Breaking News

ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ

ಬೈಲಹೊಂಗಲ: ತಾಲ್ಲೂಕಿನ ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ ಸುರಿಯಿತು. ತಾಸಿಗೂ ಹೆಚ್ಚು ಸಮಯ ಸುರಿದ ಮಳೆಯಿಂದ‌ ಹಳ್ಳ, ಕಾಲುವೆ, ಚರಂಡಿಗಳು ತುಂಬಿ ಹರಿದವು. ದಕ್ಷಿಣ ಕಾಶಿ ಎಂದೇ ಹೆಸರಾದ ‘ಸೊಗಲ ಸೋಮೇಶ್ವರ’ ಕ್ಷೇತ್ರದ ಎರಡು ಜಲಪಾತಗಳಿಗೆ ಮಳೆಯಿಂದಾಗಿ ಮತ್ತೆ ಜೀವಕಳೆ ಬಂದಿದೆ. ದೇವಸ್ಥಾನದ ಕಿರು ಕಾಲುವೆಗಳೂ ತುಂಬಿದವು. ಕೆಲ ಗ್ರಾಮಗಳಲ್ಲಿ ಬಿರಿಗಾಳಿಗೆ ಹಲವು ಕಡೆ ವಿದ್ಯುತ್ ಕಂಬಗಳ ವಾಲಿದವು. ಜಮೀನುಗಳಲ್ಲಿ ಮಳೆ ನೀರು ನಿಂತು …

Read More »

ರಸ್ತೆ ಅಪಘಾತ ತಗ್ಗಿಸಲು ಸಮೂಹ ಮಾಧ್ಯಮ ಅಭಿಯಾನ: ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಪ್ರಮಾಣ ತಗ್ಗಿಸಲು ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವಾಹನಗಳ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ ಆರಂಭಿಸಿದ್ದು, ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಜಂಟಿ ಅಭಿಯಾನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.   ಬಳಿಕ ಮಾತನಾಡಿದ ಅವರು, ವಾಹನ ಚಲಾಯಿಸುವವರು ತಮ್ಮ ಕುಟುಂಬದ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡ ವಾಹನ ಚಲಾಯಿಸಿದಾಗ ಮಾತ್ರ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯ. ಏನೆಲ್ಲಾ …

Read More »

ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪ; ಇಬ್ಬರು ಅಧಿಕಾರಿಗಳ ಅಮಾನತು

ನಗರದ ಮಾತಾ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ (Female foeticide) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.   ಮೈಸೂರಿನ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ರವಿ. ಪಿ ಮತ್ತು ಮೈಸೂರು ತಾಲೂಕು ಆರೋಗ್ಯಾಧಿಕಾರಿ ರಾಜೇಶ್ವರಿ ಅವರನ್ನು ಅಮಾನತು ಮಾಡಲಾಗಿದೆ. ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪವೆಸಗಿದ …

Read More »

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಜನರು ಧರಣಿ

ಬೆಳಗಾವಿ : ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡು 43 ವರ್ಷ ಕಳೆದರೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಸಂತ್ರಸ್ಥರು ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ. ಹುಕ್ಕೇರಿ ತಾಲೂಕಿನ ಬೀರ‌ನಹಳ್ಳಿ, ಮನಗುತ್ತಿ, ಇಸ್ಲಾಂಪೂರ, ಗುಡಗನಟ್ಟಿ, ಹಳೇ ವಂಟಮೂರಿ ಸೇರಿ ಇನ್ನಿತರ ಗ್ರಾಮಗಳ ನೊಂದ ಜನರು ಇಂದು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಆರಂಭಿಸಿದರು. …

Read More »

ಸಾರಾಯಿ ಬಾಟಲಿಗಳಿಂದ ಕೂಡಿದ ಕಡಬಗಟ್ಟಿ ರಸ್ತೆ ?ಕಿಡಿಗೇಡಿಗಳ ಕೆಲಸಕ್ಕೆ ಬೆಸತ್ತ ವಾಯುವಿಹಾರಕ್ಕೆ ಬರುವ ವೃದ್ದರು..! ಕಣ್ಮುಚ್ಚಿ ಕುಳಿತ ಅರಣ್ಯ ಅಧಿಕಾರಿಗಳು?

ಸಾರಾಯಿ ಬಾಟಲಿಗಳಿಂದ ಕೂಡಿದ ಕಡಬಗಟ್ಟಿ ರಸ್ತೆ ?ಕಿಡಿಗೇಡಿಗಳ ಕೆಲಸಕ್ಕೆ ಬೆಸತ್ತ ವಾಯುವಿಹಾರಕ್ಕೆ ಬರುವ ವೃದ್ದರು..! ಕಣ್ಮುಚ್ಚಿ ಕುಳಿತ ಅರಣ್ಯ ಅಧಿಕಾರಿಗಳು? ಗೋಕಾಕ: ನಗರದ ಕಡಬಗಟ್ಟಿ ರಸ್ತೆಯಲ್ಲಿ ಅಕ್ರಮ ಚಟುವಟಿಕೆಗಳ ಅಡ್ಡೆಯಾಗಿದ್ದು ರಸ್ತೆಯಲ್ಲಿ ಭಾಗಶಃ ರಾಶಿ ಸಾರಾಯಿ ಬಾಟಲಿ ಮತ್ತು ಕಸದಿಂದ ತುಂಬಿ ತುಳುಕುತ್ತಿದೆ.   ಪರಿಸರ ಸಂರಕ್ಷಣೆ ಮಾಡಲು ಮುಂದಾಗಬೇಕಾದ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಇಂದು ಅರಣ್ಯ ಪ್ರದೇಶ ಮದ್ಯದ ಬಾಟಲಿಗಳಿಂದ ತುಂಬಿ ತುಳಕುತ್ತಿದೆ. ಇದರಿಂದ ವಾಯುವಿಹಾರಕ್ಕೆ ಹೋಗುವ ಜನರಿಗೆ ಸಾಕಷ್ಟು …

Read More »

ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಹೇಳಿದ್ದೇನೆ, ಆತಂಕ ಬೇಡ: ಸಿಎಂ

ಬೆಂಗಳೂರು: ಶಾಲೆಗಳಿಗೆ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಬೆಂಗಳೂರಿನ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಪೊಲೀಸರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಎಲ್ಲಾ ಶಾಲೆಗಳನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಎಚ್ಚರದಿಂದ ಇರಲು ಹೇಳಿದ್ದೇನೆ. ಈ ರೀತಿ ಬೆದರಿಕೆ ಹಾಕಿದವರನ್ನು ಪತ್ತೆ ಹಚ್ಚಲು ಸೂಚಿಸಿದ್ದೇನೆ ಎಂದರು. ಈ ಹಿಂದೆಯೂ ಇಂಥ ಬೆದರಿಕೆಗಳು ಬಂದಿದ್ದವು. ಆದರೆ …

Read More »

ಏಡ್ಸ್ ತಡೆಗಟ್ಟಲು ಆರೋಗ್ಯ ಇಲಾಖೆಯವರು ಹೆಚ್ಚು ಸಂಶೋಧನೆ, ಐದು ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ

ಬೆಂಗಳೂರು: “ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತ ದೇಶ, ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನ 2023 ಮತ್ತು 25ನೇ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗ ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986ರಲ್ಲಿ ಭಾರತದಲ್ಲಿ …

Read More »

ರಿಸಲ್ಟ್​ ಬಳಿಕ ತೆಲಂಗಾಣ ಕಾಂಗ್ರೆಸ್​ ಶಾಸಕರು ಬೆಂಗ್ಳೂರಿಗೆ ಸ್ಥಳಾಂತರ ಸಾಧ್ಯತೆ! ಡಿಸಿಎಂ ಡಿಕೆಶಿ

ಹೈದರಾಬಾದ್: ತೆಲಂಗಾಣದಲ್ಲಿ ನಿನ್ನೆಯಷ್ಟೇ (ನ.30) ಮತದಾನ ಮುಕ್ತಾಯವಾಗಿದ್ದು, ಈ ಬಾರಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವನ್ನು ವಿವಿಧ ಮತಗಟ್ಟೆಗಳ ಸಮೀಕ್ಷೆ ತಿಳಿಸಿವೆ. ಆಡಳಿತಾರೂಢ ಬಿಆರ್​ಎಸ್​ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ ಇದ್ದು, ಕುದುರೆ ವ್ಯಾಪಾರ ಸಂಭವವನ್ನು ತಡೆಗಟ್ಟಲು ಡಿ.3ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತೆಲಂಗಾಣದ ಕಾಂಗ್ರೆಸ್​ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವತ್ತ ಕಾಂಗ್ರೆಸ್​ ಹೈಕಮಾಂಡ್​ ಚಿಂತಿಸುತ್ತಿದೆ ಎಂದು ತಿಳಿದುಬಂದಿದೆ.   ತೆಲಂಗಾಣ ಕಾಂಗ್ರೆಸ್​ ಘಟಕದ ಮುಖ್ಯಸ್ಥ ರೇವಂತ್​ ರೆಡ್ಡಿ …

Read More »

2000 ರೂ. ನೋಟು ಹಿಂಪಡೆದ RBI: ಈವರೆಗೆ 97% ನೋಟುಗಳು ವಾಪಸ್​, ಬಾಕಿ ಉಳಿದಿರುವ ಹಣವೆಷ್ಟು?

ನವದೆಹಲಿ: ಕಳೆದ ಮೇ 19ರಂದು 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಮಹತ್ವದ ಘೋಷಣೆ ಮಾಡಿದಾಗಿನಿಂದ​ ಈವರೆಗೂ ಶೇ. 97.26 ರಷ್ಟು ನೋಟುಗಳು ಬ್ಯಾಂಕಿಂಗ್​ ವ್ಯವಸ್ಥೆಗೆ ಮರಳಿದೆ ಎಂದು ಭಾರತೀಯ ರಿಸರ್ವ್​ ಬ್ಯಾಂಕ್ (ಆರ್​ಬಿಐ) ಇಂದು (ಡಿ.01) ತಿಳಿಸಿದೆ.   ಮೇ 19ರಂದು 2000 ರೂ. ನೋಟುಗಳ ಚಲಾವಣೆಯನ್ನು ಹಿಂಪಡೆದ ಸಂದರ್ಭದಲ್ಲಿ 2000 ರೂ. ಮುಖಬೆಲೆಯ 3.56 ಲಕ್ಷ ಕೋಟಿ ರೂ. ಚಾಲನೆಯಲ್ಲಿದ್ದವು. ಕೇವಲ 6 ತಿಂಗಳಲ್ಲಿ ತೀವ್ರ ಕುಸಿತಕೊಂಡಿದ್ದು, …

Read More »

ಭ್ರೂಣ ಹತ್ಯೆ ಪ್ರಕರಣ; ತಪ್ಪಿತಸ್ಥರ ಮೇಲೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್

ಬೆಂಗಳೂರು:ಭ್ರೂಣ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭ್ರೂಣ ಹತ್ಯೆ ಪ್ರಕರಣದಲ್ಲಿ ಲೋಪಗಳು ಕಂಡು ಬಂದರೆ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದರು.   ತಾಲೂಕು ಮತ್ತು ಜಿಲ್ಲೆಯಲ್ಲಿ ಗರ್ಭಿಣಿಯರ ಸಂಖ್ಯೆ ಎಷ್ಟು ಎನ್ನುವುದನ್ನು ಪ್ರತಿ ತಿಂಗಳೂ ಮಾಹಿತಿ ಸಂಗ್ರಹಿಸುವುದು ಕಡ್ಡಾಯ. ಅದರ ಜೊತೆಗೆ ಜನನವಾದ ಪ್ರಕರಣಗಳನ್ನು ತಾಳೆ ಹಾಕಲಾಗುವುದು. ಒಂದು …

Read More »