Breaking News

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು ವಿಜಯಪುರದ ಆನಂದನಗರದಲ್ಲಿರುವ ಶ್ರೀ ದಾನಮ್ಮದೇವಿ ದೇವಸ್ಥಾನದ 15ನೇ ವರ್ಷದ ಜಾತ್ರಾ ಮಹೋತ್ಸವವು ಭಕ್ತಿಯ ಮತ್ತು ಭಾವಭರವೆಯ ವಾತಾವರಣದಲ್ಲಿ ನಡೆಯತ್ತಿದೆ.‌ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭಾಗವಹಿಸಿ‌, ದಾನಮ್ಮದೇವಿ ಆಶಿರ್ವಾದ ಪಡೆದರು. ಈ ಮಹೋತ್ಸವದಲ್ಲಿ ಶ್ರೀ ಮ.ನಿ.ಪ್ರ. ಸ್ವಾಮೀಜಿ ಗುರು ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು (ಅನ್ನದಾನಿಶ್ವರ ದೇವಮಂದಿರ, ಮಹಾಮಠ, ಸುಕ್ಷೇತ್ರ ಮಣಕವಾಡ–ಹಿರೇವಡ್ಡಟ್ಟಿ) ಅವರ …

Read More »

ಕಬ್ಬು ಬೆಳೆಗಾರರ ಜೊತೆಗಿನ ಡಿಸಿ ಸಂಧಾನ ವಿಫಲ: ಪ್ರತಿಭಟನೆ ಮುಂದುವರಿಸಿದ ಬೆಳಗಾವಿ ರೈತರು

ಚಿಕ್ಕೋಡಿ(ಬೆಳಗಾವಿ): ಸಕ್ಕರೆ ಕಾರ್ಖಾನೆಗಳಿಂದ 3,500 ರೂ. ದರ ನೀಡುವಂತೆ ಒತ್ತಾಯಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಗುರ್ಲಾಪುರ್ ಕ್ರಾಸ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಎಸ್​ಪಿ ಅವರ ನೇತೃತ್ವದಲ್ಲಿ ಹೋರಾಟಗಾರರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಹಗಲು ರಾತ್ರಿ ಎನ್ನದೆ ಬೃಹತ್ ಪ್ರಮಾಣದ ಕಬ್ಬು ಬೆಳೆಗಾರರ ಹೋರಾಟ ನಡೆಯುತ್ತಿದೆ. ಹೀಗಾಗಿ ನಿನ್ನೆ ಪ್ರತಿಭಟನಾ …

Read More »

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು.

ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಘಟನೆ.ರೈತರ ಜಮೀನಿನಲ್ಲಿ ಹಾದು ಹೋಗುತ್ತಿ ವೇಳೆ ಘಟನೆ. ಸ್ಥಳಕ್ಕೆ ಹಿರಿಯ ಅಣ್ಯಾಧಿಕಾರಗಳ ಭೇಟಿ ಪರಿಶೀಲನೆ.ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸುತ್ತಿರೋ ಅರಣ್ಯಾಧಿಕಾರಿಗಳು. ಸುಳೆಗಾಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ. ಕಾಡು ಪ್ರಾಣಿ ದಾಳಿ ತಪ್ಪಿಸಲು ವಿದ್ಯುತ್ ತಂತಿ ಬೇಲಿ ಹಾಕಿರೋ ಸಾಧ್ಯತೆ. …

Read More »

ಗೋಕಾಕ ಬಜರಂಗದಳ ತಾಲೂಕಾ ಘಟಕದಿಂದ ಆಯೋದ್ಯಾ ಬಲಿದಾನ ದಿವಸ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಗೋಕಾಕ ಬಜರಂಗದಳ ತಾಲೂಕಾ ಘಟಕದಿಂದ ಆಯೋದ್ಯಾ ಬಲಿದಾನ ದಿವಸ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನಗರದ ಶ್ರೀಚನ್ನಬಸವೇಶ್ವರ ವಿದ್ಯಾಪೀಠ ಆವರಣ ವಾಲ್ಮೀಕಿ ವೃತ್ತ ಗೋಕಾಕದಲ್ಲಿ ನಡೆದ ಬೃಹತ್ ರಕ್ತಧಾನ ಶಿಬಿರಕ್ಕೆ ಶೂನ್ಯ ಸಂಪಾದನಮಠದ ಪರಮ‌ಪೂಜ್ಯ ಶ್ರೀ ಮುರುಘರಾಜೇಂದ್ರ ಸ್ವಾಮಿಜಿ ಗೋಕಾಕ ಇವರು ಜ್ಯೋತಿ ಬೆಳಗಿಸಿ ಹಸುಗೆ ಆಹಾರ ತಿನಿಸುವ ಮೂಲಕ ಚಾಲನೆ ನೀಡಿದರು. ಕೃತಕವಾಗಿ ಎಷ್ಟೊ ಮುಂದುವರೆದರೂ ಸಹ ಕೃತಕವಾಗಿ ರಕ್ತವನ್ನು ತಯಾರಿಸಲು ಆಗಿಲ್ಲ,ಆಗೊದು ಇಲ್ಲ,ಸಾವಿನ ದವಡೆಯಲ್ಲಿರುವ ವ್ಯಕ್ತಿಯನ್ನ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ 4 ಕ್ಷೇತ್ರಗಳ ಫಲಿತಾಂಶ ಪ್ರಕಟ: 15 ದಿನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ: ಕೋರ್ಟ್ ವ್ಯಾಜ್ಯದ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ)ನ ನಾಲ್ಕು ಕ್ಷೇತ್ರಗಳ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟವಾಗಿದೆ. ನಿರೀಕ್ಷೆಯಂತೆ ರಮೇಶ ಕತ್ತಿ, ಅಣ್ಣಾಸಾಹೇಬ ಜೊಲ್ಲೆ, ನಾನಾಸಾಹೇಬ ಪಾಟೀಲ ಮತ್ತು ಮಹಾಂತೇಶ ದೊಡ್ಡಗೌಡರ ಗೆಲುವು ಈಗ ಅಧಿಕೃತವಾಗಿದೆ. ಬಿಡಿಸಿಸಿ ಬ್ಯಾಂಕಿನ 16 ಕ್ಷೇತ್ರಗಳ ಪೈಕಿ 9 ನಿರ್ದೇಶಕ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿತ್ತು. ಉಳಿದ 7 ಕ್ಷೇತ್ರಗಳಿಗೆ ಅ.19ರಂದು ಚುನಾವಣೆ ನಡೆದಿತ್ತು. ಆದರೆ ಬೇರೆ ಬೇರೆ ಕಾರಣಗಳಿಂದ ಕೋರ್ಟ್‌ನಲ್ಲಿ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯ ಫಲಿತಾಂಶ ಪ್ರಕಟ: ಜಾರಕಿಹೊಳಿ ಟೀಂಗೆ ಸ್ಪಷ್ಟ ಬಹುಮತ

ಬೆಳಗಾವಿ, (ನವೆಂಬರ್ 02): ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ (Belagavi DCC Bank Election) ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಮೇಶ ಕತ್ತಿ, ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ನಾಲ್ವರು ವಿಜೇತರಾಗಿದ್ದಾರೆ. ನ್ಯಾಯಾಲಯದ ಆದೇಶದಂತೆ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದ್ದು, ಜಾರಕಿಹೊಳಿ ಟೀಂ ಸ್ಪಷ್ಟಬಹುಮತ ಸಿಕ್ಕಿದೆ. ಇನ್ನು ಮುಂದಿನ 15 ದಿನಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಯಾರು ಅಧ್ಯಕ್ಷರಾಗಿಲಿದ್ದಾರೆ ಎನ್ನುವುದನ್ನು ಜಾರಕಿಹೊಳಿ ಬ್ರದರ್ಸ್ (Jarkiholi Brothers)​ ತೀರ್ಮಾನಿಸಲಿದ್ದಾರೆ. ಹೀಗಾಗಿ ಅಧ್ಯಕ್ಷರ ಆಯ್ಕೆ …

Read More »

ಆರ್​ಎಸ್​ಎಸ್ ಬ್ಯಾನ್ ಕುರಿತು ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಯ ಕುರಿತು ಸಚಿವ ಶಿವಾನಂದ ಪಾಟೀಲ್ ಪ್ರತಿಕ್ರಿಯೆ

ಹಾವೇರಿ: ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ನಾಯಕರಾಗಿದ್ದು, ಅವರಿಗೆ ಆರ್​ಎಸ್​ಎಸ್ ಬ್ಯಾನ್ ಮಾಡಬೇಕು ಅಂತಾ ಹೇಳುವ ಅಧಿಕಾರವಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನಲ್ಲಿ ಇಂದು ಇಂದಿರಾ ಕ್ಯಾಂಟೇನ್ ಉದ್ಘಾಟಿಸಿ ಸಚಿವರು ಮಾತನಾಡಿದರು. ಈ ವೇಳೆ ಆರ್​​ಎಸ್​ಎಸ್​ ಬ್ಯಾನ್ ಕುರಿತಂತೆ ಮಲ್ಲಿಕಾರ್ಜುನ್ ಖರ್ಗೆ ಅವರ ಹೇಳಿಕೆ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ, ಈ ಕುರಿತು ಈಗಾಗಲೇ ಖರ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬ್ಯಾನ್ ಕುರಿತು …

Read More »

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

ಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ ಹೇಳಿದರು. ಮೈಸೂರಿನ ಮಹಾರಾಜ ಮೈದಾನದಲ್ಲಿ ಇಂದು ಜಿತೋ ಮಹಿಳಾ ಘಟಕದಿಂದ ಆಯೋಜಿಸಲಾದ ಎರಡು ದಿನಗಳ ರಾಷ್ಟ್ರೀಯ ಮಹಿಳಾ ಉಡಾನ್ 2.0 ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದಿನ ತಾಂತ್ರಿಕ ಯುಗದಲ್ಲಿ ಎಲ್ಲ ಸೌಕರ್ಯಗಳೂ ಅಂಗೈಯಲ್ಲಿಯೇ ಸಿಗುತ್ತಿದೆ. ಹಾಗಂತ ದೇಹವನ್ನು ದಂಡಿಸದಿದ್ದರೆ, ನಾವು ಸಂಪಾದನೆ ಮಾಡಿದ್ದನ್ನು ಆರೋಗ್ಯದ ಮೇಲೆ ಸುರಿಯಬೇಕಾಗುತ್ತದೆ. ಪ್ರತಿಯೊಬ್ಬರೂ ಸಂತೋಷ …

Read More »

ಅಧಿಕಾರಿಗಳು, ರೈತರ ಜೊತೆ ಸಚಿವ ಖಂಡ್ರೆ ಸಭೆ

ಚಾಮರಾಜನಗರ: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂದು ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ-ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ …

Read More »

ಟನಲ್ ರಸ್ತೆ ಯೋಜನೆಗೆ ಬಿಜೆಪಿ ವಿರೋಧ ರಾಜಕೀಯಪ್ರೇರಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಟನಲ್ ರಸ್ತೆ ಯೋಜನೆಯನ್ನು ಬಿಜೆಪಿಯವರು ರಾಜಕೀಯ ಉದ್ದೇಶಕ್ಕಾಗಿ ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಟನಲ್ ರಸ್ತೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಇಂದು ಬೆಂಗಳೂರಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧ ಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದರು. ಯೋಜನೆಗೆ ಸಾರ್ವಜನಿಕರ ವಿರೋಧವಿಲ್ಲ: ಟನಲ್ ರಸ್ತೆ ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ …

Read More »