ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ. ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಪಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ತಡರಾತ್ರಿ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ. ಬಳಿಕ, ಎನ್ಡಿಪಿಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್ನ್ನು …
Read More »ಸಾರ್ವಜನಿಕ ಆಸ್ತಿಗಳ ರಕ್ಷಣೆ : ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕದಿಂದ ಆಗುವ ಅನುಕೂಲವೇನು?
ಬೆಂಗಳೂರು : ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಮತ್ತು ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ತಂದಿದೆ. ಬೆಳಗಾವಿಯಲ್ಲಿ ಕಳೆದ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಈ ವಿಧೇಯಕವನ್ನು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ಮಂಡಿಸಿದ್ದರು. ಈ ಕಾನೂನುಗಳನ್ನು ಸರಳೀಕರಣಗೊಳಿಸಿ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು …
Read More »ಆಸ್ಪತ್ರೆಯಿಂದ ಊರಿಗೆ ಶವ ತರುತ್ತಿರುವಾಗ ಮತ್ತೆ ಪ್ರಾಣ ಬಂದಿರುವ ಆಶ್ಚರ್ಯಕರ ಘಟನೆ ಶಿಗ್ಗಾಂವ್ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.
ಹಾವೇರಿ : ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ ಬಳಿಕ ಆಸ್ಪತ್ರೆಯಿಂದ ಊರಿಗೆ ಶವ ತರುತ್ತಿರುವಾಗ ಮತ್ತೆ ಪ್ರಾಣ ಬಂದಿರುವ ಆಶ್ಚರ್ಯಕರ ಘಟನೆ ಶಿಗ್ಗಾಂವ್ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. 45 ವರ್ಷದ ಬಿಷ್ಟಪ್ಪ ಗುಡಿಮನಿ ಸಾವನ್ನಪ್ಪಿ ಬಳಿಕ ಬದುಕುಳಿದಿರುವ ವ್ಯಕ್ತಿ. ”ನಿನ್ನ ಡಾಬಾ ಬಂತು, ನಿನ್ನ ಅಂಗಡಿನೂ ಬಂತು ನೋಡು ಅಂತ ಸಣ್ಣ ಮಗ ಹೇಳಿದಾಗ ಹಾ.. ಅಂತ ಅಂದಾನ. ಆಗ ತಕ್ಷಣನೇ ಉಸಿರಾಡ್ತಿದಾನೆ, ಕಣ್ಣು ಬಿಟ್ಟಾನ ಅನ್ನೋದು ಗೊತ್ತಾಗಿದೆ. ತಕ್ಷಣ ಅಲ್ಲೇ ಆಂಬ್ಯುಲೆನ್ಸ್ …
Read More »ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿ ಕೆ ಶಿವಕುಮಾರ್
ಬೆಂಗಳೂರು/ಪ್ರಯಾಗ್ರಾಜ್ : ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಉತ್ತರಪ್ರದೇಶದ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮದಲ್ಲಿ ಭಾನುವಾರ ಕುಟುಂಬ ಸಮೇತ ಪುಣ್ಯ ಸ್ನಾನ ಮಾಡಿದರು. ಡಿಸಿಎಂ ಡಿ. ಕೆ ಶಿವಕುಮಾರ್ ಅವರು ತಾವು ಅಜ್ಯಯ್ಯ ಎಂದೇ ಕರೆಯಲ್ಪಡುವ ನೆಚ್ಚಿನ ಗುರುಗಳಾದ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಶಾಸ್ತ್ರೋಕ್ತವಾಗಿ ಪತ್ನಿ ಉಷಾ ಅವರೊಂದಿಗೆ ಪುಣ್ಯ ಸ್ನಾನ ಮಾಡಿದರು. ನಂತರ ಗಂಗಾ, ಯಮುನಾ …
Read More »ಏರೋ ಇಂಡಿಯಾ – 2025 ಉದ್ಘಾಟನೆಗೆ ಕ್ಷಣಗಣನೆ
ಬೆಂಗಳೂರು: ಏಷ್ಯಾದ ಅತಿ ದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ರಾಜಧಾನಿಯು ಸಕಲ ರೀತಿಯಲ್ಲಿ ಸಜ್ಜಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರ್ ಶೋಗೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಯಲಹಂಕ ವಾಯುನೆಲೆಯಲ್ಲಿ ಇಂದಿನಿಂದ ಫೆ.14ವರೆಗೆ ಏರ್ ಶೋ ನಡೆಯಲಿದ್ದು, ಸುರಕ್ಷತೆ ಹಾಗೂ ಭದ್ರತೆಗೆ ಹೆಚ್ಚಿನ ನಿಗಾ ವಹಿಸಲಾಗಿದೆ. 7 ಏಳು ಲಕ್ಷಕ್ಕೂ ಅಧಿಕ ವೀಕ್ಷಕರು ಆಗಮಿಸುವ ನಿರೀಕ್ಷೆಯಿದೆ. ಎಐ ಆಧಾರಿತ ಭದ್ರತೆ: ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ …
Read More »ದಾವಣಗೆರೆಯಲ್ಲಿ ಎರಡು ಹಂದಿಗಳಿವೆ:ಯತ್ನಾಳ್
ದಾವಣಗೆರೆ: “ನಮಗೆ ಎಷ್ಟು ಅಪಮಾನ ಆಗಿದೆ ಎಂದರೆ ಬೇರೆಯಾರಾದರೂ ಆಗಿದ್ದರೆ ನೇಣು ಹಾಕಿಕೊಳ್ಳಬೇಕಿತ್ತು. ನಾವು ಹಾಕಿಕೊಂಡಿಲ್ಲ” ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ಮಾತನಾಡಿದ ಅವರು, “ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಗೃಹ ಪ್ರವೇಶವಿದೆ. ಹೀಗಾಗಿ ದೆಹಲಿಗೆ ತೆರಳುತ್ತಿದ್ದೇವೆ “ಎಂದರು. ಮುಂದುವರೆದ ಯತ್ನಾಳ್, “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿ ನಮ್ಮ ವಿರುದ್ಧದ ವರದಿಗಳು ಬರುತ್ತಿದೆ. ದೆಹಲಿಯಲ್ಲಿ ರಾಷ್ಟ್ರೀಯ ನಾಯಕರು ಸಿಗುತ್ತಾರೋ, …
Read More »‘ಪ್ರೇಕ್ಷಕರ ಮೆಚ್ಚುಗೆ ಪಡೆದ ನೋಡಿದವರು ಏನಂತಾರೆ’ ಸಿನಿಮಾ..ಚಿತ್ರಪ್ರೇಮಿಗಳ ಪ್ರೀತಿಗೆ ನವೀನ್ ಶಂಕರ್ ಧನ್ಯವಾದ*
ಜನ ಥಿಯೇಟರ್ ಗೆ ಬರ್ತಿಲ್ಲ. ಸಿನಿಮಾ ನೋಡ್ತಿಲ್ಲ ಅನ್ನೋ ಕೂಗು ಜೋರಾಗಿದೆ. ಆದರೆ ಒಂದೊಳ್ಳೆ ಸಿನಿಮಾವನ್ನು ಪ್ರೇಕ್ಷಕರು ಯಾವತ್ತು ಕೈಬಿಟ್ಟಿಲ್ಲ. ಅದಕ್ಕೆ ಸದ್ಯದ ಉದಾಹರಣೆ ನೋಡಿದವರು ಏನಂತಾರೆ ಸಿನಿಮಾ. ವಿಭಿನ್ನ ಪಾತ್ರಗಳ ಮೂಲಕ ಕನ್ನಡ ಚಿತ್ರರಂಗದ ಭರವಸೆ ನಾಯಕ ಎನಿಸಿಕೊಂಡಿರುವ ನವೀಶ್ ಶಂಕರ್ ನಟನೆಯ ನೋಡಿದವರು ಏನಂತಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಯುವ ನಿರ್ದೇಶಕ ಕುಲದೀಪ್ ಕಾರಿಯಪ್ಪ ಬರೆದ ಕಥೆ ಮತ್ತು ಪಾತ್ರಕ್ಕೆ ನವೀಶ್ ಶಂಕರ್ ಜೀವ ತುಂಬಿದ …
Read More »ಯಲ್ಲಪ್ಪ ಕೋಲ್ಕಾರ್ ಗೆ ರಾಷ್ಟ್ರೀಯ ರತ್ನ ಅವಾಡ್೯
ಯಲ್ಲಪ್ಪ ಕೋಲ್ಕಾರ್ ಗೆ ರಾಷ್ಟ್ರೀಯ ರತ್ನ ಅವಾಡ್೯ ಬೆಳಗಾವಿಅಂತರಾಷ್ಟ್ರೀಯ ವ್ಯಕ್ತಿಗತ ಮಾನವ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಡಮಾಡುವ ರಾಷ್ಟ್ರೀಯ ರತ್ನ ಅವಾಡ್೯ನ್ನು ಯಲ್ಲಪ್ಪ ಲಕ್ಷ್ಮಣ ಕೋಲ್ಕಾರ್ ಅವರಿಗೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಇತ್ತೀಚೆಗೆ ನೀಡಲಾಗಿದೆ. ಆದಾಯ ತೆರಿಗೆ ಇಲಾಖೆಯಲ್ಲಿ ಸೇವೆ ಮಾಡುತ್ತಿರುವ ಯಲ್ಲಪ್ಪ ಕೋಲ್ಕಾರ್ ಅವರು ಸರಕಾರಿ ಸೇವೆಯ ಜೊತೆಗೆ ಸಾಮಾಜಿಕ ಕಾರ್ಯವನ್ನು ಗುರುತಿಸಿ ರಾಷ್ಟ್ರೀಯ ಅವಾರ್ಡ್ ಪ್ರಶಸ್ತಿ ನೀಡಲಾಗಿದೆ.
Read More »ಜಾತಿಜನಗಣತಿ ವರದಿ ಜಾರಿಗೊಳಿಸಿ ವಂಚಿತ ಸಮಾಜಕ್ಕೆ ನಾಯ್ಯ ದೊರಕಿಸಲು ಸರ್ಕಾರ ಬದ್ಧ; ಗೃಹ ಸಚಿವ ಜಿ.ಪರಮೇಶ್ವರ
ಜಾತಿಜನಗಣತಿ ವರದಿ ಜಾರಿಗೊಳಿಸಿ ವಂಚಿತ ಸಮಾಜಕ್ಕೆ ನಾಯ್ಯ ದೊರಕಿಸಲು ಸರ್ಕಾರ ಬದ್ಧ; ಗೃಹ ಸಚಿವ ಜಿ.ಪರಮೇಶ್ವರ ದಾವಣಗೆರೆಯಲ್ಲಿ ವಾಲ್ಮೀಕಿ ಜಾತ್ರಾ ಮಹೋತ್ಸವ ದಾವಣಗೆರೆಯಲ್ಲಿ ವಾಲ್ಮೀಕಿ ಜಾತ್ರಾ ಮಹೋತ್ಸವ ಜಾತಿಜನಗಣತಿ ವರದಿ ಜಾರಿಗೊಳಿಸಿ ವಂಚಿತ ಸಮಾಜಕ್ಕೆ ನಾಯ್ಯ ದೊರಕಿಸಲು ಸರ್ಕಾರ ಬದ್ಧ ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ಸೌಲಭ್ಯಗಳಿಂದ ವಂಚಿತ ಸಮಾಜಗಳಿಗೆ ನ್ಯಾಯ ದೊರಕಿಸುವ ಉದ್ಧೇಶದಿಂದ ಸುಮಾರು 160 ಕೋಟಿ ವೆಚ್ಚದಲ್ಲಿ ಮಾಡಲಾದ ಜಾತಿಗಣತಿಯ ವರದಿಯನ್ನು ಸರ್ಕಾರ ಜಾರಿ ಮಾಡಲು ಬದ್ಧವಾಗಿದೆ …
Read More »ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ
ಮೈಸೂರು : ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ ಜರುಗಲಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಇದಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ.12 ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9 ರಿಂದ …
Read More »