ಇದ್ದಾರೆ. ಅವರು ಯಾವಾಗ ಬೇಕಾದರೂ ರಾಜ್ಯ ಪ್ರವಾಸ ಮಾಡಬಹುದು. ಅವರಿಗೆ ನೀವು ಪ್ರವಾಸ ಮಾಡಬೇಡಿ ಎಂದು ಯಾರೂ ಹೇಳಿಲ್ಲ. ಯಡಿಯೂರಪ್ಪ …

Read More »

ಆಸ್ತಿ ತೆರಿಗೆ ಠರಾವ್ ತಿರುಚಿದವರ ವಿರುದ್ಧ ತನಿಖೆಗೆ‌ ನಿರ್ಧಾರ: ಪಾಲಿಕೆ ಸಭೆ ಸಚಿವ ಸತೀಶ ಜಾರಕಿಹೊಳಿ ಬಂದ 10‌ ನಿಮಿಷಕ್ಕೆ ಅಂತ್ಯ

ಬೆಳಗಾವಿ: ಇಂದು ನಡೆದ ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಸ್ತಿ ಕರ ಹೆಚ್ಚಳ ವಿಚಾರದಲ್ಲಿ ಸಾಕಷ್ಟು ಸದ್ದು ಗದ್ದಲ ನಡೆಯಿತು. ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಕ್ಸಮರಕ್ಕೆ ಪಾಲಿಕೆ ಸಾಕ್ಷಿಯಾಯಿತು. ಪಾಲಿಕೆ ಆಯುಕ್ತರ ವಿರುದ್ಧ 2024/25ನೇ ಸಾಲಿಗೆ ಆಸ್ತಿ ಕರ ಹೆಚ್ಚಿಸುವ ಠರಾವು ತಿರುಚಿದ್ದಿರಿ ಎಂದು ಆಡಳಿತ ಸದಸ್ಯರು ಆರೋಪಿಸಿದರೆ, ಇದಕ್ಕೆ ಮೇಯರ್ ಅವರು ಕೂಡ ಸಹಿ ಮಾಡಿದ್ದಾರಲ್ಲ ಎಂದು ವಿಪಕ್ಷ ಸದಸ್ಯರು ಹರಿಹಾಯ್ದರು. ಹೌದು ಇಂದು ಮಧ್ಯಾಹ್ನ …

Read More »

ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.‌ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ …

Read More »

ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್‌ ಖರೀದಿ: ಮುಖ್ಯಮಂತ್ರಿ

ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5,675 ಹೊಸ ಬಸ್‌ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.   ಗೃಹ ಕಚೇರಿ ಕೃಷ್ಣಾದಲ್ಲಿ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು. ಶಕ್ತಿ ಯೋಜನೆಯಿಂದ ರಾಜ್ಯ …

Read More »

ನನ್ನ ಹಾಗೂ ಸತೀಶ್​ ಜಾರಕಿಹೊಳಿ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದ ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿ: ನನ್ನ ಮೌನವೂ ವೀಕ್ನೆಸ್ ಅಲ್ಲ ಎನ್ನುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಬಂಡಾಯದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ‌. ಮೊನ್ನೆಯಷ್ಟೇ ಖಾಸಗಿ ಮಾಧ್ಯಮದ ಜೊತೆ ಮಾತನಾಡುತ್ತಿದ್ದ ವೇಳೆ ನನ್ನ ಮೌನ ನನ್ನ ವೀಕ್ನೆಸ್ ಅಲ್ಲ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ವಿಚಾರದ ಬಗ್ಗೆ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಉತ್ತರಿಸಿದರು. ಜಿಲ್ಲಾ ಕಾಂಗ್ರೆಸ್​ನಲ್ಲಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಶಿಂಧಿಕುರಬೇಟ ಗ್ರಾಮದಲ್ಲಿ ಶ್ರೀ ಬಲಭೀಮ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಸೂಪರ್ ಸೀಡ್ ತೂಗುಗತ್ತಿ

ಬೆಳಗಾವಿ: ಒಂದು ಕಡೆ ತಮ್ಮದೇ ಸರ್ಕಾರದ ವಿರುದ್ಧ ಸಚಿವ ಸತೀಶ್​ ಜಾರಕಿಹೊಳಿ ಮುನಿಸು ದೊಡ್ಡ ಸಂಚಲನ ಸೃಷ್ಟಿಸಿದರೆ, ಮತ್ತೊಂದೆಡೆ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್​ಗೆ ಹುನ್ನಾರ ನಡೆದಿದೆಯಾ ಎಂಬ ಅನುಮಾನ‌ ಮೂಡಿದೆ. ಇದರಿಂದ ಇಂದು ನಡೆಯಲಿರುವ ಪಾಲಿಕೆ‌ ಸಾಮಾನ್ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಹೀಗೊಂದು‌ ಅನುಮಾನ‌ ದಟ್ಟವಾಗಲು ಕಾರಣ, ಪಾಲಿಕೆ ಮೆಯರ್ ಶೋಭಾ ಸೋಮನಾಚೆ ಅವರು. ಅಕ್ಟೋಬರ್ 17 ರಂದು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ. …

Read More »