ಯಲ್ಲಮ್ಮನಗುಡ್ಡ :ಯಲ್ಲಮ್ಮನಗುಡ್ಡದಲ್ಲಿ ಮಾರ್ಚ್ 13ರಿಂದ 17ರವರೆಗೆ ಹುಂಡಿ ಎಣಿಕೆ ಮಾಡಲಾಗಿದ್ದು, ₹1.81 ಕೋಟಿಗಿಂತ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2023ರ ಜನವರಿ ಹಾಗೂ ಫೆಬ್ರುವರಿಯಲ್ಲಿ ನಡೆದ ಬನದ ಹುಣ್ಣಿಮೆ ಮತ್ತು ಭಾರತ ಹುಣ್ಣಿಮೆ ಜಾತ್ರೆಗೆ ಬಂದಿದ್ದ ಭಕ್ತರು, ಯಲ್ಲಮ್ಮ ದೇವಿ ದೇವಸ್ಥಾನ ಹುಂಡಿಯಲ್ಲಿ ಹಾಕಿದ್ದ ₹1.66 ಕೋಟಿ ನಗದು, ₹12.83 ಲಕ್ಷ ಮೌಲ್ಯದ 235 ಗ್ರಾಂ ಚಿನ್ನಾಭರಣ ಹಾಗೂ ₹2.46 ಲಕ್ಷ ಮೌಲ್ಯದ 3.7 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. …
Read More »ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಪುನೀತ್ ರಾಜಕುಮಾರ್ ತಂಗುದಾಣವಾಗಿ ಹೊಸ ರೂಪಕೊಟ್ಟಿದ್ದಾರೆ.
ಮೂಡಲಗಿ: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಬಳಿ ಹಾಳುಬಿದ್ದ ತಂಗುದಾಣಕ್ಕೆ ಶುಕ್ರವಾರ ಸುಣ್ಣ ಬಣ್ಣ ಬಳೆದು ಪುನೀತ್ ರಾಜಕುಮಾರ್ ತಂಗುದಾಣವಾಗಿ ರೂಪಾಂತರಗೊಂಡು ಎಲ್ಲರ ಕಣ್ಮನ ಸೆಳೆಯಿತು. ಇಲ್ಲಿಯ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಹೊಸ ರೂಪಕೊಟ್ಟಿದ್ದಾರೆ. ಪುನೀತ್ ರಾಜಕುಮಾರ್ ಜನ್ಮದಿನದ ಅಂಗವಾಗಿ ಶುಕ್ರವಾರ ನೂರಾರು ಅಭಿಮಾನಗಳೊಂದಿಗೆ ತಂಗುದಾಣದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು. ತಂಗುದಾಣವ್ನು ಕನ್ನಡ ಧ್ವಜಗಳು, ತಳಿರು ತೋರಣದಿಂದ ಅಲಂಕಾರ ಮಾಡಲಾಗಿತ್ತು. ಶಾಲಾ …
Read More »ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ
ಗೋಕಾಕ: ವನಿತೆಯರು ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಸಾಮರ್ಥ್ಯ ತೋರಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೋಕಾಕ ತಾಲ್ಲೂಕು ಘಟಕ ಅಧ್ಯಕ್ಷೆ ಭಾರತಿ ಮದಭಾವಿ ಹೇಳಿದರು. ಇಲ್ಲಿಯ ಶಿವಾ ಫೌಂಡೇಶನ್ ಮತ್ತು ಬೆಂಗಳೂರಿನ ಸ್ನೇಹಾ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಬಡ ವಿಧವಾ ಕುಟುಂಬಗಳಿಗೆ ಆಹಾರ ಧಾನ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಮ್ಮ ಮುಂದೆ ಸ್ಪೂರ್ತಿಯಾಗಬಲ್ಲ ಸಾಕಷ್ಟು ಮಹಿಳೆಯರು ಇದ್ದಾರೆ’ …
Read More »ಬಸ್ತವಾಡ ಗ್ರಾಮದ ಶ್ರೀಅರಣ್ಯ ಸಿದ್ದೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು
ಬಸ್ತವಾಡ ಗ್ರಾಮದ ಶ್ರೀಅರಣ್ಯ ಸಿದ್ದೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರಗಿತು ರಾಯಬಾಗ ತಾಲೂಕೀನ ಬಸ್ತವಾಡ ಗ್ರಾಮಸಲ್ಲಿ ಶ್ರೀ ಅರಣ್ಯ ಸಿದ್ದೇಶ್ವರ ಜಾತ್ರೆಯು ವಿಜೃಂಭಣೆಯಿಂದ ನಡೆಯಿತು ಈ ಜಾತ್ರೆಯ ಅಂಗವಾಗಿ ಬೇರೆ ಬೇರೆ ಗ್ರಾಮಗಳಿಂದ ಪಲ್ಲಕ್ಕಿ ಗಳು ದೇವಸ್ಥಾನದ ಆವರಣಕ್ಕೆ ಆಗಮಿಸಿದವು ಭಕ್ತರು ಭಂಡಾರದ ಒಡೆಯನಿಗೆ ಭಂಡಾರ ಹಾರಿಸಿ ಭಕ್ತಿಸೇವೆ ಅರ್ಪಿಸಿದರು ಹರಕೆ ಹೊತ್ತ ಭಕ್ತರು ದೇವರ ಆಶೀರ್ವಾದದಿಂದ ಹರಕೆ ಫಲ ಈಡೇರಿದ ನಂತರ ಹತ್ತು ಜನ ಭಕ್ತರು ಸಿದ್ದಪ್ಪ …
Read More »ಮಕ್ಕಳೋಂದಿಗೆ ಬಿಸಿಯೂಟ ಸವಿದು ಸರಳತೆ ಮೆರೆದ ಅಥಣಿ ಶಾಸಕ
ಶಾಸಕರೆಂದರೆ ಸಾಮಾನ್ಯವಾಗಿ ನಾವು ತಮ್ಮದೇಯಾದ ದವಲತ್ತು ಹಾಗೂ ವರ್ಚಸ್ಸು ಇರುವವರನ್ನು ನಾವೇಲ್ಲ ನೋಡಿದ್ದೇವೆ ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಅವರು ಶಾಲೆಯಲ್ಲಿ ಚಿಕ್ಕ ಮಕ್ಕಳೋಂದಿಗೆ ಬಿಸಿಯೂಟ ಸವಿದೂರ ಮೂಲಕ ಸರಳತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಹೌದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ತಾಲೂಕಿನ ತಂಗಡಿ ಗ್ರಾಮದಲ್ಲಿರುವ ಕನ್ನಡ ಶಾಲೆಯಲ್ಲಿ 24 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲಾ ಕೊಠಡಿ ಕಾಮಗಾರಿಗೆ ಚಾಲನೆ ನೀಡಲು …
Read More »ಬಳ್ಳಾರಿಯಲ್ಲಿ ರಾಮುಲು ಸ್ಪರ್ಧೆಯಿಂದ ನನಗೆ ಆನೆ ಬಲ
ದಾವಣಗೆರೆ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ ಮಾಡುವುದಾಗಿ ಹೇಳಿರುವುದರಿಂದ ನನಗೆ ಆನೆ ಬಲ ಬಂದಿದೆ. ನನ್ನ ಕ್ಷೇತ್ರದ ಪಕ್ಕದಲ್ಲೇ ಶ್ರೀರಾಮುಲು ಇರುವುದರಿಂದ ಅನುಕೂಲ ಆಗಲಿದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಡೂರಿನಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮುಲು ಹೇಳಿರಲಿಲ್ಲ. ಪಕ್ಷವನ್ನು ಇನ್ನಷ್ಟು ಬಲಪಡಿಸಲು ಅಮಿತ್ ಶಾ ಕಾರ್ಯಕ್ರಮ ಸಂಡೂರಿನಲ್ಲಿ ಆಯೋಜಿಸಲಾಗಿತ್ತು. ಜನಾರ್ದನ ರೆಡ್ಡಿ ಪಕ್ಷಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ನಮ್ಮದು …
Read More »ಜಗ್ಗೇಶ್ ‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಡೇಟ್ ಫಿಕ್ಸ್
ನವರಸ ನಾಯಕ ಜಗ್ಗೇಶ್ ನಟನೆಯ ಮುಂದಿನ ಬಹುನಿರೀಕ್ಷಿತ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಕೊನೆಗೂ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಜಗ್ಗೇಶ್ ಹುಟ್ಟುಹಬ್ಬದ ದಿನವಾದ ಇಂದು (ಮಾರ್ಚ್ 17) ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಮಾಡಿದೆ. “ನಮ್ಮ ರಾಘವೇಂದ್ರ ಸ್ಟೋರ್ಸ್ನ ಖ್ಯಾತ ಬಾಣಸಿಗರಾದ ಜಗ್ಗೇಶ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನವಿರಾಗಿ ಸಿದ್ಧಪಡಿಸಿರುವ ನವರಸದೌತಣವನ್ನು ಏಪ್ರಿಲ್ 28, 2023ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಉಣಬಡಿಸಲಿದ್ದೇವೆ. …
Read More »ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆ
ನವದೆಹಲಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಣದೀಪ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ವರಿಷ್ಠರ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಕೈ ಅಭ್ಯರ್ಥಿಗಳ ಹೆಸರು ಮತ್ತೊಮ್ಮೆ ಫೈನಲ್ ಆಗಲಿದೆ. ಸಭೆ ಬಳಿಕ ಸಂಜೆಯೇ ಅಭ್ಯರ್ಥಿಗಳ ಹೆಸರು ಘೋಷಣೆಯಾದರೂ ಅಚ್ಚರಿ ಇಲ್ಲ. ಕಾಂಗ್ರೆಸ್ …
Read More »ಶಿಗ್ಗಾವಿಯಿಂದ ಸ್ಪರ್ಧಿಸಲಿದ್ದಾರಾ ವಿನಯ್ ಕುಲ್ಕರ್ಣಿ?
ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಧಾರವಾಡ ಜಿಲ್ಲಾಪಂಚಾಯಿತಿ ಸದಸ್ಯ ಯೇಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ವಿನಯ್ ಕುಲ್ಕರ್ಣಿ, ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ …
Read More »ಹೆರಿಗೆ ಮಾಡಿಸಲು ಹಣ ಕೇಳಿದ್ದ ಪ್ರಕರಣ ಡಾ.ಪಲ್ಲವಿ ಪೂಜಾರಿ ಅಮಾನತು
ಹೆರಿಗೆ ಮಾಡಿಸಲು ಹಣ ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆ ಡಾ.ಪಲ್ಲವಿ ಪೂಜಾರಿ ಅವರನ್ನು ಅಮಾನತುಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಆದೇಶ ಹೊರಡಿಸಿದ್ದಾರೆ. ಹೆರಿಗೆಗಾಗಿ ಸಂಗೀತಾ ಎಂಬ ಗರ್ಭಿಣಿ ಆಸ್ಪತ್ರೆಗೆ ಬಂದಿದ್ದರು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲು ಡಾ.ಪಲ್ಲವಿ 10 ಸಾವಿರ ಹಣ ಕೇಳಿದ್ದಾರೆ. ಅಷ್ಟೊಂದು ಹಣ ತಮ್ಮ ಬಳಿ ಇಲ್ಲ ಎಂದು ಸಂಗೀತಾ ಹೇಳಿದ್ದಾರೆ. ಹಣ ತರದೆ ಹೆರಿಗೆ ಮಾಡಿಸಲು ನಿರಾಕರಿಸಿದ್ದಾರೆ. ಸಂಗೀತಾ ಹಲವೆಡೆ …
Read More »
Laxmi News 24×7