ನಿಪ್ಪಾಣಿ (ಬೆಳಗಾವಿ ಜಿಲ್ಲೆ): ಡೆಂಗಿಯಿಂದ ಬಳಲುತ್ತಿದ್ದ ತಾಲ್ಲೂಕಿನ ಕಾರದಗಾ ಗ್ರಾಮದ ಯುವಕ ಶುಕ್ರವಾರ ಮಹಾರಾಷ್ಟ್ರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರೇಮ್ ಸಂಜಯ ಕಮತೆ (19) ಸಾವನ್ನಪ್ಪಿದವರು. ಬಿಎಸ್ಪಿ ಓದುತ್ತಿದ್ದ ಪ್ರೇಮ್ ಎಂಟು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಗಡಿಗೆ ಹೊಂದಿಕೊಂಡ ಮಹಾರಾಷ್ಟ್ರದ ಇಚಲಕರಂಜಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಡೆಂಗಿ ತಗಲಿದ್ದು ಖಚಿತವಾಗಿತ್ತು. ಶುಕ್ರವಾರ ಆರೋಗ್ಯ ಹಠಾತ್ ಕ್ಷೀಣಿಸಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು ಕುಟುಂಬದ ಮೂಲಗಳು ತಿಳಿಸಿವೆ. ಯುವಕನ ಸಾವಿನಿಂದ ಗ್ರಾಮದಲ್ಲಿ ಡೆಂಗಿ ಭೀತಿ …
Read More »ರಾಜ್ಯದಾದ್ಯಂತ ವೀರಜ್ಯೋತಿ ಯಾತ್ರೆ; ಅ.2ರಂದು ಬೆಂಗಳೂರಿನಲ್ಲಿ ಸಿ.ಎಂ ಚಾಲನೆ
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸಲಾಗುತ್ತದೆ. ರಾಜ್ಯ ಸರ್ಕಾರ ₹2 ಕೋಟಿ ಅನುದಾನ ಮಂಜೂರು ಮಾಡಿದ್ದು, ಅ.23, 24 ಹಾಗೂ 25ರಂದು ಮೂರು ದಿನ ವೈಭವ ಮರುಕಳಿಸಲಿದೆ ಎಂದು ಶಾಸಕ ಮಹಾಂತೇಶ ದೊಡ್ಡಗೌಡ್ರ ತಿಳಿಸಿದರು. ಪಟ್ಟಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ವೀರಜ್ಯೋತಿಯಾತ್ರೆಗೆ ಮುಖ್ಯಮಂತ್ರಿ …
Read More »ರಾಯಬಾಗ :A.T.M.ಕಳವು ಯತ್ನ: ಆರೋಪಿ ಬಂಧನ
ರಾಯಬಾಗ: ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ಎಟಿಎಂ ಒಡೆಯಲು ಯತ್ನಿಸಿದ ಆರೋಪಿಯನ್ನು ಎಂಟು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬಾವಾನಸೌದತ್ತಿ ನಿವಾಸಿ ಖಾಜಾಸಾಬ್ ಬಾಬಾಸಾಬ್ ಮುಜಾವರ (25) ಬಂಧಿತ. 2022ರ ಫೆಬ್ರುವರಿ 4ರಂದು ರಾತ್ರಿ ಎಟಿಎಂ ಮುರಿದು ಕಳ್ಳತನಕ್ಕೆ ಯತ್ನಿಸಿದ ಯುವಕ ತಲೆ ಮರೆಸಿಕೊಂಡಿದ್ದ. ಕಬ್ಬಿಣದ ರಾಡ್ ಬಳಸಿ ಎಟಿಎಂ ಮುರಿಯಲು ಯತ್ನಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಆದರೆ, ಆರೋಪಿ ಗುರುತು ಸರಿಯಾಗಿ ಪತ್ತೆಯಾಗಿರಲಿಲ್ಲ. ಪ್ರಕರಣದ ತನಿಖೆ ಕೈಗೊಂಡ ರಾಯಬಾಗ …
Read More »ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ದೇಗುಲಕ್ಕೆ ಸಿಎಂ ಪತ್ನಿ ಚನ್ನಮ್ಮ ಬೊಮ್ಮಾಯಿ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪತ್ನಿ ಚನ್ನಮ್ಮ ಬೊಮ್ಮಾಯಿ ಅವರು ನವರಾತ್ರಿ ನಿಮಿತ್ತ ಮನೆ ದೇವತೆ ಸವದತ್ತಿ ಶ್ರೀ ರೇಣುಕಾ ದೇವಿಯ ದರ್ಶನ ಪಡೆದರು. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಘಟ್ಟಕ್ಕೆ ಎಣ್ಣೆ ಸಮರ್ಪಿಸಿದರು. ಬಳಿಕ ಭಕ್ತಿ ಭಾವದಿಂದ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ರೇಣುಕಾದೇವಿ ಯಲ್ಲಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ದೇವತೆ. ಹಾಗಾಗಿ ಹುಬ್ಬಳ್ಳಿಯಿಂದ ಖಾಸಗಿ ವಾಹನದಲ್ಲಿ ಬಂದು ಚನ್ನಮ್ಮ ಬೊಮ್ಮಾಯಿ ದೇವಿ ದರ್ಶನ ಪಡೆದರು. ಈ …
Read More »ಯುವಕನ ಮಿದುಳು ನಿಷ್ಕ್ರಿಯ ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
ಅಥಣಿ: ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆ, ಕುಟುಂಬಸ್ಥರು ಯುವಕನ ಅಂಗಾಂಗ ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಂಗಳವಾರ ಪ್ರಶಾಂತ ವಿಠ್ಠಲ ಮಲ್ಲೆವಾಡಿ ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಮರಳಿ ಬರುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಕೋಮಾಗೆ …
Read More »ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ನೆರೆ ಸಂತ್ರಸ್ತರು
ಬೆಳಗಾವಿ: ಅತಿವೃಷ್ಠಿಯಿಂದ ಹಾನಿಯಾದ ಮನೆಗಳ ಸಮೀಕ್ಷೆ ಅಸಮರ್ಪವಾಗಿದ್ದು, ಪರಿಹಾರ ವಿತರಣೆ ವೇಳೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ನೆರೆ ಸಂತ್ರಸ್ತರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅತಿವೃಷ್ಠಿಗೆ ಮೂಡಲಗಿ ತಾಲೂಕಿನಲ್ಲಿ ಸಾಕಷ್ಟು ಮನೆಗಳಿಗೆ ಹಾನಿ ಆಗಿದೆ. ಘಟಪ್ರಭಾ ನದಿ ಪಾತ್ರದಲ್ಲಿರುವ ಜನರು ಮೂರು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರವಾಹಕ್ಕೆ ತುತ್ತಾದ ಮನೆಗಳ ಸಮೀಕ್ಷೆ ವೇಳೆ ತಾರತಮ್ಯ ಆರೋಪದ …
Read More »ಮಠದ ಸಿಬ್ಬಂದಿ ವೇತನ ಚೆಕ್ಗೆ ಸಹಿ ಹಾಕಲು ಮುರುಘಾ ಶರಣರಿಗೆ ಹೈಕೋರ್ಟ್ ಅವಕಾಶ
ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವೇತನ ಪಡೆಯಲಾಗದೇ ತೊಂದರೆಗೆ ಸಿಲುಕಬಾರದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘರಾಜೇಂದ್ರ ಶರಣರಿಂದ ವೇತನ ಪಾವತಿಸುವ ಚೆಕ್ಗಳಿಗೆ ಸಹಿ ಹಾಕಲು ಅನುಮತಿ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್ ಖಾತೆಗಳ ಚೆಕ್ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ …
Read More »ಹೊಸೂರು ರಾಷ್ಟ್ರೀಯ ಹೆದ್ದಾರಿಯ RTO ಕಚೇರಿ ಮೇಲೆ ಲೋಕಾಯುಕ್ತ ಸಂಸ್ಥೆ ದಾಳಿ
ಆನೇಕಲ್(ಬೆಂಗಳೂರು): ಹೊಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಟಿಒ ಕಚೇರಿ ಮೇಲೆ ದಿಡೀರ್ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಸಂಸ್ಥೆ ಸದ್ದು ಮಾಡಿದೆ. ಎರಡು ಜೀಪುಗಳಲ್ಲಿ ಆಗಮಿಸಿರುವ ಅಧಿಕಾರಿಗಳು 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ತಪಾಸಣೆ ನಡೆಸಿದೆ. ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ನಡೆಯುತ್ತಿರುವ ಪರಿಶೀಲನೆಯಲ್ಲಿ ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತರು ಖಾಸಗಿ ವ್ಯಕ್ತಿಗಳನ್ನೂ ಕೂಡ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಲೆಕ್ಕಪತ್ರಗಳಲ್ಲಿ ನಮೂದಾದ ಹಣಕ್ಕಿಂತ ಮೂರು ಪಟ್ಟು ನಗದು …
Read More »ಬೆಳಗಾವಿ: ಕೊಗನೊಳ್ಳಿ ಆರ್ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತರ ದಾಳಿ
ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹೊರವಲಯದಲ್ಲಿರುವ ಕೋಗನೊಳ್ಳಿ ಆರ್ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗಿನಜಾವ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆಯಾಗಿದೆ ಎನ್ನಲಾಗಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ಮುಂದುವರೆಸಿದ್ದಾರೆ. ಹಣ ವಸೂಲಿ ಆರೋಪ: ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿದ್ದು, ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿಸುವ ಪ್ರಮುಖ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ರಸ್ತೆ ಪಕ್ಕದಲ್ಲಿರುವ ಆರ್ಟಿಒ ಚೆಕ್ ಪೋಸ್ಟ್ ಮೂಲಕವೇ ಸಾವಿರಾರು …
Read More »ಬೆಳ್ಳಂ ಬೆಳಿಗ್ಗೆ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಹುಮನಾಬಾದ: ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದ ಆರ್.ಟಿ.ಓ. ಕಚೇರಿ ಮೇಲೆ ಸೆ.30ರ ಶುಕ್ರವಾರ ಬೆಳ್ಳಂ ಬೆಳಿಗ್ಗೆ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಹಣ ವಸೂಲಿ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 65ರ ಮೋಳಕೆರಾ ಗ್ರಾಮದ ಹತ್ತಿರದ ಚೆಕ್ ಪೋಸ್ಟ್ ನಲ್ಲಿ ದಾಳಿ ನಡೆದಿದೆ. ವಾಹನಗಳಿಂದ ಸಂಗ್ರಹಿಸುವ ತೆರಿಗೆ ಹಣಕ್ಕೂ ಕಚೇರಿಯಲ್ಲಿ ಸಂಗ್ರಹವಾದ ಹಣಕ್ಕೂ ವ್ಯತ್ಯಾಸ ಇರುವುದು …
Read More »