ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಡಿಸೆಂಬರ್ 23 ರಂದು ಯಡೂರ ವೀರಭದ್ರೇಶ್ವರ ದೇವಸ್ಥಾನದಿಂದ ಬೆಳಗಾವಿ ಸುವರ್ಣಸೌಧದವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯ ಅಧ್ಯಕ್ಷ ಎಸ್.ವೈ.ಹಂಜಿ ಹೇಳಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ವೈ.ಹಂಜಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡುವಂತೆ ಕಳೆದ ಹಲವಾರು ವರ್ಷಗಳಿಂದ ಹೋರಾಟವನ್ನು ಮಾಡಿಕೊಂಡು ಬರುತ್ತಿದೇವೆ. ಆದರೆ ಇನ್ನೂವರೆಗೆ ಚಿಕ್ಕೋಡಿ ಜಿಲ್ಲೆ ಆಗದೇ ಇರುವುದು ವಿಪಯಾರ್ಪಸದ ಸಂಗತಿ. ಡಿಸೆಂಬರ್ 19 ರಿಂದ ಬೆಳಗಾವಿಯ …
Read More »ವಿದ್ಯಾರ್ಥಿನಿಯರನ್ನು ಬಾರ್ ಮುಂದೆ ಇಳಿಸಿದ ಸಾರಿಗೆ ಚಾಲಕ
ಬೆಳಗಾವಿ ತಾಲೂಕಿನ ಸುಳಗಾ ಶಾಲೆಯ ಮಕ್ಕಳು ಕುದುರೆಮನೆಯ ಮಾರ್ಗವಾಗಿ ಬರುವ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ವೇಳೆ ಸರಿಯಾದ ಬಸ್ ನಿಲ್ದಾಣಕ್ಕೆ ನಿಲ್ಲಿಸದೆ ಚಾಲಕ ಬಾರ್ ಅಂಗಡಿ ಮುಂದೆ ನಿಲ್ಲಿಸಿದ್ದಕ್ಕೆ ಗ್ರಾಮಸ್ಥರು ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಎಂದಿನಂತೆ ಶಾಲೆಯ ವಿದ್ಯಾರ್ಥಿಗಳು ಶಾಲೆಗೆ ಹೋಗಿ ಮರಳಿ ಸಾರಿಗೆ ಬಸ್ ನಲ್ಲಿ ಬರುವಾಗ ಸುಮಾರು 16 ವಿದ್ಯಾರ್ಥಿನಿಯರು ಸುಳಗಾಕ್ಕೆ ಇಳಿಸದೆ ಬಾರ್ ವೊಂದರ ಮುಂದೆ …
Read More »ಬೆಳಗಾವಿಯ ಮಹಾಲಕ್ಷ್ಮೀ ಮಹಿಳಾ ಮಂಡಳದ 32ನೇ ವಾರ್ಷಿಕೋತ್ಸವ
ಬೆಳಗಾವಿಯ ಮಹಾಲಕ್ಷ್ಮೀ ಮಹಿಳಾ ಮಂಡಳದ 32ನೇ ವಾರ್ಷಿಕೋತ್ಸವ ಅತ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಮಹಾಂತ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ವೇದಿಕೆ ಮೇಲಿದ್ದ ಗಣ್ಯರು ಚಾಲನೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲೇಖಕಿಯರ ಸಂಘದ ಸಂಸ್ಥಾಪಕ ಜಿಲ್ಲಾಧ್ಯಕ್ಷೆ ಆಶಾ ಕಡಪಟ್ಟಿ ಕಳೆದ 32 ವರ್ಷಗಳಿಂದ ಮಹಾಲಕ್ಷ್ಮೀ ಮಹಿಳಾ ಮಂಡಳ ಬಹಳಷ್ಟು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಿಳೆಯರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿದೆ …
Read More »ಕರ್ನಾಟಕದ ವಾಹನ ಮೇಲೆ ಕಲ್ಲು ತೂರಾಟ
ನಿನ್ನೆ ತಾನೆ ಮಹಾರಾಷ್ಟ್ರ ಕರ್ನಾಟಕ ಗಡಿ ಸಂಬಂಧ ಕೇಂದ್ರ ಗೃಹ ಸಚಿವ ಅಮೀತ ಷಾ ನೇತೃತ್ವದಲ್ಲಿ ಉಭಯ ರಾಜ್ಯಗಳ ಮೀಟಿಂಗ್ ಮಾಡಿ ಗಡಿ ಖ್ಯಾತೆ ಯಾರು ತೆಗೆಯುವಂತಿಲ್ಲ ಎಂದು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಇಂದು ಮತ್ತೇ ಪುಂಡರು ಪುಂಡಾಟಾ ಮೆರೆದಿದ್ದಾರೆ. ಬುಧವಾರ ರಾತ್ರಿ ಪುಂಡರು ಕರ್ನಾಟಕ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗೆ ಸೇರಿದ ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಚಳಿಗಾಲ ಅಧಿವೇಶನಕ್ಕಾಗಿ ವಾಹನವೊಂದು ಬಂದಿದೆ. …
Read More »B.SY. ಕೊಪ್ಪಳ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ : C.M. ಸ್ಪಷ್ಟನೆ
ನವದೆಹಲಿ : ಬಿ.ಎಸ್ ಯಡಿಯೂರಪ್ಪಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಬಿ.ಎಸ್ ಯಡಿಯೂರಪ್ಪ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ,ಕಾಂಗ್ರೆಸ್ ಕತ್ತಲಿನಲ್ಲಿ ಕರಿ ಬೆಕ್ಕು ಹುಡುಕುವ ಕೆಲಸ ಮಾಡ್ತಿದೆ, ಅಹಮದಾವಾದ್ ನಲ್ಲಿ ಎಲ್ಲರೂ ಜೊತೆಯಾಗಿ ಇದ್ವಿ, ಕಾಂಗ್ರೆಸ್ ನವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ತಮ್ಮ ಬಿರುಕು ಮರೆಮಾಚಲು ಕಾಂಗ್ರೆಸ್ ಯತ್ನ ಮಾಡುತ್ತಿದೆ. ಬಿ.ಎಸ್ ಯಡಿಯೂರಪ್ಪ ನಾಳೆ ಕೊಪ್ಪಳ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ …
Read More »ಬೆಳಗಾವಿ ಗಡಿ ವಿವಾದ, ಸದ್ಯಕ್ಕಿಲ್ಲ ಗಡಿಬಿಡಿ :ಅಮಿತ್ ಶಾ’
ನವದೆಹಲಿ : ಬೆಳಗಾವಿ ಗಡಿ ವಿವಾದವನ್ನು ಬಗೆಹರಿಸಲು ಶೀಘ್ರವೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ನಡೆದ ಮಹಾ ಸಿಎಂ ಮತ್ತು ಕರ್ನಾಟಕ ಸಿಎಂಗಳ ನಡುವೆ ನಡೆದ ಸಭೆಯಲ್ಲಿ ಉಭಯ ನಾಯಕರುಗಳಿಂದ ಮಾಹಿತಿಯನ್ನು ಪಡೆದುಕೊಂಡು ನಂತರ ಮಾತನಾಡಿದ ಅಮಿತ್ ಶಾ ಈ ಬಗ್ಗೆ ಸುಪ್ರಿಂಕೋರ್ಟ್ ಅಂತಿಮ ಆದೇಶ ಹೊರಡಿಸಲಿದೆ. …
Read More »ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ: ಕೇಂದ್ರ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದೆ. ಈ ಕುರಿತು ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದರು. ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, 2021 ಮಾರ್ಚ್ 1ರಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ 9,79,327 ಹುದ್ದೆಗಳು ಖಾಲಿ ಇವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. …
Read More »PM ಕೇರ್ಸ್ ನಿಧಿ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ
ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿದ್ದ ಸಂದರ್ಭದಲ್ಲಿ ದೇಶವಾಸಿಗಳಿಗೆ ನೆರವಾಗುವ ಸಲುವಾಗಿ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಲಾಗಿತ್ತು. 2020 ರ ಮಾರ್ಚ್ ನಲ್ಲಿ ಆರಂಭವಾದ ಪಿಎಂ ಕೇರ್ಸ್ ಫಂಡ್ ಗೆ ಈ ವರ್ಷದ ಮಾರ್ಚ್ ವರೆಗೆ ಒಟ್ಟು 13,000 ಕೋಟಿ ರೂಪಾಯಿಗಳ ದೇಣಿಗೆ ಹರಿದು ಬಂದಿದೆ ಎಂದು ತಿಳಿದುಬಂದಿದೆ. ಈ ಪೈಕಿ 7,700 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದ್ದು, ಇನ್ನು 5400 ಕೋಟಿ ರೂಪಾಯಿ ಉಳಿದಿದೆ. ಈ ನಿಧಿಯಿಂದ ವೈದ್ಯಕೀಯ ಆಮ್ಲಜನಕ …
Read More »ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನ ಪ್ರಸಾದ ವಿತರಿಸಿದ ಮುಸ್ಲಿಂ ಯುವಕರು
ಅಲ್ಲಿ ಜಾತಿ, ಧರ್ಮದ ಬೇಧವಿರಲಿಲ್ಲ. ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು ಸೌಹಾರ್ದತೆ ಮೆರೆದರು. ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾಡುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಗಣೇಶ ಚತುರ್ಥಿ ಸಮಯದಲ್ಲಿ ಭಕ್ತರಿಗೆ ಅನ್ನ ಪ್ರಸಾದ ಹಂಚುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನ ಒದಗಿಸುವ ಮೂಲಕ ಎರಡು ಧರ್ಮಗಳ ನಡುವಿನ …
Read More »ಬೆಳಗಾವಿ ಅಧಿವೇಶನದಲ್ಲಿ ಪೂರ್ಣ ಹಾಜರಾತಿ ಕಡ್ಡಾಯ: ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಳಗಾವಿ: ‘ಇದೇ 19ರಿಂದ 30ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಅತ್ಯಂತ ಮಹತ್ವ ಪಡೆದಿದೆ. ಇದರಲ್ಲಿ ಪೂರ್ಣ ಹಾಜರಾತಿ ಇರಬೇಕೆಂದು ಎಲ್ಲ ಶಾಸಕರಿಗೂ ಸೂಚಿಸಲಾಗಿದೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅಧಿವೇಶನದ ಪೂರ್ವಸಿದ್ಧತೆಗಳನ್ನು ಸೋಮವಾರ ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಕೆಲ ಸಚಿವರು, ಶಾಸಕರು ಅಧಿವೇಶನದ ವೇಳೆ ಗೋವಾ, ಮಹಾರಾಷ್ಟ್ರ ಕಡೆಗೆ ಪ್ರವಾಸಕ್ಕೆ ಹೋಗುತ್ತಾರೆ. ಗಂಭೀರ ವಿಷಯಗಳ ಚರ್ಚೆಯಲ್ಲಿ ಗೈರಾಗುತ್ತಾರೆ ಎಂದು ಹಲವರು ದೂರಿದ್ದಾರೆ. …
Read More »
Laxmi News 24×7