Breaking News

ಡಿಕೆಶಿ ವಿರಚಿತ “ನೀರಿನ ಹೆಜ್ಜೆ” ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ಧರಾಮಯ್ಯ

ಡಿಕೆಶಿ ವಿರಚಿತ “ನೀರಿನ ಹೆಜ್ಜೆ” ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ಧರಾಮಯ್ಯ ಕರ್ನಾಟಕ ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಿದರು.‌ ಜಲಸಂಪನ್ಮೂಲ ಇಲಾಖೆ, ಕರ್ನಾಟಕ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

  ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಲಿಂಗದಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಕಬ್ಬು ಬೆಳೆಗೆ ದರ ನಿಗದಿ ಮಾಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ಅಂತ್ಯ

ಬಾಗಲಕೋಟೆ: ಕಬ್ಬು ಬೆಳೆಗೆ ದರ ನಿಗದಿ ಸಂಬಂಧಪಟ್ಟಂತೆ ನಡೆಯುತ್ತಿರುವ ರೈತರ ಹೋರಾಟ ಇಬ್ಬರು ಸಚಿವರ ಸಂಧಾನದಿಂದಾಗಿ ಯಶಸ್ಸು ಕಂಡಿದ್ದು, ರೈತರ ಹೋರಾಟ ಸಮಾಪ್ತಿಗೊಂಡಿದೆ. ಕಳೆದ ದಿನ ಕಬ್ಬು ತುಂಬಿದ ಟ್ರ್ಯಾಕ್ಟರ್​​​ಗೆ ಬೆಂಕಿ ಹಚ್ಚಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ರೈತರು & ಸಕ್ಕರೆ ಕಾರ್ಖಾನೆ ಮಾಲೀಕರ ಮಧ್ಯೆ ಸಂಧಾನ ಸಭೆ ನಡೆಸಿ, …

Read More »

ವಿರೋಧದ ಮಧ್ಯೆ ಬೆಂಗಳೂರಿನಲ್ಲಿ ಟನಲ್ ರಸ್ತೆ ಗುದ್ದಲಿ ಪೂಜೆಗೆ ಮುಹೂರ್ತ ಫಿಕ್ಸ್

ಬೆಂಗಳೂರು, (ನವೆಂಬರ್ 14): ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ವರೆಗೆ ಟನಲ್ ರಸ್ತೆ (Bengaluru Tunnel Road) ನಿರ್ಮಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ಈಗಾಗಲೇ ಹಲವು ಅಪಸ್ವರ ಕೇಳಿಬರುತ್ತಿದೆ. ಲಾಲ್ ಬಾಗ್ ಗೆ ಹಾನಿಯಾಗುತ್ತೆ, ಟ್ರಾಫಿಕ್ ದಟ್ಟಣೆ ಮತ್ತಷ್ಟು ಹೆಚ್ಚಾಗುತ್ತೆ ಎನ್ನುವ ಆರೋಪಗಳ ಜೊತೆಗೆ ಇದೀಗ ಟನಲ್ ರಸ್ತೆಯ ನಿರ್ಮಾಣದಿಂದ ರಾಜಧಾನಿಯ ಅಂತರ್ಜಲಮಟ್ಟಕ್ಕೂ ಹೊಡೆತ ಬೀಳುವ ಆತಂಕ ಎದುರಾಗಿದೆ. ಸದ್ಯ ಹೆಬ್ಬಾಳ ಟು ಸಿಲ್ಕ್ ಬೋರ್ಡ್ ತನಕ ನಡೆಸಲು ಹೊರಟಿರೋ ಟನಲ್ ರೋಡ್ ಕಾಮಗಾರಿ …

Read More »

ಕರ್ನಾಟಕದ ನಾಲ್ಕು ರೈಲ್ವೇ ಸ್ಟೇಷನ್​ಗಳ ಮರುನಾಮಕರಣ ಕೋರಿ ಎಂಬಿ ಪಾಟೀಲ್ ಪತ್ರ

ಬೆಂಗಳೂರು, ನವೆಂಬರ್ 14: ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಸಲುವಾಗಿ ರಾಜ್ಯದ ನಾಲ್ಕು ರೈಲ್ವೇ ನಿಲ್ದಾಣಗಳ ಮರುನಾಮಕರಣ (Renaming Of four Railway Stations) ಮಾಡಲು ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಗುರುವಾರ ಮಾತನಾಡಿದ ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ರಾಜ್ಯದ ನಾಲ್ಕು ರೈಲು ನಿಲ್ದಾಣಗಳಿಗೆ ಕರ್ನಾಟಕದ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪರಂಪರೆಗೆ ಕೊಡುಗೆ ನೀಡಿದ ಸಂತರ ಹೆಸರನ್ನಿಡಲು ಮನವಿ ಮಾಡಿದ್ದೇವೆಂದು ಹೇಳಿದರು. ಯಾವ ಯಾವ ನಿಲ್ದಾಣಗಳ …

Read More »

ಕರ್ನಾಟಕದ ಮೇಲೆ ಪ್ರಭಾವ ಬೀರುತ್ತಾ ಬಿಹಾರ ಫಲಿತಾಂಶ? ಮತ್ತಷ್ಟು ಸ್ಟ್ರಾಂಗ್ ಆಗ್ತಾರಾ ಸಿದ್ದರಾಮಯ್ಯ?

ಬೆಂಗಳೂರು, (ನವೆಂಬರ್ 14): ಪ್ರಧಾನಿ ನರೇಂದ್ರ ಮೋದಿ ಹಾಗೂ ನಿತೀಶ್ ಕುಮಾರ್ ಜುಗಲ್‌ಬಂಧಿ ಬಿಹಾರದಲ್ಲಿ ಮಹಾಘಟಬಂಧನ್​ನನ್ನೇ ವೈಟ್‌ವಾಷ್‌ ಮಾಡಿದೆ. ಬಿಹಾರದಲ್ಲಿ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ರೆ, ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಅತ್ಯುತ್ತಮ ಪ್ರದರ್ಶನ ನೀಡಿದೆ. ಇತ್ತ ಬಿಹಾರದ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ನ ಮೇಲು ಕರ್ನಾಟಕದ ಕಾಂಗ್ರೆಸ್ ನಾಯಕತ್ವದ ಮೇಲು ಅದರ ಪರಿಣಾಮ ಬೀರಬಹುದು ಎಂಬ ಚರ್ಚೆಗಳು ಜೋರಾಗಿ ನಡೆದಿತ್ತು. ಆದರೆ ಎಲ್ಲ ಚರ್ಚೆಗಳಿಗೂ ಇತಿಶ್ರೀ ಹಾಕಿ ಬಿಹಾರದ ಫಲಿತಾಂಶ …

Read More »

ಕಾನೂನಿನಲ್ಲಿ ಅವಕಾಶವಿಲ್ಲದಿರುವಾಗ ಬೈಕ್​ಗಳನ್ನು ಟ್ಯಾಕ್ಸಿಗಳನ್ನಾಗಿ ಪರಿಗಣಿಸಲಾಗದು: ಹೈಕೋರ್ಟ್​

ಬೆಂಗಳೂರು: ಪ್ರಯಾಣಿಕರನ್ನು ಸಾಗಿಸಲು ಅಥವಾ ಬಾಡಿಗೆಗೆ ಅದರ ಬಳಕೆ ಮಾಡಬಹುದು ಎಂದು ಶಾಸನದಲ್ಲಿ ವ್ಯಾಖ್ಯಾನಿಸದೇ ಇರುವುದರಿಂದ ಮೋಟಾರು ಸೈಕಲ್‌ಗಳು ಸಾರಿಗೆ ವಾಹನಗಳನ್ನಾಗಿ ಪರಿಗಣಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ವಿವರಿಸಿದೆ. ಮೋಟಾರು ವಾಹನಗಳ ಕಾಯಿದೆ 1988ರ ಅನ್ವಯ ಮಾರ್ಗಸೂಚಿ ರಚನೆ ಮಾಡುವವರೆಗೂ ಬೈಕ್​ಗಳನ್ನು ಟ್ಯಾಕ್ಸಿಗಳನ್ನಾಗಿ ಪರಿಗಣಿಸಲಾಗದು ಎಂದು ಏಕ ಸದಸ್ಯ ಪೀಠ ನೀಡಿದ ಆದೇಶವನ್ನು ಪ್ರಶ್ನಿಸಿ ಉಬರ್‌ ಇಂಡಿಯಾ, ರ್ಯಾಪಿಡೊ, ಓಲಾ, ಉಬರ್ ಸೇರಿದಂತೆ ಹಲವು ಅಗ್ರಿಗೇಟರ್‌ ಸಂಸ್ಥೆಗಳು ಸಲ್ಲಿಸಿರುವ …

Read More »

ಈತ ಖತರ್ನಾಕ್​​​​​​ ಕಳ್ಳ. ಬಾಲಿವುಡ್​​ ನಟನ ಸಿನಿಮಾ ಕಳ್ಳತನಕ್ಕೆ ಪ್ರೇರಣೆಯಂತೆ. ಕದ್ದ ದುಡ್ಡಲ್ಲಿ ಕಾರು​​, ಬೈಕ್​​​ ಖರೀದಿಸಿ ಶೋಕಿ

ಬೆಳಗಾವಿ: ಈತ ಖತರ್ನಾಕ್​​​​​​ ಕಳ್ಳ. ಬಾಲಿವುಡ್​​ ನಟನ ಸಿನಿಮಾ ಕಳ್ಳತನಕ್ಕೆ ಪ್ರೇರಣೆಯಂತೆ. ಕದ್ದ ದುಡ್ಡಲ್ಲಿ ಕಾರು​​, ಬೈಕ್​​​ ಖರೀದಿಸಿ ಶೋಕಿ ಮಾಡುವುದೇ ಈತನ ಖಯಾಲಿ. ಪೊಲೀಸರಿಗೆ ಚಳ್ಳೆಹಣ್ಣು ತೋರಿಸಿ ಓಡಾಡುತ್ತಿದ್ದ ಈತ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಹೆಸರು ಸುರೇಶ ನಾಯಿಕ. ಬೆಳಗಾವಿಯ ಮಹಾಂತೇಶ ನಗರ ನಿವಾಸಿ. ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದ ವಿಶ್ವನಾಥ ದುಗ್ಗಾಣಿ ಎಂಬವರ ಮನೆಯಲ್ಲಿ, ಅಕ್ಟೋಬರ್​​​​​​​ 18 ಹಾಗೂ 22ರ ಮಧ್ಯೆ ಮನೆಗಳ್ಳತನ ನಡೆದಿತ್ತು. ಅಪಾರ ಪ್ರಮಾಣದ ಚಿನ್ನ ಮತ್ತು …

Read More »

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ: 6 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಹತ್ತರಗಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ: 6 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಯಮಕನಮರಡಿ ಠಾಣೆ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸುವ ಮೂಲಕ ಕಿಡಿಗೇಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನವೆಂಬರ್ 7ರಂದು ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಡಿವೈಎಸ್​​ಪಿ ಮಹಾಂತೇಶ ಸಜ್ಜನ ಸೇರಿ 12 ಪೊಲೀಸ್ …

Read More »

ಬೈಕ್‌ಗಳ ನಡುವೆ ಅಪಘಾತ: ಇಬ್ಬರು ಸಾವು

ರಾಯಚೂರು: ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್​ ಬಳಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ, ಪ್ರೀತಮ್ (18) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಸಿದ್ದಯ್ಯ ಸ್ವಾಮಿ ಯರಡೋಣಿ (39) ಎಂಬವರು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಆನಂದ ಪತ್ತರ್ ಸೇರಿದಂತೆ ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಯ್ಯ ಸ್ವಾಮಿ ಹಾಗೂ ಆನಂದ …

Read More »