ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣದ ವಿರುದ್ಧ ವಿದ್ಯಾರ್ಥಿಗಳೇ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯದಲ್ಲಿ ಜೆನ್-ಝೀ ಮಾದರಿ ಹೋರಾಟಕ್ಕೆ ಯುವಕರು ಮುಂದಾಗಿದ್ದಾರೆ. ಕೆಪಿಎಸ್ಸಿ ಅಕ್ರಮದ ಬಗ್ಗೆ ಅಪರಾಧ ತನಿಖಾ ಇಲಾಖೆ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ವಿದ್ಯಾರ್ಥಿಗಳು ತಾವೇ ಪ್ರತಿಭಟನೆಗೆ ಮುಂದಾಗಿದ್ದಾರೆ. ದೆಹಲಿಯಲ್ಲಿ ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಹೋರಾಟದ ಮಾದರಿಯಲ್ಲಿಯೇ ಈ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನಲ್ಲಿ ಇದೇ ತಿಂಗಳ ಎರಡನೇ ವಾರದಿಂದ …
Read More »ಊಟ ಮಾಡುವಾಗ ಹೃದಯಾಘಾತ – ಮಗಳು, ಅಳಿಯನ ಕಣ್ಣೆದುರೇ ಪ್ರಾಣಬಿಟ್ಟ ವ್ಯಕ್ತಿ!
ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ ಮಗಳು, ಅಳಿಯನ ಎದುರಲ್ಲೇ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಮಗಳು ಹಾಗೂ ಅಳಿಯನೊಂದಿಗೆ ಸಂತೋಷದಿಂದ ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿದ್ದು, ಪ್ರಾಣಬಿಟ್ಟಿದ್ದಾರೆ. ಸೋಫಾದ ಮೇಲೆ ಕುಳಿತು ಊಟ ಮಾಡುವಾಗ ಕುಸಿದು ಬೀಳುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಏಕಾಏಕಿ ಕುಳಿತ ಜಾಗದಲ್ಲೇ ಕುಸಿದ ತಂದೆಯನ್ನ ಮೊದಲಿಗೆ ಅಲ್ಲೇ ಊಟ …
Read More »ಹರಿದ ನೆತ್ತರು – ರೌಡಿಶೀಟರ್ ಭೀಕರ ಹತ್ಯೆ
ಶಿವಮೊಗ್ಗ: ತಾಲೂಕಿನ ರಾಮಿನಕೊಪ್ಪದಲ್ಲಿ ರೌಡಿಶೀಟರ್ ಭೀಕರ ಹತ್ಯೆಯಾಗಿರುವ ಘಟನೆ ನಡೆದಿದೆ. ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ (32) ಕೊಲೆಯಾದ ರೌಡಿಶೀಟರ್. ಶಿವಮೊಗ್ಗ ನಗರದ ಸಿಗೇಹಟ್ಟಿ- ಭಾರತಿ ಕಾಲೋನಿ ನಿವಾಸಿ. ರಾಮಿನಕೊಪ್ಪ ಬಳಿ ಸ್ನೇಹಿತರ ಜೊತೆಯಿದ್ದ ಕಿರಣ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಗಂಭೀರ ಗಾಯಗೊಂಡ ಕಿರಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರೌಡಿಶೀಟರ್ ಕಿರಣ್ ಮೃತದೇಹ ರವಾನಿಸಲಾಗಿದೆ. ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ …
Read More »ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವು
ನವದೆಹಲಿ: ಭಾನುವಾರ ಮಧ್ಯಾಹ್ನ ದೆಹಲಿಯ ಸತ್ಯನಿಕೇತನದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಸ್ಥಿತಿ ಗಂಭೀರವಾಗಿದೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಒಂಬತ್ತು ಜನರನ್ನು ರಕ್ಷಿಸಲಾಗಿದೆ. ಘಟನೆಯ ಬಗ್ಗೆ ದೆಹಲಿ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‘ದೆಹಲಿಯ ಸತ್ಯನಿಕೇತನದಲ್ಲಿ ಕಟ್ಟಡ ಕುಸಿತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. …
Read More »ಬಿಗ್ಬಾಸ್ ಕನ್ನಡ ಸೀಸನ್ 13ಕ್ಕೆ ಶುಭಾರಂಭ; ಇವ್ರೇ ನೋಡಿ ಈ ಬಾರಿ ಮನೆಯೊಳಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ 13 ಅದ್ಧೂರಿಯಾಗಿ ಆರಂಭವಾಗಿದೆ. ಗ್ರ್ಯಾಂಡ್ ಓಪನಿಂಗ್ನಲ್ಲಿ ಒಬ್ಬೊಬ್ಬರಾಗಿ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ, ಕಿರುತೆರೆ, ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳ ಪರಿಚಿತ ಮುಖಗಳು ಈ ಬಾರಿ ಬಿಗ್ಬಾಸ್ ಮನೆಯಲ್ಲಿದ್ದಾರೆ. ಈ ಬಾರಿ ಸ್ಪರ್ಧಿಗಳ ಎಂಟ್ರಿ ಕೂಡ ವಿಭಿನ್ನವಾಗಿತ್ತು. ಕೆಲವರು ಟಾಸ್ಕ್ ಮೂಲಕ, ಇನ್ನು ಕೆಲವರು ತಮ್ಮದೇ ಸ್ಟೈಲ್ನಲ್ಲಿ ಬಿಗ್ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಕಿಚ್ಚ ಸುದೀಪ್ ಜೊತೆ …
Read More »ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ – ಮಹಿಳೆ ಸಾವು, ನಾಲ್ವರಿಗೆ ಗಾಯ
ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗುಜರಾತ್ ಮೂಲದ, ಬೆಂಗಳೂರಿನ ನಿವಾಸಿ ಸುಧಾ ಜೈನ್ (58) ಮೃತ ಮಹಿಳೆ. ಶ್ರವಣಬೆಳಗೊಳದಿಂದ ಬೆಂಗಳೂರಿಗೆ ಕುಟುಂಬ ವಾಪಸ್ಸಾಗುತ್ತಿದ್ದ ವೇಳೆ ಮತ್ತೊಂದು ಕಾರು ಹಿಂದಿಕ್ಕುವ ಭರದಲ್ಲಿ ಅತೀವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. …
Read More »ಅಹಿಂದ ದಾಳ ಉರುಳಿಸಿದ ಸಿದ್ದರಾಮಯ್ಯ – ಸಮಾವೇಶಕ್ಕೆ ಜಾರಕಿಹೊಳಿಗೆ ಆಹ್ವಾನವೇ ಇಲ್ಲ
ಬೆಂಗಳೂರು: ಇಲ್ಲಿನ ಅರಮನೆ ಮೈದಾನದಲ್ಲಿ ಅಹಿಂದ ಕಹಳೆ ಮೊಳಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಅಹಿಂದ ಚಳುವಳಿಗೆ 25 ವರ್ಷ ಪೂರ್ಣ ಹಿನ್ನಲೆ ಇಂದು ಅರಮನೆ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಮಾಡಲಾಯಿತು. ಆದರೆ ಅಹಿಂದ ಚಳುವಳಿಯಲ್ಲಿ ಸಿದ್ದರಾಮಯ್ಯಗೆ ಬೆನ್ನೆಲುಬಾಗಿ ನಿಂತಿದ್ದ ಸತೀಶ್ ಜಾರಕಿಹೊಳಿಗೆ ಮಾತ್ರ ಇಂದಿನ ಸಮಾವೇಶಕ್ಕೆ ಆಹ್ವಾನ ನೀಡಿರಲಿಲ್ಲ. ಹೌದು, ಸಿದ್ದರಾಮಯ್ಯ-ಸತೀಶ್ ಜಾರಕಿಹೊಳಿ ಒಂದು ಕಾಲದಲ್ಲಿ ಗುರು-ಶಿಷ್ಯರು. ಅಹಿಂದ …
Read More »ಕೇತನ್ ಹತ್ಯೆ ಕೇಸ್ – ಆರೋಪಿ ಚೇತನ್ ಸ್ನೇಹಿತ ರಿತೇಶ್ ಅರೆಸ್ಟ್
ಮುಂಬೈ: ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರು ಶನಿವಾರ (ಸೆ.5) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ಚೇತನ್ ಚೌಧರಿಯ ಸ್ನೇಹಿತ ರಿತೇಶ್ ಹಂಗೆಯನ್ನು ಪೊಲೀಸರು ಬಂಧಿಸಿದ್ದು, ರಿತೇಶ್ ಕೂಡ ಈ ಕೊಲೆಯಲ್ಲಿ ಭಾಗಿಯಾಗಿದ್ದ ಹಾಗೂ ಕೊಲೆ ಸಂಚು ಹೂಡಿರುವ ಬಗ್ಗೆ ಆತನಿಗೆ ಮಾಹಿತಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬಂಧಿತ ರಿತೇಶ್ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೊಲೆಯಲ್ಲಿ ಆತನ ಪಾತ್ರ ಹಾಗೂ ಇನ್ನೂ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವ …
Read More »ಹೊಸನಗರದ ಟೀಚರ್ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ
ಶಿವಮೊಗ್ಗ: ನವೀನ ತಂತ್ರಗಳ ಮೂಲಕ ಮಕ್ಕಳಿಗೆ ಪಾಠ ಮಾಡುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಸ್. ರತ್ನಾಕುಮಾರಿ ಅವರು ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರಿಂದ 2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಬಾರಿ ಕರ್ನಾಟಕದಿಂದ ಪ್ರಶಸ್ತಿ ಪಡೆದ ಏಕೈಕ ಶಿಕ್ಷಕಿ ಅವರಾಗಿದ್ದಾರೆ. ಶಿಕ್ಷಕಿಯ ವಿಶೇಷ ಪಾಠ ಮಾಡುವ ಕಲೆಗೆ ಈ ಬಾರಿ ಪ್ರಶಸ್ತಿ ಒಲಿದಿದೆ. ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ …
Read More »ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಹೊತ್ತಿ ಉರಿದ ಕಾರು; ಚಾಲಕ ಪಾರು
ಸಿರುವ ಸ್ಕನದ್ ಎಂಬುವವರಿಗೆ ಸೇರಿದ KA05 ME 7634 ಸಂಖ್ಯೆಯ ಕಾರು ಎಕ್ಸ್ಪ್ರೆಸ್ವೇನಲ್ಲಿ ಹೊತ್ತಿ ಉರಿದಿದೆ. ಅನಾಹುತ ಹೇಗಾಯ್ತು? ಘಟನೆ ನಡೆದ ಸಂದರ್ಭದಲ್ಲಿ ಸ್ಕನದ್ ಜೊತೆಗೆ ಮತ್ತೊಬ್ಬರು ಕಾರಿನಲ್ಲಿದ್ದರು. ಬಟ್ಟೆ ವ್ಯಾಪಾರ ಮುಗಿಸಿಕೊಂಡು ಮನೆಗೆ ತೆರಳುತ್ತಿರಬೇಕಾದ್ರೆ, ಕಾರಿನಲ್ಲಿ ಏಕಾಏಕಿ ಬೆಂಕಿ (Car Fire) ಕಾಣಿಸಿಕೊಂಡಿದೆ. ತಕ್ಷಣವೇ ಇಬ್ಬರು ಕಾರಿನಿಂದ ಕೆಳಗಿಳಿದಿದ್ದಾರೆ. ಕ್ಷಣಾರ್ಧದಲ್ಲಿ ಅಗ್ನಿಜ್ವಾಲೆ ಹಬ್ಬಿದ್ದು, ಇಡೀ ಕಾರು ಹೊತ್ತಿಉರಿದಿದೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ, ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ …
Read More »
Laxmi News 24×7