Breaking News

ಈಗ ೨೦೨೩ರ ಚುನಾವಣೆಯಲ್ಲಿ ಉಭಯ ನಾಯಕರ ಮಧ್ಯೆ ಮತ್ತೆ ಟಿಕೆಟ್‌ಗೆ ಫೈಟ್ ಶುರುವಾಗಿದೆ. ಇತ್ತೀಚೆಗೆ ಬೈಲಹೊಂಗಲಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಬಿಎಸ್‌ವೈ ಈ ವೇಳೆ ಜಾಣನಡೆ ಪ್ರದರ್ಶನ ಮಾಡಿದ್ದಾರೆ. ಗಾಣಿಗ ಸಮಾಜ ಹಾಗೂ ನೌಕರರ ಸಮಾವೇಶಕ್ಕೆಂದು ಬೈಲಹೊಂಗಲಕ್ಕೆ ಬಿಎಸ್ ಯಡಿಯೂರಪ್ಪ ಆಗಮಿಸಿದ್ದರು. ಬೈಲಹೊಂಗಲದ ಪೃಥ್ವಿ ಗಾರ್ಡನ್‌ನಲ್ಲಿ ಮೊನ್ನೆ ನಡೆದಿದ್ದ ಕಾರ್ಯಕ್ರಮ ಹಿನ್ನೆಲೆ ಬೈಲಹೊಂಗಲಕ್ಕೆ ಬರುತ್ತಿದ್ದಂತೆ ಬಿಎಸ್‌ವೈ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮನೆಗೆ ಭೇಟಿ ನೀಡಿದ್ದರು. ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಮನೆಯಲ್ಲಿ ಉಪಹಾರ ಸೇವಿಸಿ ಕಾರ್ಯಕ್ರಮಕ್ಕೆ ತೆರಳಿದ್ದರು.

ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗೆ ಮಾಜಿ ಸಿಎಂ ಬಿಎಸ್‌ವೈ ಬೈಲಹೊಂಗಕ್ಕೆ ಆಗಮಿಸಿದ್ದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು ಬೈಲಹೊಂಗಲ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ-ಕೆಜೆಪಿ ಕಿಚ್ಚು ಇನ್ನೂ ಆರಿಲ್ಲ. ಬೈಲಹೊಂಗಲ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಜಗದೀಶ್ ಮೆಟಗುಡ್ ಹಾಗೂ ಡಾ.ವಿಶ್ವನಾಥ ಪಾಟೀಲ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಡಾ. ವಿಶ್ವನಾಥ್ ಪಾಟೀಲ್ …

Read More »

ಸರಕಾರಕ್ಕೆ ತಾಕತ್ತು ಇದ್ದರೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕನ ಮೇಲೆ ಇಡಿ, ಐಟಿ ದಾಳಿ ನಡೆಸಿ:A.A.P. ಭಾಸ್ಕರ್ ರಾವ್

ಸರಕಾರ ದರ್ಪದಿಂದ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ೪೦% ವ್ಯವಹಾರ ಗಡಿ ದಾಟಿ ಹೈದರಾಬಾದ್ ಹೋಗಿ ಪೋಸ್ಟರ್ ಹಾಕಿ ಮಾನ ಮರ್ಯಾದೆ ತೆಗೆದುಕೊಂಡಿದೆ ಎಂದು ಆಮ್ ಆದ್ಮಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದರು. ಇಂದು ಮಂಗಳವಾರ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾಸ್ಕರ್ ರಾವ್ ರವರು, ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅಸಹಾಯವಾಗಿ ಸಿಎಂ ಹೇಳುತ್ತಾರೆ. ಇದನ್ನು ನಾವು ಮಾಡಿಲ್ಲ ಎನ್ನುತ್ತಾರೆ. ಆದರೆ ಬೆಳಗಾವಿ …

Read More »

ರಾಮದುರ್ಗ: ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ರಾಮದುರ್ಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಪೂಲ್ ಕೆಳಗೆ ಬಿಸಾಕಲಾಗಿದೆ. ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಬೇರೆಡೆ ಕೊಲೆಗೈದು ಹೊಸೂರ ಹಳ್ಳದ ಬಳಿ ಶವ ಎಸೆಯಲಾಗಿದೆ. ವ್ಯಕ್ತಿಯ ಮೈತುಂಬ ಮಾರಕಾಸ್ತ್ರಗಳಿಂದ ಕೊಚ್ಚಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಜನ ಬೆಚ್ಚಿದರು. ಸ್ಥಳದಲ್ಲಿ ಅವರ ಬೈಕ್ ಕೂಡ ಇದೆ. ಕಟಕೋಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗೆ ರಾಮದುರ್ಗ …

Read More »

ಬೆಳಗಾವಿ| ವರ್ಷ ಮುಗಿದರೂ ಪಾಲಿಕೆಗೆ ಬಿಡದ ಗ್ರಹಣ: ಅಧಿಕಾರ ಸ್ವೀಕರಿಸದ ಚುನಾಯಿತರು

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಮುಗಿದು ವರ್ಷ ಕಳೆದರೂ ಆಯ್ಕೆಯಾದ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಕೂಡಿಬಂದಿಲ್ಲ. ಇದೇ ಮೊದಲಬಾರಿಗೆ ಪಾಲಿಕೆ ಚುನಾವಣೆ ರಾಜಕೀಯ ಪಕ್ಷಗಳ ಚಿಹ್ನೆ ಆಧಾರದಲ್ಲಿ ನಡೆದಿದ್ದರಿಂದ ತೀವ್ರ ಕುತೂಹಲ ಕೆರಳಿಸಿತ್ತು. ಆದರೆ, ವರ್ಷದ ಬಳಿಕವೂ ಅಧಿಕಾರ ಕೈಗೆ ಸಿಗದ ಕಾರಣ ಹೊಸ ಸದಸ್ಯರು ಇದ್ದೂ ಇಲ್ಲದಂತಾಗಿದೆ. ತಾವು ಪ್ರತಿನಿಧಿಸುವ ವಾರ್ಡ್‌ನ ಜನರು ಒಂದಿಲ್ಲೊಂದು ಸಮಸ್ಯೆ ಹೊತ್ತು ಮನೆಬಾಗಿಲಿಗೆ ಬರುತ್ತಲೇ ಇದ್ದಾರೆ. ಆದರೆ, ಅವುಗಳನ್ನು ಬಗೆಹರಿಸಲು …

Read More »

ಬಿಜೆಪಿಯವರದ್ದು ಮೊಟ್ಟೆಯ ಕಮಿಷನ್‍ನಂತೆ, ಶಾಲಾ ಬಟ್ಟೆಯಲ್ಲೂ ಕಮಿಷನ್ ಲೂಟಿ?: ಕಾಂಗ್ರೆಸ್

ಬೆಂಗಳೂರು: ವಿದ್ಯಾರ್ಥಿಗಳ (Students) ಸಮವಸ್ತ್ರದಲ್ಲೂ (Uniform) 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ (B.C Nagesh) ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಇದರಲ್ಲೂ ಮೊಟ್ಟೆಯ ಕಮಿಷನ್‍ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿ (BJP) ವಿರುದ್ಧ ಚಾಟಿ ಬೀಸಿದೆ. ಟ್ವೀಟ್‍ನಲ್ಲಿ ಏನಿದೆ? ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, …

Read More »

ಕರ್ನಾಟಕ ಕೈಗಾರಿಕಾ ವಿವಾದ ಮಸೂದೆ 2020 ಹಿಂಪಡೆದ ಸರ್ಕಾರ

ಬೆಂಗಳೂರು: ಕರ್ನಾಟಕ ಕೈಗಾರಿಕಾ ವಿವಾದ ಮತ್ತು ಕೆಲವು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2020ನ್ನು ಸರ್ಕಾರ ವಾಪಸ್​ ಪಡೆದಿದೆ. ನಿನ್ನೆ(ಸೋಮವಾರ) ವಿಧಾನಸಭೆಯಲ್ಲಿ ಈ ಮಸೂದೆಯನ್ನು ಹಿಂಪಡೆಯಲಾಯಿತು. ಕೈಗಾರಿಕಾ ವಿವಾದ ಮಸೂದೆ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತ್ತು.‌ ಆದರೆ ಮೇಲ್ಮನೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದ ಕಾರಣ ಬಿದ್ದು ಹೋಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಈ‌ ಮಸೂದೆಯನ್ನು ಪರಿಷತ್​​ನಲ್ಲಿ ವಿರೋಧಿಸಿದ್ದರು. ರಾಜ್ಯದಲ್ಲಿ ವಹಿವಾಟನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕವನ್ನು ತಂದಿತ್ತು. ತಿದ್ದುಪಡಿ ವಿಧೇಯಕ …

Read More »

ಇನ್ಮುಂದೆ ಪೌರ ಕಾರ್ಮಿಕರು ಸರ್ಕಾರಿ ನೌಕರರು

ಬೆಂಗಳೂರು : ಬಹು ದಿನಗಳ ಬೇಡಿಕೆಯಂತೆ ರಾಜ್ಯದ ನಗರಸಭೆ ಪುರಸಭೆ , ಪಟ್ಟಣ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.   ಸೋಮವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಬಿಬಿಎಂಪಿಯ 3673 ನೌಕರರು, …

Read More »

ಅಗ್ನಿವೀರರ ನೇಮಕಾತಿ ಪೂರ್ಣ

ಹಾವೇರಿ: ಅಗ್ನಿಪಥ್‌ ಯೋಜನೆಯಡಿ ಹಾವೇರಿಯಲ್ಲಿ ಕಳೆದ ಹದಿನೆಂಟು ದಿನಗಳಿಂದ ಜರುಗಿದ್ದ ಅಗ್ನಿವೀರರ ನೇಮಕಾತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. 43 ಸಾವಿರ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಿದ್ದು, ಈ ಪೈಕಿ 4,200 ಅಭ್ಯರ್ಥಿಗಳು ಲಿಖೀತ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.   ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ರವಿವಾರ ಸೇನಾ ನೇಮಕಾತಿ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾಹಿತಿ ನೀಡಿದರು. ಸತತ ಮಳೆಯ ಕಾರಣ ಸೇನಾ ನೇಮಕಾತಿ ರ್ಯಾಲಿ …

Read More »

FDA ಕೆಲಸ ಕೊಡಿಸುವುದಾಗಿ ವಂಚನೆ; ಲೇಡಿ PSI ಅಶ್ವಿನಿ ಸಸ್ಪೆಂಡ್

ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬುವರಿಂದ ಹಣ ಪಡೆದು ವಂಚಿಸಿದ್ದರು. …

Read More »

ರೆ ಒತ್ತುವರಿ ಬಗ್ಗೆ ಸದನದಲ್ಲಿ ಕಾವೇರಿದ ಚರ್ಚೆ; ಯಾರ್ಯಾರು ಎಷ್ಟು ಕೆರೆ ನುಂಗಿದ್ದಾರೆ ಎಂದು ಹೇಳಿ; ಕಂದಾಯ ಸಚಿವರಿಗೆ ಯತ್ನಾಳ್ ತಾಕೀತು;

ಬೆಂಗಳೂರು: ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ, ಅತಿವೃಷ್ಟಿ ಪರಿಹಾರ ಕುರಿತು ವಿವರಿಸುವಂತೆ ಸ್ಪೀಕರ್ ಕಾಗೇರಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಸೂಚಿಸುತ್ತಿದ್ದಂತೆ ವಿಧಾನಸಭೆಯಲ್ಲಿ ಕೆರೆ ಒತ್ತುವರಿ ಕುರಿತು ಕಾವೇರಿದ ಚರ್ಚೆ ನಡೆಯಿತು.   ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ. ಒತ್ತುವರಿ ತೆರವು ಸಮರ್ಪಕವಾಗಿ ಮಾಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಕೆ.ಜೆ. ಜಾರ್ಜ್ ಕಿಡಿಕಾರಿದರು. ಕಾಂಗ್ರೆಸ್ ನಾಯಕರ ಅವಧಿಯಲ್ಲಿಯೇ ಕೆರೆಗಳು ಒತ್ತುವರಿಯಾಗಿವೆ ಎಂದು ಬಿಜೆಪಿ ಸದಸ್ಯರು ಆರೋಪಿಸುತ್ತಿದ್ದಂತೆ ಮತ್ತೆ …

Read More »