Breaking News

ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ಬಿಲ್ವಪತ್ರೆಗಳಿಂದ ಮುಚ್ಚಲ್ಪಟ್ಟ ಕಪಿಲೇಶ್ವರ ..!

ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಬೆಳಗಾವಿಯ ಶ್ರೀ ಕಪಿಲೇಶ್ವರ ಮಂದಿರದಲ್ಲಿ ಬೆಳಿಗ್ಗೆ 8 ಗಂಟೆಗೆ ಎಲ್ಲ ಪೂಜಾ ಕಾರ್ಯಗಳನ್ನು ಮುಗಿಸಲಾಯಿತು. ವಾ.ಓ: ಹೌದು ಕೇತುಗ್ರಸ್ತ ಸೂರ್ಯ ಗ್ರಹಣ ಹಿನ್ನೆಲೆ ಪ್ರತಿದಿನದಂತೆ ನಡೆಯುವ ಅಭಿಷೇಕ, ರುದ್ರಾಭಿಷೇಕ ಸೇರಿ ಎಲ್ಲಾ ಕ್ರಿಯೆಗಳನ್ನು ಬೆಳಿಗ್ಗೆ 8 ಗಂಟೆಯೊಳಗೆ ಬೆಳಗಾವಿಯ ಕಪಿಲೇಶ್ವರ ಮಂದಿರದಲ್ಲಿ ಅರ್ಚಕರು ಪೂರ್ಣಗೊಳಿಸಿದರು. ಬಳಿಕ ಮಧ್ಯಾಹ್ನ ವೇದ ಶುರುವಾಗುವ ಮುಂಚೆ ಶಿವಲಿಂಗವನ್ನು ಪೂರ್ಣವಾಗಿ ಬಿಲ್ವಪತ್ರೆಗಳಿಂದ ಮುಚ್ಚಲಾಯಿತು. ಇದು …

Read More »

ಸ್ತಗಿತ ಹೊಂದಿದ್ದ ವಾಟ್ಸ್ ಆ್ಯಪ್ ಪುನರ್ ಆರಂಭ ಗ್ರಹಣ ಹಿಡಿದಿತ್ತು ಅಂತ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳ ಸುರಿಮಳೆ

lಮುಂಬೈ: ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೋರಿದೆ. ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಈ ಬಗ್ಗೆ ಇದುವರೆಗೂ ವಾಟ್ಸಪ್ ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಬಳಕೆದಾರರು ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ವಿಶ್ವದಾದ್ಯಂತ ಮಧ್ಯಾಹ್ನ ಸುಮಾರು 12.30ರಿಂದ ವಾಟ್ಸಪ್ ಕಾರ್ಯ ನಿರ್ವಹಿಸುತ್ತಿಲ್ಲ. ವಾಟ್ಸಪ್ ನಲ್ಲಿ ಮೆಸೇಜ್ ಗಳು ಕಳುಹಿಸಲು ಸಾಧ್ಯವಾಗದ ಕಾರಣಕ್ಕೆ ತಾವು ಮೊಬೈಲ್ ರಿ ಸ್ಟಾರ್ಟ್ ಮಾಡಿರುವುದಾಗಿ …

Read More »

ಮುಂದಿನ ಚುನಾವಣೆ ಕ್ಷೇತ್ರ ಘೋಷಿಸಿದ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧೆ

ಚಿತ್ರದುರ್ಗ: ದೀಪಾವಳಿ ದಿನದಂದೇ ಮೀಸಲಾತಿ ಜಾರಿಯಾಗಿದ್ದು, ಇದೇ ದಿನ ವಾಲ್ಮೀಕಿ ಪುತ್ಥಳಿ ಅನಾವರಣವಾಗುತ್ತಿರುವುದು ಸಂತೋಷ ತಂದಿದೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, 2023 ರ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಘೋಷಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಎಂದು ಕೂಡ ಹಿಂದೆ ಸರಿಯಲಿಲ್ಲ. …

Read More »

ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ಗೆ?

ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ಗೆ? ಮೈಸೂರು: ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಅಡಗೂರು ಎಚ್‌. ವಿಶ್ವನಾಥ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿರುವ ವಿಶ್ವನಾಥ್‌, ಸದ್ಯದಲ್ಲೇ ಬೆಂಗಳೂರಿನಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.   ಈಗ ಬಿಜೆಪಿಯಲ್ಲಿರುವ ವಿಶ್ವನಾಥ್‌ ಆ ಪಕ್ಷದಿಂದಲೂ ದೂರ …

Read More »

ಸ್ಥಾನ ಹೋದರೂ ಅಡ್ಡಿಯಿಲ್ಲ,ಕಿತ್ತೂರಿಗೆ ಎರಡು ಸಲ ಬಂದೆ: ಸಿಎಂ

ಬೆಳಗಾವಿ (ಚನ್ನಮ್ಮನ ಕಿತ್ತೂರು): ಮುಖ್ಯಮಂತ್ರಿ ಸ್ಥಾನ ಹೋದರೂ ಅಡ್ಡಿಯಿಲ್ಲ. ಕಿತ್ತೂರು ಚನ್ನಮ್ಮನ ಪವಿತ್ರ ಭೂಮಿಗೆ ಸತತ ಎರಡು ಸಲ ಬಂದು ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಎಂಬ ಮೂಢನಂಬಿಕೆ ಇದೆ. ಸ್ಥಾನ ಕಳೆದುಕೊಳ್ಳುವ ಭಯ ದಿಂದ ಬಹಳಷ್ಟು ಮುಖ್ಯಮಂತ್ರಿಗಳು ಕಿತ್ತೂರಿಗೆ …

Read More »

ಮೀಸಲು ಅಧ್ಯಾದೇಶಕ್ಕೆ ಅಧಿವೇಶನದಲ್ಲಿ ಒಪ್ಪಿಗೆ: ಮುಖ್ಯಮಂತ್ರಿ

ಹುಬ್ಬಳ್ಳಿ: ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ಅಧ್ಯಾದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಮೀಸಲಾತಿ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಇದಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಜಾರಿಗಾಗಿ ಕಾನೂನು ರಕ್ಷಣೆ ಕೊಡಲು ಎಲ್ಲ ಸಾಧ್ಯತೆಗಳನ್ನು ಮಾಡಲಾಗುವುದು. ಅಧ್ಯಾದೇಶಕ್ಕೆ ಮುಂಬರುವ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು. ಪಂಚಮಸಾಲಿ ಸಹಿತ ಎಲ್ಲ ಮೀಸಲಾತಿ ಕುರಿತು ಬೇರೆ ಬೇರೆ ಹಂತಗಳಲ್ಲಿ ಹಿಂದುಳಿದ ವರ್ಗಗಳ …

Read More »

ಸ್ಥಿರತೆ ಮತ್ತು ಏಕತೆಯೇ ನನ್ನ ಆದ್ಯತೆ; ಯುಕೆಗೆ ಹೊಸ ಭರವಸೆ ಮೂಡಿಸಿದ ರಿಷಿ ಸುನಕ್‌

ಲಂಡನ್‌: “ಯುನೈಟೆಡ್‌ ಕಿಂಗ್‌ಡಮ್‌(ಯುಕೆ) ಒಂದು ಶ್ರೇಷ್ಠ ರಾಷ್ಟ್ರ. ಆದರೆ ನಾವು ದೊಡ್ಡಮಟ್ಟಿನ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದೇವೆ ಎನ್ನುವುದೂ ಅಷ್ಟೇ ಸತ್ಯ. ನಮಗೆ ಈಗ ಬೇಕಾಗಿರುವುದು ಸ್ಥಿರತೆ ಮತ್ತು ಏಕತೆ. ನಮ್ಮ ಪಕ್ಷವನ್ನು ಮತ್ತು ದೇಶವನ್ನು ಒಗ್ಗೂಡಿಸುವುದೇ ನನ್ನ ಆದ್ಯತೆಯಾಗಿದೆ. ಆಗ ಮಾತ್ರ ನಾವು ಎಂತಹ ಸವಾಲನ್ನು ಬೇಕಿದ್ದರೂ ಸುಲಭವಾಗಿ ಎದುರಿಸಿ ಗೆಲ್ಲಲು ಸಾಧ್ಯ.’ ಇದು ಬ್ರಿಟನ್‌ನ 57ನೇ ಪ್ರಧಾನಿಯಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ರಿಷಿ ಸುನಕ್‌ ಅವರ ಮಾತುಗಳು. ಕಳೆದ 200 …

Read More »

ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲು ಪ್ರಮಾಣ ಹೆಚ್ಚಳ ಸಂಬಂಧ ಅಧ್ಯಾದೇಶಕ್ಕೆ ಸಹಿ ಬಿದ್ದ ಬೆನ್ನಲ್ಲೇ ಧರಣಿ ಸತ್ಯಾಗ್ರಹ ಕೈಬಿಡುವುದಾಗಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಘೋಷಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ನಿರತ ಸ್ವಾಮೀಜಿ ಅವರನ್ನು ಸೋಮವಾರ ಭೇಟಿ ಮಾಡಿದ ಕಂದಾಯ ಸಚಿವ ಆರ್‌. ಅಶೋಕ್‌ ಅವರು ಅಧ್ಯಾದೇಶಕ್ಕೆ ಅಂಕಿತ ಬಿದ್ದ ಪತ್ರ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಹಿಂದಿನ ಮುಖ್ಯಮಂತ್ರಿಗಳು ನಮ್ಮ ಮೂಗಿಗೆ ತುಪ್ಪ ಸವರುವ …

Read More »

ಕೆಜಿಎಫ್ ದಾಖಲೆ ಮುರಿದ ‘ಕಾಂತಾರ’..!; ಹೊಂಬಾಳೆ ಫಿಲ್ಮ್ಸ್ ಘೋಷಣೆ

ಬೆಂಗಳೂರು : ಸೆಪ್ಟೆಂಬರ್ 30 ರಂದು ಬಿಡುಗಡೆಯಾಗಿದ್ದ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ಮನೋಜ್ಞ ನಟನೆಯ ‘ಕಾಂತಾರ’ ಚಿತ್ರದ ನಾಗಾಲೋಟ ವಿಶ್ವದೆಲ್ಲೆಡೆ ಮುಂದುವರಿದಿದ್ದು, ಒಂದಾದ ಮೇಲೊಂದು ಹೊಸ ದಾಖಲೆಗಳನ್ನು ಬರೆಯುತ್ತಾ ಇನ್ನಷ್ಟು ಪ್ರೇಕ್ಷಕರನ್ನು ತನ್ನತ್ತ ಸೆಳೆಯುತ್ತಿದೆ ಮತ್ತು ವೀಕ್ಷಿಸಿದ ಪ್ರೇಕ್ಷರನ್ನು ಹೊಸ ಲೋಕಕ್ಕೆ ಕೊಂಡೊಯ್ಯುತ್ತಿದೆ.   ಕನ್ನಡದ ದೈತ್ಯ ಚಿತ್ರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಂಸ್ಥೆಗೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ 2’ ಬಳಿಕ ಇನ್ನೊಂದು ಭಾರಿ …

Read More »

ಅಬಕಾರಿ ಅಧಿಕಾರಿಗಳ ಭರ್ಜರಿ ದಾಳಿ: 909 ಲೀಟರ್ ಗೋವಾ ಸಾರಾಯಿ ಜಪ್ತಿ

ಅಕ್ರಮವಾಗಿ ಗೂಡ್ಸ ಕ್ಯಾರಿಯರ್‍ನಲ್ಲಿ ಗೋವಾ ಸಾರಾಯಿಯನ್ನು ಸಾಗಿಸುತ್ತಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಖಾನಾಪುರ ಅಬಕಾರಿ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಸೋಮವಾರ ಮಧ್ಯರಾತ್ರಿ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಟಾಟಾ ಟರ್ಬೋ ಎಕ್ಸ-1109 ಗೂಡ್ಸ ಕ್ಯಾರಿಯರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 909 ಲೀಟರ್ ವಿವಿಧ ಕಂಪನಿಯ ಗೋವಾ ಸಾರಾಯಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ …

Read More »