Breaking News

ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ

ಸವದತ್ತಿ: ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ ಮನೆ ಮಾಡಿದೆ. ಮೊದಲ ದಿನವಾದ ಸೋಮವಾರದಿಂದಲೇ ಭಕ್ತರು ಸಾಗರೋಪಾದಿಯಲ್ಲಿ ಹರಿದುಬಂದರು. ಘಟಸ್ಥಾಪನೆಯ ಮೂಲಕ ನವವೈಭವಕ್ಕೆ ವಿಧ್ಯುಕ್ತ ಚಾಲನೆಯೂ ದೊರೆಯಿತು.   ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿದ್ದಾರೆ. ಅವಮಾಸ್ಯೆ ನಂತರದ ಮೊದಲ ದಿನ ಸೋಮವಾರ ಸಂಜೆ 4.30 ರಿಂದ 6.30 ಒಳಗಾಗಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮೂಲಕ ಘಟಸ್ಥಾಪನೆ ಜರುಗಿತು. …

Read More »

ಗುಂಪು ಘರ್ಷಣೆ; ಬಾಲಕನಿಗೆ ಚೂರಿ ಇರಿತ

ಬೆಳಗಾವಿ: ಇಲ್ಲಿನ ಅನಂತಶಯನ ಗಲ್ಲಿಯಲ್ಲಿ ಸೋಮವಾರ ರಾತ್ರಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚೂರಿ ಇರಿತದಿಂದ ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕ್ಯಾಂಪ್‌ ಪ್ರದೇಶದ ನಿವಾಸಿ ಫರಾನ್‌ ಧಾರವಾಡಕರ (15) ಚೂರಿ ಇರಿತಕ್ಕೆ ಒಳಗಾದವ. ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಾನೆ. ‌ಗಾಯಗೊಂಡ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಫರಾನ್‌ ಹಾಗೂ ಇಬ್ಬರು ಸ್ನೇಹಿತರು ಬೈಕ್‌ ಮೇಲೆ ಹೊರಟಿದ್ದರು. ನಗರದ ಅಂಬಾ ಭವಾನಿ ಮಂದಿರದ ಹತ್ತಿರ 10 ಯುವಕರ …

Read More »

ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ 12 ವಾರ ಗಡುವು

ಬೆಂಗಳೂರು: ರಾಜ್ಯದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.   ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ (ತಿದ್ದುಪಡಿ) ಕಾಯ್ದೆ- 2021ರ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿದ್ದ ಗೆಜೆಟ್ ಅಧಿಸೂಚನೆ ಪ್ರಶ್ನಿಸಿ ರಾಜ್ಯ …

Read More »

ಇಂದಿನಿಂದ ತಿರುಪತಿಯಲ್ಲಿ ಬ್ರಹ್ಮೋತ್ಸವ ಶುರು

ತಿರುಪತಿ:ದೇಶಾದ್ಯಂತ ಸಂಭ್ರಮದ ನವರಾತ್ರಿ ಹಬ್ಬ ಕಳೆಕಟ್ಟುತ್ತಿರುವಂತೆಯೇ ಜಗತ್ತಿನ ಶ್ರೀಮಂತ ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಮಂಗಳವಾರದಿಂದ 9 ದಿನಗಳ ಕಾಲ ಬ್ರಹ್ಮೋತ್ಸವ ನಡೆಯಲಿದೆ. ಸಂಪ್ರದಾಯ ಪ್ರಕಾರ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಅವರು ಹೊಸ ವಸ್ತ್ರಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.   ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ 2 ವರ್ಷಗಳಿಂದ ಬ್ರಹ್ಮೋತ್ಸವ ಅದ್ಧೂರಿಯಾಗಿ ಆಚರಿಸಲು ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಅದ್ಧೂರಿಯಾಗಿ ಬ್ರಹ್ಮೋತ್ಸವ ಆಚರಿಸಲಾಗುತ್ತದೆ. ಹೀಗಾಗಿ, ದೇಶದ …

Read More »

ನಾಡಹಬ್ಬ ಉತ್ಸವಕ್ಕೆ ಬೆಳಗಾವಿಯಲ್ಲಿ ಅದ್ಧೂರಿ ಚಾಲನೆ

ಬೆಳಗಾವಿಯಲ್ಲಿ 95ನೇ ನಾಡಹಬ್ಬ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ಸಿಕ್ಕಿದ್ದು. ಇಂದಿನಿಂದ ಐದು ದಿನಗಳ ಕಾಲ ವಿವಿಧ ಸಾಹಿತ್ಯಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಎಂ.ಎಸ್.ಮುಗಳಿ ವೇದಿಕೆಯಲ್ಲಿ ಹಮ್ಮಿಕೊಂಡಿರುವ 95ನೇ ನಾಡಹಬ್ಬ ಉತ್ಸವ ಕಾರ್ಯಕ್ರಮದ ಮೊದಲ ದಿನದ ಕಾರ್ಯಕ್ರಮಕ್ಕೆ ನಾಗನೂರು ರುದ್ರಾಕ್ಷಿ ಮಠದ ಪರಮಪೂಜ್ಯ ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು. ನಂತರ ಧಾರವಾಡದ ಖ್ಯಾತ ಸಾಹಿತಿ ಡಾ.ಬಾಳಣ್ಣ ಶೀಗಿಹಳ್ಳಿ ಅವರು …

Read More »

ಟಿಕ್‍ಟಾಕ್, ಯೂಟೂಬ್ ಸ್ಟಾರ್ ರುಕ್ಮವ್ವ ಅಜ್ಜಿ ಇನ್ನಿಲ್ಲ

ತಮ್ಮ ಅಮೋಘ ಅಭಿನಯದ ಮೂಲಕ ಟಿಕ್‍ಟಾಕ್ ಮತ್ತು ಯೂಟೂಬ್ ಸ್ಟಾರ್ ಆಗಿ ಮನೆ ಮಾತಾಗಿದ್ದ ಬೈಲಹೊಂಗಲ ತಾಲೂಕಿನ ತಿರುಳ್ಗನ್ನಡನಾಡು ಒಕ್ಕುಂದ ಗ್ರಾಮದ ಅಜ್ಜಿ ರುಕ್ಮವ್ವ ಗೋವಿಂದಪ್ಪ ಲೋಕರಿ ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತರಾಗಿದ್ದಾರೆ. ಹೌದು ಟಿಕ್‍ಟಾಕ್‍ನಲ್ಲಿ ತಮ್ಮ ವಿಭಿನ್ನ ಕಾಮಿಡಿ ವಿಡಿಯೋ ಮೂಲಕ ಈ ರುಕ್ಮವ್ವ ಅಜ್ಜಿ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಅಲ್ಲದೇ ಹಲವು ವಾಹಿನಿಗಳ ಕಾಮಿಡಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಇಳಿ ವಯಸ್ಸಿಲ್ಲಿಯೂ ತಮ್ಮಲ್ಲಿನ ಕಲೆಯನ್ನು …

Read More »

ಐಐಐಟಿ ಧಾರವಾಡ ಘಟಕ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಧಾರವಾಡ: ಇಲ್ಲಿನ ತಡಸಿನಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಯನ್ನು ಹಾಗೂ ನೂತನ‌ ಕ್ಯಾಂಪಸನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷೆ ಹಾಗೂ ಇನ್ಪೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ರಾಷ್ಟಪತಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು. ರಾಷ್ಟ್ರಪತಿ ಅವರಿಗೆ ಐಐಐಟಿ …

Read More »

ಕೇವಲ 10 ಸೆಕೆಂಡ್ ನಲ್ಲಿ ನಿಮ್ಮನ್ನು ಮುಗಿಸ್ತೀವಿ; RSS ಪ್ರಮುಖರಿಗೆ SDPI ಮುಖಂಡನ ಧಮ್ಕಿ

ತಿರುವನಂತಪುರಂ: ಪಿಎಫ್‌ಐ ಹಾಗೂ ಎಸ್ ಡಿ ಪಿ ಐ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಎನ್‌ಐಎ ದಾಳಿ ನಡೆಸಿ ಹಲವರನ್ನು ಬಂಧಿಸಿರುವ ಬೆನ್ನಲ್ಲೇ ಕೇರಳದಲ್ಲಿ ಎಸ್ ಡಿ ಪಿ ಐ ಹಾಗೂ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅಲ್ಲದೇ ಆರ್ ಎಸ್ ಎಸ್ ಮುಖಂಡರಿಗೆ ಬೆದರಿಕೆ ಹಾಕಿದ್ದಾರೆ. ಎನ್ ಐಎ ದಾಳಿ ಖಂಡಿಸಿ ಎರ್ನಾಕುಲಂನಲ್ಲಿ ಪ್ರತಿಭಟನೆ ನಡೆಸಿರುವ ಎಸ್ ಡಿ ಪಿ ಐ ಸಂಘಟನೆ, ಕೇಂದ್ರ ಸರ್ಕಾರ ಹಾಗೂ …

Read More »

ಒಂಬತ್ತು ತಿಂಗಳ ಹಿಂದೆ ಬಿದ್ದು ಹೋಗಿದೆ. ಆದರೆ ಇಲ್ಲಿಯ ತನಕ ಅವರಿಗೆ ಯಾವುದೇ ಪರಿಹಾರ ನೀಡಿಲ್ಲ. ಹಾಗಾಗಿಆತ್ಮಹತ್ಯೆ ಬೆದರಿಕೆ ಹಾಕಿದ ನೆರೆ ಸಂತ್ರಸ್ತ

ಬೆಳಗಾವಿ: ಅತಿವೃಷ್ಟಿಯಿಂದ ಮನೆ ಬಿದ್ದು 9 ತಿಂಗಳು‌ ಕಳೆದರೂ, ಪರಿಹಾರ ನೀಡದ ಹಿನ್ನೆಲೆ ಮನೆ ನಿರ್ಮಿಸಿ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸದ್ಯ ನೆರೆ ಸಂತ್ರಸ್ತ ವ್ಯಕ್ತಿಯ ಈ ವಿಡಿಯೋ ವೈರಲ್​ ಆಗುತ್ತಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಈರಪ್ಪ ನಾಡಗೌಡ್ರ ಎಂಬುವರು ಮೊಬೈಲ್ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಅಲ್ಲದೇ ಶಾಸಕಿ ಅಂಜಲಿ‌‌‌ ನಿಂಬಾಳ್ಕರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ …

Read More »

ಬೆಳಗಾವಿಯ ಮಹಾನಗರ ಪಾಲಿಕೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಣೆ

ಬೆಳಗಾವಿಯ ಮಹಾನಗರ ಪಾಲಿಕೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು. ಪೌರಕಾರ್ಮಿಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಹಿಳೆಯರ ಆಯೋಜಿಸಲಾಗಿತ್ತು. ವಾರ್ಡ್ ನಂ.25ರ ಸಫಾಯಿ ಕರ್ಮಚಾರಿ ಲಕ್ಷ್ಮೀ ಭಾಗಣ್ಣ ತಳವಾರ್ 100 ಮೀಟರ್ ಓಟದ ಸ್ಪರ್ಧೆಯಲ್ಲಿ ವಿಜೇತರಾದರು. ವಿಜೇತ ಲಕ್ಷ್ಮೀ ಅವರಿಗೆ ಸಾಮಾಜಿಕ ಕಾರ್ಯಕರ್ತ ಪ್ರಸಾದ್ ಬಹುಮಾನ ವಿತರಿಸಿದರು. ಇದೇ ವೇಳೆ ಸಿಹಿತಿಂಡಿಗಳನ್ನು ಸಹ ವಿತರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕ ಶ್ರವಣ್ ಕಾಂಬ್ಳೆ, ಸೂಪರ್‍ವೈಸರ್ ಸಂಜಯ್ ಮೋರೆ, ಸೂಪರ್‍ವೈಸರ್ ಲಕ್ಷ್ಮಣ ರಾಥೋಡ್, …

Read More »