Breaking News

ಭಾರೀ ಮಳೆಗೆ ಬಾಗಲಕೊಟೆಯಲ್ಲಿ ಮನೆ ಕುಸಿದು ಬಿದ್ದ ಘಟನೆ ನಡೆದಿದೆ.

ವಿಜಯಪುರ ಸೇರಿದಂತೆ ಬಾಗಲಕೊಟೆಯಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು ಇದೀಗ ಭಾರೀ ಮಳೆಗೆ ಬಾಗಲಕೊಟೆಯಲ್ಲಿ ಮನೆ ಕುಸಿದು ಬಿದ್ದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಇಲಕಲ್ ತಾಲ್ಲೂಕಿನ ಗೊನಾಳ ಎಸ್ ಟಿ ಗ್ರಾಮದಲ್ಲಿ. ಯಂಕಣ್ಣ, ಹಾಗೂ ಬಾಗವ್ವ ಮಾದರ ಅವರ ಮನೆ ಸೇರಿದಂತೆ ಮೂರು ಮನೆಗಳ ಮೆಲ್ಚಾವಣಿ ಕುಸಿದಿದೆ. ಅದೃಷ್ಟವಶಾತ್ ಮುಂಚಿತವಾಗಿ ಪರಿಣಾಮ ಅರಿತದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇನ್ನೂ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು. ಜಿಲ್ಲಾಡಳಿತ ಹಾಗೂ ಗ್ರಾಮ …

Read More »

ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾರತ್ನ ಪ್ರಶಸ್ತಿ

ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾರತ್ನ ಪ್ರಶಸ್ತಿ -ಖಾನಾಪೂರದ ಇನ್ ನ್ಯೂಸ್ ರಿಪೋರ್ಟರ್ ಅಲ್ತಾಫ್ ಮಹಮ್ಮದ್ ಇಕ್ಬಾಲ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಕಲಾ ಕೌಸ್ತುಭ ಸಂಸ್ಥೆ ದಾಂಡೇಲಿ ಅವರು ಹುಬ್ಬಳ್ಳಿಯ ನಿರಂಜನ ಹಾಲ್, ಸಿದ್ಧಾರೂಢ ಮಠ ಹುಬ್ಬಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಕವಿಗೋಷ್ಠಿ ಸಮಾರಂಭದಲ್ಲಿ ವಿವಿಧ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿತ್ತು ಇದರಲ್ಲಿ ನಮ್ಮ ಇನ್ ನ್ಯೂಸ್ ಖಾನಾಪೂರ …

Read More »

ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಮಹಾಪೌರ ಜ್ಯೋತಿ ಪಾಟೀಲ.

ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಮಹಾಪೌರ ಜ್ಯೋತಿ ಪಾಟೀಲ. – ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕ್ರತಿಯ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ. ಶಿಲ್ಪಕಲೆ, ವಾಸ್ತುಶಿಲ್ಪ ಮತ್ತು ಮರಗೆಲಸ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರ ಕೌಶಲ್ಯ ಮತ್ತು ಪರಿಣತಿಯು ಅನನ್ಯವಾದದ್ದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ ಅವರು ಹೇಳಿದರು. ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ …

Read More »

ಮಧುಮೇಹ ಪೀಡಿತನ ಕಾಲು ತುಂಡರಿಸದೇ ಯಶಸ್ವಿ ಚಿಕಿತ್ಸೆ ನೀಡಿದ ವೈದ್ಯರು: ನೂತನ ಐವಿಎಲ್ ತಂತ್ರಜ್ಞಾನ ಬಳಕೆ!

ಬೆಳಗಾವಿ: ಮಧುಮೇಹ ಪೀಡಿತಗೊಂಡು ಮೊಣಕಾಲಿನ ಕೆಳಗೆ ರಕ್ತನಾಳದಲ್ಲಿ ಉಂಟಾದ ತೊಂದರೆಯಿಂದ (ಡಯಾಬಿಟಿಕ್ ಫೂಟ್/ ಪಿವಿಡಿ ಕಾಯಿಲೆ) ರಕ್ತ ಸಂಚಾರಕ್ಕೆ ಅಡಚಣೆ ಉಂಟಾಗಿ ಗಾಯ ಹಾಗೂ ತೀವ್ರ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಗೆ ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ನೀಡಲಾಗಿರುವ ಚಿಕಿತ್ಸೆ ಯಶಸ್ವಿಯಾಗಿದೆ. ”ಮೆರಿಲ್ ಮೆಸನ್ ಇಂಟ್ರಾವ್ಯಾಸ್ಕುಲರ್ ಲಿಥೋಟ್ರಿಪ್ಸಿ ಎಂಬ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಯಶಸ್ವಿ ಚಿಕಿತ್ಸಾ ಪ್ರಕ್ರಿಯೆ ನಡೆಸಿ ಕಾಲು ತುಂಡರಿಸುವುದನ್ನು ಉಳಿಸುವಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ …

Read More »

ಚಡಚಣ ಎಸ್‌‍ಬಿಐ ಬ್ಯಾಂಕ್‌ ದರೋಡೆ; ದರೋಡೆಕೋರರ ಪತ್ತೆಗೆ 8 ತಂಡಗಳ ರಚನೆ; ಬಂಗಾರ ಇಟ್ಟವರಿಂದ ಗೋಳಾಟ!

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ​ಗೆ ಮಂಗಳವಾರ ಸಂಜೆ ಮಾಸ್ಕ್​ ಧರಿಸಿಕೊಂಡು ನುಗ್ಗಿದ್ದ ಕಳ್ಳರು, ಬೃಹತ್ ಪ್ರಮಾಣದ​ ಸ್ವತ್ತು ದರೋಡೆ ಮಾಡಿಕೊಂಡು ಪರಾರಿಯಾಗಿದ್ದು, ಪ್ರಕರಣ ಸಂಬಂಧಪಟ್ಟಂತೆ ದರೋಡೆಕೋರರ ಬಂಧನಕ್ಕೆ 8 ವಿಶೇಷ ಪೊಲೀಸ್‌‍ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಎಸ್​​ಪಿ: ಬ್ಯಾಂಕ್​ ದರೋಡೆ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ (ಸೋಮವಾರ) ಸಂಜೆ ನಡೆದ …

Read More »

ದಲಿತ ಮಹಿಳೆಗೆ ಅವಮಾನ: ಯತ್ನಾಳ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಅಹ್ವಾನಿಸುವುದನ್ನು ಖಂಡಿಸುವ ಭರದಲ್ಲಿ ದಲಿತ ಮಹಿಳೆಗೆ ಅವಮಾನ ಮಾಡಿದ್ದ ಆರೋಪದಲ್ಲಿ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಜೊತೆಗೆ ಈ ಕುರಿತು ತನಿಖೆಗೆ ಸಹಕರಿಸಲು ಸೂಚನೆ ನೀಡಿದೆ. ಪ್ರಕರಣ ಸಂಬಂಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದಲಿತ ಮುಖಂಡ ಬಸವರಾಜ ಪೂಜಾರ ಎಂಬುವರು ದಾಖಲಿಸಿದ್ದ ಪ್ರಕರಣದ ರದ್ದುಕೋರಿ …

Read More »

ಚಡಚಣ ಎಸ್‌‍ಬಿಐ ಬ್ಯಾಂಕ್‌ ದರೋಡೆ; ದರೋಡೆಕೋರರ ಪತ್ತೆಗೆ 8 ತಂಡಗಳ ರಚನೆ; ಬಂಗಾರ ಇಟ್ಟವರಿಂದ ಗೋಳಾಟ!

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ​ಗೆ ಮಂಗಳವಾರ ಸಂಜೆ ಮಾಸ್ಕ್​ ಧರಿಸಿಕೊಂಡು ನುಗ್ಗಿದ್ದ ಕಳ್ಳರು, ಬೃಹತ್ ಪ್ರಮಾಣದ​ ಸ್ವತ್ತು ದರೋಡೆ ಮಾಡಿಕೊಂಡು ಪರಾರಿಯಾಗಿದ್ದು, ಪ್ರಕರಣ ಸಂಬಂಧಪಟ್ಟಂತೆ ದರೋಡೆಕೋರರ ಬಂಧನಕ್ಕೆ 8 ವಿಶೇಷ ಪೊಲೀಸ್‌‍ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಎಸ್​​ಪಿ: ಬ್ಯಾಂಕ್​ ದರೋಡೆ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ (ಸೋಮವಾರ) ಸಂಜೆ ನಡೆದ …

Read More »

ಪೋಕ್ಸೋ ಪ್ರಕರಣದಲ್ಲಿ ಬಿಎಸ್​ವೈ ವಿರುದ್ಧ ವಿಚಾರಣೆ ಅಗತ್ಯವಿದೆ: ಹೈಕೋರ್ಟ್

ಬೆಂಗಳೂರು: ಅಪ್ರಾಪ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮೇಲ್ನೋಟಕ್ಕೆ ವಿಚಾರಣೆ ನಡೆಯಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್​ ಮೌಖಿಕವಾಗಿ ಅಭಿಪ್ರಾಯ ಪಟ್ಟಿದೆ. ಪೋಕ್ಸೊ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವುದನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್​ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ಪಟ್ಟಿತು. ಅಲ್ಲದೆ, ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲಿದ್ದಾರೆ. ಅನಗತ್ಯವಾಗಿ ಕಿರುಕುಳ ನೀಡುತ್ತಾರೆ ಎಂದು ಹೇಳಬಹುದು. …

Read More »

ಮರಣ ಪೂರ್ವ ಹೇಳಿಕೆಯೊಂದನ್ನೇ ಆಧರಿಸಿ ಆರೋಪಿತರನ್ನು ಶಿಕ್ಷೆಗೆ ಗುರಿಪಡಿಸಲಾಗದು; ಹೈಕೋರ್ಟ್​

ಬೆಂಗಳೂರು : ವರದಕ್ಷಿಣೆ ಕಿರುಕುಳ ಕುರಿತಂತೆ ಬೆಂಕಿ ಹಚ್ಚಿಕೊಂಡು ಮೃತಪಡುವುದಕ್ಕೂ ಮುನ್ನ ನೀಡುವ ಮರಣ ಪೂರ್ವ ಹೇಳಿಕೆ ಆಧರಿಸಿ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಮಂಜು ಅಲಿಯಾಸ್​ ಮಂಜುನಾಥ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್​ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್​. ಕಮಲ್​ ಅವರಿದ್ದ …

Read More »

ರೈಲು ಹಳಿಮೇಲೆ ಬಿದ್ದ ನೌಕಾನೆಲೆ ಅಧಿಕಾರಿ ರಕ್ಷಣೆ: ಪ್ರಾಣ ಉಳಿಸಿದ ಯುವಕನಿಗೆ ನೌಕಾನೆಲೆಗೆ ಆಹ್ವಾನಿಸಿ ಸನ್ಮಾನ!

ಕಾರವಾರ: ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನೌಕಾನೆಲೆ ಅಧಿಕಾರಿಯನ್ನು ರಕ್ಷಣೆ ಮಾಡಿದ ಕಾರವಾರದ ಯುವಕನನ್ನು ನೌಕಾನೆಲೆ ಅಧಿಕಾರಿಗಳು ಗೌರವಿಸಿ ಸನ್ಮಾನಿಸಿದ್ದಾರೆ. ಆಗಸ್ಟ್ 1 ರಂದು ಕಾರವಾರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಿಂದ ಐಎನ್ಎಸ್ ತಬರ್ ನೌಕೆಯಲ್ಲಿ ಅಧಿಕಾರಿಯಾಗಿದ್ದ ಸಾಕೇತ ಕಶ್ಯಪ್ ಎಂಬಾತ ಕಾಲು ಜಾರಿ ಟ್ರ್ಯಾಕ್ ಮೇಲೆ ಬಿದ್ದಿದ್ದರು. ನಗರದ ನಂದನಗದ್ದ ಬಡಾವಣೆಯ ಬಂಗಾರದ ಕೆಲಸ ಮಾಡುವ ನಾಗಪ್ರಸಾದ್ ರಾಯ್ಕರ್ ಎನ್ನುವ ಯುವಕ ಅಧಿಕಾರಿಯನ್ನು ರಕ್ಷಣೆ ಮಾಡಿದ್ದನು. ಅಧಿಕಾರಿ ರೈಲಿನಿಂದ ಟ್ರ್ಯಾಕ್ ಮೇಲೆ …

Read More »