Breaking News

ಶಿವಾನಂದ ನಿಲಣ್ಣವರ ಮಾದರಿಯಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಕಂಪನಿ ಮೇಲೆ ದಾಳಿ

ಬೆಳಗಾವಿ: ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಸಾವಿರಾರು ಕೋಟಿ ರೂಪಾಯಿಗಳ ದೊಡ್ಡ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ, ಬೆಳಗಾವಿ ನಗರದಲ್ಲಿ ಮತ್ತೊಂದು ಕಂಪನಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಭಾಗ್ಯ ನಗರದಲ್ಲಿ ಇರುವ ‘ಆದಿತ್ಯರಾಜ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಚೇರಿ ಮೇಲೆ ಎಸಿ ಶ್ರವಣ ನಾಯಕ ನೇತೃತ್ವದಲ್ಲಿ ಸಹಕಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿ ನಡೆಸುತ್ತಿದ್ದಂತೆ ಕಂಪನಿಯ ಆಡಳಿತ ಮಂಡಳಿ, ತಕ್ಷಣವೇ ತನ್ನ …

Read More »

ಸೌರಶಕ್ತಿ ಉತ್ಪಾದನೆಯಲ್ಲಿ ವಿಶ್ವದ ಎರಡನೆ ದೇಶ ಭಾರತ: ಪ್ರಲ್ಲಾದ ಜೋಶಿ

ಸೌರಶಕ್ತಿ ಉತ್ಪಾದನೆಯಲ್ಲಿ ಭಾರತ 2025ರಲ್ಲಿಯೇ ಅಮೆರಿಕಾವನ್ನು  ಹಿಂದಿಕ್ಕಿ ವಿಶ್ವದಲ್ಲೇ ಎರಡನೇ ಸ್ಥಾನಕ್ಕೇರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮನೆ ಮೇಲ್ಛಾವಣಿ ಘಟಕ, ಕೃಷಿ ಪಂಪ್ ಸೌರೀಕರಣದಿಂದ ಹಿಡಿದು ಬೃಹತ್ ಸೌರ ಪಾರ್ಕ್ಗಳ ಸ್ಥಾಪನೆವರೆಗೂ ಭಾರತ ಮುಂಚೂಣಿಯಲ್ಲಿದ್ದು, ವಿಶ್ವದ 2ನೇ ಅತಿ ದೊಡ್ಡ ರಾಷ್ಟ್ರವಾಗಿ ಹೊರ ಹೊಮ್ಮಿದೆ. 2025ರ ಸೌರ ಶಕ್ತಿ ಸಾಮರ್ಥ್ಯದಲ್ಲಿ ಭಾರತ ಎರಡನೇ ಸ್ಥಾನದಲ್ಲಿದ್ದ ಅಮೆರಿಕಾವನ್ನು ಮೀರಿಸಿದ್ದು, ವಾರ್ಷಿಕ ಸೇರ್ಪಡೆಯಲ್ಲಿ …

Read More »

ಕೆಎಲ್‌ಎಸ್ ಗೋಗಟೆ ಕಾಲೇಜಿನಲ್ಲಿ ಯೋಗಾಸನ ಸ್ಪರ್ಧೆ: ಬಹುಮಾನ ವಿತರಣಾ ಸಮಾರಂಭ ಯಶಸ್ವಿ

ಬೆಳಗಾವಿಯ ಕೆಎಲ್‌ಎಸ್ ಗೋಗಟೆ ತಾಂತ್ರಿಕ ಸಂಸ್ಥೆ  ಸಂಸ್ಥೆಯು  ಯೋಗಾಸನ ಸ್ಪರ್ಧೆ ಬಹುಮಾನ ವಿತರಣೆ ಸಮಾರಂಭವನ್ನು ಯಶಸ್ವಿಯಾಗಿ ನಡೆಸಿತು. ಈ ಸಮಾರಂಭದಲ್ಲಿ ಡಾ. ವಿಜಯ ಅಥವಲೆ, ಪ್ರಾಂಶುಪಾಲ, ಹಾಗೂ ಡಾ. ಜಾರ್ಜ್ ರೊಡ್ರಿಗ್ಸ್, ದೈಹಿಕ ಶಿಕ್ಷಣ ನಿರ್ದೇಶಕರು, ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಈ ಸ್ಪರ್ಧೆಯಲ್ಲಿ 8–12 ವರ್ಷ, 13–17 ವರ್ಷ, 18–24 ವರ್ಷ ಹಾಗೂ 25 ವರ್ಷ ಮೇಲ್ಪಟ್ಟವರು ಎಂಬ ನಾಲ್ಕು ವಯೋಮಾನದ ವಿಭಾಗಗಳಲ್ಲಿ ಸುಮಾರು 85 ಮಂದಿ ಸ್ಪರ್ಧಿಗಳು ಉತ್ಸಾಹದಿಂದ …

Read More »

ಎರಡು ಕಾರುಗಳ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ದುರ್ಮರಣ

ತುಮಕೂರು: ಎರಡು ಕಾರುಗಳ ನಡುವೆ ಭೀಕರ ಅಪಘಾತ  ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿರುವ ಹುಳಿಯಾರು ಬಳಿಯ ಕೆಂಕೆರೆ ಗ್ರಾಮದಲ್ಲಿ ನಡೆದಿದೆ. ಮೃತರು ಆಂಧ್ರಪ್ರದೇಶ ಮೂಲದವರು. ತಂದೆ – ತಾಯಿ, ಗಂಡ – ಹೆಂಡತಿ ಹಾಗೂ ಇಬ್ಬರು ಮಕ್ಕಳು ಓಮಿನಿ ಕಾರಿನಲ್ಲಿ ಬರುತ್ತಿದ್ದರು. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ …

Read More »

ಕುತೂಹಲ ಕೆರಳಿಸಿದ ಸಿಎಂ ಡಿಕೆಶಿ – ಬಿ.ಕೆ ಹರಿಪ್ರಸಾದ್‌ ಭೇಟಿ

ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್  ಅವರಿಂದು, ಹಾಲಿ ಸಿಎಂ ಡಿಕೆ ಶಿವಕುಮಾರ್‌, ಮಾಜಿ ಸಿಎಂ ಸಿದ್ದರಾಮಯ್ಯ  ಸೇರಿದಂತೆ ಹಲವಾರು ನಾಯಕರನ್ನ ಭೇಟಿಯಾಗಿ ಧನ್ಯವಾದ ಹೇಳಿದ್ದಾರೆ. ಅಧ್ಯಕ್ಷರಾಗಿ ನೇಮಕವಾದ ಮರು ದಿನವೇ ಕುಮಾರಕೃಪ ರಸ್ತೆಯಲ್ಲಿನ ಸಿಎಂ ಸರ್ಕಾರಿ ನಿವಾಸದಲ್ಲಿ ಡಿಕೆ ಶಿವಕುಮಾರ್‌  ಅವರನ್ನ ಭೇಟಿಯಾಗಿ ಸಭೆ ನಡೆಸಿದ್ದಾರೆ. ʻಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಸಂಘಟನೆ ಮಾಡೋರು ನನ್ನ ಜೊತೆ ಬನ್ನಿʼ ಎಂದು ಬಿ.ಕೆ ಹರಿಪ್ರಸಾದ್ ಅವರು ಹೇಳಿದ …

Read More »

ಮಂತ್ರಾಲಯ ರಾಯರ ಹುಂಡಿಗೆ 22 ದಿನದಲ್ಲಿ 4.35 ಕೋಟಿ ಕಾಣಿಕೆ

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ  ಶ್ರೀ ರಾಘವೇಂದ್ರ ಸ್ವಾಮಿ ಮಠದ 22 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 4.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರು ದಂಡು ಹರಿದು ಬಂದಿದ್ದು, 22 ದಿನಗಳಲ್ಲೇ ಕೋಟ್ಯಂತರ ರೂ. ಕಾಣಿಕೆ ಸಂಗ್ರಹವಾಗಿದೆ. ಒಟ್ಟು 4,25,25,136 ರೂ. ಕಾಣಿಕೆ ಸಂಗ್ರಹವಾಗಿದ್ದು, ಇದರಲ್ಲಿ 4,19,97,861 ರೂ. ಕರೆನ್ಸಿ ನೋಟುಗಳು ಹಾಗೂ 15,27,275 ರೂ. ನಾಣ್ಯಗಳು ಸಂಗ್ರಹವಾಗಿವೆ. …

Read More »

ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ – ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಬೆಂಗಳೂರು: ಅಕ್ರಮ ಸಂಬಂಧ  ಆರೋಪ ಹಿನ್ನೆಲೆ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಬೆಂಗಳೂರಿನ  ಜೆಜೆ ನಗರದಲ್ಲಿ  ನಡೆದಿದೆ. ಅಕ್ರಂ ಪಾಷಾ (43) ಕೊಲೆಯಾದ ವ್ಯಕ್ತಿ. ಉಮರ್ ಖಾಲೀದ್ ಎಂಬವರ ಪತ್ನಿಯ ಜೊತೆ ಅಕ್ರಂನ ಪಾಷಾ ಅಕ್ರಮ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಬುಧವಾರ ರಾತ್ರಿ ಅಕ್ರಂ ಪಾಷಾ ಉಮರ್ ಖಾಲಿದ್ ಮನೆ ಬಳಿ ಬಂದಿದ್ದ. ಈ ವೇಳೆ ಉಮರ್ ಖಾಲಿದ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಘಟನೆ …

Read More »

ರಾಯಚೂರು ಭಾರತ ವನ ಯೋಜನೆಗೆ ಚಾಲನೆ ನೀಡಿದ ನಿರ್ಮಲಾ ಸೀತಾರಾಮನ್

ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರಾಯಚೂರು  ಭಾರತ ವನ ಯೋಜನೆ ಕಾರ್ಯಕ್ರಮದಲ್ಲಿ ಕೇಂದ್ರ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್  ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಯಚೂರಿನ ಯಕ್ಲಾಸಪುರ ಘನತಾಜ್ಯ ಘಟಕದಲ್ಲಿ ಭಾರತ ವನ ಯೋಜನೆ ಅಡಿ ಮಿಯಾವಾಕಿ ಪದ್ದತಿ ಮೂಲಕ ಅರಣ್ಯೀಕರಣವನ್ನ ವರ್ಚುವಲ್ ಆಗಿ ಉದ್ಘಾಟನೆ ಮಾಡಿದರು. ಸಸಿ ನೆಡುವ ವೇಳೆ ವಿದ್ಯಾರ್ಥಿಗಳ ಜೊತೆ ಪರಿಸರ ಬಗ್ಗೆ ಸಂವಾದ …

Read More »

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ – ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ?

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂಪುಟದ ಎಲ್ಲಾ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪ್ರಕ್ರಿಯೆಯಲ್ಲಿ ಅನೇಕ ಸಚಿವರಿಗೆ ತಾವು ಬಯಸಿದ ಖಾತೆ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಇಲಾಖೆ ಕೈತಪ್ಪಿದ ಹಿನ್ನೆಲೆ ಸಚಿವ ರಾಮಲಿಂಗಾ ರೆಡ್ಡಿ  ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗ್ತಿದೆ. ‌ಬೆಂಗಳೂರು ನಗರಾಭಿವೃದ್ಧಿ ಕೈತಪ್ಪಿದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ …

Read More »

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆಶಿ, ಡಿಸಿಎಂ ಡಾ.ಜಿ ಪರಮೇಶ್ವರ್, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ. ಈ ಮೂಲಕ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿಎಂ ಡಿಕೆ ಶಿವಕುಮಾರ್‌ …

Read More »