Breaking News

ಸಿದ್ದರಾಮಯ್ಯ ಅವಧಿಯ ಸೋಲಾರ್ ಹಗರಣದ ತನಿಖೆಗೆ ಮುಂದಾದ ಬಿಜೆಪಿ ಸರ್ಕಾರ

ಬೆಂಗಳೂರು: ಕಾಂಗ್ರೆಸ್ ಅವಧಿಯಲ್ಲಿ ನಡೆದ ಸೋಲಾರ್ ಹಂಚಿಕೆ ಹಗರಣದ ತನಿಖೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬಗ್ಗೆ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ಈ ಸಂಬಂಧ ಯಾವುದೇ ಕ್ಷಣದಲ್ಲಿ ಸರ್ಕಾರ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸೋಲಾರ್ ಉತ್ಪಾದನೆಗಾಗಿ ಕರೆದ ಆನ್ ಲೈನ್ ಅರ್ಜಿ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿತ್ತು ಎಂಬ ಆರೋಪ ವ್ಯಕ್ತವಾಗಿತ್ತು. 2100 ಕೋಟಿ ರೂ. ಮೊತ್ತದ 300 ಮೆಗಾ ವ್ಯಾಟ್ ಸೋಲಾರ್ …

Read More »

ಗದಗ ಜಿಲ್ಲೆಯಲ್ಲಿ ‘ಚುನಾವಣಾ ದೇವರು’: ಹನುಮಂತನ ಬಳಿ ಮೊದಲು ಬಂದು ಪೂಜೆ ಸಲ್ಲಿಸಿದವರಿಗೆ ಗೆಲುವು ನಿಶ್ಚಿತ ಎಂಬ ನಂಬಿಕೆ!

ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ. 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇಲ್ಲಿನ ಪ್ರಸಿದ್ಧ ‘ಚುನಾವಣಾ ದೇವರ’ ದರ್ಶನಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಲಾರಂಭಿಸಿದ್ದಾರೆ. ಗದಗ: ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ. …

Read More »

ನಿತ್ಯ ಒಂದೂವರೆ ತಾಸು ಮೊಬೈಲ್‌, ಟಿ.ವಿ ಬಂದ್‌- ಡಿಜಿಟಲ್ ಲಾಕ್‌ಡೌನ್ ಏನಕ್ಕೆ?

ಬೆಳಗಾವಿ: ಮಕ್ಕಳನ್ನು ಮೊಬೈಲ್‌ ಗೀಳಿನಿಂದ ಹೊರತಂದು, ಕಲಿಕೆ ಯತ್ತ ಆಕರ್ಷಿಸಲು ಇಲ್ಲೊಂದು ಗ್ರಾಮದಲ್ಲಿ ‘ಡಿಜಿಟಲ್‌ ಲಾಕ್‌ಡೌನ್‌’ ಘೋಷಿಸಲಾಗಿದೆ. ನಿತ್ಯ ಸಂಜೆ 7ರಿಂದ 8.30ರವರೆಗೆ ಮೊಬೈಲ್‌, ಟಿ.ವಿ ಬಳಕೆ ನಿಷೇಧಿಸಲಾಗಿದೆ.   ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕಾಡೇಗಾಂವ್‌ ತಾಲ್ಲೂಕಿನ ಮೋಹಿತೆ ವಡಗಾಂವ ಗ್ರಾಮಸ್ಥರು ಇಂತಹ ನಿರ್ಣಯ ಕೈಗೊಂಡಿದ್ದಾರೆ. ಆ.14ರಿಂದ ಹೊಸ ಪದ್ಧತಿ ಜಾರಿಯಾಗಿದ್ದು, ಸಂಜೆ ಹೊತ್ತಿನಲ್ಲಿ ಮಕ್ಕಳು ಮೊಬೈಲ್‌ ಬದಿಗಿರಿಸಿ ಅಭ್ಯಸಿಸುತ್ತಿದ್ದಾರೆ. ಗ್ರಾಮದ ಜನಸಂಖ್ಯೆ ಸುಮಾರು 3 ಸಾವಿರ. 450 ಮಕ್ಕಳು …

Read More »

ವಿದ್ಯುತ್‌ ತಂತಿ ತುಳಿದು ಸುಟ್ಟು ಕರಕಲಾದ ವ್ಯಕ್ತಿ

ಖಾನಾಪುರ: ಕಳೆದ 26 ದಿನಗಳ ಹಿಂದೆ ಮೇವು ತರಲು ಹೊಲಕ್ಕೆ ತೆರಳಿದ್ದ ತಾಲ್ಲೂಕಿನ ಲಕ್ಕೇಬೈಲ ಗ್ರಾಮದ ರಾಮಚಂದ್ರ ಅಂಧಾರೆ (36) ಅವರ ಅಸ್ತಿಪಂಜರ ಗುರುವಾರ ಪತ್ತೆಯಾಗಿದೆ. ಪೊಲೀಸರು ‘ಹೆಸ್ಕಾಂ’ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.   ಹೊಲದಲ್ಲಿ ಹರಿದುಬಿದ್ದ ವಿದ್ಯುತ್‌ ತಂತಿ ಸ್ಪರ್ಶದಿಂದಾಗಿ ಈ ವ್ಯಕ್ತಿ ಮೃತಪಟ್ಟಿದ್ದಾರೆ. ವಿದ್ಯುತ್‌ ಪ್ರವಹಿಸಿದ ಕಾರಣ ಇಡೀ ದೇಹ ಸುಟ್ಟು ಕರಕಲಾಗಿದೆ. ದೇಹದ ಮೂಳೆಗಳು ಹಾಗೂ ತಲೆಬುರುಡೆ ಪ್ರತ್ಯೇಕವಾಗಿ ಸಿಕ್ಕಿವೆ. ಗ್ರಾಮದಿಂದ ದೂರದಲ್ಲಿ ಕಬ್ಬಿನ …

Read More »

ಹಬ್ಬದ ಮಾರಾಟ: ಅಮೆಜಾನ್ ಹಿಂದಿಕ್ಕಿದ ಮೀಶೊ

ಬೆಂಗಳೂರು: ಈ ಬಾರಿಯ ಹಬ್ಬದ ವಿಶೇಷ ಮಾರಾಟದಲ್ಲಿ ಇ ಕಾಮರ್ಸ್ ಸಂಸ್ಥೆಗಳು ಭರ್ಜರಿ ವ್ಯಾಪಾರದ ಮೂಲಕ ಸದ್ದು ಮಾಡಿವೆ. ಒಟ್ಟಾರೆ ಮಾರಾಟದಲ್ಲಿ ವಾಲ್‌ಮಾರ್ಟ್‌ ಒಡೆತನದ ಫ್ಲಿಪ್‌ಕಾರ್ಟ್ ಶೇ 49ರಷ್ಟು ಪಾಲು ಪಡೆದುಕೊಂಡಿದ್ದರೆ, ಸಾಫ್ಟ್‌ಬ್ಯಾಂಕ್ ಹೂಡಿಕೆ ಹೊಂದಿರುವ ಮೀಶೊ ಶೇ 21ರಷ್ಟು ಪಾಲು ಪಡೆದುಕೊಂಡು ಎರಡನೇ ಸ್ಥಾನಕ್ಕೆ ಜಿಗಿದಿದೆ ಎಂದು ಕನ್ಸಲ್ಟೆನ್ಸಿ ಸಂಸ್ಥೆ ರೆಡ್‌ಸೀರ್ ಹೇಳಿದೆ.   ಈ ಮೂಲಕ ಅಮೆಜಾನ್ ಇಂಡಿಯಾವನ್ನು ಮೀಶೊ ಹಿಂದಿಕ್ಕಿದ್ದು, ಗರಿಷ್ಠ ಸಂಖ್ಯೆಯ ಅರ್ಡರ್‌ಗಳನ್ನು ತನ್ನದಾಗಿಸಿಕೊಂಡಿದೆ. …

Read More »

8ರಂದು ಅಣ್ಣಾಸಾಹೇಬ ಜೊಲ್ಲೆ ಜನ್ಮದಿನ: 2,000 ಅಂಗವಿಕಲರಿಗೆ ಸಲಕರಣೆ ವಿತರಣೆ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಜನ್ಮದಿನದ ಅಂಗವಾಗಿ ಅ. 8ರಂದು 2,000 ಅಂಗವಿಕಲರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು’ ಎಂದು ಯಕ್ಸಂಬಾದ ಬಸವಜ್ಯೋತಿ ಯುವ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು.   ಪಟ್ಟಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಜೊಲ್ಲೆ ಪರಿವಾರದಲ್ಲಿ ಸಮಾಜ ಸೇವೆಯ ಮೂಲಕವೇ ಜನ್ಮ ದಿನ ಆಚರಿಸಿಕೊಳ್ಳುವ ರೂಢಿ ಇದೆ. ಈ ಬಾರಿ ₹ 75 ಲಕ್ಷ ಮೌಲ್ಯದ ಸಲಕರಣೆಗಳ ವಿತರಣೆ, …

Read More »

SC&ST ಮೀಸಲಾತಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆ ಗೃಹ ಕಚೇರಿ ಕೃμÁ್ಣದಲ್ಲಿ ನಡೆಯಿತ್ತಿದೆ.  ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ, ಜೆ.ಸಿ.ಮಾಧುಸ್ವಾಮಿ, ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಎಸ್.ಆಂಗಾರ, ಆನಂದಸಿಂಗ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ಮುಖ್ಯಸಚೇತಕ ಅಜಯ್ …

Read More »

ಬೆಳಗಾವಿಯ ಓಲ್ಡ್ ಪಿಬಿ ರಸ್ತೆಯಲ್ಲಿ ಯಮರೂಪಿ ತಗ್ಗು-ಗುಂಡಿಗಳು

ಬೆಳಗಾವಿಯ ಓಲ್ಡ್ ಪಿಬಿ ರಸ್ತೆಯ ಶಿವಾಜಿ ಮಹಾರಾಜ ಓವರ್ ಬ್ರಿಡ್ಜ್ ಮೇಲಿನ ರಸ್ತೆಯ ಮೇಲೆ ಸಾಕಷ್ಟು ತಗ್ಗು ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಸಾಕಷ್ಟು ತೊಂದರೆ ಅನಿಭವಿಸುತ್ತಿದ್ದಾರೆ. ಇದನ್ನು ಲಕ್ಷಿಸದ ಅಧಿಕಾರಿಗಳ ವಿರುದ್ಧ ಸ್ಥಳೀಯರು ರಸ್ತೆಯ ಗುಂಡಿಗಳಲ್ಲಿ ತೆಂಗಿನ ಸಸಿಯನ್ನು ನೆಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ ಎಂದು ರಾಜ್ಯ ಸರಕಾರ ಹೇಳುತ್ತಲೇ ಬಂದಿದೆ. ಆದರೆ ಬೆಳಗಾವಿ ನಗರದ …

Read More »

ಸಕ್ಕರೆ ಕಾರ್ಖಾನೆ ಮಾಲೀಕರು ಸಭೆಗೆ ಬರದಿದ್ದರೆ ಅವರ ಕಾರ್ಖಾನೆಗೇ ಹೋಗಿ ಸಭೆ ಮಾಡುತ್ತೇವೆ: ನಿತೇಶ್ ಪಾಟೀಲ

ಬೆಳಗಾವಿ ಜಿಲ್ಲೆಯಲ್ಲಿ ೨೯ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯವರನ್ನು ಸಭೆಗೆ ಕರೆದಿದ್ದೇವೆ ಆದರೆ ಈ ಕುರಿತಂತೆ ಆದೇಶ ಮಾಡಿಲ್ಲ. ಕೆಲ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಾರಣಾಂತರದಿAದ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಹೇಳಿದರು. ನಗರದಲ್ಲಿ ಇಂದು ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರೈತರ ಸಮಸ್ಯೆಗಳ ಕುರಿತು ವಿವಿಧ ರೈತ ಸಂಘನೆಯ ಮುಖಂಡರ ಜತೆಗೆ ಕರೆಯಲಾದ ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ …

Read More »

ಹೆಣ್ಣು ಆಡು ಹಾಲು ಕೊಡುವುದನ್ನು ನಾವು ನೀವೆಲ್ಲಾ ನೋಡಿದ್ದೇವೆ. ಆದರೆ ಗಂಡು ಮೇಕೆ ಕೊಡುತ್ತೆ ಹಾಲು

ಹೆಣ್ಣು ಆಡು ಹಾಲು ಕೊಡುವುದನ್ನು ನಾವು ನೀವೆಲ್ಲಾ ನೋಡಿದ್ದೇವೆ. ಆದರೆ ಗಂಡು ಆಡು ಕೂಡ ಹಾಲು ಕೊಡುತ್ತೆ ಎನ್ನುವುದಕ್ಕೆ ಇಲ್ಲೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹೌದು ಜಮಖಂಡಿನಗರದ ಟೀಚರ್ಸ್ ಕಾಲೋನಿಯಲ್ಲಿ ಗಂಡು ಆಡಿನ ಮರಿ ಹಾಲು ಕೊಡುತ್ತಿರುವುದು ಕಂಡು ಸಾರ್ವಜನಿಕರು ತೀವ್ರ ಅಚ್ಚರಿಗೊಂಡಿದ್ದಾರೆ. ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆ ಇದಾಗಿದ್ದು. ಪ್ರತಿ ನಿತ್ಯ ಒಂದು ಬಟ್ಟಲಿನಷ್ಟು ಹಾಲನ್ನು ಈ ಗಂಡು ಮೇಕೆ ಕೊಡುತ್ತಿದೆ. …

Read More »